ಗ್ಯಾಸ್‌ ಸಿಲಿಂಡರ್‌ ಬೆಲೆ 34 ರೂ. ಇಳಿಕೆ

ನಾಲ್ಕು ತಿಂಗಳಲ್ಲಿ ಸತತ ಕಡಿತ ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 33.50ರೂ.ನಷ್ಟು ಕಡಿತ ಮಾಡಿವೆ. ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಅತಿ ಹೆಚ್ಚು ಕಡಿತ ಮಾಡಲಾಗಿದೆ. ಆದರೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮಹಾನಗರಗಳಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 33.5 ರೂ.ಗಳಿಂದ 34.5 ರೂ.ಗಳಿಗೆ ಇಳಿಸಲಾಗಿದೆ. ಚೆನ್ನೈಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ ಪ್ರತಿ ಸಿಲಿಂಡರ್‌ಗೆ 1,800 ರೂ.ಗಳಿಗಿಂತ […]

ಗ್ಯಾಸ್‌ ಸಿಲಿಂಡರ್‌ ಬೆಲೆ 34 ರೂ. ಇಳಿಕೆ Read More »

ಬಂಟ್ವಾಳ : ಅಡಿಕೆ ಕಳ್ಳನ ಬಂಧನ

2,20,00 ರೂ. ಮೌಲ್ಯದ ಒಣ ಅಡಿಕೆ ಕಳ್ಳತನ ಮಾಡಿದ್ದ ಆರೋಪಿ ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2,20,00 ರೂ. ಮೌಲ್ಯದ ಒಣ ಅಡಿಕೆ ಕಳ್ಳತನ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಜುಲೈ 28ರಂದು ಆರೋಪಿಗಳಲ್ಲಿ ಓರ್ವನಾದ ಸುಳ್ಯ ಪೈಚಾರು ಗ್ರಾಮ ನಿವಾಸಿ ಸತೀಶ್ (29 ವರ್ಷ) ಎಂಬಾತನನ್ನು ಬಂಧಿಸಿ ಕಳವುಗೈದ 74,000

ಬಂಟ್ವಾಳ : ಅಡಿಕೆ ಕಳ್ಳನ ಬಂಧನ Read More »

ತುಳುವಿಗೆ ಅಧಿಕೃತ ಭಾಷೆ ಸ್ಥಾನ ಅಧ್ಯಯನ ನಡೆಸಲು ಸಮಿತಿ ರಚಿಸಿದ ಸರ್ಕಾರ

ಆಂಧ್ರ ಪ್ರದೇಶಕ್ಕೆ ತೆರಳಿ ಮಾನದಂಡಗಳ ಕುರಿತು ಅಧ್ಯಯನ ನಡೆಸಲಿರುವ ಸಮಿತಿ ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ಆಂಧ್ರ ಪ್ರದೇಶಕ್ಕೆ ತೆರಳಿ ಅಧ್ಯಯನ ನಡೆಸಲು ರಾಜ್ಯ ಸರಕಾರ ಸಮಿತಿ ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರ ಸಹಿತ 5 ಮಂದಿಯ ತಂಡವನ್ನು ಎರಡನೇ ಭಾಷೆಯನ್ನು ಅಧಿಕೃತ ಭಾಷೆ ಎಂದು ಘೋಷಿಸಲು ಅನುಸರಿಸಿರುವ ಮಾನದಂಡಗಳ ಅಧ್ಯಯನ ಮಾಡುವ ಸಲುವಾಗಿ ರಚನೆ ಮಾಡಲಾಗಿದೆ.

ತುಳುವಿಗೆ ಅಧಿಕೃತ ಭಾಷೆ ಸ್ಥಾನ ಅಧ್ಯಯನ ನಡೆಸಲು ಸಮಿತಿ ರಚಿಸಿದ ಸರ್ಕಾರ Read More »

ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪನೆ : ಅಮಿತ್‌ ಶಾಗೆ ಕ್ಯಾ.ಬ್ರಿಜೇಶ್‌ ಚೌಟ ಮನವಿ

ಕರಾವಳಿಯಲ್ಲಿ ಉಗ್ರರ ಸ್ಲೀಪರ್‌ ಸೆಲ್‌ಗಳ ಆತಂಕ ಇರುವ ಹಿನ್ನೆಲೆಯಲ್ಲಿ ಅಗತ್ಯ ಎಂದು ಮನವರಿಕೆ ಮಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಮಂಗಳೂರು ಭಟ್ಕಳ, ಕಾಸರಗೋಡಿನಂತಹ ಉಗ್ರ ಚಟುವಟಿಕೆಗಳ ಕೇಂದ್ರಗಳಿಗೆ

ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪನೆ : ಅಮಿತ್‌ ಶಾಗೆ ಕ್ಯಾ.ಬ್ರಿಜೇಶ್‌ ಚೌಟ ಮನವಿ Read More »

