ಛಂಗುರ್ ಬಾಬಾ‌ನಿಗೆ 500 ಕೋಟಿ ರೂ. ವಿದೇಶಿ ನಿಧಿ

ಹಲಾಲ ರೂಪದಲ್ಲಿ ನೇಪಾಳದ ಮೂಲಕ ಹಣ ಮತಾಂತರಕ್ಕೆ ಬಳಕೆ ಲಕ್ನೋ: ಜನರನ್ನು ಅಕ್ರಮವಾಗಿ ಮತಾಂತರ ಮಾಡುವುದು, ದೇಶದ್ರೋಹದ ಆರೋಪದಲ್ಲಿ ಉತ್ತರಪ್ರದೇಶದಲ್ಲಿ ಎಟಿಎಸ್ ಅಧಿಕಾರಿಗಳ ಬಲೆಗೆ ಬಿದ್ದಿರುವ ಸ್ವಯಂಘೋಷಿತ ಬಾಬ ಛಂಗುರ್‌ಗೆ ಸಂಬಂಧಿಸಿದ ಹಾಗೆ ಮತ್ತಷ್ಟು ಆಘಾತಕಾರಿ ಸುದ್ದಿಗಳು ಬೆಳಕಿಗೆ ಬಂದಿದೆ. ಆರೋಪಿ ಛಂಗುರ್ ಕಳೆದ ಮೂರು ವರ್ಷಗಳಲ್ಲಿ 500 ಕೋಟಿ ರೂ. ವಿದೇಶಿ ದೇಣಿಗೆ ಪಡೆದಿರುವುದಾಗಿ ಎಟಿಎಸ್ ಅಧಿಕಾರಿಗಳು ತಿಳಿಸಿದ್ದು, ಇದರಲ್ಲಿ 200 ಕೋಟಿ ರೂ. ಅಧಿಕೃತ ಮೂಲದ್ದು ಎಂದು ದೃಢೀಕರಿಸಲಾಗಿದೆ. ಉಳಿದ ಮೊತ್ತವನ್ನು ನೇಪಾಳದ‌ ಮೂಲಕ […]

ಛಂಗುರ್ ಬಾಬಾ‌ನಿಗೆ 500 ಕೋಟಿ ರೂ. ವಿದೇಶಿ ನಿಧಿ Read More »

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು; ಇನ್ನೂ ಹಲವರಿರುವ ಶಂಕೆ

ನವದೆಹಲಿ: ನವದೆಹಲಿ ಸೀಲಾಮ್ ಪುರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು  ಬಿದ್ದಿದ್ದರಿಂದ ಇಬ್ಬರು ಮೃತಪಟ್ಟಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಜುಲೈ 12ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜೂರ್ ಕಾಲೊನಿಯಲ್ಲಿ ಘಟನೆ ಸಂಭವಿಸಿದ್ದು ಇದುವರೆಗೆ 14 ತಿಂಗಳ ಮಗು ಸೇರಿ 8ಜನರನ್ನು ರಕ್ಷಿಸಲಾಗಿದೆ. 6ಕ್ಕೂ ಹೆಚ್ಚು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆಯಿದೆ. 7 ಅಗ್ನಿಶಾಮಕ ದಳದ ಸಿಬ್ಬಂದಿಗಳು, ಎಸ್‌ ಡಿ ಆರ್‌ ಎಫ್‌, ಎನ್‌ ಡಿ ಆರ್‌ ಎಫ್‌ ತಂಡ ಅವಶೇಷಗಳ

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು; ಇನ್ನೂ ಹಲವರಿರುವ ಶಂಕೆ Read More »

ಹಿರಿಯರನ್ನು ಗೌರವದಿಂದ ಕಾಣುವ ಸಂಸ್ಕೃತಿ ಮುಂದುವರಿಯಬೇಕು :ಪಡುವೆಟ್ನಾಯ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು. ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯರನ್ನು ಗೌರವದಿಂದ ಕಾಣುವ ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಹಿರಿಯರ ಮಾರ್ಗದರ್ಶನದಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾಧ್ಯವಿದೆ ಎಂದು ಅವರು ತಿಳಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ಹೊರ ಜಿಲ್ಲೆಗಳಲ್ಲಿಯೂ

ಹಿರಿಯರನ್ನು ಗೌರವದಿಂದ ಕಾಣುವ ಸಂಸ್ಕೃತಿ ಮುಂದುವರಿಯಬೇಕು :ಪಡುವೆಟ್ನಾಯ Read More »

ಮೊಮ್ಮಗನಿಂದಲೇ 65ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮೊಮ್ಮಗನಿಂದಲೇ 65ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಆರೋಪಿ ಬಂಧನ ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹು ಪಟ್ಟಣದಲ್ಲಿ 65 ವರ್ಷದ ತನ್ನ ಅಜ್ಜಿಯ ಮೇಲೆ 25 ವರ್ಷದ ಯುವಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಪತಿಯ ನಿಧನಾನಂತರ ಒಂಟಿಯಾಗಿ ವಾಸಿಸುತ್ತಿದ್ದ  65ವರ್ಷದ ವೃದ್ದೆಯ ಮನೆಗೆ ಜುಲೈ3ರ ಮಧ್ಯಾಹ್ನ ಆಕೆಯ ಮೊಮ್ಮಗ  ಬಂದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯನ್ನು ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದಿತು ಎಂದು ಆತ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.

