ಪುತ್ತೂರು ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಲಕ್ಷ್ಮೀ ದೇವಿ ಬೆಟ್ಟದಲ್ಲಿ ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಶುಕ್ರವಾರ ಶ್ರೀ ಮಹಾಲಕ್ಷ್ಮೀಗೆ ವಿಶೇಷ ಅಲಂಕಾರ, ಮಹಾಪೂಜೆ ಜರಗಿತು.ಬಳಿಕ ಶ್ರೀಕೃಷ್ಣ ಉಪಾಧ್ಯಾಯ ಅವರ ಪುರೋಹಿತ್ಯದಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಎನ್. ಐತ್ತಪ್ಪ ಸಪಲ್ಯರವರು ಮುತ್ತೈದೆಯರಿಗೆ ಬಳೆ, ರವಿಕೆ ಕಣ, ಹೂವು, ದಾರ ನೀಡುವುದರ ಮೂಲಕ ವಾಯನ ದಾನ ಮಾಡಿದರು.ಭಕ್ತಾದಿಗಳಿಗೆ ಸುಖ, ಶಾಂತಿ, ನೆಮ್ಮದಿ, ಸಕಲ ಐಶ್ವರ್ಯವನ್ನು ನೀಡಲಿ ಎಂದು ಹಾರೈಸಿದರು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.

ಪುತ್ತೂರು ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

10*15 ಅಡಿ ದೊಡ್ಡ ಮನೆಯಲ್ಲಿ 80 ಜನ ವಾಸ ಮಾಡುವುದು ಸಾಧ್ಯವೆ? : ಕಾಂಗ್ರೆಸ್‌ಗೆ ಮನೆ ಮಾಲೀಕನ ಪ್ರಶ್ನೆ

ಮೂವರು ವಾಸವಿರುವ ಮನೆಯಲ್ಲಿ 80 ಜನ ಮತದಾರರು ಇದ್ದಾರೆ ಎಂದು ಹೇಳಿದ್ದ ರಾಹುಲ್‌ ಗಾಂಧಿಗೆ ತಿರುಗೇಟು ಬೆಂಗಳೂರು: ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ ವೇಳೆ ಮತ ಕಳ್ಳತನವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೇಲೆ ಬಿಜೆಪಿ ಮುಗಿಬಿದ್ದಿರುವಂತೆಯೇ ಮನೆ ಮಾಲೀಕರೊಬ್ಬರು 10*15 ಅಡಿ ದೊಡ್ಡದಿರುವ ಮನೆಯಲ್ಲಿ 80 ಮಂದಿ ವಾಸ ಮಾಡಲು ಸಾಧ್ಯವೇ ಎಂಬ ಪ್ರಾಕ್ಟಿಕಲ್‌ ಪ್ರಶ್ನೆಯನ್ನು ಕೇಳಿದ್ದಾರೆ. ಬೆಳ್ಳಂದೂರಿನ ಮನೆ ನಂ.35ರ ವಿಳಾಸದಲ್ಲಿ 80 ಮಂದಿಗೆ ವೋಟರ್‌ ಐಡಿ ಕಾರ್ಡ್‌ ನೀಡಲಾಗಿದೆ ಎಂದು ರಾಹುಲ್‌

10*15 ಅಡಿ ದೊಡ್ಡ ಮನೆಯಲ್ಲಿ 80 ಜನ ವಾಸ ಮಾಡುವುದು ಸಾಧ್ಯವೆ? : ಕಾಂಗ್ರೆಸ್‌ಗೆ ಮನೆ ಮಾಲೀಕನ ಪ್ರಶ್ನೆ Read More »

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಶ್ರೀ ವರಮಹಾ ಲಕ್ಷ್ಮಿ ಪೂಜೆ ಶುಕ್ರವಾರ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಜರಗಿತು. ಪೂಜೆಯ ಅಂಗವಾಗಿ ಬೆಳಿಗ್ಗೆ 7.30ಕ್ಕೆ ಭಜನಾ ಸಂಕೀರ್ತನೆ ಕಾರ್ಯಕ್ರಮ ನಡೆದು, ಮಧ್ಯಾಹ್ನ ಮಹಾಪೂಜೆ ನಡೆಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಜಯಶ್ರೀ ಆಚಾರ್ಯ ಕೆಮ್ಮಿಂಜೆ ದೀಪ ಬೆಳಗಿ ಉದ್ಘಾಟಿಸಿದರು. ಪುತ್ತಿಲ ಪರಿವಾರ ಟ್ರಸ್ಟ್ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಕೋಶಾಧಿಕಾರಿ ಗಣೇಶ್

