ಫೆ. 12 – 21: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ, ದೈವಗಳ ‌ನೇಮ

ಈಶ್ವರಮಂಗಲ: ಇಲ್ಲಿನ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಕಿನ್ನಿಮಾಣಿ, ಪೂಮಾಣಿ ಮತ್ತು ಪಿಲಿ ಚಾಮುಂಡಿ ದೈವಗಳ ‌ನೇಮ ಫೆ. 12 ರಿಂದ ಫೆ. 21 ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ನಡೆಯಲಿದೆ. ಫೆ. 12 ರಿಂದ 20 ರ ವರೆಗೆ ದೇವಾಲಯದಲ್ಲಿ ಜಾತ್ರೆ ಮತ್ತು ಫೆ. 21 ರಂದು ಮಾಡದ ಗುಡ್ಡೆಯಲ್ಲಿ ದೈವಗಳ ನೇಮ ನಡೆಯಲಿದೆ. ಜಾತ್ರಾ ಪ್ರಯುಕ್ತ ಫೆ. 12 ರಂದು ಹಸಿರುವಾಣಿ ಹೊರೆಕಾಣಿಕೆ ‌ಸಮರ್ಪಣೆಯಾಗಲಿದ್ದು, ದೇಗುಲದ ಆಡಳಿತ […]

ಫೆ. 12 – 21: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ, ದೈವಗಳ ‌ನೇಮ Read More »

ವಿವಿಧ ಕಾರ್ಯಕ್ರಮಗಳೊಂದಿಗೆ ಬಾರ್ಯ ಜಾತ್ರೋತ್ಸವ ಸಂಪನ್ನ

ಉಪ್ಪಿನಂಗಡಿ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆರನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ನೇತ್ರತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಸಾಮೂಹಿಕ ಪ್ರಾರ್ಥನೆ ,ಹೊರೆ ಕಾಣಿಕೆ ಸಮರ್ಪಣೆ ,ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಪುತ್ತಿಲ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ , ತಾಂಬೂಲ ಕಲಾವಿದರು ಪುಂಜಾಲಕಟ್ಟೆ ತಂಡದಿಂದ ತುಳು ನಾಟಕ ,ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ತಂಡದಿಂದ ಜಾಂಬವತಿ ಕಲ್ಯಾಣ ತಾಳಮದ್ದಳೆ, ದೇವರಿಗೆ ಪಂಚ ವಿಂಶತಿ ಕಲಶಾಭಿಷೇಕ, ನಾಗತಂಬಿಲ, ದರ್ಶನ ಬಲಿ,

ವಿವಿಧ ಕಾರ್ಯಕ್ರಮಗಳೊಂದಿಗೆ ಬಾರ್ಯ ಜಾತ್ರೋತ್ಸವ ಸಂಪನ್ನ Read More »

ಅಕ್ರಮ ಕೋಳಿ ಅಂಕಕ್ಕೆ ‌ಪೊಲೀಸ್ ದಾಳಿ

ಮಡಿಕೇರಿ: ಅಕ್ರಮ ಕೋಳಿ ಅಂಕ ಚೆಂಬು ಗ್ರಾಮದಲ್ಲಿ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಸ್ಥಳದಲ್ಲಿ ಕೋಳಿ ಅಂಕ ನಡೆಸಲು ಕಬ್ಬಿಣದ ಬೇಲಿಯನ್ನು ಅಳವಡಿಸಲಾಗಿತ್ತು. ಹಲವಾರು ಕೋಳಿಗಳು ‌ಸಹ ಉದ್ದೇಶಿತ ಸ್ಥಳದಲ್ಲಿ ಇದ್ದವು. ದಾಳಿ ನಡೆಸಿದ ಪೊಲೀಸರು ಅಳವಡಿಸಲಾಗಿದ್ದ ಕಬ್ಬಿಣದ ಬೇಲಿಯನ್ನು ‌ವಶಕ್ಕೆ ಪಡೆದಿದ್ದಾರೆ. ಪೊಲೀಸರ ರೈಡ್ ವೇಳೆ ಅಲ್ಲಿ ಸೇರಿದ್ದ ಜನರು ಓಡಿ ಹೋದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅಕ್ರಮ ಕೋಳಿ ಅಂಕಕ್ಕೆ ‌ಪೊಲೀಸ್ ದಾಳಿ Read More »

ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದ ಕಾರಣದಿಂದ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ(93) ಅವರು ಅಂಗಾಂಗ ‌ವೈಫಲ್ಯದಿಂದ ನಿಧನರಾದರು. ಅವರು ದಿ ಹಿಂದೂ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು, ಪತ್ರಿಕಾ ಅಕಾಡೆಮಿ ಹಾಗೂ ವಿವಿಧ ಪತ್ರಕರ್ತ ಕಲ್ಯಾಣ

ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ Read More »

ಡ್ರಗ್ಸ್ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

ಉಪ್ಪಿನಂಗಡಿ: ಪಂಜಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ‌ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಆತನಲ್ಲಿ ಎಂಡಿಎಂಎ ಮಾದಕ ವಸ್ತು ಪತ್ತೆಯಾದ ಘಟನೆ ನಡೆದಿದೆ. ಯಾಹ್ಯಾ ಕೊಕ್ಕಡ (48) ಎಂಬಾತನೇ ಬಂಧಿತ ಆರೋಪಿ. ಮಾರಾಟದ ಉದ್ದೇಶದಿಂದ ಈತ ಮಾದಕ ವಸ್ತುವನ್ನು ತನ್ನೊಂದಿಗೆ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ. ಆರೋಪಿಯಿಂದ 49,000 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಡ್ರಗ್ಸ್ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ Read More »

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯ : ಕೇಂದ್ರ ಗೃಹ ಇಲಾಖೆ ಆದೇಶ

ಹಾಡಿನ ಮೊದಲ ಆರು ಚರಣಗಳನ್ನು ಹಾಡಲು ಸೂಚನೆ ನವದೆಹಲಿ: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಹೇಳಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ ಹಾಡಿದರೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ತಿಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯ ತನ್ನ ನಿರ್ದೇಶನದಲ್ಲಿ ಆರು ಚರಣಗಳನ್ನು ವಂದೇ ಮಾತರಂ’ ಗೀತೆಯ 3.10 ನಿಮಿಷಗಳ ಗೀತೆಯನ್ನು

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯ : ಕೇಂದ್ರ ಗೃಹ ಇಲಾಖೆ ಆದೇಶ Read More »

ನಾಳೆ ದೇಶವ್ಯಾಪಿ ಬ್ಯಾಂಕ್‌ ಮುಷ್ಕರ : ಸೇವೆ ವ್ಯತ್ಯಯವಾಗುವ ಸಾಧ್ಯತೆ

ಖಾಸಗೀಕರಣ, ಕಾರ್ಮಿಕ ಸಂಹಿತೆ ವಿರೋಧಿಸಿ ಮುಷ್ಕರ ನವದೆಹಲಿ : ಬ್ಯಾಂಕ್​ಗಳ ಖಾಸಗೀಕರಣ ಮತ್ತು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಫೆಬ್ರವರಿ 12ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ಪ್ರಮುಖ ಬ್ಯಾಂಕುಗಳು ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಭಾಗಿಯಾಗಲಿವೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಬೇಕಿಂಗ್ ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕೆಂದು ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಸೂಚನೆ ನೀಡಿವೆ. ಹಿಂದೂ ಮಜ್ದೂರ್ ಕಿಸಾನ್ ಪಂಚಾಯತ್​ನ ಪ್ರಾಂತೀಯ ನಾಯಕ ಮೊಹಮ್ಮದ್ ಹಸ್ನೈನ್ ಅನ್ಸಾರಿ,