ಮೊಮ್ಮಗನಿಂದಲೇ 65ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಆರೋಪಿ ಬಂಧನ Read More »

ರಾತ್ರಿ ಬೆಳಗಾಗುವುದರೊಳಗೆ ದ್ವಿಚಕ್ರ ವಾಹನ ಕಳವು

ಪುತ್ತೂರು: ಪುರುಷರಕಟ್ಟೆ ಮಾಯಂಗಲ ರಸ್ತೆಯ ಅಂಗನವಾಡಿಯೆದುರು ನಿಲ್ಲಿಸಿದ್ದ ಆಕ್ಟಿವಾ ಹೋಂಡಾ(ಕೆ.ಎ:21-ಇಡಿ 9849) ಕಳವಾದ ಬಗ್ಗೆ, ಪುತ್ತೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಳ್ಳಿಗೆ ಗ್ರಾಮದ ಕೆಮ್ಮಾರ ಉಮೇಶ್‌ ಎಂಬವರು ಪುರುಷರಕಟ್ಟೆ ಮಾಯಂಗಲದಲ್ಲಿನ ಅಂಗನವಾಡಿಯ ಮುಂದುಗಡೆ ಕಡ್ಡಟದ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುವಾಗ ಆಕ್ಟಿವಾ ಸ್ಟಾರ್ಟ್‌ ಆಗದ್ದರಿಂದ ಅಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ ಬಂದಾಗ ಆಕ್ಟಿವಾ ಇಲ್ಲದಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕಲಂ303(2) : 2023 5 ಪ್ರಕರಣ ದಾಖಲಿಸಿದ್ದಾರೆ.

ರಾತ್ರಿ ಬೆಳಗಾಗುವುದರೊಳಗೆ ದ್ವಿಚಕ್ರ ವಾಹನ ಕಳವು Read More »

ಪರಿಚಯಸ್ಥನಿಂದಲೇ ನಕಲಿ ಸಹಿಯಿಂದ ಕಾರು ಖರೀದಿ ; ಪ್ರಕರಣ ದಾಖಲು

ಪುತ್ತೂರು: ಕಾರು ಖರೀದಿಸಲೆಂದು ಪರಿಚಯಸ್ಥನೊಂದಿಗೆ ಬಂದು ಮುಂಗಡ ಹಣ ನೀಡಿ ತಿಂಗಳ ಬಳಿಕ, ಕಾರು ಬುಕ್ಕಿಂಗ್ ಮಾಡಿದ್ದ ಮಹಿಳೆಯ ನಕಲು ಸಹಿ ಮಾಡಿ ಒಪ್ಪಿಗೆ ಪತ್ರವನ್ನು ಶೋ ರೂಮ್ ಗೆ ನೀಡಿ ಕಾರು ಖರೀದಿಸಿ ವಂಚನೆ ಮಾಡಿದ ಪ್ರರಣ ಬೆಳಕಿಗೆ ಬಂದಿದೆ. ವಂಚನೆ ಮಾಡಿದ ಆರೋಪಿ ಮತ್ತು ಶೋರೂಮ್‌ ಮ್ಯಾನೇಜ‌ರ್, ಸಂಸ್ಥೆಯ ಅಕೌಂಟೆಂಟ್, ಸೇಲ್ಸ್ ಎಕ್ಸಿಕ್ಯೂಟಿವ್ ಮತ್ತು ಆರೋಪಿಯಿಂದ ಕಾರು ಪಡೆದುಕೊಂಡ ಮಹಿಳೆಯ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.     ಅಮರಮುಡೂರು ಗ್ರಾಮದ

ಪರಿಚಯಸ್ಥನಿಂದಲೇ ನಕಲಿ ಸಹಿಯಿಂದ ಕಾರು ಖರೀದಿ ; ಪ್ರಕರಣ ದಾಖಲು Read More »