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಫಿಲೋ ಪ್ರತಿಭಾ ಪ್ರಶಸ್ತಿ

ಪುತ್ತೂರು: ಸೈಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜು ನಡೆಸಿದ ’ಫಿಲೋ ಪ್ರತಿಭಾ’ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಶಸ್ತಿ ಗಳಿಸಿದೆ. ಶಾಲಾ ವಿದ್ಯಾರ್ಥಿಗಳಾದ ಕುಶಿತಾ ಮತ್ತು ಶ್ರೇಯಾ ರಂಗೋಲಿಯಲ್ಲಿ ಪ್ರಥಮ, ಸಾಯೀಶ್ವರಿ ಮತ್ತು ದೀಕ್ಷಾ ಎಂ. ಮುಖವರ್ಣಿಕೆಯಲ್ಲಿ ದ್ವಿತೀಯ ಹಾಗೂ ಅದ್ವಿಜ್ ಜಿ. ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಫಿಲೋ ಪ್ರತಿಭಾ ಪ್ರಶಸ್ತಿ Read More »

ಕೇರಳಕ್ಕೆ ಸಾಗಿಸುತ್ತಿದ್ದ 20.80 ಲ.ರೂ. ವಶ : ಆರೋಪಿ ಬಂಧನ

ದಾಖಲೆ ಪತ್ರಗಳಿಲ್ಲದೆ ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪಾರ ಹಣ ಸಾಗಾಟ ಮಂಗಳೂರು : ಮಂಗಳೂರಿನಿಂದ ಕೇರಳಕ್ಕೆ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 20.80 ಲ.ರೂ.ಯನ್ನು ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕನಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ನಗದು ಹಣವನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಂಗಳೂರಿನ ಜಯಶೀಲ ಪುಟ್ಟಣ್ಣ ಶೆಟ್ಟಿ(52) ಎಂಬಾತನನ್ನು ಬಂಧಿಸಲಾಗಿದೆ. ವಾಹನ ತಪಾಸಣೆ ಮಾಡುತ್ತಿದ್ದ ಅಬಕಾರಿ ಸಿಬ್ಬಂದಿಗಳು ಈತನ ಬ್ಯಾಗನ್ನು ಪರಿಶೀಲಿಸಿದಾಗ ನಗದು ಪತ್ತೆಯಾಗಿದೆ.

ಕೇರಳಕ್ಕೆ ಸಾಗಿಸುತ್ತಿದ್ದ 20.80 ಲ.ರೂ. ವಶ : ಆರೋಪಿ ಬಂಧನ Read More »

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ದುರುಳರು

ಯುವತಿಯ ಸಹೋದರನಿಗೇ ವಿಡಿಯೋ ಕಳುಹಿಸಿ ವಿಕೃತಿ ಹಾಸನ: ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಹಾಸನದಲ್ಲಿ ನಡೆದಿದೆ. ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರದ ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ಕೂಡಲೇ ಸಹೋದರ ಅತ್ಯಾಚಾರದ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ವಿಡಿಯೋ ಕಳುಹಿಸಿದ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವಿಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್‌ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ದುರುಳರು Read More »

ಸಹೋದರತೆಯ ‌ಸವಿಯನ್ನು ಸಾರುವ ಸುಂದರ ಆಚರಣೆಯೇ ‌ರಕ್ಷಾ ಬಂಧನ

ಇಂದು ಪವಿತ್ರ ರಕ್ಷಾ ಬಂಧನ ದಿನ ರಕ್ಷಾ ಬಂಧನ, ಸಹೋದರತ್ವದ ಮಹತ್ವ ಸಾರುವ ಈ ಹಬ್ಬ ಭಾರತದಲ್ಲಿ ಬಹಳಷ್ಟು ಮಹತ್ವ ಪಡೆದ ಹಬ್ಬ ಎನ್ನುವುದರಲ್ಲಿ ‌ಎರಡು ಮಾತಿಲ್ಲ. ಇದು ಸಹೋದರ – ಸಹೋದರಿಯ ನಡುವಿನ ಸಂಬಂಧವನ್ನು ಗೌರವಿಸುವ ಹಬ್ಬ ಎನ್ನಬಹುದು. ಸಹೋದರಿ ಸಹೋದರನಿಗೆ ತನ್ನ ರಕ್ಷಣೆಯ ಜವಾಬ್ದಾರಿ ಹೊರುವಂತೆ, ಎಲ್ಲ ಸಂದರ್ಭದಲ್ಲಿಯೂ ತನ್ನನ್ನು ರಕ್ಷಿಸುವಂತೆ ರಕ್ಷೆಯನ್ನು ಕಟ್ಟುತ್ತಾಳೆ. ಸಹೋದರ ತನ್ನ ಸಹೋದರಿಯ ರಕ್ಷಣೆಯ ಭಾರ ತನ್ನದು ಎನ್ನುವ ಪ್ರತಿಜ್ಞೆ ಮಾಡುತ್ತಾನೆ ಎನ್ನುವುದು ಈ ಸುಂದರ ದಿನದ ಹಿಂದಿನ

ಸಹೋದರತೆಯ ‌ಸವಿಯನ್ನು ಸಾರುವ ಸುಂದರ ಆಚರಣೆಯೇ ‌ರಕ್ಷಾ ಬಂಧನ Read More »

