ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರನ್ನು ಸಾಯಿಸಲು ಮುಸ್ಲಿಮರಿಗೆ ಕರೆ : ಖರ್ಗೆ ವಿರುದ್ಧ ದೂರು ದಾಖಲು

ಅಸ್ಸಾಂ ಚುನಾವಣೆ ಪ್ರಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಖರ್ಗೆ ದಿಸ್ಪುರ್: ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿ.ಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ […]

ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರನ್ನು ಸಾಯಿಸಲು ಮುಸ್ಲಿಮರಿಗೆ ಕರೆ : ಖರ್ಗೆ ವಿರುದ್ಧ ದೂರು ದಾಖಲು Read More »

ಶಬರಿಮಲೆ ವಿವಾದ : 9 ನ್ಯಾಯಾಧೀಶರ ಸಂವಿಧಾನದ ಪೀಠದಲ್ಲಿ ವಿಚಾರಣೆ ಆರಂಭ

ಮಹಿಳೆಯರಿಗೆ ದೇವಳ ಪ್ರವೇಶ ನೀಡುವ ವಿಚಾರವಾಗಿ ವಾದ-ಪ್ರತಿವಾದ ಮಂಡನೆ ನವದೆಹಲಿ: ಕೇರಳಂನ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡಿದ ತೀರ್ಪಿನ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ 9 ನ್ಯಾಯಾಧೀಶರ ಸಂವಿಧಾನ ಪೀಠ ವಿಚಾರಣೆಯಲ್ಲಿ ಪೀಠವು 7 ಪ್ರಶ್ನೆಗಳನ್ನು ಎತ್ತಿದೆ. ಪ್ರಕರಣದಲ್ಲಿ ವಾದ ಮಂಡಿಸುವ ವಕೀಲರು ನಿಗದಿತ ಗಡುವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇನ್ನೂ ಅನೇಕ ಸೂಕ್ಷ್ಮ ಪ್ರಕರಣಗಳು ಬಾಕಿ ಉಳಿದಿವೆ. ಆದ್ದರಿಂದ ಹೆಚ್ಚುವರಿ ಸಮಯ ನೀಡಲಾಗುವುದಿಲ್ಲ.

ಶಬರಿಮಲೆ ವಿವಾದ : 9 ನ್ಯಾಯಾಧೀಶರ ಸಂವಿಧಾನದ ಪೀಠದಲ್ಲಿ ವಿಚಾರಣೆ ಆರಂಭ Read More »

ಇರಾನ್‌-ಅಮೆರಿಕ ತಾತ್ಕಾಲಿಕ ಕದನ ವಿರಾಮ

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ವಾಷಿಂಗ್ಟನ್‌: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಮತ್ತು ಇರಾನ್‌ ನಡುವೆ 2 ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಇರಾನ್‌ಗೆ ನೀಡಿದ್ದ 48 ಗಂಟೆಗಳ ಡೆಡ್‌ಲೈನ್‌ ಅಮೆರಿಕ ಕಾಲಮಾನ ರಾತ್ರಿ 8 ಗಂಟೆಗೆ ಅಂತ್ಯವಾಗುವ ಒಂದು ಗಂಟೆಯ ಮೊದಲು ಟ್ರಂಪ್‌ ತಮ್ಮ ಟ್ರೂಥ್‌ ಸೋಷಿಯಲ್‌ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ಯುದ್ಧದ ಕಿಚ್ಚು ಸದ್ಯಕ್ಕೆ ತಣ್ಣಗಾಗಿದ್ದು, ಜಗತ್ತು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹಾರ್ಮುಜ್ ಜಲಸಂಧಿಯನ್ನು ತೆರೆಯಲು

ಇರಾನ್‌-ಅಮೆರಿಕ ತಾತ್ಕಾಲಿಕ ಕದನ ವಿರಾಮ Read More »

ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಪುತ್ತೂರು: ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಎಲೈಟ್ ಅಸೋಸಿಯೇಷನ್ ಹಾಗೂ ಭಾರತ್ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ( ಬೇಸ್), ಮಂಗಳೂರು ಜಂಟಿಯಾಗಿ ಆರಂಭಿಸಿದ ತ್ರೀಡಿಎಸ್ ಮ್ಯಾಕ್ಸ್ ಮತ್ತು ತ್ರೀಡಿ ರೆಂಡರಿಂಗ್ ಎಂಬ ವಿಷಯದಲ್ಲಿ ನಡೆದ ಕಾರ‍್ಯಗಾರದ ಪ್ರಮಾಣ ಪತ್ರ ವಿತರಣಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಬೇಸ್ ನ ಸ್ಥಾಪಕ ನವೀನ್ ಗುರುರಾಜ್ ಶಿಕ್ಷಣದ ಜೊತೆಗೆ ಸ್ವಯಂ ಅಭಿವೃದ್ಧಿಗೆ ಒತ್ತು ಕೊಡಬೇಕಾಗಿ ಸಲಹೆ ನೀಡಿ ವಿದ್ಯರ‍್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ

ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ Read More »

ಯಕ್ಷಗಾನ ಪದವಿ ಪ್ರದಾನ, ಯಕ್ಷ ಸಾಹಿತ್ಯ ಸಾಂಗತ್ಯ ಬಿಡುಗಡೆ ಮತ್ತು ಯಕ್ಷ ನೃತ್ಯ ರೂಪಕ ಸಮಾರಂಭ

ಬೆಂಗಳೂರು:ಹಲವು ಶತಮಾನಗಳ ಇತಿಹಾಸ ಹೊಂದಿರುವ ಯಕ್ಷಗಾನ ಕಲೆಯನ್ನು ನೂರಾರು ಕಲಾವಿದರು ಪ್ರಸಂಗಕರ್ತರ ಆಶಯದಂತೆ ರಂಗದಲ್ಲಿ ಪ್ರದರ್ಶಿಸಿ ಜನಸಾಮಾನ್ಯರಿಗೆ ಪೌರಾಣಿಕ ಜ್ಞಾನವನ್ನು ನೀಡಿದ್ದಾರೆ. ಭಾರತೀಯ ರಂಗಭೂಮಿಯಲ್ಲಿ ವಿಶಿಷ್ಟ ಕಲಾ ಪ್ರಕಾರವೆನಿಸಿದ ಯಕ್ಷಗಾನಕ್ಕೆ ಶೈಕ್ಷಣಿಕ ಚೌಕಟ್ಟನ್ನು ನೀಡುವ ಪ್ರಯತ್ನ ನಡೆದಿದೆಯಾದರೂ ಅದಕ್ಕೊಂದು ಅಂತಿಮ ರೂಪವನ್ನು ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಮಾಡಿರುವುದು ಯಕ್ಷಗಾನದ ಇತಿಹಾಸದಲ್ಲಿ ದಾಖಲಾಗುವ ಘಟನೆಯೆಂದು ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ನಿಕಟಪೂರ್ವ ಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ತಿಳಿಸಿದರು.

ಯಕ್ಷಗಾನ ಪದವಿ ಪ್ರದಾನ, ಯಕ್ಷ ಸಾಹಿತ್ಯ ಸಾಂಗತ್ಯ ಬಿಡುಗಡೆ ಮತ್ತು ಯಕ್ಷ ನೃತ್ಯ ರೂಪಕ ಸಮಾರಂಭ Read More »

ಕೋಮಾ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ : ಇರಾನ್‌ಗೆ ಮತ್ತೊಂದು ಸಂಕಷ್ಟ

ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡ ಬಳಿಕ ಚಿಕಿತ್ಸೆಯಲ್ಲಿರುವ ಖಮೇನಿ ಟೆಹ್ರಾನ್‌: ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಇಸ್ರೇಲ್‌-ಅಮೆರಿಕ ಗುಪ್ತಚರ ಮೂಲಗಳನ್ನಾಧರಿಸಿ ಮಾಧ್ಯಮಗಳು ವರದಿ ಮಾಡಿವೆ. ಮೊಜ್ತಬಾ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಸದ್ಯ ಅವರನ್ನ ಕೋಮ್‌ ನಗರದ ರಹಸ್ಯ ಸ್ಥಳದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೆರಿಕ ದಾಳಿ ಎಚ್ಚರಿಕೆ ನಡುವೆಯೇ ಈ ಘಟನೆ ಸಂಭವಿಸಿದ್ದು, ನಾಯಕತ್ವದ ಬಗ್ಗೆ ಪ್ರಶ್ನೆಗಳೂ ಎದ್ದಿವೆ. ಆದರೆ ಈ ಬಗ್ಗೆ ಇರಾನ್‌ ಸರ್ಕಾರವಾಗಲಿ, ಸೇನೆಯಾಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಅಮೆರಿಕ ಮತ್ತು

ಕೋಮಾ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ : ಇರಾನ್‌ಗೆ ಮತ್ತೊಂದು ಸಂಕಷ್ಟ Read More »

ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ : ಅಮೆರಿಕ ಬೆದರಿಕೆಗೆ ಇರಾನ್‌ ಪ್ರತಿತಂತ್ರ

ಮಂಗಳವಾರ ರಾತ್ರಿಯೊಳಗೆ ಇರಾನನ್ನು ಸರ್ವನಾಶ ಮಾಡುವುದಾಗಿ ಎಚ್ಚರಿಸಿರುವ ಟ್ರಂಪ್‌ ಟೆಹ್ರಾನ್‌: ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್‌ನನ್ನು ಸರ್ವನಾಶ ಮಾಡುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆ ಹಾಕಿದ ಬೆ3ನ್ನಲ್ಲೇ ಇರಾನ್‌ ತನ್ನ ರಕ್ಷಣೆಗೆ ತಂತ್ರ ಹೆಣೆದಿದೆ. ಟ್ರಂಪ್‌ ನೋಡೊದ ಗಡುವು ಸಮೀಪಿಸುತ್ತಿದ್ದಂತೆ ಇರಾನ್‌ ವಿದ್ಯುತ್‌ ಸ್ಥಾವರಗಳ ಸುತ್ತಲೂ ಮಾನವ ಸರಪಳಿ ನಿರ್ಮಿಸುವಂತೆ ಇಡೀ ದೇಶದ ಯುವ ಸಮೂಹಕ್ಕೆ ಕರೆ ಕೊಟ್ಟಿದೆ. ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು ಸೇರಿದಂತೆ ದೇಶಾದ್ಯಂತ ಇರುವ ಯುವಜನರು ಮಂಗಳವಾರ ಮಧ್ಯಾಹ್ನ

ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ : ಅಮೆರಿಕ ಬೆದರಿಕೆಗೆ ಇರಾನ್‌ ಪ್ರತಿತಂತ್ರ Read More »

ಏ.10ರಿಂದ ಟೋಲ್‌ಗೇಟ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ರದ್ದು

ಯುಪಿಐ ಪೇಮೆಂಟ್‌ಗೆ ಶೇ.25 ಹೆಚ್ಚುವರಿ ಶುಲ್ಕ ನವದೆಹಲಿ: ದೇಶದ ಎಲ್ಲಾ ಟೋಲ್ ಗೇಟ್‌ಗಳನ್ನು ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಏಪ್ರಿಲ್ 10 ರಿಂದ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಟೋಲ್ ಪ್ಲಾಜಾ ಹಾದು ಹೋಗಲು ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಅಂದರೆ ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25

ಏ.10ರಿಂದ ಟೋಲ್‌ಗೇಟ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ರದ್ದು Read More »

ಬೆಂಗಳೂರಿನ ಹುಡುಗಿಯನ್ನು ವರಿಸಿದ ಕುಂಭಮೇಳದ ಐಐಟಿ ಬಾಬಾ

ಕುಂಭಮೇಳದಲ್ಲಿ ಐಐಟಿ ಬಾಬಾ ಎಂದು ವೈರಲ್‌ ಆಗಿದ್ದ ಬಾಬಾ ಬೆಂಗಳೂರು : ಮಹಾಕುಂಭ ಮೇಳದ ಸಂದರ್ಭದಲ್ಲಿ ‘ಐಐಟಿ ಬಾಬಾ’ ಎಂದು ಜನಪ್ರಿಯರಾಗಿದ್ದ ನಾಗಸಾಧು ಅಭಯ್ ಸಿಂಗ್‌ ಬೆಂಗಳೂರಿನ ಯುವತಿಯನ್ನು ಮದುವೆಯಾಗಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕುಂಭಮೇಳದಲ್ಲಿ ಐಐಟಿಯಂಥ ಉನ್ನತ ಶಿಕ್ಷಣ ಪಡೆದಿದ್ದರೂ ಕೂಡ ನಾಗಸಾಧುವಾಗಿದ್ದ ಕಾರಣಕ್ಕೆ ಹರಿಯಾಣದ ಜಜ್ಝರ್ ಮೂಲದವರಾದ ಅಭಯ್ ಮಹಾಕುಂಭದಲ್ಲಿ ವೈರಲ್ ಆಗಿದ್ದರು. ಈಗ ಮದುವೆಯ ನಂತರ ಪತ್ನಿ ಪ್ರೀತಿಕ್ ಜೊತೆ ತಮ್ಮ ಊರಿಗೆ ಬಂದಿದ್ದಾರೆ. ಅವರು ಬರುತ್ತಿದ್ದಂತೆ, ಅವರನ್ನು ನೋಡಲು, ಸೆಲ್ಫಿ ತೆಗೆದುಕೊಳ್ಳಲು ಜನ

ಬೆಂಗಳೂರಿನ ಹುಡುಗಿಯನ್ನು ವರಿಸಿದ ಕುಂಭಮೇಳದ ಐಐಟಿ ಬಾಬಾ Read More »

ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು

ಮನೆಯವರು ಜಾತ್ರೆಗೆ ಹೋದಾಗ ಹೊಂಚು ಹಾಕಿ ಕಳ್ಳತನ ಬೆಳ್ತಂಗಡಿ : ಮಚ್ಚಿನ ಗ್ರಾಮದಲ್ಲಿ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಸುಮಾರು 13 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 6 ಲಕ್ಷ ನಗದು ಹಣ ಕಳ್ಳತನ ಮಾಡಿರುವ ಘಟನೆ ನಡೆದಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಚ್ಚಿನ ಗ್ರಾಮದ ಬಳ್ಳಮಂಜ ಹೊಸಮನೆ ನಿವಾಸಿ ಡಿ. ಮುರಳಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಏ.5ರಂದು ಬಳ್ಳಮಂಜ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಜಾತ್ರಾ ಕಾರ್ಯಕ್ರಮಕ್ಕೆ ಮನೆಯವರೆಲ್ಲರೂ ಮನೆಗೆ ಬೀಗ ಹಾಕಿ ತೆರಳಿದ್ದರು.

ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು Read More »

error: Content is protected !!
Scroll to Top