ಹರಿದ್ವಾರ : ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 6 ಮಂದಿ ಸಾವು

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನೋಡಿ ಜನ ಗಾಬರಿಯಾದಾಗ ನೂಕುನುಗ್ಗಲು ಹರಿದ್ವಾರ: ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ದೇವಸ್ಥಾನದ ಸಮೀಪವಿರುವ ವಿದ್ಯುತ್‌ ಕಂಬದಲ್ಲಿ ಶಅರ್ಟ್‌ ಸರ್ಕ್ಯೂಟ್‌ ಆಗಿದ್ದು, ಇದನ್ನು ನೋಡಿ ಭಕ್ತರು ಗಾಬರಿಯಾಗಿ ಓಡ;ಲು ತೊಡಗಿದಾಗ ನೂಕುನುಗ್ಗಲು ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೊಂಡಿದ್ದಾರೆ. ಆದರೆ ಪೊಲೀಸರು ಶಾರ್ಟ್‌ ಸರ್ಕ್ಯೂಟ್‌ ಅವಗಡಕ್ಕೆ ಕಾರಣ ಎಂದು ಸ್ಪಷ್ಟಪಡಿಸಿಲ್ಲ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ […]

ಹರಿದ್ವಾರ : ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 6 ಮಂದಿ ಸಾವು Read More »

ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಬಂಟ್ವಾಳ : ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಬಳಿ ಶನಿವಾರ ನಡೆದಿದೆ. ಕಾರು ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ಚಾಲಕ ಮತ್ತು ಓರ್ವ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ತುಂಬಿದೆ. ಹೀಗಾಗಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ ಎಂದು ವಾಹನ ಚಾಲಕ, ಮಾಲಕರು ತಿಳಿಸಿದ್ದಾರೆ.

ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಯೂಟ್ಯೂಬರ್‌ ಮಂಗಳೂರಿನಲ್ಲಿ ಬಂಧನ

ಮದುವೆಯಾಗಿ ಮೂರು ಮಕ್ಕಳಿದ್ದರೂ ಹದಿಹರೆಯದ ಬಾಲಕಿ ಸ್ನೇಹ ಬೆಳೆಸಿ ದ್ರೋಹ ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್‌ಪೋರ್ಟ್‌ನಲ್ಲಿ ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ. ಆರೋಪಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯನಾಗಿದ್ದ ಸಾಲಿ, ಶಾಲು ಕಿಂಗ್ ಮೀಡಿಯಾ, ಶಾಲು ಕಿಂಗ್

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಯೂಟ್ಯೂಬರ್‌ ಮಂಗಳೂರಿನಲ್ಲಿ ಬಂಧನ Read More »

ಆಗಸ್ಟ್‌ 1ರಿಂದ ಯುಪಿಐ ಪಾವತಿ ವ್ಯವಸ್ಥೆಗೆ ಹೊಸ ನಿಯಮ

ಎಲ್ಲ ಆನ್‌ಲೈನ್‌ ಪೇಮೆಂಟ್‌ ವ್ಯವಸ್ಥೆಗೆ ಅನ್ವಯ ನವದೆಹಲಿ : ಜಗತ್ತಿನ ನಂಬರ್‌ 1 ಪಾವತಿ ವ್ಯವಸ್ಥೆಯಾಗಿರುವ ಯುಪಿಐಯಲ್ಲಿ ಆಗಸ್ಟ್‌ 1, 2025ರಿಂದ ಹಲವು ಬದಲಾವಣೆಗಳಾಗಲಿವೆ. ಯುಪಿಐಯಲ್ಲಿ ಹೊಸ ನಿಯಮಗಳು ಜಾರಿ ಆಗಲಿವೆ. ಯುಪಿಐ ಪಾವತಿ ವೇಗ, ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯ ಸುಧಾರಣೆ ದೃಷ್ಟಿಯಿಂದ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಈ ಬದಲಾವಣೆಗಳನ್ನು ಮಾಡುತ್ತಿದೆ. ಗೂಗಲ್‌ ಪೇ, ಫೋನ್‌ ಪೇ ಸೇರಿದಂತೆ ಎಲ್ಲ ರೀತಿಯ ಯುಪಿಐ ಆಧಾರಿತ ಪಾವತಿ ವ್ಯವಸ್ಥೆಗೆ ಇದು ಅನ್ವಯವಾಗಲಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್

