ಬಿಲ್ಲವ ಸಂಘಟನೆಯ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ: ಸತೀಶ್ ಕುಮಾರ್ ಕೆಡೆಂಜಿ

ಪುತ್ತೂರು ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ ಪುತ್ತೂರು: ಬಿಲ್ಲವರು ಒಗ್ಗಟ್ಟಾಗಿ ಪ್ರದರ್ಶಿಸಬೇಕು. ನಮ್ಮಲ್ಲಿ ಸಂಘಟನೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲ. ಬಿಲ್ಲವ ಸಂಘ ಬಲವರ್ಧನೆಯಾಗಿ ರಾಜ್ಯ ಮಟ್ಟದಲ್ಲಿ ಹೆಸರು ಮಾಡಲು 55 ಗ್ರಾಮ ಸಮಿತಿಗಳೇ ಕಾರಣ ಎಂದು ಬಿಲ್ಲವ ‌ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬಪ್ಪಳಿಗೆಯ ಬ್ರಹ್ಮಶ್ರೀ ‌ನಾರಾಯಣಗುರುಸ್ವಾಮಿ ಬಿಲ್ಲವ ಸಂಘದ 49 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿ, ಬಿಲ್ಲವ ಸಂಘದ ಹಿರಿಯರ ತ್ಯಾಗ, ಸೇವೆಯ ಫಲ ಎಂಬಂತೆ […]

ಬಿಲ್ಲವ ಸಂಘಟನೆಯ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ: ಸತೀಶ್ ಕುಮಾರ್ ಕೆಡೆಂಜಿ Read More »

ಪುಂಜಾಲಕಟ್ಟೆಯಲ್ಲಿ ದಿಶಾ ತರಬೇತಿ ಸಂಪನ್ನ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಥಮ ವರ್ಷದ ಪದವಿ ತರಗತಿಯ ವಿದ್ಯಾರ್ಥಿಗಳಿಗಾಗಿ ‘ದಿಶಾ’ ತರಬೇತಿ ಕಾರ್ಯಕ್ರಮ ಜುಲೈ 28ರಂದು ನಡೆಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಖಾತ್ರಿ ಘಟಕ (Internal Quality Assurance Cell) ಮತ್ತು ವಿದ್ಯಾರ್ಥಿ ಕ್ಷೇಮಪಾಲನ ಕಚೇರಿ (Students’ Welfare Office) ಇವುಗಳ ಜಂಟಿ ಆಶ್ರಯದಲ್ಲಿ ‘ Small steps towards big dreams start today’ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ಏರ್ಪಾಡಾಗಿತ್ತು. ರಾಷ್ಟ್ರೀಯ ತರಬೇತುದಾರ ಮತ್ತು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್

ಪುಂಜಾಲಕಟ್ಟೆಯಲ್ಲಿ ದಿಶಾ ತರಬೇತಿ ಸಂಪನ್ನ Read More »

ಆಪರೇಷನ್ ಸಿಂಧೂರ್ ಐತಿಹಾಸಿಕ ಮಿಲಿಟರಿ ಕ್ರಮ: ರಾಜನಾಥ್ ಸಿಂಗ್

ನವದೆಹಲಿ: ಲೋಕಸಭೆಯಲ್ಲಿ ಇಂದು ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್‌ಗೆ ಸಂಬಂಧಿಸಿದ ಹಾಗೆ ಚರ್ಚೆ ನಡೆದಿದೆ. ಈ ಸಂಬಂಧ ಮಾಹಿತಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆಪರೇಷನ್ ಸಿಂಧೂರ್ ಅನ್ನು ಭಾರತ ಮೇ ತಿಂಗಳಲ್ಲಿ ನಡೆಸಿದ್ದು, ನೂರಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಲಾಗಿದೆ. ಸುಮಾರು ಒಂಬತ್ತು ಭಯೋತ್ಪಾದಕ ಮೂಲಸೌಕರ್ಯ ಗುರಿಗಳನ್ನು ಹೊಡೆದುರುಳಿಸಲಾಗಿದೆ. ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರಗಳಲ್ಲಿ ಈ ಆಪರೇಷನ್ ನಡೆಸಲಾಗಿದೆ ಎಂದರು. ಹೊಡೆದುರುಳಿಸಲಾದ ಉಗ್ರರು ಮುಜಾಹಿದ್ದೀನ್, ಲಷ್ಕರ್ ಮತ್ತು ಹಿಜ್ಬುಲ್ ಸಂಘಟನೆಗಳ

