ಧರ್ಮಸ್ಥಳ ಪ್ರಕರಣ: ಅಗೆದ ಗುಂಡಿಯಲ್ಲಿ ‌ನೀರು ತುಂಬಿ ಕಳೇಬರ ಪತ್ತೆ ಕಾರ್ಯಕ್ಕೆ ಹಿನ್ನಡೆ

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ‌ಸಂಬಂಧಿಸಿದಂತೆ SIT ಅಧಿಕಾರಿಗಳ ತಂಡ ಈಗಾಗಲೇ ಗುರುತು ಮಾಡಿದ ಸ್ಥಳಗಳನ್ನು ಅಗೆದು ಕಳೇಬರಗಳನ್ನು ಹೊರತೆಗೆಯುವ ಕೆಲಸಕ್ಕೆ ಇಳಿದಿದೆ. ಶವಗಳನ್ನು ಹೂತಿಟ್ಟದ್ದಾಗಿ ಹೇಳಿರುವ ದೂರದಾರನ‌ ಸಮ್ಮುಖದಲ್ಲೇ ಈ ಕೆಲಸ ನಡೆಯುತ್ತಿದ್ದು, ಕಾರ್ಮಿಕರ ಸಹಾಯದೊಂದಿಗೆ ಇಂದು ಮುಂಜಾನೆಯಿಂದಲೇ ಕೆಲಸ ಆರಂಭ ಮಾಡಲಾಗಿದೆ. ಗುರುತು ಮಾಡಲಾದ ಒಂದನೇ ಸ್ಥಳದಲ್ಲಿ ಈಗಾಗಲೇ ನಾಲ್ಕು ಅಡಿಗಳಷ್ಟು ಅಗೆಯಲಾಗಿದ್ದರೂ ಯಾವುದೇ ರೀತಿಯ ಶವಗಳ ಗುರುತು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ. ಸತತ ಮೂರು ತಾಸುಗಳ ಕಾಲ ಅಗೆಯಲಾಗಿದ್ದರೂ ಇಲ್ಲಿ […]

ಧರ್ಮಸ್ಥಳ ಪ್ರಕರಣ: ಅಗೆದ ಗುಂಡಿಯಲ್ಲಿ ‌ನೀರು ತುಂಬಿ ಕಳೇಬರ ಪತ್ತೆ ಕಾರ್ಯಕ್ಕೆ ಹಿನ್ನಡೆ Read More »

ಧರ್ಮಸ್ಥಳ ಪ್ರಕರಣ: ಶವಗಳ ಅವಶೇಷ ಹೊರತೆಗೆಯುವ ಕಾರ್ಯಾಚರಣೆಯಲ್ಲಿ SIT ತಂಡ

ಧರ್ಮಸ್ಥಳ: ಹಲವಾರು ಹೆಣಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ SIT ತಂಡ ದೂರುದಾರನ ಜೊತೆಗೆ ಧರ್ಮಸ್ಥಳ ಕಾಡಿನಲ್ಲಿ ಹೆಣಗಳ ಕಳೇಬರ ಹೊರತೆಗೆಯುವ ಪ್ರಕ್ರಿಯೆ ಆರಂಭ ಮಾಡಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಎಸ್‌ಐಟಿ ಅಧಿಕಾರಿಗಳು ಇಂದು ಮುಂಜಾನೆಯೇ ಕಚೇರಿಗೆ ಆಗಮಿಸಿದ್ದು, ಈ ಕಾರ್ಯದಲ್ಲಿ ವೈದ್ಯರ ತಂಡ ಸಹ ಜೊತೆಯಾಗಿದೆ. ಈಗಾಗಲೇ‌‌ ದೂರುದಾರ ‌ವ್ಯಕ್ತಿ ಗುರುತಿಸಿರುವ ‌ಸ್ಥಳಗಳಲ್ಲಿ ಮೃತದೇಹದ ಅವಶೇಷಗಳನ್ನು ಹೊರತೆಗೆವ ಕೆಲಸಕ್ಕೆ ತಯಾರಿ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಸಹಾಯಕ ಆಯುಕ್ತರ ಸಮ್ಮುಖದಲ್ಲೇ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ

ಧರ್ಮಸ್ಥಳ ಪ್ರಕರಣ: ಶವಗಳ ಅವಶೇಷ ಹೊರತೆಗೆಯುವ ಕಾರ್ಯಾಚರಣೆಯಲ್ಲಿ SIT ತಂಡ Read More »

