ನಾಳೆ (ಜೂ.26) : ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ

ಪುತ್ತೂರು: ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ ಜು.26 (ನಾಳೆ) ಗುರುವಾರ ಜೈನ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಸಭೆಯಲ್ಲಿ ವಾರ್ಷಿಕ ವರದಿ ವಾಚನ,  2023-24ನೇ ಸಾಲಿನ ಹಣಕಾರು ವರದಿಗಳ ಅಂಗೀಕಾರ, ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಲಾಗುವುದು. ಮಹಾಸಭೆಯಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್‍.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜೂ.26) : ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ Read More »

ಉಗ್ರವಾದದ ಬಗ್ಗೆ ದ್ವಿಮುಖ ನೀತಿ ಕೈ‌ಬಿಡುವಂತೆ ಅಜಿತ್ ದೋವಲ್ ಒತ್ತಾಯ

ನವದೆಹಲಿ: ಉಗ್ರವಾದವನ್ನು ಎದುರಿಸುವ ವಿಚಾರದಲ್ಲಿ ದ್ವಂದ್ವ ನೀತಿಯನ್ನು ಕೈ ಬಿಡಬೇಕು ಎಂದು ಶಾಂಘೈ ಸಹಕಾರ ಸಂಸ್ಥೆಯ ಸದಸ್ಯರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರು ಒತ್ತಾಯಿಸಿದ್ದಾರೆ. ಬೀಜಿಂಗ್‌ನಲ್ಲಿ ನಡೆದ ಎಸ್‌ಸಿಒ ಭದ್ರತಾ ಮಂಡಳಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ಉಗ್ರವಾದಕ್ಕೆ ಸಂಬಂಧಿಸಿದ ಹಾಗೆ ಅದರ ಅಪರಾಧಿಗಳು ಮತ್ತು ಅವರಿಗೆ ಸಹಕಾರ ನೀಡುವವರನ್ನೇ ಹೊಣೆ ಮಾಡಬೇಕು. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈಗಾಗಲೇ ಪಟ್ಟಿ ಮಾಡಿರುವ ಉಗ್ರ ಗುಂಪುಗಳಿಂದ ಬರುವ ನಿರಂತರ ಬೆದರಿಕೆಗಳ ಬಗೆಯೂ ಅವರು ಆತಂಕ

ಉಗ್ರವಾದದ ಬಗ್ಗೆ ದ್ವಿಮುಖ ನೀತಿ ಕೈ‌ಬಿಡುವಂತೆ ಅಜಿತ್ ದೋವಲ್ ಒತ್ತಾಯ Read More »

ಮದುಗೆ ಒಪ್ಪದಿದ್ದಕ್ಕೆ ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಯುವತಿಯ ಹತ್ಯೆ

ನವದೆಹಲಿ : ಮದುವೆಗೆ ಒಪ್ಪದ ಹಿನ್ನಲೆ ಅನ್ಯಕೋಮಿ ವ್ಯಕ್ತಿಯೋರ್ವ ಬುರ್ಖಾ ಧರಿಸಿಕೊಂಡು ಮನೆಗೆ ನುಗ್ಗಿ ಯುವತಿಯನ್ನು 5ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಡೆದಿದೆ. ನೇಹಾ ಮಹಡಿಯಿಂದ ಬಿದ್ದು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷದ ಹಿಂದೆ ಉತ್ತರ ಪ್ರದೇಶ ಮೂಲದ ತೌಫಿಕ್ ಎಂಬಾತನ ಪರಿಚಯವಾಗಿತ್ತು. ಅಲ್ಲದೇ ಆರೋಪಿ ತೌಫಿಕ್ ದೆಹಲಿಯ ಮಂಡೋಲಿಯಲ್ಲಿ ಕೆಲಸ ಮಾಡುತ್ತಿದ್ದ. ನೇಹಾ ಹಾಗೂ ತೌಫಿಕ್ ಆಗಾಗ ಭೇಟಿಯಾಗುತ್ತಿದ್ದರು, ಅಲ್ಲದೇ ತೌಫಿಕ್ ನನ್ನು ಅಣ್ಣ ಎಂದು ಕರೆಯುತ್ತಿದ್ದಳು ಅಷ್ಟೇ

ಮದುಗೆ ಒಪ್ಪದಿದ್ದಕ್ಕೆ ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಯುವತಿಯ ಹತ್ಯೆ Read More »

