ಪಿ ಎಂ ಶ್ರೀ ಶಾಲೆ ವೀರಮಂಗಲದಲ್ಲಿ ಆಟಿಯಲ್ಲಿ ಒಂದು ದಿನ ಕಾರ್ಯಕ್ರಮ

ಮೇಳೈಸಿದ ತುಳು ಆಹಾರ ಮೇಳ, ಸಂಪನ್ಮೂಲ ವ್ಯಕ್ತಿಗಳ ಮಾತುಕತೆ, ತುಳು ಯಕ್ಷಗಾನ ತಾಳಮದ್ದಳೆ ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಪಿಎಂಶ್ರೀ ಸಮುದಾಯದ ಸಹಭಾಗಿತ್ವದಲ್ಲಿ ಇಕೋಕ್ಲಬ್, ಸ್ಕೌಟ್ & ಗೈಡ್, ಸಾಹಿತ್ಯ ಕ್ಲಬ್ ಸೇವಾದಳ, ಸಾಂಸ್ಕೃತಿಕ ಕ್ಲಬ್ ಆಯೋಜಿಸಿದ ತುಳು ನಾಡಿನ ಸಂಸ್ಕೃತಿಗಳ ಪರಿಚಯವನ್ನು ಮಾಡುವ ಉದ್ದೇಶದಿಂದ ಸಂಪನ್ಮೂಲ ವ್ಯಕ್ತಿಗಳಿಂದ ಮಾತುಕತೆ, ತುಳುನಾಡಿನ ಆಷಾಡ ಮಾಸದ ತಿನಿಸುಗಳು, ಹಾಗೂ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿಯ […]

ಪಿ ಎಂ ಶ್ರೀ ಶಾಲೆ ವೀರಮಂಗಲದಲ್ಲಿ ಆಟಿಯಲ್ಲಿ ಒಂದು ದಿನ ಕಾರ್ಯಕ್ರಮ Read More »

ಇಂದು ಮಧ್ಯಾಹ್ನ 12 ಗಂಟೆಗೆ ಸಂಸತ್ತಿನಲ್ಲಿ ಆಪರೇಷನ್‌ ಸಿಂದೂರ ಚರ್ಚೆ

ಸುದೀರ್ಘ 16 ತಾಸುಗಳ ಚರ್ಚೆಗೆ ಸರ್ಕಾರ-ವಿಪಕ್ಷ ರೆಡಿ ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಮತ್ತು ಆಪರೇಷನ್ ಸಿಂದೂರ ಕುರಿತು ಸೋಮವಾರ ಲೋಕಸಭೆಯಲ್ಲಿ ಮೂರು ದಿನಗಳ ಚರ್ಚೆ ಆರಂಭವಾಗಲಿದ್ದು, ಆಡಳಿತ ಮೈತ್ರಿಕೂಟ ಮತ್ತು ವಿರೋಧ ಪಕ್ಷಗಳು ಪರಸ್ಪರ ವಾಗ್ದಾಳಿಗೆ ಸಿದ್ಧತೆ ಮಾಡಿಕೊಂಡಿವೆ. ಕಾಂಗ್ರೆಸ್ ನಿನ್ನೆ ತನ್ನ ಸಂಸದರಿಗೆ ಲೋಕಸಭೆಯಲ್ಲಿ ಇಂದಿನಿಂದ ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಚರ್ಚೆ ಶುರು ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಆಪರೇಷನ್‌ ಸಿಂದೂರ ಕುರಿತು ಲೋಕಸಭೆಯಲ್ಲಿ

ಇಂದು ಮಧ್ಯಾಹ್ನ 12 ಗಂಟೆಗೆ ಸಂಸತ್ತಿನಲ್ಲಿ ಆಪರೇಷನ್‌ ಸಿಂದೂರ ಚರ್ಚೆ Read More »

ಧರ್ಮಸ್ಥಳ : ಬಸ್‌ ತಂಗುದಾಣಕ್ಕೆ ನುಗ್ಗಿ ಬಂದ ಬೃಹತ್‌ ಕಾಡಾನೆ

ಒಂಟಿ ಸಲಗ ಕಂಡು ಬಸ್‌ಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳು ಭಯಭೀತ ಬೆಳ್ತಂಗಡಿ : ಧರ್ಮಸ್ಥಳ ಸಮೀಪದ ಬೊಳಿಯಾರ್‌ನಲ್ಲಿ ಇಂದು ಬೆಳಗ್ಗೆ ಒಂಟಿ ಸಲಗವೊಂದು ಬಸ್‌ ತಂಗುದಾಣಕ್ಕೆ ನುಗ್ಗಿ ಬಂದು ಆತಂಕ ಸೃಷ್ಟಿಸಿದೆ. ರಸ್ತೆ ಬದಿ ಬಸ್ ತಂಗುದಾಣದಲ್ಲಿ ಶಾಲಾ ಮಕ್ಕಳು ಬಸ್‌ಗಾಗಿ ಕಾಯುತ್ತಿದ್ದ ವೇಳೆ ರಸ್ತೆಯಲ್ಲಿ ಪ್ರತ್ಯಕ್ಷವಾದ ಬೃಹತ್‌ ಗಾತ್ರದ ಒಂಟಿ ಸಲಗ ಬಸ್ ತಂಗುದಾಣದ ಕಡೆಗೆ ನುಗ್ಗಿ ಬಂದಿದೆ. ತಂಗುದಾಣದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಹತ್ತಿರದಲ್ಲಿದ್ದ ಅಂಗಡಿಯೊಳಗೆ ನುಗ್ಗಿ ಪಾರಾಗಿದ್ದಾರೆ. ಬಳಿಕ

