ನೇಹಾ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ತಿರಸ್ಕೃತ

ಹುಬ್ಬಳ್ಳಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ ಒಂದನೇ ಮತ್ತು ಸತ್ರ ನ್ಯಾಯಾಲಯ ರದ್ದು ಮಾಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಲ್ಲವಿ ಬಿ. ಆರ್. ಅವರು ಮಹತ್ವದ ಆದೇಶ ನೀಡಿರುವುದಾಗಿದೆ‌. ಆರೋಪಿ ಪರ ವಕೀಲರು ‘ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ‌ಗೆ ಜಾಮೀನು ನೀಡಲಾದಂತೆಯೇ ಫಯಾಜ್‌ಗೂ ಜಾಮೀನು ನೀಡಿ ಎಂದು ಕೋರ್ಟ್ ‌ಗೆ ತಿಳಿಸಿದ್ದರು. ಆದರೆ ನ್ಯಾಯಾಲಯ ಈ ಅರ್ಜಿಯನ್ನು ತಿರಸ್ಕರಿಸಿದ್ದು, ಆ‌ […]

ನೇಹಾ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿ ತಿರಸ್ಕೃತ Read More »

ಕನ್ನಡದ ಯುವ ನಾಯಕ ನಟ ಸಂತೋಷ್ ಬಾಲರಾಜ್ ನಿಧನ

ಅನಾರೋಗ್ಯ ಉಲ್ಬಣಿಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟ ಬೆಂಗಳೂರು : ಕನ್ನಡ ಚಿತ್ರರಂಗದ ಯುವ ನಾಯಕ ನಟ ಸಂತೋಷ್ ಬಾಲರಾಜ್ (34) ಇಂದು ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ ಉಲ್ಬಣಿಸಿ ಗಂಭೀರ ಸ್ಥಿತಿಯಲ್ಲಿ

ಕನ್ನಡದ ಯುವ ನಾಯಕ ನಟ ಸಂತೋಷ್ ಬಾಲರಾಜ್ ನಿಧನ Read More »

ದುಡ್ಡಿಲ್ಲ…ದುಡ್ಡಿಲ್ಲ… ಸಂಬಳ ಕೊಡಲು ದುಡ್ಡಿಲ್ಲ : ಆರ್‌.ಅಶೋಕ್‌ ವ್ಯಂಗ್ಯ

ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಚೆಲ್ಲಾಟ, ಜನಸಾಮಾನ್ಯರಿಗೆ ಪರದಾಟ ಎಂದು ಟೀಕೆ ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಳಗ್ಗಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದು, ಸಾರಿಗೆ ಬಸ್‌ಗಳು ರಸ್ತೆಗೆ ಇಳಿದಿಲ್ಲ. ಇದರ ಪರಿಣಾಮ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಮೇಲೂ ಬೀರಿದೆ. ದಿವಾಳಿ ಸರ್ಕಾರ ವಿರುದ್ಧ ಸಾರಿಗೆ ನೌಕರರ ಮುಷ್ಕರ, ರಾಜ್ಯಾದ್ಯಂತ ಸ್ತಬ್ಧವಾದ ಬಸ್ ಸಂಚಾರ ಎಂದು ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅಶೋಕ್‌,

ದುಡ್ಡಿಲ್ಲ…ದುಡ್ಡಿಲ್ಲ… ಸಂಬಳ ಕೊಡಲು ದುಡ್ಡಿಲ್ಲ : ಆರ್‌.ಅಶೋಕ್‌ ವ್ಯಂಗ್ಯ Read More »

ಉಪ್ಪಿನಂಗಡಿ : ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳನ ಬಂಧನ

ಐದು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿ ಉಪ್ಪಿನಂಗಡಿ : ಹಲವು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ ಆರೋಪಿ ಸೊಹೈಲ್ ಅಲಿಯಾಸ್ ಸೊಹಿಬ್‌ನನ್ನು (24) ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಒಟ್ಟು ಎಂಟು ಕಳ್ಳತನ ಪ್ರಕರಣಗಳಲ್ಲಿ ಸೊಹೈಲ್ ಭಾಗಿಯಾಗಿರುವುದನ್ನು ಪತ್ತೆಹಚ್ಚಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2020 ಮತ್ತು 2022ರಲ್ಲಿ ಅವನ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. 2020ರಲ್ಲಿ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತಲಾ ಒಂದು