ಪುತ್ತೂರು : ಕುಖ್ಯಾತ ಆರೋಪಿಯ ಬಂಧನ

ಪುತ್ತೂರು : ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರ್‌ರಾಜ್ಯ ಆರೋಪಿ ಇಲಿಯಾಸ್ ಪಿ.ಎ. ಎಂಬಾತನನ್ನು ಪೊಲೀಸರು ಬಂಧಿಸಿ ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಕೇರಳ ರಾಜ್ಯದ ತೃಶ್ಶೂರ್ ಜಿಲ್ಲೆಯ ವಿಯ್ಯೂರು ಎಂಬಲ್ಲಿನ ನಿವಾಸಿಯಾದ ಇಲಿಯಾಸ್ ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ತೃಶ್ಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್

ಪುತ್ತೂರು : ಕುಖ್ಯಾತ ಆರೋಪಿಯ ಬಂಧನ Read More »

ಧರ್ಮಸ್ಥಳ ಪ್ರಕರಣ : ಹೊಸ ಸ್ಥಳದಲ್ಲೂ ಸಿಗದ ಮೃತದೇಹದ ಅವಶೇಷ

ಮೃತದೇಹ ಹೂತಿರುವುದನ್ನು ನೋಡಿದ್ದೇವೆ ಎಂದು ಇನ್ನಿಬ್ಬರಿಂದ ದೂರು ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರ ತೋರಿಸಿದ ಬೊಳಿಯಾರು ಸಮೀಪದ ಅರಣ್ಯದಲ್ಲಿ ಎಸ್‌ಐಟಿ ತಂಡ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದು, ಆದರೆ ಅಲ್ಲಿ ಕೂಡ ಏನೂ ಸಿಕ್ಕಿಲ್ಲ. ಮುಸುಕುಧಾರಿ ದೂರುದಾರ ಈ ಹಿಂದೆ 13 ಸ್ಥಳಗಳಲ್ಲಿ ತೋರಿಸಿದ್ದ ಜಾಗಗಳ ಹೊರತಾಗಿ ಇನ್ನೂ ಕೆಲವು ಜಾಗಗಳನ್ನು ತೋರಿಸಿದ್ದು, ಅಲ್ಲೂ ಗುರುತು ಮಾಡಿ ಅಗೆಯಲು ತೊಡಗಿದ್ದಾರೆ. ಶುಕ್ರವಾರ ಮಧ್ಯಾಹ್ನದ ವೇಳೆ ಎಸ್‌ಐಟಿ ಸಾಕ್ಷಿ ದೂರುದಾರನೊಂದಿಗೆ

ಧರ್ಮಸ್ಥಳ ಪ್ರಕರಣ : ಹೊಸ ಸ್ಥಳದಲ್ಲೂ ಸಿಗದ ಮೃತದೇಹದ ಅವಶೇಷ Read More »

ಕಾಂತಾರದಲ್ಲಿ ಕಾಣಿಸಿಕೊಂಡಿದ್ದ ‘ಅಪ್ಪು’ ಇನ್ನಿಲ್ಲ

ಕುಂದಾಪುರ: ಕಾಂತಾರ ಚಿತ್ರದ ಆರಂಭದಲ್ಲಿನ ಕಂಬಳದ ಸನ್ನಿವೇಶದಲ್ಲಿ ಕಾಣಿಸಿಕೊಂಡಿದ್ದ ಕೋಣ ಅಪ್ಪು ವಿಧಿವಶವಾಗಿದೆ. ಬೋಳಂಬಳ್ಳಿ ಚೈತ್ರಾ ಪರಮೇಶ್ವರ ಭಟ್ ಅವರಿಗೆ ಸೇರಿದ ಕೋಣ ಇದಾಗಿದ್ದು, ದೇಶ‌ವಿದೇಶದಲ್ಲಿ ಸದ್ದು ಮಾಡಿದ್ದ ಕಾಂತಾರ ಚಿತ್ರದಲ್ಲಿ ಇನ್ನೊಂದು ಕೋಣದ ಜೊತೆಗೆ ಕಂಬಳದ ಸನ್ನಿವೇಶದಲ್ಲಿ ಇದನ್ನು ಬಳಕೆ ಮಾಡಲಾಗಿತ್ತು. ಮೃತ ಅಪ್ಪು ಕೋಣವು ಕಂಬಳದ ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿ ಶ್ರೇಷ್ಟ ಪ್ರಶಸ್ತಿ ಪಡೆದಿತ್ತು. ಹಾಗೆಯೇ ಕುಂದಾಪುರದ ಸಾಂಪ್ರದಾಯಿಕ ಕಂಬಳಗಳಲ್ಲಿ ಐದು ವರ್ಷ ಚಾಂಪಿಯನ್ ಪಟ್ಟಕ್ಕೇರಿತ್ತು. 2023 ರಲ್ಲಿ ಬೆಂಗಳೂರಿನಲ್ಲಿ

ಕಾಂತಾರದಲ್ಲಿ ಕಾಣಿಸಿಕೊಂಡಿದ್ದ ‘ಅಪ್ಪು’ ಇನ್ನಿಲ್ಲ Read More »

error: Content is protected !!
Scroll to Top