ಆಗಸ್ಟ್‌ 1ರಿಂದ ಯುಪಿಐ ಪಾವತಿ ವ್ಯವಸ್ಥೆಗೆ ಹೊಸ ನಿಯಮ Read More »

ಧರ್ಮಸ್ಥಳ ಪ್ರಕರಣ : 8 ತಾಸಿಗೂ ಅಧಿಕ ಹೊತ್ತು ದೂರುದಾರನ ವಿಚಾರಣೆ

ವಕೀಲರ ಜೊತೆಗೆ ಮುಸುಕು ಧರಿಸಿಕೊಂಡು ಬಂದ ದೂರುದಾರ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಆರೋಪಿಸಿದ ವ್ಯಕ್ತಿಯನ್ನು ಶನಿವಾರ ಎಸ್‌ಐಟಿ ಅಧಿಕಾರಿಗಳು ಎಂಟು ತಾಸಿಗೂ ಅಧಿಕ ಹೊತ್ತು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಧರ್ಮಸ್ಥಳ ಪ್ರಕರಣದ ತನಿಖೆಗೆ ರಚಿಸಲಾದ ಎಸ್‌ಐಟಿ ಅಧಿಕಾರಿಗಳು ಮಂಗಳೂರಿನ ಕದ್ರಿ ಮಲ್ಲಿಕಟ್ಟೆಯ ಸರ್ಕಾರಿ ಅತಿಥಿಗೃಹದಲ್ಲಿ ಎಸ್‌ಐಟಿ ತಂಡದ ಡಿಐಜಿ ಎಂ.ಎನ್. ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ದೂರುದಾರನನ್ನು ವಿಚಾರಣೆಗೊಳಪಡಿಸಿದರು. ಬೆಳಗ್ಗೆ 10.50ಕ್ಕೆ

ಧರ್ಮಸ್ಥಳ ಪ್ರಕರಣ : 8 ತಾಸಿಗೂ ಅಧಿಕ ಹೊತ್ತು ದೂರುದಾರನ ವಿಚಾರಣೆ Read More »

ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ

ಇಳಿಜಾರಿನಲ್ಲಿ ಬ್ರೇಕ್‌ಫೇಲ್‌ ಆದ ಟ್ರಕ್‌ 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾಗಿ ಅಪಘಾತ ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಯಗಢ ಜಿಲ್ಲೆಯ ಖೋಪೋಲಿ ಬಳಿ ಸುಮಾರು 20 ವಾಹನಗಳು ಸರಣಿ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ. ಏಕಮುಖ ಸಂಚಾರ ರಸ್ತೆಯಲ್ಲಿ 25ಕ್ಕೂ ಹೆಚ್ಚು ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಬೈಗೆ ಹೋಗುವ ಮಾರ್ಗದಲ್ಲಿ ಘಟನೆ ಸಂಭವಿಸಿದೆ. ಇಳಿಜಾರಿನಲ್ಲಿ ಕಂಟೇನರ್‌ ಟ್ರಕ್‌ನ ಬ್ರೇಕ್‌ ಫೇಲ್‌ ಆಗಿ ಇದರಿಂದ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಬಿಎಂಡಬ್ಲ್ಯು

ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ Read More »

ಅಧಿಕಾರ ಹಂಚಿಕೆ ಆಗಲಿ : ಕಾಂಗ್ರೆಸ್‌ ಶಾಸಕ ಬಿ.ದೇವೇಂದ್ರಪ್ಪ

ಕಾಂಗ್ರೆಸ್‌ನಲ್ಲಿ ಮುಗಿಯದ ಕುರ್ಚಿ ಕಿತ್ತಾಟ ಬೆಂಗಳೂರು: ಹೈಕಮಾಂಡ್‌ಎಷ್ಟೇ ತೇಪೆ ಹಾಕಿದರೂ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಬೇಗುದಿ ಶಮನವಾಗುತ್ತಿಲ್ಲ. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸಾಕಷ್ಟು ಚರ್ಚೆ ಮತ್ತು ತೀವ್ರ ಕುತೂಹಲ ಮೂಡಿಸುತ್ತಿವೆ. ಐದು ವರ್ಷ ನಾನೇ ಸಿಎಂ ಎಂದಿರುವ ಸಿದ್ದರಾಮಯ್ಯ ಪದೇಪದೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೇಗುಲಗಳಿಗೆ ಸರಣಿ ಭೇಟಿ ನೀಡಿ ಪೂಜೆ, ಹೋಮ ಮಾಡಿಸುತ್ತಿದ್ದಾರೆ. ಈದರ ಮಧ್ಯೆ ಸಿಎಂ ಮತ್ತು ಡಿಸಿಎಂ ನಡುವೆ ಒಪ್ಪಂದ ಆಗಿದ್ದರೆ ಅಧಿಕಾರ ಹಂಚಿಕೆ ಆಗಲಿ ಎಂದು

