ಧರ್ಮಸ್ಥಳ ಕಬಳಿಸಲು ಸರ್ಕಾರ ಹುನ್ನಾರ : ಪ್ರತಾಪ್‌ಸಿಂಹ ಆರೋಪ

ಧರ್ಮಾಧಿಕಾರಿಯನ್ನು ಆರೋಪಿ ಎಂದು ತೀರ್ಮಾನಿಸಿ ಸಾಕ್ಷಿ ಹುಡುಕಾಟ ಎಂದ ಮಾಜಿ ಸಂಸದ ಮೈಸೂರು: ರಾಜ್ಯ ಸರ್ಕಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಆರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದು ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ ಸಂಬಂಧವೇ ಇಲ್ಲ. […]

ಧರ್ಮಸ್ಥಳ ಕಬಳಿಸಲು ಸರ್ಕಾರ ಹುನ್ನಾರ : ಪ್ರತಾಪ್‌ಸಿಂಹ ಆರೋಪ Read More »

ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ

ಸ್ಕೂಟಿ ಪಂಕ್ಚರ್‌ ಆದ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಂತಿದ್ದಾಗ ಡಿಕ್ಕಿ ಹೊಡೆದ ಕಾರು ವಿಟ್ಲ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ದ್ವಿಚಕ್ರ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ಬೇಕರಿಯ ಮಾಲೀಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು. ಜಗನ್ನಾಥ ಶೆಟ್ಟಿಗಾರ್ ಇಂದು ಬೆಳಗ್ಗೆ ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಕ್ಚರ್

ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ Read More »

ಮತಗಳ್ಳತನ ಆರೋಪ ಮಾಡಿದ ರಾಗಾ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷ ಕಕ್ಕುವ‌ಘೋರ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎನ್ನುವ ರಾಹುಲ್ ಗಾಂಧಿ ಆರೋಪ ತಳ್ಳಿ ಹಾಕಿರುವ ಅವರು, ಚುನಾವಣಾ ಆಯೋಗದ ಮೇಲೆ ಸುಳ್ಳಿನ ಸುರಿಮಳೆ, ಜನತಂತ್ರಕ್ಕೆ ನೇಣು ಬಿಗಿಯುವ ಧೂರ್ತ ಹುನ್ನಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮತಗಳ್ಳತನ ಆರೋಪ ಮಾಡಿದ ರಾಗಾ ವಿರುದ್ಧ ಕುಮಾರಸ್ವಾಮಿ ಕಿಡಿ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯಿಂದ ಗನ್‌ಮ್ಯಾನ್‌ ಭದ್ರತೆಗೆ ಕೋರಿಕೆ

ನನ್ನ ಮೇಲೂ ದಾಳಿಯಾಗುವ ಸಾಧ್ಯತೆಯಿದೆ ಎಂದು ಎಸ್‌ಐಟಿ ಮುಂದೆ ಹೇಳಿಕೊಂಡ ದೂರುದಾರ ಮಂಗಳೂರು: ಧರ್ಮಸ್ಥಳ ಪ್ರಕರಣದ ಕೇಂದ್ರವಾಗಿರುವ ಮುಸುಕುಧಾರಿ ಅನಾಮಿಕ ವ್ಯಕ್ತಿ ಎಸ್‌ಐಟಿ ಬಳಿ ತನಗೆ ಗನ್‌ಮ್ಯಾನ್‌ ರಕ್ಷಣೆ ನೀಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಬುಧವಾರ ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಬಳಿಕ ತುಸು ಉದ್ವಿಗ್ನ ವಾತಾವರಣವಿದೆ. ಬುಧವಾರ ಸಂಜೆ ಧರ್ಮಸ್ಥಳದಲ್ಲಿ ನಡೆದ ಘರ್ಷಣೆಯ ಬಳಿಕ ದೂರುದಾರನಿಂದ ಈ ವಿಶೇಷ ಮನವಿ ಬಂದಿದೆ. ನನ್ನ ಮೇಲೂ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಗನ್‌ಮ್ಯಾನ್‌ ನೀಡಬೇಕೆಂದು ಮನವಿ ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯಿಂದ ಗನ್‌ಮ್ಯಾನ್‌ ಭದ್ರತೆಗೆ ಕೋರಿಕೆ Read More »

ಮತಕಳ್ಳತನ ಆರೋಪ ಮಾಡಿದ ರಾಹುಲ್‌ ಗಾಂಧಿಗೆ ಬಿಜೆಪಿ 13 ಪ್ರಶ್ನೆ

ಇವುಗಳಿಗೆಲ್ಲ ನೀವು ಕ್ಷಮೆ ಯಾಚಿಸುವುದು ಯಾವಾಗ ಎಂದು ಕೇಳಿದ ಬಿಜೆಪಿ ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಪ್ರಮಾಣದ ಮತ ವಂಚನೆಯಾಗಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಕರ್ನಾಟಕ ಬಿಜೆಪಿ 13 ಪ್ರಶ್ನೆಗಳನ್ನು ಕೇಳುವ ಮೂಲಕ ತಿರುಗೇಟು ನೀಡಿದೆ. *ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿದ್ದ 40 ಸಾವಿರ ಕೋಟಿ ರೂ. ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿನಿಯೋಗಿಸುವ ಮೂಲಕ ನಿಮ್ಮ ಸರ್ಕಾರ ಪರಿಶಿಷ್ಟರಿಗೆ ಮಹಾದ್ರೋಹ

