ಬಂಟ್ವಾಳ: ಗಿಫ್ಟ್‌ ಪಾರ್ಸೆಲ್‌ ನಂಬಿ 2.35 ಲ.ರೂ. ಕಳೆದುಕೊಂಡ ಮಹಿಳೆ

ಬಂಟ್ವಾಳ : ನಿಮಗೆ ಗಿಫ್ಟ್‌ ಪಾರ್ಸೆಲ್‌ ಇದೆ ಎಂದು ನಂಬಿಸಿ ಬಂಟ್ವಾಳದ ಮಹಿಳೆಯೊಬ್ಬರಿಗೆ ಸೈಬರ್‌ ಚೋರರು 2.35 ಲ.ರೂ. ವಂಚಿಸಿದ ಕುರಿತು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ ಭಾರತಿ ಕೆ. ಎಂಬ ಮಹಿಳೆಗೆ ಕಳೆದ ವರ್ಷ ಡಿ.3ರಂದು ದೆಹಲಿಯ ಡಿಎಚ್‌ಎಲ್‌ ಕೊರಿಯರ್‌ ಸಂಸ್ಥೆಯಿಂದ ಎಂದು ಹೇಳಿಕೊಂಡು ವಂಚಕರು ಕರೆ ಮಾಡಿದ್ದಾರೆ. ಚಿನ್ನ, ಐಫೋನ್‌ ಮತ್ತು 49 ಲ.ರೂ. ಮೌಲ್ಯದ ಕರೆನ್ಸಿ ಪಾರ್ಸೆಲ್‌ ಇದೆ. ಅದನ್ನು ಬಿಡಿಸಿಕೊಳ್ಳಬೇಕಾದರೆ ಮುಂಗಡವಾಗಿ ತೆರಿಗೆ ಪಾವತಿಸಬೇಕೆಂದು ಎಂದು ಮಹಿಳೆಯನ್ನು ನಂಬಿಸಿದ್ದಾರೆ. […]

ಬಂಟ್ವಾಳ: ಗಿಫ್ಟ್‌ ಪಾರ್ಸೆಲ್‌ ನಂಬಿ 2.35 ಲ.ರೂ. ಕಳೆದುಕೊಂಡ ಮಹಿಳೆ Read More »

ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ ಯುವಕನ ಹತ್ಯೆ

ನಡುರಸ್ತೆಯಲ್ಲಿ ಮಚ್ಚಿನಿಂದ ಕೊಚ್ಚಿ ಹಾಕಿ ಶರಣಾದ ಆರೋಪಿ ಬೆಂಗಳೂರು: ಕೊಪ್ಪಳದ ಬಹದ್ದೂರ ಬಂಡಿ ಎಂಬಲ್ಲಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಇದಕ್ಕೆ ಆತ ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸಿದ್ದು ಕಾರಣ ಎನ್ನಲಾಗಿದೆ. ಗವಿಸಿದ್ದಪ್ಪ ನಿಂಗಜ್ಜ ನಾಯಕ್ (30) ಕೊಲೆಯಾದ ಯುವಕ. ಸಾದಿಕ್ ಕೋಲ್ಕಾರ್​ ಎಂಬ ಯುವಕ ಗವಿಸಿದ್ದಪ್ಪ ನಾಯಕ್​​ನನ್ನು ಕೊಲೆ ಮಾಡಿದ್ದಾನೆ. ಅವನ ಜೊತೆಗೆ ಇನ್ನೂ ಮೂವರಿದ್ದರು ಎನ್ನಲಾಗಿದೆ. ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ

ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ ಯುವಕನ ಹತ್ಯೆ Read More »