ನಾಳೆ ದೇಶವ್ಯಾಪಿ ಬ್ಯಾಂಕ್‌ ಮುಷ್ಕರ : ಸೇವೆ ವ್ಯತ್ಯಯವಾಗುವ ಸಾಧ್ಯತೆ Read More »

ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ : 10 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿಗೆ ಗಾಯ

ಶಾಲೆಗೆ ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ ಬಂದೂಕುಧಾರಿ ಓಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ, ಬಂದೂಕುಧಾರಿಯೂ ಸೇರಿದಂತೆ ಒಟ್ಟು 10 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್​ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು

ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ : 10 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಅಂದರ್‌ ಬಾಹರ್‌ ಜುಗಾರಿ : 11 ಮಂದಿ ಸೆರೆ

ಮನೆಯನ್ನೇ ಜುಗಾರಿ ಅಡ್ಡೆ ಮಾಡಿಕೊಂಡು ಆಟ ಕಾರ್ಕಳ : ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ಬೆಟ್ಟು ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಇಸ್ಪೀಟ್ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ಕಾರ್ಕಳ ನಗರ ಪೊಲೀಸ್ ಠಾಣಾ ಸಿಬ್ಬಂದಿ ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಉಮ್ಮರ ಫಾರೂಕ್ (62), ಅಬ್ದುಲ್ ಅಜೀಜ್ (40), ಸತೀಶ ಎಸ್. ಪ್ರಭು (49), ಅಬ್ದುಲ್ ರಹಿಮಾನ್ (49), ಸಮೀರ್ (46), ಸುಲೇಮಾನ್ (45), ಇರ್ಫಾನ್ (26) ಹಾಗೂ ಚೇತಕ್ (38) ಬಂಧಿತ ಆರೋಪಿಗಳು. ಅಶೋಕ ಎಂಬುವರಿಗೆ

ಅಂದರ್‌ ಬಾಹರ್‌ ಜುಗಾರಿ : 11 ಮಂದಿ ಸೆರೆ Read More »

ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ ವಿವಾದ : ಪೆಂಗ್ವಿನ್‌ ಹೇಳಿಕೆ ಬೆಂಬಲಿಸಿದ ನರವಣೆ

ಪುಸ್ತಕ ಇನ್ನೂ ಯಾವುದೇ ರೂಪದಲ್ಲಿ ಪ್ರಕಟವಾಗಿಲ್ಲ ಎಂದಿರುವ ಪೆಂಗ್ವಿನ್‌ ನವದೆಹಲಿ: ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಇನ್ನೂ ಪ್ರಕಟವಾಗದ ತಮ್ಮ ಆತ್ಮಚರಿತ್ರೆಯ ಸುತ್ತ ಹೆಚ್ಚುತ್ತಿರುವ ವಿವಾದಗಳ ಮಧ್ಯೆ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಣೆ ಪ್ರಕಾಶಕರಾದ ಪೆಂಗ್ವಿನ್‌ ಸಂಸ್ಥೆಯ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಪೆಂಗ್ವಿನ್‌ ಹೇಳಿಕೆಯನ್ನು ಮರುಹಂಚಿಕೊಳ್ಳುವ ಮೂಲಕ ನರವಾಣೆ ತನ್ನ ಅಭಿಪ್ರಾಯವನ್ನು ತಿಳಿಸಿದ್ದಾರೆ. ‘ಇದು ಪುಸ್ತಕದ ಸ್ಟೇಟಸ್‌’ ಎಂದು ಜನರಲ್ ನರವಾಣೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜನರಲ್ ನರವಣೆ ಅವರ ಆತ್ಮಚರಿತ್ರೆ

ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ ವಿವಾದ : ಪೆಂಗ್ವಿನ್‌ ಹೇಳಿಕೆ ಬೆಂಬಲಿಸಿದ ನರವಣೆ Read More »

error: Content is protected !!
Scroll to Top