ಟ್ರಂಪ್ ಸತ್ತ ಆರ್ಥಿಕತೆ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಭಾರತ

ನವದೆಹಲಿ: ಯಾವುದೇ ವ್ಯಾಪಾರ ಒಪ್ಪಂದದ ಸಂದರ್ಭದಲ್ಲಿ ದೇಶದ ಹಿತಾಸಕ್ತಿಗೆ ಆದ್ಯತೆ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪೀಯುಷ್ ಗೋಯಲ್ ಹೇಳಿದ್ದಾರೆ. ಭಾರತದ ಸತ್ತ ಆರ್ಥಿಕತೆ ಎಂದ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕಳೆದ ದಶಕದಲ್ಲಿ ಭಾರತ ದುರ್ಬಲ ಆರ್ಥಿಕತೆಯಿಂದ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯಾಗಿ ಬೆಳೆಯುತ್ತಿದೆ ಎಂದಿದ್ದಾರೆ. ವಿಶ್ವದ ಆರ್ಥಿಕತೆಗಳಲ್ಲಿ ಭಾರತ ಬೆಳಗುತ್ತಿದೆ ಎಂದು ಜಾಗತಿಕ ಸಂಸ್ಥೆಗಳು, ಆರ್ಥಿಕ ತಜ್ಞರು ಹೇಳುತ್ತಿದ್ದಾರೆ ಎಂದು ಗೋಯಲ್ ನುಡಿದಿದ್ದಾರೆ.

ಟ್ರಂಪ್ ಸತ್ತ ಆರ್ಥಿಕತೆ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಭಾರತ Read More »

ಪಿಎಂ ಕಿಸಾನ್ ‌ಸಂಪದ ಯೋಜನೆಗೆ 6520 ಕೋ. ರೂ.: ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆಗಾಗಿ ಹೆಚ್ಚುವರಿ 1920 ಕೋಟಿ ರೂ. ಗಳ ಜೊತೆಗೆ ಒಟ್ಟು 6520 ಕೋಟಿ ರೂ. ವೆಚ್ಚಕ್ಕೆ ಪ್ರಧಾನ ಮಂತ್ರಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂಟಿಗ್ರೇಟೆಡ್ ಕೋಲ್ಡ್ ಚೈನ್ ಮತ್ತು ಮೌಲ್ಯವರ್ಧನ ಮೂಲಸೌಕರ್ಯ (ICCVAI) ಅಡಿಯಲ್ಲಿ 50 ಬಹು ಉತ್ಪನ್ನ ಆಹಾರ ವಿಕಿರಣ ಘಟಕಗಳ ಸ್ಥಾಪನೆಗೆ ಬೆಂಬಲ ನೀಡಲು 1000 ಕೋಟಿ ರೂ. ಗಳು ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆಯ (PMKSY) ಆಹಾರ

ಪಿಎಂ ಕಿಸಾನ್ ‌ಸಂಪದ ಯೋಜನೆಗೆ 6520 ಕೋ. ರೂ.: ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಪತಿ, ಅತ್ತೆಯಿಂದ ಕಿರುಕುಳ: ಗರ್ಭಿಣಿ ಆತ್ಮಹತ್ಯೆ

ತ್ರಿಶೂರ್: ಪತಿಯ ಮನೆಯವರ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ವೆಲ್ಲಂಗುಲರ್‌ನಲ್ಲಿ ‌ನಡೆದಿದೆ. ಫಸೀಲಾ(23) ಮೃತ ದುರ್ದೈವಿ. ಕಳೆದ ಜುಲೈ 29 ರಂದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಫಸೀಲಾ ಮೃತದೇಹ ‌ಪತ್ತೆಯಾಗಿತ್ತು.‌ ಈ ಬಗ್ಗೆ ಫಸೀಲಾ ಕುಟುಂಬದವರು ಆಕೆಯ ಪತಿ‌ ನೌಫಲ್ ಮತ್ತು ಅತ್ತೆ ರಮ್ಲಾ ‌ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಫಸೀಲಾ ತನ್ನ ತವರು ಮನೆಯವರಿಗೆ ಸಂದೇಶ ಕಳುಹಿಸಿದ್ದು, ನಾನು ಎರಡನೇ ಬಾರಿ ಗರ್ಭಿಣಿಯಾಗಿದ್ದೇನೆ. ನನ್ನ ಪತಿ

ಪತಿ, ಅತ್ತೆಯಿಂದ ಕಿರುಕುಳ: ಗರ್ಭಿಣಿ ಆತ್ಮಹತ್ಯೆ Read More »

