ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾ. ವಿಭು ಭಕ್ರು

ಬೆಂಗಳೂರು: ನ್ಯಾ. ವಿಭು ಭಕ್ರು ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ‌ಡಿಕೆ ಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾ. ವಿಭು ಭಕ್ರು Read More »

ಹಿಂದೂಯೇತರ ಉದ್ಯೋಗಿಗಳಿಗೆ ಗೇಟ್‌ಪಾಸ್ ‌ನೀಡಿದ TTD

ಆಂಧ್ರಪ್ರದೇಶ: ಹಿಂದೂಯೇತರ ಧರ್ಮವನ್ನು ಪಾಲಿಸುತ್ತಿದ್ದ ನಾಲ್ವರನ್ನು ಕೆಲಸದಿಂದ ವಜಾ ಮಾಡಿ ತಿರುಪತಿ ತಿರುಮಲ ದೇಗುಲ ಅಮಾನತು ಮಾಡಿ ಆದೇಶ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ಕ್ರೈಸ್ತ ಮತವನ್ನು ಈ ಉದ್ಯೋಗಿಗಳು ಆಚರಿಸುತ್ತಿದ್ದರು. ಇದು ಟಿಟಿಡಿ ಟ್ರಸ್ಟ್‌ನ ಸಾಂಸ್ಥಿಕ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಈ ಕಾರಣದಿಂದ ಅವರನ್ನು ವಜಾ ಮಾಡಲಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ನಿರೀಕ್ಷಿತ ಧಾರ್ಮಿಕ ನಡವಳಿಕೆಯನ್ನು ಅನುಸರಿಸುವಲ್ಲಿ ಅಮಾನತಾದ ಉದ್ಯೋಗಿಗಳು ವಿಫಲರಾಗಿದ್ದಾಗಿಯೂ ಟ್ರಸ್ಟ್ ತಿಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಕೆಲಸ

ಹಿಂದೂಯೇತರ ಉದ್ಯೋಗಿಗಳಿಗೆ ಗೇಟ್‌ಪಾಸ್ ‌ನೀಡಿದ TTD Read More »

ವರ್ಷಾಂತ್ಯಕ್ಕೆ ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಬದಲಾವಣೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಈ ವರ್ಷಾಂತ್ಯಕ್ಕೆ ರಾಜ್ಯದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಈಗೀಗಲೇ‌ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರು ಸಮಾವೇಶ ಮಾಡುತ್ತಾರೆ. ಓಟ್‌ಬ್ಯಾಂಕ್ ಬಳಸಿಕೊಂಡು ಹೈಕಮಾಂಡ್‌ಗೆ ತನ್ನನ್ನು ಸಿಎಂ ‌ಸ್ಥಾನದಿಂದ ಕೆಳಗಿಳಿಸದ ಹಾಗೆ ಬೆದರಿಸುತ್ತಾರೆ ಎಂದು ಅವರು ನುಡಿದಿದ್ದಾರೆ. ಮುಂದೆ ನಡೆಯಲಿರುವ ಬಿಹಾರದ ಚುನಾವಣೆದೆ ಮೊದಲು ಅಥವಾ ನಂತರ, ಇಲ್ಲವೇ ಈ ವರ್ಷದ ಅಂತ್ಯಕ್ಕೆ ರಾಜ್ಯ ರಾಜಕೀಯದಲ್ಲಿ

ವರ್ಷಾಂತ್ಯಕ್ಕೆ ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಬದಲಾವಣೆ: ಬಿ.ವೈ. ವಿಜಯೇಂದ್ರ Read More »

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಇನ್ನಿಲ್ಲ

ಪುತ್ತೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಅವರು ಇಂದು ಉಪ್ಪಿನಂಗಡಿಯ ‌ತಮ್ಮ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 92 ವರ್ಷಗಳಾಗಿತ್ತು. ತೆಂಕು ಮತ್ತು ಬಡಗುತಿಟ್ಟು‌ಗಳೆರಡರಲ್ಲೂ ಅಗ್ರಮಾನ್ಯ ವೇಷಗಳನ್ನು ‌ಮಾಡಿ ಹೆಸರುವಾಸಿಯಾದವರು. ಮುಲ್ಕಿ, ಸೌಕೂರು, ಸುರತ್ಕಲ್ ಮೇಳಗಳು, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು. ಬೇಲೂರಿನ ಶಿಲಾ ಬಾಲಿಕೆಯರ ಅಂಗಭಂಗಿಗಳನ್ನು ಬೇಲೂರಿಗೆ ಹೋಗಿ ಸ್ವತಃ ಅಭ್ಯಸಿಸಿ ಯಕ್ಷಗಾನದಲ್ಲಿ ಅಳವಡಿಸಿದವರು. ಇವರ ತಂದೆ ಪುತ್ತೂರಿನ ಸಮೀಪದ ಬೈಪದವಿನ ರಾಮ ಭಟ್ಟ, ತಾಯಿ

