ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ವೃಕ್ಷಾರೋಪಣ

ಪುತ್ತೂರು: ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡದ ವತಿಯಿಂದ ದೇಶಾದ್ಯಂತ ನಡೆಯುತ್ತಿರುವ ಬಜರಂಗದಳದ ಸೇವಾ ಸಪ್ತಾಹ ಹಿನ್ನಲೆ ವೃಕ್ಷಾರೋಪಣ ಕಾರ್ಯಕ್ರಮ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಸ್ಥಳೀಯ ನಗರಸಭೆ ಸದಸ್ಯೆ ಪೂರ್ಣಿಮಾ ಚೆನ್ನಪ್ಪ ಗೌಡ ಗಿಡ ನಾಟಿ ಮಾಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ,ವಿಶ್ವ ಹಿಂದೂ ಪರಿಷದ್‌ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಬಜರಂಗದಳ ಜಿಲ್ಲಾ ಸಹ […]

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ವೃಕ್ಷಾರೋಪಣ Read More »

ಕೇರಳ ಅಭಿವೃದ್ಧಿ ಆಗಬೇಕಾದರೆ ಬಿಜೆಪಿಗೆ ಮತ ನೀಡಿ: ಅಮಿತ್ ಶಾ

ನವದೆಹಲಿ: CPI(M) ಆಡಳಿತದ ಕೇರಳದಲ್ಲಿ ಅಭಿವೃದ್ಧಿಗಿಂತ ಹೆಚ್ಚು ಕೇಡರ್ ಕಲ್ಯಾಣ ಕಾರ್ಯಕ್ರಮಗಳೇ ಹೆಚ್ಚಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ಕೇಡರ್‌ಗಳಿಗಿಂತ ಅಭಿವೃದ್ಧಿ ಹೊಂದಿದ ಕೇರಳವನ್ನು ಆಯ್ಕೆ ಮಾಡಿತು. ಭಾರತೀಯ ಜನತಾ ಪಕ್ಷಕ್ಕೆ ಅಭಿವೃದ್ಧಿಯೇ ಮುಖ್ಯ ಎಂದು ಅವರು ನುಡಿದಿದ್ದಾರೆ. ಬಿಜೆಪಿ ಮತ್ತು ಕಮ್ಯೂನಿಸ್ಟ್ ಪಕ್ಷಗಳ ನಡುವೆ ವ್ಯತ್ಯಾಸ ಇದ್ದು ಬಿಜೆಪಿ ಅಭಿವೃದ್ಧಿಗೆ ಆದ್ಯತೆ ನೀಡಿದರೆ, ಕಮ್ಯುನಿಸ್ಟ್ ಪಕ್ಷ ಕೇಡರ್‌ಗಳ ಅಭಿವೃದ್ಧಿಗೆ

ಕೇರಳ ಅಭಿವೃದ್ಧಿ ಆಗಬೇಕಾದರೆ ಬಿಜೆಪಿಗೆ ಮತ ನೀಡಿ: ಅಮಿತ್ ಶಾ Read More »

ಜು. 14: ನಿತಿನ್ ಗಡ್ಕರಿ ಅವರಿಂದ ಸಿಗಂದೂರು ಸೇತುವೆ ಲೋಕಾರ್ಪಣೆ

ಶಿವಮೊಗ್ಗ: ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ‌ಐತಿಹಾಸಿಕ ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಈ ಸೇತುವೆ ದೇಶದಲ್ಲೇ ಎರಡನೇ ಅತೀ ದೊಡ್ಡ ಕೇಬಲ್ ಸೇತುವೆ ಎಂಬ ಕೀರ್ತಿಗೂ ಭಾಜನವಾಗಲಿದೆ. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಇದು ಹೊಸ ದಿಶೆಯನ್ನು ‌ತೆರೆದು ಕೊಡುವ ಸಾಧ್ಯತೆ ಇದೆ. ಈ ಸೇತುವೆ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಮತ್ತು‌ ಕೊಲ್ಲೂರಿನ ನಡುವೆ ಸಂಪರ್ಕ ಕಲ್ಪಿಸಲಿದೆ. ಈ ಭಾಗಕ್ಕೆ ಸಂಪರ್ಕಿಸಲು ಈ ವರೆಗೆ

ಜು. 14: ನಿತಿನ್ ಗಡ್ಕರಿ ಅವರಿಂದ ಸಿಗಂದೂರು ಸೇತುವೆ ಲೋಕಾರ್ಪಣೆ Read More »