ಧರ್ಮಸ್ಥಳ : ಬಸ್‌ ತಂಗುದಾಣಕ್ಕೆ ನುಗ್ಗಿ ಬಂದ ಬೃಹತ್‌ ಕಾಡಾನೆ Read More »

ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ

ವಿದ್ಯುತ್‌ ತಂತಿ ಕಡಿದು ಚಪ್ಪರದ ಶೀಟಿನ ಮೇಲೆ ಬಿದ್ದಾಗ ನೂಕುನುಗ್ಗಲು ಲಖನೌ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ದೇವಾಲಯವೊಂದರಲ್ಲಿ ಇಂದು ನಸುಕಿನ ಹೊತ್ತು ಕಾಲ್ತುಳಿತ ಸಂಭವಿಸಿ ಇಬ್ಬರು ಭಕ್ತರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ಪವಿತ್ರ ಶ್ರಾವಣ ಮಾಸದ ಹಿನ್ನೆಲೆ ಸೋಮವಾರ ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್‌ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ತಗಡಿನ ಶೆಡ್‌ ಮೇಲೆ

ದೇವಾಲಯದಲ್ಲಿ ಕಾಲ್ತುಳಿತ: ಇಬ್ಬರು ಭಕ್ತರ ಸಾವು, 29 ಮಂದಿಗೆ ಗಾಯ Read More »

ಧರ್ಮಸ್ಥಳ ಪ್ರಕರಣ : ಎರಡನೇ ದಿನವೂ ದೂರುದಾರನ ಸುದೀರ್ಘ ವಿಚಾರಣೆ

ತಲೆ ಬುರುಡೆ ರಹಸ್ಯ ಬೇಧಿಸುವ ನಿಟ್ಟಿನಲ್ಲಿ ತನಿಖೆ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಎರಡನೇ ದಿನವೂ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಎರಡನೇ ದಿನವಾದ ಭಾನುವಾರ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೇ ಸ್ವತಃ ವಿಚಾರಣೆ ನಡೆಸಿದ್ದಾರೆ. ಶನಿವಾರ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಐಬಿಯಲ್ಲಿ ಎಸ್‌ಐಟಿ ಅಧಿಕಾರಿ ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಂಟು ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಲಾಗಿತ್ತು. ಈವರೆಗೆ ನಡೆದ ವಿಚಾರಣೆಯ ಮಾಹಿತಿ ಪಡೆದ ಬಳಿಕ

ಧರ್ಮಸ್ಥಳ ಪ್ರಕರಣ : ಎರಡನೇ ದಿನವೂ ದೂರುದಾರನ ಸುದೀರ್ಘ ವಿಚಾರಣೆ Read More »

ಮಂಗಳೂರು ಶೂಟೌಟ್‌ ಪ್ರಕರಣದ ಆರೋಪಿ 10 ವರ್ಷಗಳ ಬಳಿಕ ಸೆರೆ

ಭಾರತಿ ಬಿಲ್ಡರ್ಸ್‌ ಕಚೇರಿ ಮೇಲೆ ರವಿ ಪೂಜಾರಿ ಗ್ಯಾಂಗ್‌ ನಡೆಸಿದ ಶೂಟೌಟ್‌ ಪ್ರಕರಣ ಮಂಗಳೂರು : 2014ರಲ್ಲಿ ಮಂಗಳೂರಿನಲ್ಲಿ ಸಂಭವಿಸಿದ್ದ ಶೂಟೌಟ್‌ ಪ್ರಕರಣದ ಆರೋಪಿಯನ್ನು ಹತ್ತು ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಕರಾಡ್‌ನ ಗಣೇಶ್‌ ಲಕ್ಷ್ಮಣ್ ಸಕಟ್ ಎಂಬಾತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಿಜೈಯ ಭಾರತಿ ಬಿಲ್ಡರ್ಸ್ ಕಚೇರಿ ಮೇಲೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು 2014ರಲ್ಲಿ ಶೂಟೌಟ್ ನಡೆಸಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಯಾಗಿದ್ದ

ಮಂಗಳೂರು ಶೂಟೌಟ್‌ ಪ್ರಕರಣದ ಆರೋಪಿ 10 ವರ್ಷಗಳ ಬಳಿಕ ಸೆರೆ Read More »

ಮಲ್ಲಿಕಾರ್ಜುನ ಖರ್ಗೆಯವರ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಖರ್ಗೆಯವರ ಪುತ್ರ ಮಿಲಿಂದ್ ಖರ್ಗೆ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಖರ್ಗೆ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್ ಸಾರ್ವಜನಿಕವಾಗಿ