ಧರ್ಮಸ್ಥಳ ಪ್ರಕರಣ : ಕಳೇಬರಗಳ ಪತ್ತೆಗೆ ಜಿಪಿಆರ್‌ ಬಳಸಲು ಒತ್ತಾಯ

ಭೂಮಿಯಡಿಯಲ್ಲಿರುವ ವಸ್ತುಗಳನ್ನು ನಿಖರವಾಗಿ ಗುರುತಿಸುವ ಅತ್ಯಾಧುನಿಕ ರೇಡಾರ್‌ ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆದರೆ ಇಷ್ಟರತನಕ ನಿರ್ಣಾಯಕ ಎನ್ನಬಹುದಾದ ಯಾವುದೇ ಸಾಕ್ಷಿಗಳು ಸಿಗದಿರುವ ಹಿನ್ನೆಲೆಯಲ್ಲಿ ಗ್ರೌಂಡ್‌ ಪೆನೆಟ್ರೇಟಿಂಗ್‌ ರೇಡಾರ್‌ (ಜಿಪಿಆರ್) ಬಳಸಿ ಹೂತ ಹೆಣಗಳ ಶೋಧ ಕಾರ್ಯ ನಡೆಸಬೇಕೆಂಬ ಒತ್ತಾಯ ಬಲವಾಗುತ್ತಿದೆ. ಜಿಪಿಆರ್ ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಎಂಬವರ ತಾಯಿ ಸುಜಾತಾ

ಧರ್ಮಸ್ಥಳ ಪ್ರಕರಣ : ಕಳೇಬರಗಳ ಪತ್ತೆಗೆ ಜಿಪಿಆರ್‌ ಬಳಸಲು ಒತ್ತಾಯ Read More »

ಐದನೇ ಟೆಸ್ಟ್‌ : ಸೋಲಿನತ್ತ ಮುಖ ಮಾಡಿದ ಭಾರತ

ಗೆಲ್ಲಲು ಇಂಗ್ಲೆಂಡಿಗೆ 35 ರನ್‌, ಭಾರತಕ್ಕೆ 4 ವಿಕೆಟ್‌ ಬೇಕು ಓವಲ್: ಇಂಗ್ಲೆಂಡ್‌ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ ನಿರ್ಣಾಯಕ ದಿನವಾದ 4ನೇ ದಿನ ಭಾರತ ಸೋಲಿನತ್ತ ಮುಖ ಮಾಡಿದೆ. ಇಂಗ್ಲೆಂಡ್‌ಗೆ ಗೆಲುವು ಸಾಧಿಸಲು 35 ರನ್ ಅಗತ್ಯವಿದ್ದರೆ, ಭಾರತದ ಗೆಲುವು 4 ವಿಕೆಟ್ ದೂರದಲ್ಲಿದೆ. ಇನ್ನು ಒಂದಿಡೀ ದಿನದ ಆಟ ಉಳಿದಿದ್ದು, ಪವಾಡವೇನಾದರೂ ಸಂಭವಿಸಿದರೆ ಮಾತ್ರ ಭಾರತ ಗೆಲ್ಲಬಹುದು ಎಂಬ ಸ್ಥಿತಿಯಿದೆ. ಭಾರತದ 396 ರನ್ ಗುರಿ ಬೆನ್ನಟ್ಟಿದ

ಐದನೇ ಟೆಸ್ಟ್‌ : ಸೋಲಿನತ್ತ ಮುಖ ಮಾಡಿದ ಭಾರತ Read More »

ಪುತ್ತೂರು : ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಪುತ್ತೂರು: ಪರ್ಲಡ್ಕ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.ಪುತ್ತೂರು ನಗರಸಭಾ ವ್ಯಾಪ್ತಿಯ ಪರ್ಲಡ್ಕ ನಿವಾಸಿ ಸಯ್ಯದ್ ಆಲಂ ಎಂಬವರ ಪತ್ನಿ ಅಫ್ಸಾ (54) ಮೃತಪಟ್ಟ ಮಹಿಳೆ. ಶುಕ್ರವಾರ ರಾತ್ರಿ ಅಸ್ಲಾಂ ದಂಪತಿ ಪೇಟೆಯ ಕಡೆಗೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಅವರ ಸ್ಕೂಟರ್ ಮತ್ತು ಮುಂಭಾಗದಿಂದ ಆಗಮಿಸುತ್ತಿದ್ದ ಇನ್ನೊಂದು ಸ್ಕೂಟರ್ ಪರ್ಲಡ್ಕ ಜಂಕ್ಷನ್‌ನಲ್ಲಿ ಪರಸ್ಪರ ಢಿಕ್ಕಿಯಾಗಿತ್ತು. ಢಿಕ್ಕಿಯ