ಆಪರೇಷನ್ ಸಿಂಧೂರ್ ಐತಿಹಾಸಿಕ ಮಿಲಿಟರಿ ಕ್ರಮ: ರಾಜನಾಥ್ ಸಿಂಗ್ Read More »

ಧರ್ಮಸ್ಥಳ ಪ್ರಕರಣ: ದೂರುದಾರನ ಜೊತೆ ಸ್ಥಳ ಮಹಜರು ಮಾಡಿದ SIT ಅಧಿಕಾರಿಗಳು

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ತನಿಖೆಯನ್ನು ತೀವ್ರಗೊಳಿಸಿರುವ SIT ತಂಡ, ದೂರುದಾರ ವ್ಯಕ್ತಿಯ ಜೊತೆಗೆ ನೇತ್ರಾವತಿ ಸ್ನಾನಘಟ್ಟದ ಪ್ರದೇಶದಲ್ಲಿ ಮಹಜರು ಪ್ರಕ್ರಿಯೆ ಆರಂಭ ಮಾಡಿದೆ. ಈ ಪ್ರಕ್ರಿಯೆ ನಡೆಸುವುದಕ್ಕೂ ಮೊದಲು ತನಿಖಾಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್, ಸಿ.ಎ. ಸೈಮನ್ ಅವರು ಬೆಳ್ತಂಗಡಿ ಠಾಣೆಗೂ ಭೇಟಿ ನೀಡಿದ್ದು ದೂರುದಾರನ ಜೊತೆಗೆ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಆ‌ ಬಳಿಕ ಇಂದು ಮದ್ಯಾಹ್ನ ಆತನನ್ನು ಭಾರೀ ಭದ್ರತೆಯಲ್ಲಿ ಸ್ಥಳಕ್ಕೆ ಕರೆತಂದು ಮಹಜರು ಪ್ರಕ್ರಿಯೆ ಆರಂಭಿಸಲಾಗಿದೆ.

ಧರ್ಮಸ್ಥಳ ಪ್ರಕರಣ: ದೂರುದಾರನ ಜೊತೆ ಸ್ಥಳ ಮಹಜರು ಮಾಡಿದ SIT ಅಧಿಕಾರಿಗಳು Read More »

ಬಿಜೆಪಿ ಏನೇ ಮಾಡಿದರೂ 2028 ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ: ಸಿಎಂ ‌ಸಿದ್ದರಾಮಯ್ಯ

ಮಂಡ್ಯ: ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ಸುಳ್ಳು ಹೇಳುತ್ತಿದ್ದು, ಆ‌ ಸುಳ್ಳುಗಳನ್ನು ಯಾರೂ ನಂಬದಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಪೂರೈಸಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತಿದೆ. ಬಿಜೆಪಿಯವರ ಮತ್ತೊಂದು ಹೆಸರೇ ಸುಳ್ಳು. ಅವರ ಸುಳ್ಳು ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ. ನಾನು ಗೊಬ್ಬರ ಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಅದನ್ನು ರಾಜಕೀಯ ಮಾಡುವ ಕೆಲಸ ಬಿಜೆಪಿ ಮಾಡಿದೆ. ರಾಜ್ಯ ಸರ್ಕಾರ ಗೊಬ್ಬರ ತಯಾರಿಸುವುದಿಲ್ಲ. ಕೇಂದ್ರ ಸರ್ಕಾರ

