ನಾಳೆ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ

ಕರ್ನಾಟಕದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನವದೆಹಲಿ: ಅಸ್ಸಾಂ ಮತ್ತು ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಕರ್ನಾಟಕದ ಎರಡುಕ್ಷೇತ್ರಗಳಿಗೆ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿದೆ. ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನ 126 ಸ್ಥಾನಗಳು, ಕೇರಳದ 140 ಸ್ಥಾನಗಳು ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಗುರುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಒಟ್ಟು 25 ಮಿಲಿಯನ್ ಮತದಾರರಿದ್ದಾರೆ, ಇದರಲ್ಲಿ […]

ನಾಳೆ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ Read More »

ಪುತ್ತೂರು ಜಾತ್ರೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಸರ್ಕಾರದ ಎಂಟು ಇಲಾಖೆಗಳಿಗೆ ಪತ್ರ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಅಹಿತಕರ ಘಟನೆಗಳು ಸಂಭವಿಸದ ಹಾಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆರ್. ಕೆ. ಪಾಂಗಣ್ಣಾಯ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಂಟು ಇಲಾಖೆಗಳಿಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರಿನ ಪಿ. ಜಿ. ಜಗನ್ನಿವಾಸ ರಾವ್ ಅವರ ಪುತ್ರ ಯುವತಿಯೊಬ್ಬಳಿಗೆ ಮದುವೆಯಾಗುವ ಭರವಸೆ ನೀಡಿ ಮಗು ಕರುಣಿಸಿ ಕೈಕೊಟ್ಟ ಘಟನೆಗೆ ಸಂಬಂಧಿಸಿದ ಹಾಗೆ ಸಂತ್ರಸ್ತ ಯುವತಿಯ ತಾಯಿ ಜಾತ್ರೆಯ ಧ್ವಜಾರೋಹಣದ ದಿನ ಧ್ವಜ

ಪುತ್ತೂರು ಜಾತ್ರೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಸರ್ಕಾರದ ಎಂಟು ಇಲಾಖೆಗಳಿಗೆ ಪತ್ರ Read More »

ಜಾತ್ರಾ ಸಂದರ್ಭ ರಥದ ಚಕ್ರದಡಿ ‌ಸಿಲುಕಿ ವ್ಯಕ್ತಿ ಮೃತ್ಯು

ಕಲಬುರ್ಗಿ: ಹಾಗರಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವರ ಜಾತ್ರೆಯ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ವಿನೋದ್ ರೆಡ್ಡಿ ಎಂದು ಗುರುತಿಸಲಾಗಿದೆ. ರಥದ ಹಗ್ಗವನ್ನು ಎಳೆಯುತ್ತಿದ್ದ ‌ವೇಳೆ ಅಯತಪ್ಪಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ರಥದ ಚಕ್ರ ವಿನೋದ್ ಅವರ ತೊಡೆಯ ಮೇಲೆ ಚಲಿಸಿದ್ದು, ಪರಿಣಾಮ ಅವರಿಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದ ಹಾಗೆ ಫರಹತ್ತಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾತ್ರಾ ಸಂದರ್ಭ ರಥದ ಚಕ್ರದಡಿ ‌ಸಿಲುಕಿ ವ್ಯಕ್ತಿ ಮೃತ್ಯು Read More »

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಉಪಚುನಾವಣೆ ಮತದಾನ ಮುಕ್ತಾಯಗೊಂಡ ಕೂಡಲೇ ಪಿಯು ರಿಸಲ್ಟ್‌ ಘೋಷಣೆ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್ 9) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಸಂಜೆ ವೇಳೆಗೆ ಸಚಿವರು ಫಲಿತಾಂಶ ಘೋಷಿಸಲಿದ್ದಾರೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