ಉಪ್ಪಿನಂಗಡಿ : ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳನ ಬಂಧನ Read More »

ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ಕೊಡಲು ಸಾಧ್ಯವಿಲ್ಲ : ಸಿದ್ದರಾಮಯ್ಯ

ಶ್ರೀನಿವಾಸ ಸಮಿತಿಯ ಶಿಫಾರಸ್ಸು ಒಪ್ಪಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಬೆಂಗಳೂರು: 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿ ಕೊಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ 2020ರ ಜನವರಿಯಿಂದ 2023ರ ಫೆಬ್ರವರಿವರೆಗಿನ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಹಾಗೂ 2024ರ ಜನವರಿಯಿಂದ ಅನ್ವಯ ವಾಗುವಂತೆ ಹೊಸದಾಗಿ ವೇತನವನ್ನು ಹೆಚ್ಚಳ ಮಾಡುವಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು

ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ಕೊಡಲು ಸಾಧ್ಯವಿಲ್ಲ : ಸಿದ್ದರಾಮಯ್ಯ Read More »

ಧರ್ಮಸ್ಥಳ ಪ್ರಕರಣ : 15 ವರ್ಷದ ಬಾಲಕಿಯ ಕೊಳೆತ ಶವ ಹೂತಿದ್ದಾರೆ ಎಂದು ದೂರು

ದಿನಕ್ಕೊಂದು ತಿರುವು ಪಡೆಯುತ್ತಿರುವ ಶವ ಹುಡುಕಾಟ ಕಾರ್ಯಾಚರಣೆ ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ನಿಗೂಢ ಸರಣಿ ಸಾವುಗಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಸೋಮವಾರ ಮತ್ತೊಂದು ದೂರು ನೀಡಲಾಗಿದೆ. ಬೆಳ್ತಂಗಡಿ ತಾಲೂಕಿನ ಇಚಿಲಂಪಾಡಿ ನಿವಾಸಿ ಸಾಮಾಜಿಕ ಹೋರಾಟಗಾರ ಜಯಂತ್ ಸೋಮವಾರ ಮೂವರು ವ್ಯಕ್ತಿಗಳ ಜೊತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಹೋಗಿ 15 ವರ್ಷಗಳ ಹಿಂದೆ ನಡೆದ ಹದಿಹರೆಯದ ಬಾಲಕಿಯ ನಿಗೂಢ ಸಾವು ಸಂಭವಿಸಿದೆ ಎಂದು

ಧರ್ಮಸ್ಥಳ ಪ್ರಕರಣ : 15 ವರ್ಷದ ಬಾಲಕಿಯ ಕೊಳೆತ ಶವ ಹೂತಿದ್ದಾರೆ ಎಂದು ದೂರು Read More »

ಪ್ರಧಾನಿ ನರೇಂದ್ರ ಮೋದಿಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಗಿನ್ನೆಸ್‌ ದಾಖಲೆಯ ಗರಿ

3.53 ಕೋಟಿಗೂ ಹೆಚ್ಚು ನೋಂದಣಿ, ದೂರದರ್ಶನದಲ್ಲಿ 21 ಕೋಟಿಗೂ ಹೆಚ್ಚು ವೀಕ್ಷಕರನ್ನು ಹೊಂದುವ ಮೂಲಕ ವಿಶ್ವ ದಾಖಲೆ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ಮಕ್ಕಳಿಗೆ ಆತ್ಮವಿಶ್ವಾಸ ತುಂಬಲು ಪ್ರತಿವರ್ಷ ಮಾಡುತ್ತಿರುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ ಗಿನ್ನೆಸ್‌ ದಾಖಲೆಗೆ ಸೇರ್ಪಡೆಯಾಗಿದೆ. ಪರೀಕ್ಷಾ ಪೆ ಚರ್ಚಾ 3.53 ಕೋಟಿಗೂ ಹೆಚ್ಚು ನೋಂದಣಿಗಳು ಮತ್ತು ದೂರದರ್ಶನದಲ್ಲಿ 21 ಕೋಟಿಗೂ ಹೆಚ್ಚು ವೀಕ್ಷಕರನ್ನು ಹೊಂದುವ ಮೂಲಕ ವಿಶ್ವ ದಾಖಲೆ ಸ್ಥಾಪಿಸಿದೆ. ಈ ಮೂಲಕ