ಅಧಿಕಾರ ಹಂಚಿಕೆ ಆಗಲಿ : ಕಾಂಗ್ರೆಸ್‌ ಶಾಸಕ ಬಿ.ದೇವೇಂದ್ರಪ್ಪ Read More »

ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ಸಂಪರ್ಕ ಕಡಿತ

ಶೃಂಗೇರಿ ದೇವಸ್ಥಾನಕ್ಕೆ ನೆರೆ ಭೀತಿ ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ತುಂಗಾ, ಭದ್ರಾ ನದಿಗಳು ಭೋರ್ಗರೆಯುತ್ತಿದ್ದು ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದೆ. ಕೆರೆಕಟ್ಟೆ ಸಮೀಪದ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಮಣ್ಣು ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದ್ದು, ಮಠದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿ ತುಂಗಾ ನದಿ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ.

ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ಸಂಪರ್ಕ ಕಡಿತ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿದ ಕೂಟ

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯದ ಪುತ್ತೂರು ಶಾಖೆಯಲ್ಲಿ ಇಂದು ವಿಶೇಷ ಕಾರ್ಯಕ್ರಮ ‘ಆಟಿದ ಕೂಟ’ ನಡೆಯಿತು. ಆಟಿ ತಿಂಗಳು ಮತ್ತು ನಾಗರ ಪಂಚಮಿ ಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿ.ಎಲ್. ಆಚಾರ್ಯ ಚಿನ್ನಾಭರಣ ಮಳಿಗೆಯ ಸಿಬ್ಬಂದಿ ಮತ್ತು ಗ್ರಾಹಕರಿಗೆ ಆಟಿ ತಿಂಗಳ ವಿಶೇಷ ತಿನಿಸುಗಳಾದ ಪತ್ರೊಡೆ, ಗೆಣಸೆಲೆ, ಕಷಾಯಗಳನ್ನೊಳಗೊಂಡ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿದ ಕೂಟ Read More »

ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ

ನವದೆಹಲಿ: ಕೊರೋನಾ ಅವಧಿಯಲ್ಲಿ ಪ್ರಪಂಚದ 25 ಲಕ್ಷಕ್ಕೂ ಅಧಿಕ ಜನರ ಜೀವವನ್ನು ಕೊರೋನಾ ‌ಲಸಿಕೆ ಕಾಪಾಡಿದೆ ಎಂದು ವರದಿಯೊಂದು ತಿಳಿಸಿದೆ. ಇಟಲಿ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳು ಜಂಟಿಯಾಗಿ ನಡೆಸಿದ ಈ ಅಧ್ಯಯನದಲ್ಲಿ ಪ್ರತಿ 5,400 ಡೋಸ್‌ಗಳಿಗೆ ಒಂದು ಸಾವನ್ನು ತಪ್ಪಿಸಲಾಗಿದೆ. ಕೊರೋನಾ ಲಸಿಕೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಹಿರಿಯರ ಸಾವಿನ ಪ್ರಮಾಣವನ್ನು ತಪ್ಪಿಸಲಾಗಿದೆ ಎಂದು ಈ ವರದಿ ಹೇಳಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜರ್ನಲ್ ಒಂದರಲ್ಲಿ ಈ ವರದಿ ಪ್ರಕಟವಾಗಿದೆ. ಇನ್ನು ಕೊರೋನಾ ಲಸಿಕೆಯ ಕಾರಣಕ್ಕೆ ಹೃದಯಾಘಾತವಾಗುತ್ತಿಲ್ಲ

ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ Read More »

error: Content is protected !!
Scroll to Top