ಭಾರತೀಯ ವಾಯುಸೇನೆಗೆ ‘ಅಸ್ತ್ರ’ ಬಲ

ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಸ್ವದೇಶಿ ಕ್ಷಿಪಣಿ ನವದೆಹಲಿ: ಭಾರತೀಯ ವಾಯುಸೇನೆಗೆ ಮತ್ತೊಂದು ಶಕ್ತಿ ಸೇರ್ಪಡೆಯಾಗಿದ್ದು, ಡಿಆರ್‌ಡಿಒ ಅಭಿವೃದ್ಧಿ ಮಾಡಿರುವ ಏರ್-ಟು -ಏರ್ ಕ್ವಿಪಣಿ ಅಸ್ತ್ರ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಇದನ್ನು ಒಡಿಶಾದ ಕರಾವಳಿ ತೀರದಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 MK1 ಯುದ್ಧ ವಿಮಾನದ ಮೂಲಕ ಡಿಆರ್‌ಡಿಒ ಮತ್ತು ಭಾರತೀಯ ವಾಯುಸೇನೆ ಈ ಕ್ಷಿಪಣಿಯ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ. ಈ ಕ್ಷಿಪಣಿಗಳು ತಮ್ಮ ಗುರಿಗಳನ್ನು ಹೆಚ್ಚಿನ ನಿಖರತೆಯ ಜೊತೆಗೆ ಯಶಸ್ವಿಯಾಗಿ ತಲುಪಿವೆ ಎಂದು ಮೂಲಗಳು ಮಾಹಿತಿ ನೀಡಿವೆ.

ಭಾರತೀಯ ವಾಯುಸೇನೆಗೆ ‘ಅಸ್ತ್ರ’ ಬಲ Read More »

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಮರಾಠ ಮಿಲಿಟರಿ ಭೂದೃಶ್ಯ

ನವದೆಹಲಿ: ಭಾರತದ ಮರಾಠ ಮಿಲಿಟರಿ ಭೂದೃಶ್ಯಗಳನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದ್ದು, ಇದಕ್ಕೆ ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಜಿರುವ ಪ್ರಧಾನಿ ಮೋದಿ, ಇದು ಭಾರತದ ಸಾಂಸ್ಕೃತಿಕ ಪರಂಪರೆಗೆ ಸಲ್ಲಿಕೆಯಾದ ವಿಶ್ವ ಗೌರವ ಎಂದಿದ್ದಾರೆ. ಇದಕ್ಕಾಗಿ ದೇಶದ ಜನತೆದೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹನ್ನೆರಡು ಕೋಟೆಗಳನ್ನು ಒಳಗೊಂಡಿರುವ ಈ ಮರಾಠ ಮಿಲಿಟರಿ ಭೂದೃಶ್ಯ ಕ್ರಿ.ಶ. 17 ರಿಂದ 19ನೇ ಶತಮಾನದಲ್ಲಿ ಅಭಿವೃದ್ಧಿ ಮಾಡಲಾಗಿರುವಂತಹವುಗಳಾಗಿವೆ. ಮರಾಠರ ಯುದ್ಧ ತಂತ್ರದ ಸೇನಾ

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಮರಾಠ ಮಿಲಿಟರಿ ಭೂದೃಶ್ಯ Read More »

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಉದ್ಯಮಿ ಸೆರೆ

ಕಾರಿನಲ್ಲಿ ಶಾಲೆಗೆ ಕರೆದೊಯ್ದು ವಿಶ್ವಾಸ ಗಳಿಸಿ ಕಿರುಕುಳ ಮಂಗಳೂರು : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್​ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪ ಈ ಘಟನೆ ನಡೆದಿದೆ. ಸಂತ್ರಸ್ತೆ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣಾ ಪೊಲೀಸರು ಪೋಕ್ಸೊ ಕೇಸ್ ದಾಖಲಿಸಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ಉದ್ಯಮಿ ಬಾಲಕಿಯನ್ನು ತನ್ನ ಫಾರ್ಚುನರ್‌ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ.

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಉದ್ಯಮಿ ಸೆರೆ Read More »

ಧರ್ಮಸ್ಥಳದ ವಿಡಿಯೋ ಮಾಡಿದ ಸಮೀರ್‌ ವಿರುದ್ಧ ಕೇಸ್‌ ದಾಖಲು

ಕೃತಕ ಬುದ್ಧಿಮತ್ತೆ ಮೂಲಕ ಕಾಲ್ಪನಿಕ ವಿಡಿಯೋ ಮಾಡಿದ ಯೂಟ್ಯೂಬರ್‌ ಬೆಳ್ತಂಗಡಿ : ಧರ್ಮಸ್ಥಳದ ವಿರುದ್ಧ ಇನ್ನೊಂದು ಸುತ್ತಿನ ಅಪಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಹಲವಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ಹೇಳಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಜಟಾಪಟಿ ಶುರುವಾಗಿದೆ. ಈ ವ್ಯಕ್ತಿ ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡಿದ ಬಳಿಕ ಈ ದೂರಿನ ಬಗ್ಗೆ ಕಾಲ್ಪನಿಕವಾಗಿ ಕೃತಕ ಬುದ್ಧಿಮತ್ತೆ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವಿಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಯುಟ್ಯೂಬರ್ ಸಮೀರ್

