ಗ್ಯಾಸ್‌ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು

ಪಟಾಕಿಯ ಕಿಡಿ ತಗಲಿ ಸ್ಫೋಟಿಸಿದ ಸಿಲಿಂಡರ್‌ ಕೋಲ್ಕತ್ತಾ : ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯ ದೋಲಾಹಾತ್‌ ಎಂಬಲ್ಲಿ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಪಟಾಕಿ ಯಿಂದ ಸಿಡಿದ ಕಿಡಿ ಸಿಲಿಂಡರ್​ಗೆ ತಗಲಿ ಬೆಂಕಿಹತ್ತಿಕೊಂಡು ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡದ ಬಳಿಕ ನಾಲ್ವರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಮನೆಯಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು, ಈ […]

ಗ್ಯಾಸ್‌ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು Read More »

ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು  ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ

ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ Read More »

ಇಂದಿನಿಂದ ಬೆಲೆ ಏರಿಕೆ ಬಿಸಿ : ಜನಸಾಮಾನ್ಯರ ಪಾಲಿಗೆ ಬದುಕು ಬಲು ದುಬಾರಿ

ಹಾಲು, ಮೊಸರು, ವಿದ್ಯುತ್‌, ಟೋಲ್‌…ಹೆಚ್ಚಳ ಇಂದಿನಿಂದ ಜಾರಿ ಬೆಂಗಳೂರು : ಇಂದಿನಿಂದಲೇ ಕರ್ನಾಟಕದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಹಾಲು, ಮೊಸರು, ವಿದ್ಯುತ್‌, ಟೋಲ್‌…ಹೀಗೆ ಅನೇಕ ವಸ್ತು ಮತ್ತು ಸೇವೆಗಳ ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದ್ದು, ಜನಸಾಮಾನ್ಯರ ಜೇಬಿಗೆ ಹೊರೆ ಬೀಳಲಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ.ಇಂದಿನಿಂದ ನಂದಿನಿ ಹಾಲಿನ ಎಲ್ಲ ಮಾದರಿಯ ಪ್ಯಾಕೆಟ್​ ದರ ಪ್ರತಿ ಲೀಟರ್​ಗೆ 4 ರೂಪಾಯಿ ಏರಿಕೆಯಾಗಿದೆ. ಜೊತೆಗೆ ಮೊಸರಿನ ದರವೂ ಪ್ರತಿ ಲೀಟರ್​​ಗೆ

ಇಂದಿನಿಂದ ಬೆಲೆ ಏರಿಕೆ ಬಿಸಿ : ಜನಸಾಮಾನ್ಯರ ಪಾಲಿಗೆ ಬದುಕು ಬಲು ದುಬಾರಿ Read More »

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ

ಆಡಿಯೋ ಬಹಿರಂಗವಾದ ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಬೆಂಗಳೂರು: ಸಚಿವ ಕೆ.ಎನ್‌. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ತುಣುಕೊಂದು ಬಹಿರಂಗವಾದ ಬೆನ್ನಿಗೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆಡಿಯೋದಲ್ಲಿದ್ದ ಪುಷ್ಪಾ ಎಂಬ ಮಹಿಳೆಯ ಸಹಿತ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪಡೆದುಕೊಂಡಿದ್ದ ಎನ್ನಲಾದ ರೌಡಿಶೀಟರ್‌ ಸೋಮು ಎಂಬಾತನ ಕುರಿತು ರಾಕಿ ಹಾಗೂ ಪುಷ್ಪಾ ಎಂಬವರು ಮಾತುಕತೆ ನಡೆಸಿದ್ದ 18 ನಿಮಿಷದ

ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ : ಮಹಿಳೆ ಸಹಿತ ನಾಲ್ವರು ವಶ Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ

ಏ.9ರಂದು ಮಂಗಳೂರು, 10ರಂದು ಉಡುಪಿಯಲ್ಲಿ ಜನಾಕ್ರೋಶ ಹೋರಾಟ ಬೆಂಗಳೂರು : ಬೆಲೆಯೇರಿಕೆ ಖಂಡಿಸಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಬಿಜೆಪಿ ಮುಂದಾಗಿದ್ದು, ಏಪ್ರಿಲ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುವುದರೊಂದಿಗೆ ಬಿಜೆಪಿಯ ಹೋರಾಟ ಪ್ರಾರಂಭವಾಗಲಿದೆ.ಏಪ್ರಿಲ್​ 2ರಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ನಮ್ಮ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಅಹೋರಾತ್ರಿ ಧರಣಿಯಲ್ಲಿ ಭಾಗಿಯಾಗುತ್ತಾರೆ. ಏಪ್ರಿಲ್​ 5ರಂದು ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಧರಣಿ ಮಾಡುತ್ತೇವೆ