ಮತಕಳ್ಳತನ ಆರೋಪ ಮಾಡಿದ ರಾಹುಲ್‌ ಗಾಂಧಿಗೆ ಬಿಜೆಪಿ 13 ಪ್ರಶ್ನೆ Read More »

ಪರೀಕ್ಷೆ ಬರೆಯಲು ತೆರಳಿದಾಕೆ ಪ್ರಿಯಕರನನ್ನು ಮದುವೆಯಾಗಿ ಪತ್ತೆ

ಅನ್ಯ ಮತದ ಮಶಾಕ್ ಜೊತೆ ಮದುವೆಯಾದ ಪಲ್ಲವಿ ಹೇಳಿದ್ದೇನು ಗೊತ್ತಾ? ಕಲಬುರ್ಗಿ: ಬಿ.ಎಸ್ಸಿ. ಪರೀಕ್ಷೆ ಬರೆಯಲು ತೆರಳಿ ಬಳಿಕ ಮನೆಗೆ ಬಾರದೆ ಯುವತಿ ನಾಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾದ ಯುವತಿ ಪಲ್ಲವಿ ತನ್ನ ಪ್ರಿಯಕರ ಮಶಾಕ್ ಎಂಬಾತನ ಜೊತೆಗೆ ಮದುವೆಯಾಗಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾಳೆ. ಗೊಬ್ಬರು ಬಿ. ಗ್ರಾಮದ ನಿವಾಸಿ ಯುವತಿ ಪರೀಕ್ಷೆಗೆ ಹೋಗುವುದಾಗಿ ‌ತೆರಳಿ ಬಳಿಕ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆಕೆಗೆ ಮಶಾಕ್ ಎಂಬ ಅನ್ಯ ಮತದ

ಪರೀಕ್ಷೆ ಬರೆಯಲು ತೆರಳಿದಾಕೆ ಪ್ರಿಯಕರನನ್ನು ಮದುವೆಯಾಗಿ ಪತ್ತೆ Read More »

ಮತಗಳ್ಳತನ ಆರೋಪ: ಕಾಂಗ್ರೆಸ್, ರಾಹುಲ್ ಗಾಂಧಿ ವಿರುದ್ಧ ಸಿ.ಟಿ. ರವಿ ವ್ಯಂಗ್ಯ

ಚಿಕ್ಕಮಗಳೂರು: ಕರ್ನಾಟಕದಲ್ಲಿ ಮತಗಳ್ಳತನವಾಗಿದೆ, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದು, ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಸಜ್ಜಾಗಿದ್ದು ಇದಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಳ್ಳರು, ಕಳ್ಳರು ಹೆಚ್ಚು ಸದ್ದು ಮಾಡುತ್ತಾರೆ.‌ ರಾಹುಲ್ ಗಾಂಧಿ ಒಬ್ಬ ಮಿಸ್‌ಗೈಡೆಡ್ ಲೀಡರ್ ಎಂದು ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿಯ ರಿಮೋಟ್ ಕಂಟ್ರೋಲರ್ ಎಲ್ಲೋ ಇದೆ. ಅವರು ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಚುನಾವಣಾ

ಮತಗಳ್ಳತನ ಆರೋಪ: ಕಾಂಗ್ರೆಸ್, ರಾಹುಲ್ ಗಾಂಧಿ ವಿರುದ್ಧ ಸಿ.ಟಿ. ರವಿ ವ್ಯಂಗ್ಯ Read More »

ಗಂಗೊಳ್ಳಿ ಸೇತುವೆ, ಶಿರೂರು ಅಳಿವೆಗದ್ದೆ ಸರ್ವಋತು ಬಂದರು ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಬಿ.ವೈ. ರಾಘವೇಂದ್ರ ಮನವಿ

ಕುಂದಾಪುರ: ಗಂಗೊಳ್ಳಿ ಸೇತುವೆ ಮತ್ತು ಶಿರೂರು ಅಳಿವೆಗದ್ದೆಯಲ್ಲಿ ಸರ್ವಋತು ಬಂದರುಗಳನ್ನು ನಿರ್ಮಾಣ ಮಾಡಲು ಸಂಸದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಸಚಿವ ಸರ್ಬಾನಂದ ‌ಸೋನಾವಾಲ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮತ್ಸೋದ್ಯಮ, ವ್ಯಾಪಾರ, ಜೀವನೋಪಾಯ ಮತ್ತು ಕರಾವಳಿಯ ವಾಣಿಜ್ಯ ವ್ಯವಹಾರಕ್ಕೆ ಗಂಗೊಳ್ಳಿ ಬಂದರು ಪ್ರಮುಖ ಸ್ಥಳವಾಗಿದೆ. ಇದು ರಾಜ್ಯದ ಎರಡನೇ ಅತೀ ದೊಡ್ಡ ಮೀನುಗಾರಿಕಾ ಬಂದರು ನೆಲೆಯಾಗಿದ್ದು, ಇಲ್ಲಿ 200 ಕ್ಕೂ ಅಧಿಕ ಮೀನುಗಾರಿಕಾ ದೋಣಿಗಳಿವೆ. ಗಂಗೊಳ್ಳಿಯಿಂದ ಕುಂದಾಪುರ ಕೂಗಳತೆಯ ದೂರದಲ್ಲಿದ್ದರೂ ಇಲ್ಲಿನ ಜನರು ಅಲ್ಲಿಗೆ ತಲುಪಬೇಕಾದರೆ

