RSS ರಾಷ್ಟ್ರಪ್ರೇಮಕ್ಕೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಕಾಂಗ್ರೆಸ್ ನಾಯಕರಿಗೆ ಇಲ್ಲ: ಸಿ.ಟಿ. ರವಿ

ತಲೆ ಸ್ವಲ್ಪ ವ್ಯತ್ಯಾಸವಾಗಿ ಇಂತಹ ಹೇಳಿಕೆ ನೀಡಿದ್ದಾರೆ ಎಂದಿದ್ದು ಯಾರಿಗೆ? ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ RSS ನ ದೇಶಭಕ್ತಿಗೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ RSS ಬ್ಯಾನ್ ಮಾಡುವುದಾಗಿ ನೀಡಿದ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದು, ಶಬ್ಧ ಪ್ರಯೋಗಿಸಬೇಕೋ, ಬೇಡವೋ.. ಆದರೆ ಕೆಲವರಿಗೆ ತಲೆ ಸ್ವಲ್ಪ ವ್ಯತ್ಯಾಸವಾಗಿ ಏನೇನೋ ಮಾತನಾಡುತ್ತಾರೆ. […]

RSS ರಾಷ್ಟ್ರಪ್ರೇಮಕ್ಕೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಕಾಂಗ್ರೆಸ್ ನಾಯಕರಿಗೆ ಇಲ್ಲ: ಸಿ.ಟಿ. ರವಿ Read More »

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ರೆಹಮಾನ್ NIA ಬಲೆಗೆ

ಕತಾರ್‌ನಿಂದ ಕೇರಳಕ್ಕೆ ಆಗಮಿಸಿದ ಆರೋಪಿ ಈಗ NIA ಅತಿಥಿ ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಕೇರಳಕ್ಕೆ ಕತಾರ್‌ನಿಂದ ಆಗಮಿಸಿದ ಈತನನ್ನು ಅಧಿಕಾರಿಗಳು ಬಂಧಿಸಿರುವುದಾಗಿದೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 4 ಲಕ್ಷ ರೂ. ನೀಡುವುದಾಗಿಯೂ ಈ ಹಿಂದೆಯೇ ಎನ್‌ಐಎ ಘೋಷಣೆ ಮಾಡಿತ್ತು. ಆರೋಪಿ PFI ಸೂಚನೆಯಂತೆ ಪ್ರಮುಖ ದಾಳಿಕೋರರು ಮತ್ತು ಇತರ ಆರೋಪಿಗಳಿಗೆ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ರೆಹಮಾನ್ NIA ಬಲೆಗೆ Read More »

‘ಆಪರೇಷನ್‍ ಸಿಂಧೂರ’ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪದ್ಮನಾಭ ಗೌಡರಿಗೆ ಗೌರವಾರ್ಪಣೆ | ಕರಾವಳಿ ಕರ್ನಾಟಕ ನಿವೃತ್ತ ಬಿಎಸ್‌ಎಫ್ ಯೋಧರ ಕ್ಷೇಮಾಭಿವೃದ್ಧಿ ಸಂಘದಿಂದ ಕುಂಬ್ರ ವೃತ್ತದಲ್ಲಿ ಸ್ವಾಗತ ಕಾರ್ಯಕ್ರಮ

ಪುತ್ತೂರು: ಪಹಲ್ಯಾಮ್‌ ನಲ್ಲಿ ನಡೆದ ಘೋರ ಹತ್ಯಾಕಾಂಡದಲ್ಲಿ ಅಮಾಯಕ ಮಹಿಳೆಯರ ಗಂಡಂದಿರನ್ನು ಕೊಲ್ಲುವ ಮೂಲಕ ಅವರ ಹಣೆಯ ಸಿಂಧೂರ ಅಳಿಸಿದ ಭಯೋತ್ಪಾದಕರಿಗೆ ಅವರೇಷನ್ ಸಿಂಧೂರ’ ದ ಮೂಲಕ ತಕ್ಕ ಶಾಸ್ತಿ ಮಾಡಿದ ನಮ್ಮ ವೀರ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ದೇಶಕ್ಕೆ ನಮ್ಮ ಜಿಲ್ಲೆಗೆ ಹೆಮ್ಮೆ ತಂದುಕೊಟ್ಟ ಪದ್ಮನಾಭ ಗೌಡರವರು ನಿವೃತ್ತಿಗೊಂಡು ನಮ್ಮೂರಿಗೆ ಆಗಮಿಸಿದ್ದಾರೆ. ಅವರಿಗೆ ನಮ್ಮೆಲ್ಲರ ಪರವಾಗಿ ಅತ್ಮೀಯ ಸ್ವಾಗತವನ್ನು ಬಯಸುತ್ತಾ ಅವರ ಮುಂದಿನ ಜೀವನ ಸುಖ, ಶಾಂತಿ, ನೆಮ್ಮದಿಯಿಂದ ಕೂಡಿರಲಿ