ಪ್ರಧಾನಿ ನರೇಂದ್ರ ಮೋದಿಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಗಿನ್ನೆಸ್‌ ದಾಖಲೆಯ ಗರಿ Read More »

ಸಾರಿಗೆ ನೌಕರರ ಮುಷ್ಕರ ಪ್ರಾರಂಭ : ಬೆಳ್ಳಂಬೆಳಗ್ಗೆ ಪ್ರಯಾಣಿಕರ ಪರದಾಟ

ರಸ್ತೆಗಿಳಿಯದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬಂದ್‌ ಆರಂಭಿಸಿದ್ದಾರೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಸಾರಿಗೆ ನೌಕರರು ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಮುಂದಾಗಿದೆ. ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಸಮಸ್ಯೆಗಳು ಶುರುವಾಗಿವೆ. ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆ-ಕಾಲೇಜುಗಳಿಗೆ ಹೋಗಲು ಪರದಾಡುತ್ತಿದ್ದಾರೆ. ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ

ಸಾರಿಗೆ ನೌಕರರ ಮುಷ್ಕರ ಪ್ರಾರಂಭ : ಬೆಳ್ಳಂಬೆಳಗ್ಗೆ ಪ್ರಯಾಣಿಕರ ಪರದಾಟ Read More »

ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಯಂಗ್‌ ಇಂಡಿಯಾ : ಗಿಲ್‌ ಪಡೆ ಸಾಧನೆಗೆ ಭರಪೂರ ಮೆಚ್ಚುಗೆ

ಸೋಲಿನ ದವಡೆಯಿಂದ ಗೆಲುವನ್ನು ಕಸಿದು ಬೀಗಿದ ಟೀಮ್‌ ಇಂಡಿಯಾ–ಭಾರತ ಮಾಡಿತು ಹಲವು ಹೊಸ ದಾಖಲೆ ಲಂಡನ್‌: ಓವಲ್‌ನಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲಂಡ್ ವಿರುದ್ಧ ಭಾರತ 6 ರನ್‌ಗಳಿಂದ ರೋಚಕ ಗೆಲುವು ಸಾಧಿಸುವ ಮೂಲಕ ಬರೋಬ್ಬರಿ 77 ವರ್ಷಗಳ ನಂತರ ವಿದೇಶಿ ನೆಲದಲ್ಲಿ ಐದು ಪಂದ್ಯಗಳ ಸರಣಿಯ ಅಂತಿಮ ಪಂದ್ಯವನ್ನು ಗೆದ್ದ ದಾಖಲೆ ಮಾಡಿದೆ. ಈ ಗೆಲುವಿನೊಂದಿಗೆ ಭಾರತ 2-2ರ ಸಮಬಲದೊಂದಿಗೆ ಸರಣಿಯನ್ನು ಪೂರ್ಣಗೊಳಿಸಿದೆ. ಈ ಟೆಸ್ಟ್‌ ಸರಣಿ ಭಾರತದ ಪಾಲಿಗೆ ಸ್ಮರಣೀಯವಾಗಿ

ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಯಂಗ್‌ ಇಂಡಿಯಾ : ಗಿಲ್‌ ಪಡೆ ಸಾಧನೆಗೆ ಭರಪೂರ ಮೆಚ್ಚುಗೆ Read More »

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಮುಷ್ಕರವನ್ನು ಮಂಗಳವಾರದ ವರೆಗೆ ಸ್ಥಗಿತ ಮಾಡುವಂತೆ ಹೈಕೋರ್ಟ್ ಆದೇಶ ನೀಡಿರುವುದಾಗಿದೆ. ಈ ಸಂಬಂಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಜೊತೆಗೆ ನಾಳೆಯ ವರೆಗೆ ಮುಷ್ಕರ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶ ನೀಡಿದೆ. ಆ. 5 ರಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಇಲಾಖೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ಈ ಸಂಬಂಧ ಸಾರಿಗೆ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಭೆ ನಡೆಸಿತ್ತು. ಆದರೆ

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ Read More »

error: Content is protected !!
Scroll to Top