ಬಿಜೆಪಿ ಏನೇ ಮಾಡಿದರೂ 2028 ಕ್ಕೆ ನಾವೇ ಅಧಿಕಾರಕ್ಕೆ ಬರುತ್ತೇವೆ: ಸಿಎಂ ‌ಸಿದ್ದರಾಮಯ್ಯ Read More »

ನಾಯಿ ಕಡಿತ, ರೇಬಿಸ್ ಕುರಿತು ಆತಂಕ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚಿ ರೇಬಿಸ್‌ಗೆ ತುತ್ತಾಗಿರುವ ‌ವಿಷಯಕ್ಕೆ ಸಂಬಂಧಿಸಿದ ಹಾಗೆ ಮಾಧ್ಯಮಗಳ ವರದಿಗಳಿಂದ ತಿಳಿದು ಬಂದಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿರುವ ನ್ಯಾಯಾಲಯ ‘ಆತಂಕಕಾರಿ ‌ಮತ್ತು ಗಾಬರಿಗೊಳಿಸುವಂತಹ ವಿಷಯ’ ಎಂದು ಹೇಳಿದೆ. ನವದೆಹಲಿ ಮತ್ತು ಹೊರ ವಲಯದಲ್ಲಿ ನಾಯಿ ಕಡಿತಕ್ಕೆ ಸಂಬಂಧಿಸಿದ ಹಾಗೆ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಇದು ಅಂತಿಮವಾಗಿ ರೇಬಿಸ್‌ಗೆ ಕಾರಣವಾಗುತ್ತಿದೆ. ಮಕ್ಕಳು, ವೃದ್ಧರು ಸಹ ಈ ಭಯಾನಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ. ಈ‌

ನಾಯಿ ಕಡಿತ, ರೇಬಿಸ್ ಕುರಿತು ಆತಂಕ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ Read More »

ಆಪರೇಷನ್ ಮಹಾದೇವ್ ನಡೆಸಿ‌ ಪಹಲ್ಗಾಮ್ ದಾಳಿ ನಡೆಸಿದ ಶಂಕಿತ ಉಗ್ರರನ್ನು ಎನ್‌ಕೌಂಟರ್ ಮಾಡಿದ ಸೇನೆ

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಪಹಲ್ಗಾಮ್ ದಾಳಿಯಲ್ಲಿ ಭಾಗವಹಿಸಿದ ಮೂವರು ಶಂಕಿತ ಪಾಕ್ ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಮೃತ ಉಗ್ರರಿಂದ ಗ್ರೆನೇಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಲಿಡ್ವಾಸ್ ಪ್ರದೇಶದಲ್ಲಿ ಮೂವರು ಉಗ್ರರು ನೆಲೆ ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಶಸ್ತ್ರ ಪಡೆಗಳು ದಾಳಿ ನಡೆಸಿ ಈ ಎನ್‌ಕೌಂಟರ್ ನಡೆಸಿದೆ. ಆಪರೇಷನ್ ಮಹಾದೇವ್ ಹೆಸರಿನಲ್ಲಿ ಈ ಕಾರ್ಯಾಚರಣೆಯನ್ನು ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ನಡೆಸಿವೆ. ಎರಡು ದಿನಗಳ‌ ಹಿಂದಷ್ಟೇ ದಚಿಗಮ್ ಕಾಡಿನಲ್ಲಿ ಅನುಮಾನಾಸ್ಪದ

ಆಪರೇಷನ್ ಮಹಾದೇವ್ ನಡೆಸಿ‌ ಪಹಲ್ಗಾಮ್ ದಾಳಿ ನಡೆಸಿದ ಶಂಕಿತ ಉಗ್ರರನ್ನು ಎನ್‌ಕೌಂಟರ್ ಮಾಡಿದ ಸೇನೆ Read More »