‘ಆಪರೇಷನ್‍ ಸಿಂಧೂರ’ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪದ್ಮನಾಭ ಗೌಡರಿಗೆ ಗೌರವಾರ್ಪಣೆ | ಕರಾವಳಿ ಕರ್ನಾಟಕ ನಿವೃತ್ತ ಬಿಎಸ್‌ಎಫ್ ಯೋಧರ ಕ್ಷೇಮಾಭಿವೃದ್ಧಿ ಸಂಘದಿಂದ ಕುಂಬ್ರ ವೃತ್ತದಲ್ಲಿ ಸ್ವಾಗತ ಕಾರ್ಯಕ್ರಮ Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶತ ಸಂಭ್ರಮ ಸ್ಮರಣ ಸಂಚಿಕೆ ಬಿಡುಗಡೆ

ಕಾಣಿಯೂರು: ಶತಮಾನ ಪೂರೈಸಿದ ಚಾರ್ವಾಕದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಸಲುವಾಗಿ ಹೊರತಂದ ಸ್ಮರಣ ಸಂಚಿಕೆ ‘ ಶತ ಸಂಭ್ರಮ’ದ ಲೋಕಾರ್ಪಣೆ ಕಾರ್ಯಕ್ರಮ ಸಂಘದ ಅಧ್ಯಕ್ಷ ಗಣೇಶ್ ಕೆ. ಎಸ್. ಉದನಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಣಿಯೂರಿನ ಲಕ್ಷ್ಮೀ ನರಸಿಂಹ ಭಜನಾ ಮಂದಿರದಲ್ಲಿ ಜರುಗಿದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಸಂಚಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು ಸಂಘದ ಸಾಧನೆ

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶತ ಸಂಭ್ರಮ ಸ್ಮರಣ ಸಂಚಿಕೆ ಬಿಡುಗಡೆ Read More »

ಭಾರತದೊಂದಿಗಿನ ಸಂಘರ್ಷದಲ್ಲಿ ಪಾಕ್‌ ಗೆ ಚೀನಾ ಜೊತೆ ಟರ್ಕಿಯೂ ನೆರವಾಗಿತ್ತು : ಭಾರತೀಯ ಸೇನೆ

ನವದೆಹಲಿ: ಚೀನಾ ತನ್ನ ರಕ್ಷಣಾ ಉತ್ಪನ್ನಗಳ ಜೀವಂತ ಪ್ರಯೋಗಶಾಲೆಯನ್ನಾಗಿ ಪಾಕಿಸ್ತಾನವನ್ನು ಬಳಸಿಕೊಳ್ಳುತ್ತಿದೆ. ಪಾಕ್ ಬಳಸುವ 81% ಗಳಷ್ಟು ಮಿಲಿಟರಿ ಹಾರ್ಡ್‌ವೇರ್‌ಗಳು ಚೀನಾ ಮೂಲದ್ದಾಗಿವೆ ಎಂದು ಭಾರತೀಯ ಸೇನೆ ಹೇಳಿದೆ. ಭಾರತದ ಸೇನೆಯ ಡೆಪ್ಯುಟಿ ಚೀಫ್ ಲೆ. ಜ. ರಾಹುಲ್ ಆರ್. ಸಿಂಗ್ ಅವರು, ಭಾರತ ಮತ್ತು ಪಾಕ್ ನಡುವೆ ಕಳೆದ ಮೇ ತಿಂಗಳಿನಲ್ಲಿ ನಡೆದ ಸಂಘರ್ಷದಲ್ಲಿ ಟರ್ಕಿ ಕೂಡಾ ಪಾಕ್‌ಗೆ ನೆರವು ನೀಡಿತ್ತು. ಇದು ಗಡಿಯಲ್ಲಿ ಭಾರತ ಮೂವರು ಶತ್ರುಗಳನ್ನು ಎದುರಿಸುವಂತಹ ‌ಸ್ಥಿತಿ ನಿರ್ಮಾಣ ಮಾಡಿತ್ತು ಎಂದು