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ

ಉಡುಪಿ: 2024-25 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ‘ಉತ್ತೇಜನ ‘ ಜ್ಞಾನದ ಸಿರಿಗೆ ಸನ್ಮಾನ ಘೋಷ ವಾಕ್ಯದೊಂದಿಗೆ ಆಯೋಜನೆ ಮಾಡಲಾಗಿದೆ. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆ ಹೈಸ್ಕೂಲ್ ವಿಭಾಗದ 2024 – 25ನೇ ಸಾಲಿನ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಸಂಸ್ಥೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ‘ಉತ್ತೇಜನ’ ಜ್ಞಾನದ ಸಿರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವುದಾಗಿದೆ. ಇದೇ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಸಿದ್ದಾಪುರ ಸಂಸ್ಥೆಯ

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ Read More »

ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿ

ಕುದ್ಮಾರು: ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಮಂಗಳವಾರ ಆಚರಿಸಲಾಯಿತು.  ಬೆಳಗ್ಗಿನಿಂದಲೇ ಭಕ್ತದಿಗಳು ಸರತಿಸಾಲಿನಲ್ಲಿ ನಿಂತು ಶ್ರೀ ದೇವರಿಗೆ ಹಾಲು, ಸೀಯಾಳ ,ಹಣ್ಣುಕಾಯಿಯನ್ನು ಅರ್ಪಿಸಿದರು. ಬಳಿಕ ಶ್ರೀ ನಾಗದೇವರಿಗೆ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಊರ ಭಕ್ತದಿಗಳು ಭಾಗವಹಿಸಿದರು.

ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿ Read More »

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರಿನಲ್ಲಿ ನಾಗರ ಪಂಚಮಿ ಆಚರಣೆ

ಕಡಬ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರಿನಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು. ದೇವಾಲಯದ ಭಕ್ತರು ನಾಗರ ಪಂಚಮಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರಿನಲ್ಲಿ ನಾಗರ ಪಂಚಮಿ ಆಚರಣೆ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ

ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಮಂಗಳವಾರ ಆಚರಿಸಲಾಯಿತು.  ಬೆಳಗ್ಗಿನಿಂದಲೇ ಭಕ್ತದಿಗಳು ಸರತಿಸಾಲಿನಲ್ಲಿ ನಿಂತು ಶ್ರೀ ದೇವರಿಗೆ ಹಾಲು, ಸೀಯಾಳ ,ಹಣ್ಣುಕಾಯಿಯನ್ನು ಅರ್ಪಿಸಿದರು. ಬಳಿಕ ಶ್ರೀ ನಾಗದೇವರಿಗೆ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಊರ ಭಕ್ತದಿಗಳು ಭಾಗವಹಿಸಿದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ Read More »

ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ: ಯಾಕೆ ಗೊತ್ತಾ?

ನವದೆಹಲಿ: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಚರ್ಚೆಯ ವೇಳೆ ವಿರೋಧ ಪಕ್ಷಗಳ ಮೇಲೆ ಹರಿಹಾಯ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನೀವಿನ್ನೂ 20 ವರ್ಷಗಳ ಕಾಲ ವಿಪಕ್ಷದಲ್ಲೇ ಇರುತ್ತೀರಿ ಎಂದು ಹೇಳಿದ್ದಾರೆ. ವಿಪಕ್ಷಗಳು ಭಾರತದ ವಿದೇಶಾಂಗ ವ್ಯವಸ್ಥೆಗಳ ಮೇಲೆ ನಂಬಿಕೆ ಇರಿಸಿಲ್ಲ. ಆದರೆ ಇನ್ಯಾವುದೋ ರಾಷ್ಟ್ರದ ಮೇಲೆ ನಂಬಿಕೆ ಹೊಂದಿರುವುದಕ್ಕೆ ನಮ್ಮ ಆಕ್ಷೇಪ ಇದೆ. ಅವರ ಪಕ್ಷದಲ್ಲಿ ವಿದೇಶೀಯರ ಪ್ರಾಮುಖ್ಯತೆಯ ಬಗ್ಗೆ ನಮಗೆ ಆಕ್ಷೇಪ ಇದೆ ಎಂದು ಅವರು ತಿಳಿಸಿದ್ದಾರೆ. ಆಪರೇಷನ್ ಸಿಂಧೂರ್‌ಗೆ ಸಂಬಂಧಿಸಿದ ಹಾಗೆ ವಿದೇಶಾಂಗ

ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ: ಯಾಕೆ ಗೊತ್ತಾ? Read More »

170 ಗಂಟೆಗಳ ಕಾಲ ಭರತನಾಟ್ಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಬರೆದ ಮಂಗಳೂರಿನ ರೆಮೋನಾ