ಜೂ.27 : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಜು.27 ಶುಕ್ರವಾರ ಬೆಳಗ್ಗೆ 10.30 ಕ್ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ನಡೆಯಲಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್‍ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‍ ಸದಸ್ಯ ಕಿಶೋರ್‍ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷೆ ಲೀಲಾವತಿ

ಜೂ.27 : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ Read More »

ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ: ಕಾರಣ ಇಲ್ಲಿದೆ

ಮೈಸೂರು: ಕೆಆರ್‌ ಎಸ್ ಡ್ಯಾಮ್‌ ನ ಕೆಳಗಿರುವ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಹದ ಭೀತಿಯಿಂದ ಈ ಕ್ರಮಕ್ಕೆ ಶ್ರೀರಂಗಪಟ್ಟಣ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ, ಘೋಸಾಯ್ ಘಾಟ್‌ಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹಾಕಲಾಗಿದೆ. ಹಾಗೆಯೇ ಕಾವೇರಿ ತಟದಲ್ಲಿ ನಡೆಸುವ ಪಿಂಡ ಪ್ರಧಾನ ಕಾರ್ಯಕ್ಕೂ ನಿರ್ಬಂಧ ಅನ್ವಯವಾಗುತ್ತದೆ. ಕಾವೇರಿ ನದಿಯ ಅಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನೂ ನಿಯೋಜನೆ ಮಾಡಲಾಗಿದೆ. ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ

ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ: ಕಾರಣ ಇಲ್ಲಿದೆ Read More »

ಸಂಪಾಜೆಯಲ್ಲಿ ಕಾರಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ

ಸುಳ್ಯ: ಚಲಿಸುತ್ತಿದ್ದ ಕಾರೊಂದರ ಮೇಲೆ ಮರದ ಕೊಂಬೆ ಮುರಿದು ಬಿದ್ದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮರದ ಕೊಂಬೆ ವಿನಯ್ ಎಂಬುವವರು ಮಾರುತಿ 800 ಕಾರಿನ ಮೇಲೆ ಬಿದ್ದಿದೆ. ಇದೇ ಸ್ಥಳದಿಂದ ಸ್ವಲ್ಪ ದೂರದಲ್ಲೇ ವಿದ್ಯಾರ್ಥಿಗಳು ಪ್ರತಿನಿತ್ಯ ಮುಂಜಾನೆ ಆಟೋ ಹತ್ತುತ್ತಿದ್ದು ಅಲ್ಲಿಯೂ ಮರದ ಕೊಂಬೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಈ ಸಮಯದಲ್ಲಿ ಅವರು ಆಟೋ ಹತ್ತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕೊಂಬೆ ಮುರಿದ ಮರಗಳು ಖಾಸಗಿ ಜಾಗದೊಳಗಿದ್ದು, ಇದನ್ನು ತೆರವು ಮಾಡಲು ಕೆಲವು ನಿಯಮಗಳಿವೆ ಎಂದು

ಸಂಪಾಜೆಯಲ್ಲಿ ಕಾರಿನ ಮೇಲೆ ಮುರಿದು ಬಿದ್ದ ಮರದ ಕೊಂಬೆ Read More »

ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ : ಪೂರ್ವಭಾವಿ ಸಭೆ

ಪುತ್ತೂರು: ಉಡುಪಿ ಜಿಲ್ಲೆಯ ಕಟಪಾಡಿ ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜು.10ರಿಂದ ಪಡಕುತ್ಯಾರು ಸರಸ್ವತೀ ಮಂದಿರದಲ್ಲಿ ಜರಗಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಮಂಗಳವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಪುತ್ತೂರು ಸಂಘ ಸಂಸ್ಥೆಗಳಿಗೆ ಆಮಂತ್ರಣ ಪತ್ರ ವಿತರಣೆ ನೀಡುವ ಕುರಿತು ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಶ್ರೀಗುರುಗಳಿಗೆ ಪಾದುಕೆಯ ರಜತ ಹರಿವಾಣ ಸಮರ್ಪಣೆ ಮಾಡುವ ಕುರಿತು ನಿರ್ಣಯಿಸಲಾಯಿತು.

