ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು

ಯದ್ವಾತದ್ವಾ ಸ್ಕೂಟಿ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಬೆಂಗಳೂರು: ಇಬ್ಬರು ಯುವತಿಯರು ಕಂಠಪೂರ್ತಿ ಮದ್ಯ ಸೇವಿಸಿ ಹಾದಿಬೀದಿಯಲ್ಲಿ ರಂಪಾಟ ನಡೆಸಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ಶನಿವಾರ ತಡರಾತ್ರಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯರು ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಕ್ಯಾಬ್‌ಗೆ ಡಿಕ್ಕಿ ಹೊಡೆದು ಚಾಲಕ ಜೊತೆ ಡಿಕ್ಕಿ ಹೊಡೆದು ಜಗಳ ಮಾಡಿದ್ದಾರೆ. ಕ್ಯಾಬ್‌ ಚಾಲಕ ನಿಮ್ಮದೇ ತಪ್ಪು ಎಂದಿದ್ದಕ್ಕೆ ಮದ್ಯದ ಬೆರಳು ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಲು […]

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು Read More »

ಟಿ20 ವಿಶ್ವಕಪ್‌ : ಅನನುಭವಿ ಅಮೆರಿಕ ಎದುರು ತಿಣುಕಾಡಿದ ಭಾರತ

ಮೊದಲ ಪಂದ್ಯದಲ್ಲೇ ಬ್ಯಾಟಿಂಗ್‌ ಬಂಡವಾಳ ಬಯಲು; ಪ್ರಯಾಸದ ಜಯ ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ ನಡುವಿನ 2026ರ ಟಿ20 ವಿಶ್ವಕಪ್ ಮೊದಲ ದಿನದ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಕ್ರಿಕೆಟಿನಲ್ಲಿನ್ನೂ ಅಂಬೆಗಾಲಿಡುತ್ತಿರುವ ಅಮೆರಿಕ ತಂಡವನ್ನು ಭಾರತ ಸೋಲಿಸಿದೆ. ಈ ಪಂದ್ಯದಲ್ಲಿ ದುರ್ಬಲ ತಂಡದ ಎದುರು ಭಾರತ ದಾಖಲೆಗಳ ಮೇಲೆ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ

ಟಿ20 ವಿಶ್ವಕಪ್‌ : ಅನನುಭವಿ ಅಮೆರಿಕ ಎದುರು ತಿಣುಕಾಡಿದ ಭಾರತ Read More »

ಬಾರ್ಯ ಕ್ಷೇತ್ರದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ

ಉಪ್ಪಿನಂಗಡಿ: ಬಾರ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಅಧ್ಯಕ್ಷ ಡಾ. ಶ್ರೀಪತಿ ಕಲ್ಲುರಾಯ ಅವರ ಪ್ರಾಯೋಜಕತ್ವದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ನಾರಾಯಣ ಶಬರಾಯ ಉಡುಪಿ, ಪದ್ಯಾಣ ಜಯರಾಮ್ ಭಟ್ ಮತ್ತು ಮುರಳಿಧರ ಕಲ್ಲೂರಾಯ , ಬಲರಾಮನಾಗಿ ಡಾ. ಶ್ರೀಪತಿ ಕಲ್ಲೂರಾಯ, ಶ್ರೀ ಕೃಷ್ಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಜಾಂಬವಂತನಾಗಿ ಗಣರಾಜ ಕುಂಬಳೆ, ಜಾಂಬವತಿಯಾಗಿ ರಾಜಶ್ರೀ ಶಬರಾಯ ಉಡುಪಿ ಭಾಗವಹಿಸಿದ್ದರು. ದೇವಳದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ

ಬಾರ್ಯ ಕ್ಷೇತ್ರದಲ್ಲಿ ಜಾಂಬವತಿ ಕಲ್ಯಾಣ ತಾಳಮದ್ದಳೆ Read More »

ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ಚಾರಣಿಗರ ನೆಚ್ಚಿನ ಸ್ಥಳ ಗಡಾಯಿಕಲ್ಲಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲಿಗೆ ತಾತ್ಕಾಲಿಕ ನೆಲೆಯಲ್ಲಿ ಚಾರಣ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೇಸಿಗೆ ಕಾಲವಾದ್ದರಿಂದ ಕಾಡ್ಗಿಚ್ಚು ಹರಡುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಫೆ. 7 ರಿಂದ ಮುಂದಿನ ಆದೇಶದ ವರೆಗೆ ಈ ನಿಷೇಧ ಇರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ Read More »

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ

ವೀರಮಂಗಲ: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ಫೆ. 15 ರಂದು ನಡೆಯಲಿದೆ. ಫೆ. 9 ರಂದು ನಾಗತಂಬಿಲ, ಫೆ. 10 ರಂದು ಸಂಜೆ 6 ಗಂಟೆಗೆ ನೂತನವಾಗಿ ನಿರ್ಮಾಣವಾಗಿರುವ ಅಂಙಣಪಂಜುರ್ಲಿ ದೈವಸ್ಥಾನದ ವಾಸ್ತು ಪೂಜೆ, ಫೆ. 11 ರಂದು ಹುಲಿ ಚಾಮುಂಡಿ ಮತ್ತು ಅಂಙಣಪಂಜುರ್ಲಿ ದೈವಗಳ ಪುನಃಪ್ರತಿಷ್ಟೆ, ಫೆ. 14 ರಂದು ಕುಮಾರಧಾರಾ ನದಿಯಲ್ಲಿ ಗಂಗಾ ಪೂಜೆ, ಕಲಶ ಜಲ ಮೆರವಣಿಗೆ, ಮಹಾ ಪೂಜೆ, ಅನ್ನಸಂತರ್ಪಣೆ, ರಾತ್ರಿ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ Read More »

ಸುಳ್ಯ ಕ್ಷೇತ್ರದ ಪ.ಜಾ/ಪಂ.ದ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ. ಬಿಡುಗಡೆ

ಸುಳ್ಯ: ವಿಧಾನಸಭಾ ಕ್ಷೇತ್ರಕ್ಕೆ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಯಡಿ ರಸ್ತೆ ಅಭಿವೃದ್ಧಿಯ ಹಿನ್ನೆಲೆಯಲ್ಲಿ 75 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ಹಂಚಿಕೆಯಾಗಿರುವ ಅನುದಾನದಡಿ ವಿವಿಧ ಕ್ರಿಯಾ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸರ್ಕಾರ ನಿರ್ಧರಿಸಿದೆ. ​ಒಟ್ಟು ಅನುದಾನ: ₹75.00 ಲಕ್ಷಗಳು (8 ಕಾಮಗಾರಿಗಳಿಗೆ)​ಅನುಮೋದನೆಗೊಂಡಿದೆ. ಕಾಮಗಾರಿಗಳ ವಿವರ:ಸುಳ್ಯ ತಾಲೂಕು ಎಡಮಂಗಲ ಗ್ರಾಮದ ಡೆಮ್ಮಾಯಿಲ ಪ. ಜಾತಿ ಕಾಲೋನಿ ರಸ್ತೆ ಅಭಿವೃದ್ಧಿಗೆ 10 ಲಕ್ಷಸುಳ್ಯ ತಾಲೂಕು ದೇವಚಳ್ಳ

ಸುಳ್ಯ ಕ್ಷೇತ್ರದ ಪ.ಜಾ/ಪಂ.ದ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ. ಬಿಡುಗಡೆ Read More »