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸದ್ಯ SIT ತಂಡದ ಮುಖ್ಯಸ್ಥರಾಗಿರುವ ಡಾ. ಪ್ರಣವ್ ಮೊಹಂತಿ ಅವರನ್ನು ಕೇಂದ್ರ ಸೇವೆಗೆ ಕರೆಸಿಕೊಳ್ಳುವುದು ಮತ್ತು ಧರ್ಮಸ್ಥಳ ಪ್ರಕರಣ ಇವೆರಡರ ನಡುವೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಸತ್ಯ ಏನಿದೆಯೋ‌ ಅದು ಹೊರಕ್ಕೆ ಬರಬೇಕು. ಹಾಗೆಯೇ ಇದರಲ್ಲಿ ಯಾರೇ ತಪ್ಪು ಮಾಡಿರಲಿ, ಅವರನ್ನು

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಡಾ. ಜಿ. ಪರಮೇಶ್ವರ್ Read More »

ಹೆತ್ತಮ್ಮನನ್ನೇ ಅಮಾನವೀಯವಾಗಿ ಕೊಂದು ಸುಟ್ಟು ಹಾಕಿದ ಪಾಪಿ ಕುಡುಕ ಪುತ್ರ

ಚಿಕ್ಕಮಗಳೂರು: ಹಕ್ಕಿಮಕ್ಕಿ ಗ್ರಾಮದಲ್ಲಿ ಹೆತ್ತ ತಾಯಿಯನ್ನೇ ಕುಡುಕ ಪುತ್ರನೊಬ್ಬ ಕೊಂದು ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಆರೋಪಿಯನ್ನು ಪವನ್ ಎಂದು ಗುರುತಿಸಲಾಗಿದೆ. ಮೃತರನ್ನು ಭವಾನಿ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿ ತಾಯಿಯ ಜೊತೆಗೆ ವಾಸಿಸುತ್ತಿದ್ದ ಈತ ಕಳೆದ ರಾತ್ರಿ ಹೆತ್ತಮ್ಮ ನನ್ನು ಕೊಂದು ಬೆಂಕಿ ಹಾಕಿದ್ದಾನೆ. ಬಳಿಕ ಅಲ್ಲೇ ಪ್ರಜ್ಞೆ ಇಲ್ಲದವನಂತೆ ಮಲಗಿ ನಿದ್ರಿಸಿದ್ದಾನೆ. ಮೃತ ಭವಾನಿ ಅವರ ದೇಹ ಸಂಪೂರ್ಣ ಸುಟ್ಟು ಹೋಗಿದ್ದು ಕೇವಲ ಕೈ ಮತ್ತು ಕಾಲುಗಳಷ್ಟೇ ಉಳಿದಿವೆ. ಸ್ಥಳೀಯರ ಮಾಹಿತಿಯ

ಹೆತ್ತಮ್ಮನನ್ನೇ ಅಮಾನವೀಯವಾಗಿ ಕೊಂದು ಸುಟ್ಟು ಹಾಕಿದ ಪಾಪಿ ಕುಡುಕ ಪುತ್ರ Read More »

ಧರ್ಮಸ್ಥಳ ಪ್ರಕರಣ: 6 ನೇ ಪಾಯಿಂಟ್‌ನಲ್ಲಿ ಕಳೇಬರದ ಕುರುಹು ಪತ್ತೆ

ಧರ್ಮಸ್ಥಳ: ದೇಶವನ್ನೇ ‌ತನ್ನೆಡೆ ಸೆಳೆದಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ಗುರುತಿಸಲಾದ 6 ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದು, ಇಲ್ಲಿ ಕಳೇಬರದ ಕುರುಹು ಸಿಕ್ಕಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ನಿನ್ನೆಯ ಕಾರ್ಯಾಚರಣೆಯಲ್ಲಿ ಪಾನ್ ಕಾರ್ಡ್, ಎಟಿಎಮ್ ಕಾರ್ಡ್, ರವಿಕೆ ‌ಸಿಕ್ಕಿರುವುದಾಗಿ ಅನಾಮಿಕ ದೂರುದಾರನ ಪರ ವಕೀಲ ಮಂಜುನಾಥ ಎನ್. ಪತ್ರ ಹಂಚಿಕೊಂಡಿದ್ದರು. ಆದರೆ ಈ ಬಗ್ಗೆ SIT ಅಧಿಕಾರಿಗಳು ಮಾತ್ರ ಖಚಿತ ಮಾಹಿತಿ ನೀಡಿರಲಿಲ್ಲ. ಆದರೆ ಇಂದು ದೂರುದಾರನ ಪರ

ಧರ್ಮಸ್ಥಳ ಪ್ರಕರಣ: 6 ನೇ ಪಾಯಿಂಟ್‌ನಲ್ಲಿ ಕಳೇಬರದ ಕುರುಹು ಪತ್ತೆ Read More »

error: Content is protected !!
Scroll to Top