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಇನ್ನಿಲ್ಲ Read More »

ಉಗ್ರ ನಿಗ್ರಹಕ್ಕೆ ಜಮ್ಮು ಕಾಶ್ಮೀರದ ಹಲವೆಡೆ ಸಿಐಕೆ ಕಾರ್ಯಾಚರಣೆ

ಶ್ರೀನಗರ: ಉಗ್ರರನ್ನು ಮಟ್ಟ ಹಾಕಿ, ಭಯೋತ್ಪಾದನೆಯನ್ನು ನಿಗ್ರಹಿಸುವ ಸಲುವಾಗಿ ಕಣಿವೆಯ ಹಲವು ಕಡೆಗಳಲ್ಲಿ ಜಮ್ಮು ಕಾಶ್ಮೀರದ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ್ ವಿಭಾಗದ ತಂಡಗಳು ಕಾಶ್ಮೀರದ ಕಣಿವೆಯಲ್ಲ 10 ಕಡೆಗಳಲ್ಲಿ ಉಗ್ರ ದಮನ ಕಾರ್ಯಾಚರಣೆಯ ಭಾಗವಾಗಿ ಶೋಧ ಕಾರ್ಯಗಳನ್ನು ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಉಗ್ರರ ‌ನೇಮಕಾತಿ ನೆಲೆಗಳು ಮತ್ತು ಸ್ಲೀಪರ್ ಸೆಲ್ ಘಟಕಗಳ ಪತ್ತೆಗೆ ಈ ಶೋಧ ಕಾರ್ಯಗಳನ್ನು ನಡೆಸಲಾಗುತ್ತಿದೆ. ಗುಂಡೇರ್ಬಾಲ್, ಬುದ್ಗಾಮ್, ಪುಲ್ವಾಮಾ, ಶ್ರೀನಗರಗಳಿಗೆ ‌ಸಂಬಂಧಿಸಿದಂತೆ ಈ

ಉಗ್ರ ನಿಗ್ರಹಕ್ಕೆ ಜಮ್ಮು ಕಾಶ್ಮೀರದ ಹಲವೆಡೆ ಸಿಐಕೆ ಕಾರ್ಯಾಚರಣೆ Read More »

ಸುರ್ಜೇವಾಲ ಜೊತೆ ಚರ್ಚೆ: ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: KPCC ಅಧ್ಯಕ್ಷರ ಆಯ್ಕೆಯ ನಿರ್ಧಾರ ಹೈಕಮಾಂಡ್‌ನದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲಾ ಅವರ ಜೊತೆಗೆ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ ಮಾತನಾಡಲಾಗಿದೆ. ಹಾಗೆಯೇ ಅಭಿವೃದ್ಧಿಗಾಗಿ ಪ್ರತಿ ಶಾಸಕರಿಗೆ ಮೀಸಲಿಡಲಾದ ಹಣದ ಬಗ್ಗೆ ಚರ್ಚೆ ನಡೆಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಹೊಸ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಹಾಗೆ ಯಾವ ಚರ್ಚೆ ಸಹ ನಡೆಸಿಲ್ಲ. ಅದೆಲ್ಲಾ ಹೈಕಮಾಂಡ್‌ಗೆ ಬಿಟ್ಟದ್ದು. RCB ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ

ಸುರ್ಜೇವಾಲ ಜೊತೆ ಚರ್ಚೆ: ಸತೀಶ್ ಜಾರಕಿಹೊಳಿ ಹೇಳಿದ್ದೇನು? Read More »