ಪುತ್ತೂರು : ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು Read More »

ಅಕ್ಷಯ ಕಾಲೇಜಿನಲ್ಲಿ 21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ “ಬೈಟ್ ಬ್ಲಿಜ್” ಐಟಿ ಕ್ಲಬ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ” ಎಂಬ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ವಾಣಿಜ್ಯ ವಿಭಾಗದ ಉಪನ್ಯಾಸಕ ಕಿಶನ್ ಎನ್ ರಾವ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. 21 ನೇ ಶತಮಾನದಲ್ಲಿ ಸ್ಪರ್ಧಾತ್ಮಕವಾಗಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಲವು ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ಉಪಯೋಗಿಸಿ ತಂತ್ರಜ್ಞಾನದಲ್ಲಿ ಕ್ರಾಂತಿ ಯನ್ನು ಸೃಷ್ಟಿಸುತ್ತಿರುವ ಮನುಷ್ಯ ನಿಗೆ ಅಷ್ಟೇ ಸವಾಲುಗಳನ್ನು

ಅಕ್ಷಯ ಕಾಲೇಜಿನಲ್ಲಿ 21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ ಕಾರ್ಯಾಗಾರ Read More »

ಅಕ್ಷಯ ಕಾಲೇಜಿನಲ್ಲಿ FROM CAMPUS TO CAREER ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಹಾಗೂ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಯೋಗದಲ್ಲಿ “FROM CAMPUS TO CAREER” ಕಾರ್ಯಗಾರ ನಡೆಯಿತು. ಕಾಲೇಜಿನ ಉಪಪ್ರಾಂಶುಪಾಲ ರಕ್ಷಣಾ ಟಿ ಆರ್ ಅವರು ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಉತ್ತೇಜನ ನೀಡಿದರು.ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಮೇಘಶ್ರೀ ಪ್ರಾಸ್ತವಿಕ ಮಾತುಗಳನ್ನಾಡಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್‌ನಲ್ಲಿ ನಡೆಯುವ ವಿವಿಧ ರೀತಿಯ ಸ್ಪರ್ಧೆಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ತನ್ನನ್ನು ತಾನು

ಅಕ್ಷಯ ಕಾಲೇಜಿನಲ್ಲಿ FROM CAMPUS TO CAREER ಕಾರ್ಯಾಗಾರ Read More »

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಈ ಬಾರಿ ಸಂಘದ ಸದಸ್ಯರಿಗೆ ಶೇ. 15 ಡಿಬಿಡೆಂಡ್ ಘೋಷಣೆ  ಪುತ್ತೂರು: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿ, ಮೊಳಹಳ್ಳಿ ಶಿವರಾಯರಂತಹ ಹಿರಿಯ ಸಹಕಾರಿ ಧುರೀಣರ ದೂರದೃಷ್ಟಿಯಿಂದ ಪುತ್ತೂರಿನಲ್ಲಿ ಇಂದು ಸಾಕಷ್ಟು ಸಹಕಾರ ಸಂಸ್ಥೆಗಳು ಬೆಳೆದು ನಿಂತಿವೆ. ಈ ಬಾರಿ ಸಂಘದ ಸದಸ್ಯರಿಗೆ ಶೇ. 15 ಡಿಬಿಡೆಂಡ್ ಘೋಷಣೆ ಮಾಡಿದರು. ಡಿ.ವಿ ಸದಾನಂದ ಗೌಡ

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ Read More »