ಪತಿಯನ್ನು ‌ಚಾಕು ಇರಿದು ಕೊಂದ ಪತ್ನಿ

ಬೆಂಗಳೂರು: ಪತಿಯನ್ನು ಚಾಕುವಿನಿಂದ ಇರಿದು ಪತ್ನಿಯೇ ‌ಕೊಲೆಗೈದ ಘಟನೆ ಅನ್ನಪೂರ್ಣೇಶ್ವರಿ ನಗರದ ಮಲ್ಲತಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತೌಹಿಬ್ ಪಾಷ ಎಂದು ಗುರುತಿಸಲಾಗಿದೆ. ತೌಹಿಬ್ ಪತ್ನಿ ಸೋಹಾನಾ ಕೊಲೆಗೈದ ಆರೋಪಿ. ಕೌಟುಂಬಿಕ ಕಲಹದ ಕಾರಣಕ್ಕೆ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಪತ್ನಿ, ಆಕೆಯ ತಂದೆ ಮತ್ತು ತಾಯಿ ಸೇರಿ ಈ ಹತ್ಯೆ ಮಾಡಿದ್ದಾರೆ ಎಂದು ಕೊಲೆಯಾದ ತೌಹಿಬ್‌ನ ಮನೆಯವರು ಆರೋಪಿಸಿದ್ದಾರೆ. ಆರೋಪಿ ಸೋಹಾನಾ ಮತ್ತು ಆಕೆಯ ತಾಯಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಪತಿಯನ್ನು ‌ಚಾಕು ಇರಿದು ಕೊಂದ ಪತ್ನಿ Read More »

ಪೊನ್ನಂಪೇಟೆಯ ಶ್ರೀಮಂಗಲದಲ್ಲಿ ಕಾಡಾನೆ ಅಟ್ಟಹಾಸಕ್ಕೆ ಬಲಿಯಾದ ಕಾಫಿ ಬೆಳೆಗಾರ

ಮಡಿಕೇರಿ: ಪೊನ್ನಂಪೇಟೆಯ ಶ್ರೀಮಂಗಲ ಹೋಬಳಿಯಲ್ಲಿ ಕಾಡಾನೆಯೊಂದು ನಡೆಸಿದ ದಾಂಧಲೆಗೆ ಕೃಷಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಾಯಿಮಾನಿ ‌ನಿವಾಸಿ ಮೂಕಳಮಾಡ ರತ್ತು ಎಂದು ಗುರುತಿಸಲಾಗಿದೆ. ಅವರು ಇಂದು ಮುಂಜಾನೆ ಎಂದಿನಂತೆ ತಮ್ಮ ಕಾಫಿ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದು, ಈ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿರುವುದಾಗಿದೆ. ಅವರ ಮೃತದೇಹವನ್ನು ‌ಮರಣೋತ್ತರ ಪರೀಕ್ಷಾ ಹಿನ್ನೆಲೆ ಕುಟ್ಟದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುಮಾರು ಎಂಟರಿಂದ ಹತ್ತು ಕಾಡಾನೆಗಳು ಬೀಡು ಬಿಟ್ಟಿದ್ದು, ಇದು ಸ್ಥಳೀಯರಲ್ಲಿ ಆತಂಕ

ಪೊನ್ನಂಪೇಟೆಯ ಶ್ರೀಮಂಗಲದಲ್ಲಿ ಕಾಡಾನೆ ಅಟ್ಟಹಾಸಕ್ಕೆ ಬಲಿಯಾದ ಕಾಫಿ ಬೆಳೆಗಾರ Read More »

ಕದನ ವಿರಾಮ ಬೆನ್ನಿಗೆ ಚಿನ್ನದ ಬೆಲೆ ಏರಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ ಕದನ ವಿರಾಮ ಬೆಂಗಳೂರು: ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿದೆ. ತೈಲ ಬೆಲೆಗಳು ಇಳಿಕೆಯಾಗಿದ್ದು, ಲೋಹಗಳ ಮೇಲಿನ ಹೂಡಿಕೆ ಹೆಚ್ಚಳವಾದ ಹಿನ್ನೆಲೆ ಭಾರಿ ಬೇಡಿಕೆ ಸೃಷ್ಟಿಯಾಗಿ, ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ. ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಕಂಡಿತ್ತು. ಏಪ್ರಿಲ್ 8ರಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 3,980 ರೂ ಏರಿಕೆ ಆಗಿ 1,53,820 ರೂಪಾಯಿ ಬೆಲೆ ದಾಖಲಾಗಿದೆ.