ಸಂಸ್ಕೃತ ಕಲಿತು ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಳ್ಳಿ: ರಮೇಶ ಆಚಾರ್ಯ

ಪೊಳಲಿ: ದಕ್ಷಿಣಕನ್ನಡ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘದ ವತಿಯಿಂದ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಸಂಸ್ಕೃತದಲ್ಲಿ 125 ,124 ತೃತೀಯ ಭಾಷೆಯಲ್ಲಿ 100, 99 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ಸರ್ವಮಂಗಳ ಸಭಾಭವನದಲ್ಲಿ ಸಂಪನ್ನಗೊಂಡಿತು. ದೇವಸ್ಥಾನದ ಆನುವಂಶಿಕ ಮೊಕ್ತೇಸರ ವೇದಮೂರ್ತಿ ಮಾಧವ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಭಾಷಣಕಾರ ಮಂಗಳೂರಿನ ಶಾರದಾ ವಿದ್ಯಾಲಯದ ಉಪನ್ಯಾಸಕ ರಮೇಶ ಅಚಾರ್ಯ ಮಾತನಾಡಿ, ಸಂಸ್ಕೃತ ಕಲಿತು ಭಾರತೀಯತೆ

ಸಂಸ್ಕೃತ ಕಲಿತು ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಳ್ಳಿ: ರಮೇಶ ಆಚಾರ್ಯ Read More »

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ SIT ಮುಖ್ಯಸ್ಥರಾಗಿ ಪ್ರಣವ್ ಮೊಹಂತಿ ಆಯ್ಕೆ ಸರಿ ಇಲ್ಲ: ಅನುಪಮಾ ಶೆಣೈ

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ತನಿಖೆ ನಡೆಸಲು ರಾಜ್ಯ ಸರ್ಕಾರ SIT ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ಆಯ್ಕೆ ಮಾಡಿದ್ದು, ಅವರು ಆ ತನಿಖೆಗೆ ಸೂಕ್ತ ವ್ಯಕ್ತಿ ಅಲ್ಲ ಎಂದು ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಆಕ್ಷೇಪ ಸಲ್ಲಿಸಿದ್ದಾರೆ. ಈ ಸಂಬಂಧ ಮಂಗಳೂರಿನಲ್ಲಿ ಮಾತನಾಡಿದ ಅವರು ನರಹತ್ಯೆ, ಅತ್ಯಾಚಾರ ಕುರಿತಾದ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿ ಅಲ್ಲ. ಮೊಹಂತಿ ಅವರನ್ನು ನೇಮಕ ಮಾಡಿರುವುದರಲ್ಲಿ ಕೆ. ಎ. ಜಾರ್ಜ್ ಕೈವಾಡ ಇದೆ ಎಂಬ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ SIT ಮುಖ್ಯಸ್ಥರಾಗಿ ಪ್ರಣವ್ ಮೊಹಂತಿ ಆಯ್ಕೆ ಸರಿ ಇಲ್ಲ: ಅನುಪಮಾ ಶೆಣೈ Read More »

ಸುಳ್ಯ: ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಮಹಿಳೆ ಸಾವು

ಸುಳ್ಯ: ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಬೈಲು ನಿವಾಸಿ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ್ ಚೆದ್ಮಾರ್ ಅವರ ತಾಯಿ ಕಮಲಾ ಚೆತ್ಕಾರ್(67) ಎಂದು ಗುರುತಿಸಲಾಗಿದೆ. ಕಮಲಾ ಅವರು ಸಂಪಾಜೆಗೆ ಹೋಗುವ ಬಸ್ ಹತ್ತುವುದಕ್ಕಾಗಿ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದಾಗ, ಸುಳ್ಯದ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಬೈಕ್ ನಿಯಂತ್ರಣ ಕಳೆದುಕೊಂಡು ಅವರಿಗೆ

ಸುಳ್ಯ: ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಮಹಿಳೆ ಸಾವು Read More »

error: Content is protected !!
Scroll to Top