ಭಾರತದೊಂದಿಗಿನ ಸಂಘರ್ಷದಲ್ಲಿ ಪಾಕ್‌ ಗೆ ಚೀನಾ ಜೊತೆ ಟರ್ಕಿಯೂ ನೆರವಾಗಿತ್ತು : ಭಾರತೀಯ ಸೇನೆ Read More »

ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆ | ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಉಸಿರುಗಟ್ಟಿ ನಿಧನ

ಪುತ್ತೂರು: ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆಯಿಂದಾಗಿ ಉಸಿರುಗಟ್ಟಿ ಆಸ್ಪತ್ರೆಗೆ ದಾಖಲಾದ ನಿವೃತ್ತ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಕೂರ್ನಡ್ಕ ಸಂಜಯನಗರ ಶ್ರೀಲಕ್ಷ್ಮೀ ಪ್ರಸನ್ನ ಲೇ ಔಟ್ ನಲ್ಲಿ ನಡೆದಿದೆ.   ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ (80) ಮೃತಪಟ್ಟವರು. ಸಂಜಯನಗರ ಶ್ರೀಲಕ್ಷ್ಮೀ ಪ್ರಸನ್ನ ಲೇ ಔಟ್ ನಲ್ಲಿ ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಅವರ ಮನೆಯಲ್ಲಿ ಜು.4 ರಂದು ಕೊಠಡಿಯಲ್ಲಿನ ಹವಾನಿಯಂತ್ರಣ ಉಪಕರಣದಲ್ಲಿ ದೋಷ ಕಂಡು ಹೊಗೆ ಕಾಣಿಸಿಕೊಂಡಿತ್ತು. ಘಟನೆಗೆ ಸಂಬಂಧಿಸಿ ಮನೆಯ ಕಪಾಟು, ಮಂಚ ಹಾನಿಯಾಗಿದೆ. ಅಗ್ನಿಶಾಮಕದಳದವರು

ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆ | ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಉಸಿರುಗಟ್ಟಿ ನಿಧನ Read More »

ಪೇಶ್ವೆ ಬಾಜಿರಾವ್ ಪ್ರತಿಮೆ ಅನಾವರಣ ಮಾಡಿದ ಅಮಿತ್ ಶಾ

ಮುಂಬೈ: ಮರಾಠಾ ಯೋಧ ಪೇಶ್ವೆ ಬಾಜಿರಾವ್ ಉತ್ತಮವಾದ ಸೈನಿಕನ ಗುಣಲಕ್ಷಣಗಳನ್ನು ಹೊಂದಿದ್ದರು. ನಮ್ಮ ದೇಶಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಅವರು ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಪುಣೆಯಲ್ಲಿ ಯೋಧ ಪೇಶ್ವೆ ಬಾಜಿರಾವ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಬಳಿಕ ಮಾತನಾಡಿದ ಅವರು, ಬಾಜಿರಾವ್ ಅವರು ತಮ್ಮ 21 ನೇ ವರ್ಷದಲ್ಲಿ 41 ಯುದ್ಧಗಳಲ್ಲಿ ಭಾಗವಹಿಸಿದ್ದರು. ಅವರ ಈ ದಾಖಲೆಯನ್ನು ಮುರಿಯುವುದು ಯಾರಿಂದಲೂ ‌ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಛತ್ರಪತಿ ಶಿವಾಜಿ ಅವರ

ಪೇಶ್ವೆ ಬಾಜಿರಾವ್ ಪ್ರತಿಮೆ ಅನಾವರಣ ಮಾಡಿದ ಅಮಿತ್ ಶಾ Read More »