ಗಂಗೊಳ್ಳಿ ಸೇತುವೆ, ಶಿರೂರು ಅಳಿವೆಗದ್ದೆ ಸರ್ವಋತು ಬಂದರು ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಬಿ.ವೈ. ರಾಘವೇಂದ್ರ ಮನವಿ Read More »

SSLC, PUC ವಿದ್ಯಾರ್ಥಿಗಳಿಗೆ 75% ಹಾಜರಾತಿ ಕಡ್ಡಾಯ: ಸಿಬಿಎಸ್ಇ

ನವದೆಹಲಿ: ಹತ್ತು ಮತ್ತು ಹನ್ನೆರಡನೇಯ ತರಗತಿ ವಿದ್ಯಾರ್ಥಿಗಳಿಗೆ 2026 ರ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಕನಿಷ್ಠ 75% ಹಾಜರಾತಿ ಕಡ್ಡಾಯ ಎಂದು ಸಿಬಿಎಸ್‌ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) ನಿರ್ದೇಶನ ನೀಡಿದೆ. ಸಿಬಿಎಸ್‌ಇ ಪ್ರಕಾರ ಅನುಸರಣೆ ಇಲ್ಲದ ಹಾಜರಾತಿ ಮತ್ತು ಹೆಚ್ಚಾಗುತ್ತಿರುವ ನಕಲಿ ವಿದ್ಯಾರ್ಥಿಗಳು ಮೊದಲಾದ ಪುನರಾವರ್ತಿತ ಸಮಸ್ಯೆಗಳನ್ನು ಬಗೆಹರಿಸಲು ಈ ಕ್ರಮಕ್ಕೆ ಮುಂದಾಗಿರುವುದಾಗಿದೆ. ಇದು ಮಕ್ಕಳು, ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿ ಹೆಚ್ಚಿಸುವ ನಿಟ್ಟಿನಲ್ಲಿಯೂ ಪ್ರಮುಖವಾಗಲಿದೆ. ಹಾಗೆಯೇ ದಾಖಲಾತಿ ವಂಚನೆ ತಡೆಯುವ ನಿಟ್ಚಿನಲ್ಲಿಯೂ ಸಂಸ್ಥೆಗಳನ್ನು ಕಟ್ಟುನಿಟ್ಟಾಗಿ

SSLC, PUC ವಿದ್ಯಾರ್ಥಿಗಳಿಗೆ 75% ಹಾಜರಾತಿ ಕಡ್ಡಾಯ: ಸಿಬಿಎಸ್ಇ Read More »

ಕೌಶಲ್ಯಕ್ಕೆ ತಕ್ಕ ವೃತ್ತಿಯನ್ನು ಆರಿಸಿಕೊಳ್ಳಿ | ಪಯಣ ಕಾರ್ಯಕ್ರಮದಲ್ಲಿ ನಿತಿನ್

ಪುತ್ತೂರು: ಸ್ನಾತಕೋತ್ತರ ಶಿಕ್ಷಣ ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಗಳನ್ನು ಅಭಿವೃದ್ಧಿಗೊಳಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿದ ನಂತರ ತಮ್ಮ ಕೌಶಲ್ಯಗಳಿಗನುಸಾರವಾಗಿ ವಿಭಿನ್ನ ಹಾದಿಯಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಜೀವನದಲ್ಲಿಯಶಸ್ಸು ಪಡೆಯುವ ಮಾರ್ಗಗಳನ್ನು ಅನುಸರಿಸಬೇಕು ಎಂದು ಅಮೇರಿಕಾದ ಝಿಂಟೆಕ್ ಹೂಸ್ಟನ್ ಕಂಪನಿ ಉದ್ಯೋಗಿ ನಿತಿನ್ ಹೇಳಿದರು.ಅವರು ನಗರದ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಜಂಟಿ ಆಶ್ರಯದಲ್ಲಿ ನಡೆದ ಪಯಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅನುಭವೀ ವ್ಯಕ್ತಿಗಳ ಜತೆಗೆ, ಸಮಯವನ್ನು ಕಳೆದು ವೃತ್ತಿಜೀವನದ

ಕೌಶಲ್ಯಕ್ಕೆ ತಕ್ಕ ವೃತ್ತಿಯನ್ನು ಆರಿಸಿಕೊಳ್ಳಿ | ಪಯಣ ಕಾರ್ಯಕ್ರಮದಲ್ಲಿ ನಿತಿನ್ Read More »

error: Content is protected !!
Scroll to Top