ಬೆಲೆ ಏರಿಕೆ ವಿರುದ್ಧ ಬಿಜೆಪಿ ರಣಕಹಳೆ : ನಾಳೆ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 41 ರೂ. ಇಳಿಕೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ಸಿಲಿಂಡರ್ ಬೆಲೆಯಲ್ಲಿ 41 ರೂ. ಇಳಿಕೆ ಮಾಡಿವೆ. ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಕಡಿತ ಘೋಷಿಸಿದ್ದು, ಅಡುಗೆ ಇಂಧನವನ್ನು ಅವಲಂಬಿಸಿರುವ ವ್ಯವಹಾರಗಳು ಮತ್ತು ಕೈಗಾರಿಕೆಗಳಿಗೆ ಇದರಿಂದ ಅನುಕೂಲವಾಗಲಿದೆ. ತಕ್ಷಣದಿಂದ ಜಾರಿಗೆ ಬರುವಂತೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ. ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ ಪರಿಷ್ಕೃತ ಚಿಲ್ಲರೆ ಮಾರಾಟ ಬೆಲೆ ಈಗ ಪ್ರತಿ ಸಿಲಿಂಡರ್‌ಗೆ 1,762 ರೂ. ಆಗಿದೆ.

ಗ್ಯಾಸ್‌ ಸಿಲಿಂಡರ್‌ ಬೆಲೆ 41 ರೂ. ಇಳಿಕೆ Read More »

ಕುರಿಯ ಮಲಾರ್ ನಿವಾಸಿ ಮೋಹನ್‍ ಆತ್ಮಹತ್ಯೆ

ಪುತ್ತೂರು: ಕುರಿಯ ಗ್ರಾಮದ ಮಲಾರ್ ನಿವಾಸಿ, ಕಲ್ಲರ್ಪೆ ಚಿನ್ನು‌ ಹೋಟೆಲ್ ಮಾಲಕ ಮೋಹನ್ (38 ವ.) ಅವರು ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತಿಳಿದು ಬಂದಿದೆ. ಮಲಾರಿನ ತನ್ನ ಮನೆಯ ಒಳಗಡೆಯೇ ನೇಣು‌ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂದರ್ಭ ಡೆತ್ ನೋಟ್‍ ಲಭಿಸಿದ್ದು, ಡೆತ್ ನೋಟ್’ನಲ್ಲಿ, ಸಾಲಬಾಧೆಯೇ ತನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದಾರೆ. ನೆರೆಯ ಮನೆಯಲ್ಲಿ ಕಾರ್ಯಕ್ರಮಕ್ಕೆಂದು ಮನೆಯವರು ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನ;ಲಾಗಿದೆ. ಮೃತರು ತಾಯಿ, ಪತ್ನಿ ಹಾಗೂ 4

ಕುರಿಯ ಮಲಾರ್ ನಿವಾಸಿ ಮೋಹನ್‍ ಆತ್ಮಹತ್ಯೆ Read More »

ತಾಯಿಯನ್ನು ನೆನೆದು ಯುವಕನೋರ್ವ ಆತ್ಮಹತ್ಯೆಗೆ ಶರಣು

ಬೆಂಗಳೂರು:  ತಾಯಿ ಸಾವನ್ನಪ್ಪಿದ್ದರಿಂದ ಮಗ ಮನನೊಂದು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ. ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಪತ್ತೆಹಚ್ಚಲಾಗಿದೆ. ಮೃತರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಭಾದೆಯಿಂದ ಮನೆಯಲ್ಲಿಯೇ ನೇ‌ಣಿಗೆ ಶರಣಾಗಿದ್ದರು. ಈತ ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಕುರಿತಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

ತಾಯಿಯನ್ನು ನೆನೆದು ಯುವಕನೋರ್ವ ಆತ್ಮಹತ್ಯೆಗೆ ಶರಣು Read More »

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.1 ಮಂಗಳವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ

ಉಡುಪಿ: ಏಪ್ರಿಲ್‍ ತಿಂಗಳ ಮೊದಲ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ  ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಏಪ್ರಿಲ್ ತಿಂಗಳ ಆರಂಭದ ಮೂರು ದಿನಗಳಲ್ಲಿ ಗಂಟೆಗೆ 10 ರಿಂದ 3 ಕಿಲೋಮೀಟ‌ರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ Read More »

error: Content is protected !!
Scroll to Top