ಮಂಗಳೂರು: ಸತತ ಏಳು ದಿನಗಳ ಕಾಲ ಭರತನಾಟ್ಯ ಮಾಡಿ ಮಂಗಳೂರಿನ ರೆಮೋನಾ ಪಿರೇರಾ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ದಾಖಲೆ ನಿರ್ಮಿಸಿದ್ದಾರೆ. ಜುಲೈ 28 ರಂದು ಸಂತ ಅಲೋಶಿಯಸ್ ವಿ.ವಿ.ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ತಂಡ ರೆಮೋನಾ ಅವರ ದಾಖಲೆಯನ್ನು ಅಧಿಕೃತವಾಗಿ ಘೋಷಿಸಿ, ಪ್ರಶಸ್ತಿ ಪ್ರಧಾನಿಸಿದೆ. ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್‌ನಲ್ಲಿ ಜುಲೈ 21 ರಂದು ರೆಮೋನಾ ಭರತನಾಟ್ಯ ಆರಂಭಿಸಿದ್ದು ರಾತ್ರಿ ಹಗಲೆನ್ನದೆ ನಿರಂತರವಾಗಿ ಜುಲೈ 28

170 ಗಂಟೆಗಳ ಕಾಲ ಭರತನಾಟ್ಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಬರೆದ ಮಂಗಳೂರಿನ ರೆಮೋನಾ Read More »

ಧಾರ್ಮಿಕ ಮತಾಂಧತೆ, ದ್ವೇಷ ತುಂಬಿದ ರಾಷ್ಟ್ರದ ಜೊತೆ ಮಾತುಕತೆ ಅಸಾಧ್ಯ: ಪಾಕ್ ವಿರುದ್ಧ ಗುಡುಗಿದ ರಾಜನಾಥ್ ‌ಸಿಂಗ್

ನವದೆಹಲಿ: ಪ್ರಜಾಪ್ರಭುತ್ವದ ಗಂಧಗಾಳಿ ಇಲ್ಲದ, ಭಾರತದ ವಿರುದ್ಧ ಸದಾ ಧಾರ್ಮಿಕ ಮತಾಂಧತೆ ಮತ್ತು ದ್ವೇಷವನ್ನೇ ಉಸಿರಾಡುವ ದೇಶದ ಜೊತೆಗೆ ಮಾತುಕತೆ ಅಸಾಧ್ಯ ಎಂದು ಪಾಕ್ ವಿರುದ್ಧ ರಕ್ಷಣಾ ಸಚಿವ ರಾಜನಾಥ ಸಿಂಗ್ ಗುಡುಗಿದ್ದಾರೆ. ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಬಗೆಗಿನ ವಿಪಕ್ಷಗಳ ಗೊಂದಲಗಳಿಗೆ ಉತ್ತರಿಸಿದ ಅವರು, ಯಾವುದೇ ರಾಷ್ಟ್ರ ಪ್ರಜಾಪ್ರಭುತ್ವ ಲಕ್ಷಣಗಳನ್ನು ಹೊಂದಿದ್ದರೆ, ನಾಗರಿಕವಾಗಿದ್ದರೆ ಅಂತಹ ರಾಷ್ಟ್ರಗಳ ಜೊತೆಗೆ ಮಾತುಕತೆ ನಡೆಸಬಹುದು. ಪ್ರಜಾಪ್ರಭುತ್ವದ ಅಂಶವೇ ಗೊತ್ತಿಲ್ಲದ ದೇಶದ ಜೊತೆ ಮಾತುಕತೆ ಅಸಾಧ್ಯ ಎಂದಿದ್ದಾರೆ. ಹಾಗೆಯೇ ಉಗ್ರವಾದದ ಭಾಷೆ ಭಯ,

ಧಾರ್ಮಿಕ ಮತಾಂಧತೆ, ದ್ವೇಷ ತುಂಬಿದ ರಾಷ್ಟ್ರದ ಜೊತೆ ಮಾತುಕತೆ ಅಸಾಧ್ಯ: ಪಾಕ್ ವಿರುದ್ಧ ಗುಡುಗಿದ ರಾಜನಾಥ್ ‌ಸಿಂಗ್ Read More »

ಮಂಗಳೂರು : ಕೋಳಿ ಆಹಾರ ಮಳಿಗೆಯಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಪಂಪ್‌ವೆಲ್‌ನಲ್ಲಿರುವ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಪಂಪ್‌ವೆಲ್‌ನಲ್ಲಿರುವ ಭಾರತ್ ಆಗ್ರೋ ಎಂಬ ಮಳಿಗೆಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಕೋಳಿ ಆಹಾರ ಮತ್ತು ಪೀಠೋಪಕರಣ ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

ಮಂಗಳೂರು : ಕೋಳಿ ಆಹಾರ ಮಳಿಗೆಯಲ್ಲಿ ಬೆಂಕಿ ಅವಘಡ Read More »

error: Content is protected !!
Scroll to Top