ಆ.4: ಆಚಾರ್ಯ ಕವಿಗೋಷ್ಠಿ, ಗೀತಾ ಫಲ ಕೃತಿ ಬಿಡುಗಡೆ ಕಾರ್ಯಕ್ರಮ

ಹುಬ್ಬಳ್ಳಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಹುಬ್ಬಳ್ಳಿ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಕಥಾ ಬಿಂದು ಪ್ರಕಾಶನ ಮಂಗಳೂರು, ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಶತಮಾನೋತ್ಸವ ಸಮಿತಿ ಪುತ್ತೂರು ಸಹಯೋಗದಲ್ಲಿ ಶಿಕ್ಷಕ ಕವಿಗಳಿಗಾಗಿ ಅಂತಾರಾಜ್ಯ ‌ಮಟ್ಟದ ಆಚಾರ್ಯ ಕವಿಗೋಷ್ಠಿ ಮತ್ತು ಸಾಹಿತಿ ಜಯಾನಂದ ಪೆರಾಜೆ ‌ಸಂಪಾದಕತ್ವದ ಭಗವದ್ಗೀತೆಯ ಬಗ್ಗೆ ಕವಿಗಳಿಂದ ರಚಿತವಾದ ಗೀತಾ ಫಲ ಕೃತಿ ಬಿಡುಗಡೆ ಕಾರ್ಯಕ್ರಮ ಪುತ್ತೂರಿನ ರೋಟರಿ ಜಿ.ಎಲ್. ಸಭಾ ಭವನದಲ್ಲಿ ಆಗಸ್ಟ್ 4 ರಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ.

ಆ.4: ಆಚಾರ್ಯ ಕವಿಗೋಷ್ಠಿ, ಗೀತಾ ಫಲ ಕೃತಿ ಬಿಡುಗಡೆ ಕಾರ್ಯಕ್ರಮ Read More »

ಕಾಶ್ಮೀರದ ಕಾಡಿನಲ್ಲಿ ಉಗ್ರರ ನಾಮಾವಶೇಷಕ್ಕೆ ನಡೆಯುತ್ತಿದೆ ಅತಿ ಭೀಕರ ಆಪರೇಷನ್‌ ಅಖಾಲ್‌

ಇಷ್ಟರ ತನಕ ಆರು ಭಯೋತ್ಪಾದಕರು ಫಿನಿಷ್‌ – ಓರ್ವ ಯೋಧನಿಗೆ ತೀವ್ರ ಗಾಯ ಶ್ರೀನಗರ: ಉಗ್ರರ ವಿರುದ್ಧ ಗಡಿಯಲ್ಲಿ ನಡೆಯುತ್ತಿರುವ ಅತಿದೊಡ್ಡ ಕಾರ್ಯಾಚರಣೆ ಆಪರೇಷನ್‌ ಅಖಾಲ್‌ ಮೂರನೇ ದಿನಕ್ಕೆ ಪ್ರವೇಶಿಸಿದ್ದು, ಮೂವರು ಉಗ್ರರನ್ನು ಭದ್ರತಾ ಪಡೆ ಸದೆ ಬಡಿದಿದೆ. ಕಾರ್ಯಾಚರಣೆಯಲ್ಲಿ ಓರ್ವ ಯೋಧ ತೀವ್ರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಮೂವರು ಉಗ್ರರನ್ನು ಸೇನೆ ಸಾಯಿಸಿತ್ತು. ಇದರೊಂದಿಗೆ ಆಪರೇಷನ್‌ ಅಖಾಲ್‌ನಲ್ಲಿ ಆರು ಉಗ್ರರನ್ನು ಮುಗಿಸಿದಂತಾಗಿದೆ. ಕಾಶ್ಮೀರದ ದಕ್ಷಿಣಕ್ಕಿರುವ ಕುಲ್‌ಗಾಂವ್‌ ಜಿಲ್ಲೆಯ ಅಖಾಲ್‌ ಕಾಡಿನಲ್ಲಿ ಕಳೆದ ಮೂರು ದಿನಗಳಿಂದ ಉಗ್ರರನ್ನು ಮುಗಿಸುವ

ಕಾಶ್ಮೀರದ ಕಾಡಿನಲ್ಲಿ ಉಗ್ರರ ನಾಮಾವಶೇಷಕ್ಕೆ ನಡೆಯುತ್ತಿದೆ ಅತಿ ಭೀಕರ ಆಪರೇಷನ್‌ ಅಖಾಲ್‌ Read More »

error: Content is protected !!
Scroll to Top