ಮಲ್ಲಿಕಾರ್ಜುನ ಖರ್ಗೆಯವರ ಪುತ್ರನ ಆರೋಗ್ಯ ಸ್ಥಿತಿ ಗಂಭೀರ Read More »

4ನೇ ಟೆಸ್ಟ್‌ : ಸೋಲಿನ ದವಡೆಯಿಂದ ಪಾರಾಗಿ ಡ್ರಾ ಸಾಧಿಸಿದ ಭಾರತ

ಇಂಗ್ಲೆಂಡ್‌ ಗೆಲುವಿನಾಸೆಗೆ ತಣ್ಣೀರೆರಚಿದ ಗಿಲ್‌, ಜಡೇಜಾ, ಸುಂದರ್‌ ಶತಕ ಮ್ಯಾಂಚೆಸ್ಟರ್‌: ಇಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ನಾಲ್ಕನೇ ಪಂದ್ಯವನ್ನು ಸೋಲಿನ ದವಡೆಯಿಂದ ಪಾರು ಮಾಡಿ ಡ್ರಾ ಮಾಡಿಕೊಳ್ಳಲು ಭಾರತ ಯಶಸ್ವಿಯಾಗಿದೆ. ನಾಯಕ ಶುಭಮನ್‌ ಗಿಲ್‌, ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್‌ ಸುಂದರ್‌ ಅವರ ಅಜೇಯ ಶತಕದ ನೆರವಿನಿಂದ 4ನೇ ಟೆಸ್ಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ 311 ರನ್‌ ಮುನ್ನಡೆ ಪಡೆದ ಕಾರಣ ಭಾರತದ ಬ್ಯಾಟರ್‌ಗಳು ಎರಡನೇ ಇನ್ನಿಂಗ್ಸ್‌ನಲ್ಲಿ ಎಚ್ಚರಿಕೆಯಿಂದ ಆಟವಾಡಿ

4ನೇ ಟೆಸ್ಟ್‌ : ಸೋಲಿನ ದವಡೆಯಿಂದ ಪಾರಾಗಿ ಡ್ರಾ ಸಾಧಿಸಿದ ಭಾರತ Read More »

ದ್ವಿಶತಕ ದಾಟಿದ ಫಲಾನುಭವಿಗಳ ಸಂಖ್ಯೆ – ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮತ್ತುಕೆವಿಜಿ ವೈದ್ಯಕೀಯ ಮಹಾವಿದ್ಯಾಲಯಗಳ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಒಟ್ಟು ಇನ್ನೂರಕ್ಕೂ ಮಿಕ್ಕಿದ ಸಂಖ್ಯೆಯ ಆರೋಗ್ಯಾಕಾಂಕ್ಷಿಗಳು ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ಯಶಸ್ವೀ ಶಿಬಿರಇದೊಂದು ಅತ್ಯಂತ ಪ್ರಯೋಜನಕಾರಿ ಮತ್ತು ಸಕಾಲಿಕವಾದ ಶಿಬಿರವಾಗಿತ್ತು ಎಂದು ಫಲಾನುಭವಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಶಿಬಿರದಲ್ಲಿ ವಿತರಿಸಲಾದ ಆಹಾರದ ಗುಣಮಟ್ಟವು ಅತಿ ಉತ್ತಮವಾಗಿತ್ತು ಎಂದು ಕೆವಿಜಿ ವೈದ್ಯಕೀಯ ಕಾಲೇಜಿನ ವೈದ್ಯರು ಮತ್ತು ಸಿಬ್ಬಂದಿಗಳು ಪ್ರತಿಕ್ರಿಯಿಸಿದ್ದಾರೆ. ಎಲ್ಲವೂ ಉಚಿತರಕ್ತದೊತ್ತಡ ಮತ್ತು

ದ್ವಿಶತಕ ದಾಟಿದ ಫಲಾನುಭವಿಗಳ ಸಂಖ್ಯೆ – ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮತ್ತು ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯಗಳ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ವನ್ನು ಕೆವಿಜಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲ್ ಉದ್ಘಾಟಿಸಿದರು. ಸುಳ್ಯದಲ್ಲಿ ಕೆವಿಜಿ – ಪುತ್ತೂರಿನಲ್ಲಿ ಎವಿಜಿಉದ್ಘಾಟಕರು ಮಾತನಾಡಿ ಸುಳ್ಯದ ಬೆಳವಣಿಗೆಯಲ್ಲಿ ಡಾ. ಕುರುಂಜಿ ವೆಂಕಟ್ರಮಣ ಗೌಡರು ಮಾಡಿದ ಶೈಕ್ಷಣಿಕ ಮತ್ತು ಸಾಮಾಜಿಕ ಸಾಧನೆಯಿಂದಾಗಿ ಇಂದು ಇಂತಹ ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳು ನಡೆಯಲು ಸಾಧ್ಯವಾಗಿದೆ ಎಂದರು. ಕುರುಂಜಿಯವರ ಕೈಂಕರ್ಯವನ್ನು

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »

error: Content is protected !!
Scroll to Top