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು

 ಬೆಳ್ತಂಗಡಿ : ವಿದ್ಯುತ್‌ ತಂತಿ ಸ್ಪರ್ಶಿಸಿ  ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವೇಣೂರು ಸಮೀಪ ನಡೆದಿದೆ.      ವೇಣೂರು ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ನಿವಾಸಿ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.    ವಿದ್ಯುತ್‌ ಪರಿವರ್ತಕದ ಬಳಿ ತೋಟದಲ್ಲಿ ಎಲ್.ಟಿ ಲೈನ್‌ ಮೇಲೆ ತೆಂಗಿನ ಗರಿ ಬಿದ್ದು, ತಂತಿಯು ತುಂಡಾಗಿ ನೀರಿನ ಹಳ್ಳಕ್ಕೆ ಬಿದ್ದು ತಂತಿಯಲ್ಲಿ ವಿದ್ಯುತ್‌ ಸರಬರಾಜಾಗುವ ಪ್ಯೂಸ಼್ ಹೋಗಿರುವುದು ಕಂಡುಬಂದಿದೆ.  ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೀರಪ್ಪ  ಹಳ್ಳದ ನೀರಿನಲ್ಲಿ ತೇಲಿ ಹೋಗುತ್ತಿದ್ದ ತೆಂಗಿನಕಾಯಿ, ಅಡಕೆಯನ್ನು ಹೆಕ್ಕಲು

ವಿದ್ಯುತ್‌ ಅವಘಡಕ್ಕೆ ವ್ಯಕ್ತಿ ಸಾವು Read More »

ಶರಾಬಿನ ಮತ್ತಿನಲ್ಲಿ ಕೈಯಿಂದ ಗಾಜಿನ ಶೋಕೇಸ್‌ ಒಡೆದು ಹಾಕಿದವ ತೀವ್ರ ರಕ್ತಸ್ರಾವದಿಂದ ಸಾವು

ಸಹೋದರನೊಡನೆ ಜಗಳವಾಡಿ ಮನೆಯಲ್ಲಿದ್ದ ಶೋಕೇಸನ್ನು ಬರಿ ಕೈಯಿಂದ ಒಡೆದು ಹಾಕಿ ದುರಂತ ಮಂಗಳೂರು : ಶರಾಬಿನ ಮತ್ತಿನಲ್ಲಿ ಮನೆಯಲ್ಲಿದ್ದ ಗಾಜಿನ ಶೋಕೇಸ್ ಒಡೆದು ತೀವ್ರ ಗಾಯಗೊಂಡು ರಕ್ತಸ್ರಾವದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಉಳ್ಳಾಲ ಸಮೀಪದ ಮದೂರು ಸೈಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಮದೂರು ಸೈಟ್ ನಿವಾಸಿ ಸತೀಶ್ ನಾಯಕ್ ಅವರ ಪುತ್ರ ನಿತೇಶ್ ನಾಯಕ್ (28) ಎಂದು ಗುರುತಿಸಲಾಗಿದೆ. ನಿತೇಶ್ ತಂದೆ ಮತ್ತು ಸಹೋದರನೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದನು. ಗುರುವಾರ ರಾತ್ರಿ ಭಾರಿ ಸಿಟ್ಟಿನಲ್ಲಿದ್ದ ನಿತೇಶ್ ಮನೆಯೊಳಗಿದ್ದ

ಶರಾಬಿನ ಮತ್ತಿನಲ್ಲಿ ಕೈಯಿಂದ ಗಾಜಿನ ಶೋಕೇಸ್‌ ಒಡೆದು ಹಾಕಿದವ ತೀವ್ರ ರಕ್ತಸ್ರಾವದಿಂದ ಸಾವು Read More »

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸ್ಟೇಟಸ್‌ ಹಾಕಿದ್ದಕ್ಕೆ ಯುವಕ ಸೆರೆ

ಕೋಮು ಸಂಘರ್ಷ ನಿಗ್ರಹ ಪಡೆಯಿಂದ ಕಾರ್ಕಳದ ಯುವಕನ ಬಂಧನ ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ರಚಿಸಿರುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕುವವರ ಬೆನ್ನು ಬಿದ್ದಿದ್ದು, ರಕ್ತಕ್ಕೆ ರಕ್ತವೇ ಬೇಕು ಎಂದು ಸ್ಟೇಟಸ್ ಹಾಕಿದ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ. ಕಾರ್ಕಳ ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್​​ ಸೆರೆಯಾದ ಯುವಕ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ʼನಮಗೆ ಯಾವುದೇ ರೀತಿಯ ಉತ್ತರಗಳು ಬೇಡ ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕುʼ

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸ್ಟೇಟಸ್‌ ಹಾಕಿದ್ದಕ್ಕೆ ಯುವಕ ಸೆರೆ Read More »

error: Content is protected !!
Scroll to Top