ಶಾಸಕರ ಪತ್ನಿಯ ಅವಹೇಳನ: ಆರೋಪಿಯ ಬಂಧನ

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಹೆಂಡತಿಯ ಬಗ್ಗೆ ಶಾಸಕ ಕೆ. ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತುಗಳನ್ನು ಉಲ್ಲೇಖ ಮಾಡಿ ಫೇಸ್‌ಬುಕ್‌ನಲ್ಲಿ ಶಾಸಕರ ಪತ್ನಿಯನ್ನು ವ್ಯಕ್ತಿಯೊಬ್ಬ ಅವಮಾನಿಸಿದ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿ ಬಂಟ್ವಾಳದ ಅಮ್ಟಾಡಿಯ ಶರತ್ ರೈ ಎಂಬಾತನನ್ನು ಬಂಧಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೇದವ್ಯಾಸ್ ಕಾಮತ್ ಅವರ ಪತ್ನಿಯನ್ನು ಅವಮಾನಿಸುವಂತೆ ಪೋಸ್ಟ್ ಹಾಕಿದ್ದ. ಈ ಸಂಬಂಧ ಮಹಿಳೆಯೊಬ್ಬರು ದೂರು ದಾಖಲು

ಶಾಸಕರ ಪತ್ನಿಯ ಅವಹೇಳನ: ಆರೋಪಿಯ ಬಂಧನ Read More »

ಮೆಟ್ರೋ ದರ ಏರಿಕೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಅಸಮಾಧಾನ ಎದ್ದಿದೆ. ಈ ಬಗ್ಗೆ ಮಾತನಾಡಿರುವ ಡಿ.ಸಿ.ಎಂ. ಡಿ. ಕೆ. ಶಿವಕುಮಾರ್ ಅವರು ಮೆಟ್ರೋ ದರ ಪರಿಷ್ಕರಣೆಗೆ ಸಂಬಂಧಿಸಿದ ಹಾಗೆ ಮಾತನಾಡುತ್ತೇವೆ. ಯಾವ ಕಾರಣಕ್ಕೂ ಜನರಿಗೆ ಸಮಸ್ಯೆಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳ‌ ಮೂಲಕ ಮೆಟ್ರೋ ದರ ಏರಿಕೆಯಾಗಿದೆ ಎನ್ನುವುದನ್ನು ನೋಡಿದ್ದೇನೆ. ಈ ಬಗ್ಗೆ ನಮ್ಮನ್ನು ಯಾರೂ ಸಂಪರ್ಕಿಸಿಲ್ಲ. ಕೇಂದ್ರ ಸರ್ಕಾರದ ಚೇರ್ಮನ್ ಮೆಟ್ರೋ ಚೇರ್ಮನ್ ಆಗಿದ್ದಾರೆ. ಇಂದು ಅಥವಾ ನಾಳೆ ಅವರೊಂದಿಗೆ ಮಾತುಕತೆ

ಮೆಟ್ರೋ ದರ ಏರಿಕೆ: ಡಿ ಕೆ ಶಿವಕುಮಾರ್ ಹೇಳಿದ್ದೇನು? Read More »

ಕುದ್ಮಾರು ಶಾಲೆ: ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ

ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುವ ಮುನ್ನವೇ ಸಂಸದರಿಂದ ಉದ್ಘಾಟನೆ ಆಗುವಂತೆ ಆಗಲಿ. ಈ ಕಾರ್ಯಕ್ಕೆ ಎಲ್ಲರೂ ಸಹಕರಿಸಿ ಒಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಭಾರತೀಯ

ಕುದ್ಮಾರು ಶಾಲೆ: ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ Read More »

ಜೈಲಿನಲ್ಲಿದ್ದ ಉಗ್ರ ಅನಾರೋಗ್ಯದಿಂದ ಸಾವು

ಆರು ವರ್ಷಗಳಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಉಗ್ರ ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಧಿಕ್ ಪಾಷಾ (47) ಅನಾರೋಗ್ಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಸಾದಿಕ್ ಪಾಷಾ ಕಳೆದ ಆರು ತಿಂಗಳಿಂದ ಲೋ ಬಿಪಿ ಹಾಗೂ ಹೈ ಶುಗರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ

ಜೈಲಿನಲ್ಲಿದ್ದ ಉಗ್ರ ಅನಾರೋಗ್ಯದಿಂದ ಸಾವು Read More »

error: Content is protected !!
Scroll to Top