ಕದನ ವಿರಾಮ ಬೆನ್ನಿಗೆ ಚಿನ್ನದ ಬೆಲೆ ಏರಿಕೆ Read More »

ಚಂದ್ರದ್ರೋಣ ಪರ್ವತಕ್ಕೆ ಟ್ರೆಕ್ಕಿಂಗ್‌ಗೆ ಬಂದ ಕೇರಳದ ಬಾಲಕಿ ನಾಪತ್ತೆ

40 ಮಂದಿಯ ತಂಡದೊಂದಿಗಿದ್ದ ಬಾಲಕಿ ನಿಗೂಢವಾಗಿ ಕಣ್ಮರೆ ಚಿಕ್ಕಮಗಳೂರು: ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರು ಸೇರಿದಂತೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ

ಚಂದ್ರದ್ರೋಣ ಪರ್ವತಕ್ಕೆ ಟ್ರೆಕ್ಕಿಂಗ್‌ಗೆ ಬಂದ ಕೇರಳದ ಬಾಲಕಿ ನಾಪತ್ತೆ Read More »

ಕದನ ವಿರಾಮ ಎಫೆಕ್ಟ್‌ : ಕಚ್ಚಾತೈಲ ಬೆಲೆ ದಾಖಲೆ ಕುಸಿತ

ಇಂಧನ ಬೆಲೆ ಕಡಿಮೆಯಾಗುವ ನಿರೀಕ್ಷೆ ಲಂಡನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗೆ 14 ದಿನಗಳ ಕದನ ವಿರಾಮವನ್ನು ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಭಾರಿ ಕುಸಿತವಾಗಿದೆ. ಕದನ ವಿರಾಮದ ಸುದ್ದಿಯಿಂದಾಗಿ ಕಚ್ಚಾತೈಲದ ಬೆಲೆಗಳು ಒಂದೇ ದಿನದಲ್ಲಿ ಸುಮಾರು 13%ರಿಂದ 17% ರಷ್ಟು ಕುಸಿದಿವೆ. ಇದು ಕಳೆದ ಆರು ವರ್ಷಗಳಲ್ಲೇ ಒಂದೇ ದಿನ ಕಂಡ ಅತಿ ದೊಡ್ಡ ಕುಸಿತ. ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾತೈಲದ ಬೆಲೆ ಸುಮಾರು 16.13 ಡಾಲರ್ (14.3%)

ಕದನ ವಿರಾಮ ಎಫೆಕ್ಟ್‌ : ಕಚ್ಚಾತೈಲ ಬೆಲೆ ದಾಖಲೆ ಕುಸಿತ Read More »

ಸಹಾಯಕ ಔಷಧ ನಿಯಂತ್ರಕನ ಬಳಿ 3.37 ಕೋಟಿ ರೂ. ಅಕ್ರಮ ಸಂಪತ್ತು

ಲೋಕಾಯುಕ್ತ ದಾಳಿಯಲ್ಲಿ ಪತ್ತೆಯಾಯಿತು ಅಪಾರ ಪ್ರಮಾಣದ ಆಸ್ತಿ ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್‌ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ. ಪೊಲೀಸ್‌ ನಿರೀಕ್ಷಕ ಚಂದ್ರಶೇಖರ್‌ ಕೆ.ಎನ್‌ ನೀಡಿದ ಸೋರ್ಸ್‌ ವರದಿ ಆಧರಿಸಿ ಏಪ್ರಿಲ್‌ 8ರಂದು ಮಂಗೂರು ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಲೋಕಾಯುಕ್ತ ಎಸ್ಪಿ ಬಿ.ಪಿ ದಿನೇಶ್‌ ಕುಮಾರ್‌ ಮಾರ್ಗದರ್ಶದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ.ಕುಮಾರ್‌, ಸುರೇಶ್‌ ಕುಮಾರ್‌ ಮತ್ತು ತಂಡದ 9

ಸಹಾಯಕ ಔಷಧ ನಿಯಂತ್ರಕನ ಬಳಿ 3.37 ಕೋಟಿ ರೂ. ಅಕ್ರಮ ಸಂಪತ್ತು Read More »

error: Content is protected !!
Scroll to Top