ಧರ್ಮಸ್ಥಳದ ವಿಡಿಯೋ ಮಾಡಿದ ಸಮೀರ್‌ ವಿರುದ್ಧ ಕೇಸ್‌ ದಾಖಲು Read More »

ಗ್ಯಾಸ್ ಸೋರಿಕೆಯಿಂದ ಬೆಂಕಿ ಆವರಿಸಿ ಅಡುಗೆ ಮನೆಗೆ ಹಾನಿ

ಬೆಳ್ತಂಗಡಿ: ಗ್ಯಾಸ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಅಡುಗೆ ಮನೆ ಸಂಪೂರ್ಣ ಹೊತ್ತಿದ ಘಟನೆ ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಇಂದು ಮುಂಜಾನೆ ನಡೆದಿದೆ, ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾ ಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

ಗ್ಯಾಸ್ ಸೋರಿಕೆಯಿಂದ ಬೆಂಕಿ ಆವರಿಸಿ ಅಡುಗೆ ಮನೆಗೆ ಹಾನಿ Read More »

ಪುತ್ತೂರಿನಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ | ಉತ್ತಮ ಪ್ರತಿಕ್ರಿಯೆ | 986 ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ

ಪುತ್ತೂರು: ಪುತ್ತೂರು ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ `ರಾಷ್ಟ್ರೀಯ ಲೋಕ್ ಅದಾಲತ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 6 ಕೋರ್ಟ್ ಗಳಲ್ಲಿ ಬಾಕಿ ಇದ್ದ ಒಟ್ಟು 6967 ಪ್ರಕರಣಗಳಲ್ಲಿ ಅದಾಲತ್‌ ನಲ್ಲಿ 1512 ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಪ್ರಯತ್ನಿಸಲಾಗಿತ್ತು. 986 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಒಟ್ಟು ಫಲಾನುಭವಿಗಳಿಗೆ ರೂ. 2,13,05,097 ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಗಿದೆ.   ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ

ಪುತ್ತೂರಿನಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ | ಉತ್ತಮ ಪ್ರತಿಕ್ರಿಯೆ | 986 ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ Read More »

ತಾರಕಕ್ಕೇರಿದ ಕೈ-ಕೈ ಕಿತ್ತಾಟ : ಶಾಸಕರ ಆಪರೇಷನ್‌ ಗುಸುಗುಸು

ಕಿಡಿ ಹಚ್ಚಿದ ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ ಬಲಾಬಲ ಸಾಬೀತುಪಡಿಸಲು ಉಭಯ ಬಣಗಳ ರಹಸ್ಯ ಕಾರ್ಯಾಚರಣೆ ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಬಹಳ ಆತ್ಮವಿಶ್ವಾಸದಿಂದಲೇ ಹೇಳುತ್ತಿದ್ದರೂ ಇದರೊಂದಿಗೆ ಕಾಂಗ್ರೆಸ್‌ನೊಳಗಿನ ಒಳಜಗಳ ಮತ್ತು ತುಮುಲ ಮುಗಿಯಿತು ಎಂದು ಭಾವಿಸಬೇಕಾಗಿಲ್ಲ. ಕೈ ಹೈಕಮಾಂಡ್‌ ಯಾವುದನ್ನೂ ಸ್ಪಷ್ಟವಾಗಿ ಹೇಳದ ಕಾರಣ ಕೈ ಕಿತ್ತಾಟ ಅಷ್ಟು ಬೇಗ ಮುಗಿಯುವುದಿಲ್ಲ ಎನ್ನುವುದು ಗ್ಯಾರಂಟಿಯಾಗಿದೆ. ಅದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೆ ದಿಲ್ಲಿಗೆ ದೌಡಾಯಿಸಿರುವುದೇ ಸಾಕ್ಷಿ. ಏನೆಲ್ಲ ತಿಪ್ಪರಲಾಗ ಹಾಕಿದರೂ ಸಿದ್ದರಾಮಯ್ಯ ಅವರನ್ನು

ತಾರಕಕ್ಕೇರಿದ ಕೈ-ಕೈ ಕಿತ್ತಾಟ : ಶಾಸಕರ ಆಪರೇಷನ್‌ ಗುಸುಗುಸು Read More »

error: Content is protected !!
Scroll to Top