ಶ್ರೀಮತ್ ಜಗದ್ಗುರು ಅನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 21ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ : ಪೂರ್ವಭಾವಿ ಸಭೆ Read More »

ವಿವಿಧ ಆ್ಯಪ್‍ ಗಳಿಂದ ಸಾಲ : ಆರ್ಥಿಕ ಸಮಸ್ಯೆಯಿಂದ ಯುವಕ ಆತ್ಮಹತ್ಯೆ

ಮಂಗಳೂರು: ವಿವಿಧ ಆ್ಯಪ್‌ ಗಳ ಸಾಲಗಳಿಂದ ಬೇಸತ್ತು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕೋಡಿಕಲ್ ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ. ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ

ವಿವಿಧ ಆ್ಯಪ್‍ ಗಳಿಂದ ಸಾಲ : ಆರ್ಥಿಕ ಸಮಸ್ಯೆಯಿಂದ ಯುವಕ ಆತ್ಮಹತ್ಯೆ Read More »

ನಭಕ್ಕೆ ಚಿಮ್ಮಿದ ಶುಭಾಂಶು ಶುಕ್ಲ ರಾಕೆಟ್‌ : ಮಹತ್ವಾಕಾಂಕ್ಷಿ ಆಕ್ಸಿಯಮ್-‌4 ಗಗನಯಾತ್ರೆಗೆ ಚಾಲನೆ

ಜಗತ್ತಿನಾದ್ಯಂತ ಹರ್ಷೋದ್ಗಾರ ಫ್ಲೋರಿಡಾ: ಮಹತ್ವಾಕಾಂಕ್ಷಿ ಆಕ್ಸಿಯಮ್-‌4 ಬಾಹ್ಯಾಕಾಶ ಯೋಜನೆಗೆ ಅಧಿಕೃತ ಚಾಲನೆ ದೊರೆತಿದೆ. ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್-‌9 ರಾಕೆಟ್‌ನಲ್ಲಿ ನಭಕ್ಕೆ ಚಿಮ್ಮಿದೆ. ಈ ಮೂಲಕ ಭಾರತದ ಬಾಹ್ಯಾಕಾಶ ಪರಿಕ್ರಮದಲ್ಲಿ ಹೊಸದೊಂದು ಮೈಲುಗಲ್ಲು ಸ್ಥಾಪನೆಯಾಗಿದೆ. ಆರು ಸಲ ಮುಂದೂಡಿಕೆಯಾಗಿದ್ದ ಶುಭಾಂಶು ಶುಕ್ಲ ಗಗನಯಾನ ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಯಶಸ್ವಿಯಾಗಿ ನಡೆಯಿತು. ಇದನ್ನು ನೋಡಿ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಜನರು

ನಭಕ್ಕೆ ಚಿಮ್ಮಿದ ಶುಭಾಂಶು ಶುಕ್ಲ ರಾಕೆಟ್‌ : ಮಹತ್ವಾಕಾಂಕ್ಷಿ ಆಕ್ಸಿಯಮ್-‌4 ಗಗನಯಾತ್ರೆಗೆ ಚಾಲನೆ Read More »

ಇಸ್ರೇಲ್‌ಗೆ ನೆರವಾದ ಮೂವರನ್ನು ನೇಣಿಗೇರಿಸಿದ ಇರಾನ್‌

ಸಮರ ವಿರಾಮದ ಬೆನ್ನಿಗೆ ದೇಶದ್ರೋಹಿಗಳ ಬೇಟೆ; 700 ಮಂದಿ ಸೆರೆ ಟೆಹ್ರಾನ್‌ : ಸಮರ ವಿರಾಮ ಜಾರಿಗೆ ಬಂದ ಮರುದಿನವೇ ಇರಾನ್‌ ತನ್ನಲ್ಲಿರುವ ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ ಶುರುಮಾಡಿದ್ದು, ಇಸ್ರೇಲ್‌ ಪರ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಮೂವರನ್ನು ನೇಣಿಗೇರಿಸಿದೆ. ಇಸ್ರೇಲ್‌ ಮತ್ತು ಇರಾನ್‌ ನಡುವೆ 12 ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಶಾಂತಿ ಮಾತುಕತೆಯ ಬಳಿಕ ನಿನ್ನೆ ಕೊನೆಗೊಂಡಿದೆ. ಇದರ ಬೆನ್ನಿಗೆ ಇರಾನ್‌ ಸರ್ಕಾರ ಇಸ್ರೇಲ್‌ಗೆ ನೆರವಾಗಿರುವವರ ಬೇಟೆಯಾಡಲು ಪ್ರಾರಂಭಿಸಿದೆ. ನಿನ್ನೆಯೇ ಇಸ್ರೇಲ್‌ನ ಬೇಹುಪಡೆ ಮೊಸಾದ್‌ಗೆ ನೆರವಾದ

ಇಸ್ರೇಲ್‌ಗೆ ನೆರವಾದ ಮೂವರನ್ನು ನೇಣಿಗೇರಿಸಿದ ಇರಾನ್‌ Read More »

error: Content is protected !!
Scroll to Top