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು

ತ್ಯಾಜ್ಯ ತೈಲ ಘಟಕದಲ್ಲಿ ಸೋರಿಕೆಯಾದ ವಿಷಾನಿಲ ಮಂಗಳೂರು: ಸುರತ್ಕಲ್‌ ಸಮೀಪವಿರುವ ಕೇಂದ್ರ ಸ್ವಾಮ್ಯದ ಎಂಆರ್‌ಪಿಎಲ್‌ನ ಒಂದು ಘಟಕದಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಇನ್ನೊಬ್ಬ ಅಸ್ವಸ್ಥರಾದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಎಂಆರ್‌ಪಿಎಲ್‌ನ OM‌‌‌‌&S ತ್ಯಾಜ್ಯ ತೈಲ ಸಂಗ್ರಹ ಘಟಕದಲ್ಲಿ ಇಂದು ಬೆಳಗ್ಗೆ ಅನಿಲ ಸೋರಿಕೆಯಾಗಿದೆ. ಘಟಕದಲ್ಲಿ ಲೆವೆಲ್‌ ಪರಿಶೀಲನೆ ಮಾಡಲು ತೆರಳಿದ ಕಾರ್ಮಿಕ ವಾಪಸಾಗದೆ ಇರುವುದನ್ನು ನೋಡಿ ಇನ್ನಿಬ್ಬರು ಅಲ್ಲಿಗೆ ತೆರಳಿದ್ದಾರೆ. ಮೂವರೂ ಅಲ್ಲಿ ಅನಿಲ ಸೋರಿಕೆಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು Read More »

ಸುಳ್ಯದಲ್ಲಿ ಧೀಂಕಿಟ

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಧೀಂಕಿಟ ಶಿರೋನಾಮೆಯಲ್ಲಿ ಒಂದು ದಿನದ ಅರೆಭಾಷೆ ಯಕ್ಷಗಾನ ತಾಳಮದ್ದಳೆ ಕಾರ್ಯಾಗಾರ ಉದ್ಘಾಟನೆಗೊಂಡಿತು. ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಪ್ರೊ. ಕೆ. ವಿ. ದಾಮೋದರ ಗೌಡರು ಮುಖ್ಯ ಅತಿಥಿಯಾಗಿದ್ದರು. ಕಲಾವಿದ ಜಬ್ಬಾರ್ ಸಮೋ ಮತ್ತು ಭಾಗವತಿಕೆ ಪ್ರತಿಭೆ ಭವ್ಯಶ್ರೀ ಕುಲ್ಕುಂದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಸದಾನಂದ ಮಾವಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಪ್ರೊ. ದಾಮೋದರ ಗೌಡರು ಅಕಾಡೆಮಿಯ ತ್ರೈಮಾಸಿಕ

ಸುಳ್ಯದಲ್ಲಿ ಧೀಂಕಿಟ Read More »

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ

ಗುಡ್ಡ ಕುಸಿತದ ತನಿಖೆ ಮಾಡುತ್ತಿದ್ದಾಗ ಪೊಲೀಸರ ಕಣ್ಣಿಗೆ ಬಿದ್ದ ತಾಯಿ-ಮಕ್ಕಳು ಕಾರವಾರ: ವಿದೇಶ ಮಹಿಳೆಯೊಬ್ಬಳು ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದೊಳಗೆ ಗುಹೆಯೊಳಗೆ ವಾಸ ಮಾಡುತ್ತಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿಉದೆ. ಹಿಂದೂ ಧರ್ಮದ ಕಡೆಗೆ ವಾಲಿದ ರಷ್ಯಾ ಮೂಲದ ಮಹಿಳೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದ ಗುಹೆಯಲ್ಲಿ ವಾಸವಿದ್ದಳು. ಇವರನ್ನು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ. ಮೋಹಿ (40) ತನ್ನ ಪುಟ್ಟ ಮಕ್ಕಳಾದ ಪ್ರೆಯಾ (6) ಹಾಗೂ ಅಮಾ

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ Read More »

ವೈದ್ಯನಿಂದಲೇ ಡ್ರಗ್ಸ್‌ ದಂಧೆ : ಬೃಹತ್‌ ಮಾದಕ ವಸ್ತು ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಡಾಕ್ಟರ್‌ ಮಂಗಳೂರು: ಕೆಲದಿನಗಳ ಹಿಂದೆಯಷ್ಟೇ ಉಗ್ರನಿಗೆ ನೆರವು ನೀಡಿದ ಆರೋಪದಲ್ಲಿ ಮನೋವ್ಯದ್ಯ ಸೆರೆಯಾಗಿದ್ದ. ಇದೀಗ ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸಿದ ಆರೋಪದಲ್ಲಿ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೀದರ್ ಮೂಲದ ವೈದ್ಯನನ್ನು ಬಂಧಿಸಿದ್ದಾರೆ. ವೈದ್ಯ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ಅನೇಕ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಬೀದರ್ ಮೂಲದ, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್

ವೈದ್ಯನಿಂದಲೇ ಡ್ರಗ್ಸ್‌ ದಂಧೆ : ಬೃಹತ್‌ ಮಾದಕ ವಸ್ತು ಜಾಲ ಬಯಲಿಗೆಳೆದ ಮಂಗಳೂರು ಪೊಲೀಸರು Read More »

error: Content is protected !!
Scroll to Top