ತೆಲುಗಿನ ಖ್ಯಾತ ನಟ ಫಿಶ್‌ ವೆಂಕಟ್‌ ನಿಧನ

ಎಲ್ಲ ಸ್ಟಾರ್‌ ನಟರೊಂದಿಗೆ ಅಭಿನಯಿಸಿದ್ದ ಹಾಸ್ಯ ನಟ ಹೈದರಾಬಾದ್: ಕೋಟ ಶ್ರೀನಿವಾಸ್ ರಾವ್ ನಿಧನ ಬೆನ್ನಲ್ಲೇ ತೆಲುಗು ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ಹಾಸ್ಯ ನಟ ಫಿಶ್ ವೆಂಕಟ್ (53) ಶನಿವಾರ ನಿಧನರಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಹಾಸ್ಯ ನಟನಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಫಿಶ್ ವೆಂಕಟ್ ಅನಾರೋಗ್ಯದ ಕಾರಣದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಫಿಶ್ ವೆಂಕಟ್ ಟಾಲಿವುಡ್‌ನಲ್ಲಿ ಹಲವು ಚಿತ್ರಗಳಲ್ಲಿ ಖಳ ನಟನಾಗಿ, ಹಾಸ್ಯ ನಟನಾಗಿ ನಟಿಸಿದ್ದರು. ಅನಾರೋಗ್ಯ ಕಾರಣದಿಂದಾಗಿ ಕಳೆದ ಕೆಲವು ಕಾಲದಿಂದ ಸಿನಿಮಾಗಳಿಂದ ದೂರ

ತೆಲುಗಿನ ಖ್ಯಾತ ನಟ ಫಿಶ್‌ ವೆಂಕಟ್‌ ನಿಧನ Read More »

ಕನ್ನಡದ ಧ್ವಜಕ್ಕೆ ಅಧಿಕೃತ ಮಾನ್ಯತೆ : ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಜ್ವಲಂತ ಸಮಸ್ಯೆಗಳಿಂದ ಗಮನ ತಿರುಗಿಸುವ ತಂತ್ರ ಎಂದು ಬಿಜೆಪಿ ಟೀಕೆ ಬೆಂಗಳೂರು : ಈಗಾಗಲೇ ಭಾಷೆಯ ವಿಚಾರವಾಗಿ ಹಲವು ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ಇದರ ನಡುವೆ ಕರ್ನಾಟಕ ಸರ್ಕಾರ ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ಆಗ್ರಹಿಸಿ ಕೇಂದ್ರದ ಎದುರು ಕೋರಿಕೆ ಮಂಡಿಸಿದೆ. ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2017ರಲ್ಲೇ ಬಾವುಟ ಅಧಿಕೃತ ಕೋರಿ ಕೇಂದ್ರಕ್ಕೆ ಅಂದಿನ ಸಿದ್ದರಾಮಯ್ಯ ಸರ್ಕಾರ ಮನವಿ ಸಲ್ಲಿಸಿತ್ತು.

ಕನ್ನಡದ ಧ್ವಜಕ್ಕೆ ಅಧಿಕೃತ ಮಾನ್ಯತೆ : ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ Read More »

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ : ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು : ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳವಾರ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಸನ್ಮಯ್ ಎನ್. ದ್ವಿತೀಯ ಸ್ಥಾನ ಹಾಗೂ ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲ ವರ್ಗ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಸಾನ್ವಿ ಜಿ. ಇ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲವರ್ಗ ಬಾಲಕರ ತಂಡದ ಸನ್ಮಯ್

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ : ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ Read More »

ಎನ್‌ಕೌಂಟರ್‌ನಲ್ಲಿ ಆರು ನಕ್ಸಲರ ಹತ್ಯೆ

ಅಪಾರ ಎಕೆ 47 ರೈಫಲ್‌, ಸ್ಫೋಟಕ ಪತ್ತೆ ರಾಯ್‌ಪುರ: ಛತ್ತೀಸ್‌ಗಢದ ದಟ್ಟಾರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿ ನಕ್ಸಲರು ಹತ್ಯೆಗೀಡಾಗಿದ್ದಾರೆ. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಹಲವು ಎಕೆ 47 ಮತ್ತು ಎಸ್‌ಎಕ್‌ಆರ್‌ ರೈಫಲ್‌ಗಳು, ಸ್ಫೋಟಕಗಳು ಪತ್ತೆಯಾಗಿವೆ. ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ನಕ್ಸಲ್‌ ಭದ್ರಕೋಟೆಯಾದ ಅಬುಜ್‌ಮದ್ ಕೋರ್ ವಲಯದಲ್ಲಿ ನಕ್ಸಲರ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ಸಹ

ಎನ್‌ಕೌಂಟರ್‌ನಲ್ಲಿ ಆರು ನಕ್ಸಲರ ಹತ್ಯೆ Read More »

error: Content is protected !!
Scroll to Top