ಹೃದಯಾಘಾತಕ್ಕೆ ಕೊರೋನಾ ಲಸಿಕೆ ಕಾರಣವಲ್ಲ : ದಿನೇಶ್ ಗುಂಡೂರಾವ್ | ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ | ಹಾರ್ಟ್ ಅಟ್ಯಾಕ್ಗೆ ಸಂಬಂಧಿಸಿದಂತೆ ಪ್ರತ್ಯೇಕ ಪಠ್ಯ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯಿಂದಾಗಿ ಹೃದಯಾಘಾತ ಸಂಭವಿಸಿರುವುದಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಭೆ ನಡೆಸಿ ಮಾತನಾಡಿದ ಅವರು, ಕೊರೋನಾದಿಂದ ಸ್ವಲ್ಪ ಮಟ್ಟಿಗೆ ಹೃದಯಾಘಾತಗಳಂತಹ ಅಪಾಯ ಹೆಚ್ಚಾಗಿದೆ. ಆದರೆ ಕೊರೋನಾ ಬಂದ ಒಂದು ವರ್ಷದೊಳಗೆ ರಕ್ತನಾಳ ಬ್ಲಾಕ್ ಆಗುವ ಸಂಭವ ಹೆಚ್ಚು. ಮೂರು ವರ್ಷಗಳ ನಂತರ ಅದರ ಸಾಧ್ಯತೆ ಕಡಿಮೆ. ಹೃದಯಾಘಾತ ಪ್ರಕರಣಗಳಿಗೆ ಕೊರೋನಾ ಲಸಿಕೆ ಕಾರಣ ಅಲ್ಲ ಎಂದು ಅವರು ಹೇಳಿದ್ದಾರೆ. ಕೊರೋನಾ ಲಸಿಕೆಯಿಂದ ಜನರಿಗೆ […]










