ಪಾಕಿಸ್ತಾನಕ್ಕೆ ಸಿಂಧೂ ನದಿ ನೀರನ್ನು ಬಿಡುವ ಮಾತೇ ಇಲ್ಲ : ಅಮಿತ್ ಶಾ

ನವದೆಹಲಿ: ಪಾಕಿಸ್ತಾನದ ಜೊತೆಗಿನ ಸಿಂಧೂ ಜಲ ಒಪ್ಪಂದ ಭಾರತಕ್ಕೆ ನ್ಯಾಯಸಮ್ಮತವಲ್ಲ. ಪಾಕ್ ಜೊತೆ ಈ ಒಪ್ಪಂದವನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ತಿಂಗಳು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ‌ ಉಗ್ರ ಕೃತ್ಯ ನಡೆಸಿದ್ದ ಪಾಕ್‌ ಗೆ ತಕ್ಕ ಶಾಸ್ತಿ ಮಾಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಂಧೂ ಜಲ ಒಪ್ಪಂದವನ್ನು ಅಮಾನತು ಮಾಡಿತ್ತು. ಈ ಬಗ್ಗೆ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಶಾ ಸ್ಪಷ್ಟಪಡಿಸಿದ್ದು, ಸಿಂಧೂ […]

ಪಾಕಿಸ್ತಾನಕ್ಕೆ ಸಿಂಧೂ ನದಿ ನೀರನ್ನು ಬಿಡುವ ಮಾತೇ ಇಲ್ಲ : ಅಮಿತ್ ಶಾ Read More »

ಗ್ರಾಮ ಪಂಚಾಯತ್‌ ಸಭೆಯಲ್ಲಿ ತುಳುವಿಗೆ ನಿಷೇಧ ಆದೇಶ ವಾಪಸ್‌

ತುಳು ಭಾಷಿಕರ ಆಕ್ರೋಶಕ್ಕೆ ಮಣಿದು ಸುತ್ತೋಲೆ ವಾಪಸ್‌ ತೆಗೆದುಕೊಂಡ ಜಿ.ಪಂ. ಮಂಗಳೂರು: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡಬಾರದು ಎಂದು ನೀಡಿದ್ದ ಸುತ್ತೋಲೆಯನ್ನು ತುಳುವರ ಆಕ್ರೋಶಕ್ಕೆ ಮಣಿದು ಜಿಲ್ಲಾ ಪಂಚಾಯತ್‌ ವಾಪಾಸು ತೆಗೆದುಕೊಂಡಿದೆ. ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆಯಲ್ಲಿ ಚರ್ಚೆ ಮಾಡಬಾರದು. ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿ ಜಿಲ್ಲಾ ಪಂಚಾಯತ್‌ ಹೊರಡಿಸಿದ ಸುತ್ತೋಲೆಗೆ ತುಳುವರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸಂಸದರಾದ

ಗ್ರಾಮ ಪಂಚಾಯತ್‌ ಸಭೆಯಲ್ಲಿ ತುಳುವಿಗೆ ನಿಷೇಧ ಆದೇಶ ವಾಪಸ್‌ Read More »

ಇರಾನ್‌ನ ಮೂರು ನ್ಯೂಕಿಯರ್‌ ಸ್ಥಾವರಗಳನ್ನು ಧ್ವಂಸ ಮಾಡಿದ ಅಮೆರಿಕ

ಇರಾನ್‌-ಇಸ್ರೇಲ್‌ ಯುದ್ಧಕ್ಕೆ ದೊಡ್ಡಣ್ಣನ ದಿಢೀರ್‌ ಎಂಟ್ರಿ ; ಬದಲಾಯಿತು ಯುದ್ಧದ ಗತಿ ಟೆಹ್ರಾನ್‌: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಅಮೆರಿಕ ದಿಢೀರ್‌ ಎಂದು ಎಂಟ್ರಿ ಕೊಟ್ಟಿದ್ದು, ಭಾನುವಾರ ನಸುಕಿನ ಹೊತ್ತು ಇರಾನ್​ನ ಮೂರು ಪರಮಾಣು ಸ್ಥಾವರಗಳನ್ನು ಧ್ವಂಸ ಮಾಡಿದೆ. ಫೋರ್ಡೋ, ನತಾಂಝ್‌ ಮತ್ತು ಎಸ್ಪಹಾನ್ ಸ್ಥಾವರಗಳ ಮೇಲೆ ಅಮೆರಿಕ ದಾಳಿ ಮಾಡಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ಬಹಿರಂಗಪಡಿಸಿದ್ದಾರೆ. ಇತ್ತ ಕೆರಳಿ ಕೆಂಡವಾಗಿರುವ ಇರಾನ್​ ನೀವು ಪ್ರಾರಂಭಿಸಿದ್ದೀರಿ, ಅದನ್ನು ನಾವು ಕೊನೆಗೊಳಿಸುತ್ತೇವೆ

ಇರಾನ್‌ನ ಮೂರು ನ್ಯೂಕಿಯರ್‌ ಸ್ಥಾವರಗಳನ್ನು ಧ್ವಂಸ ಮಾಡಿದ ಅಮೆರಿಕ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವನ್ನು ಪಡೆಯಲು ಪ್ರಾಚೀನ ಮಾರ್ಗವಾಗಿದೆ. ’ಯೋಗ’ ಎಂಬ ಪದದ ಅರ್ಥ ಒಗ್ಗೂಡಿಸುವುದು. ಮನುಷ್ಯನು ತನ್ನ ಮನಸ್ಸು, ದೇಹ ಮತ್ತು ಆತ್ಮವನ್ನು ಒಟ್ಟಿಗೆ ತರಲು ಪ್ರಯತ್ನಿಸುವ ಪ್ರಕ್ರಿಯೆಯಾಗಿದೆ. ಹೀಗಾಗಿ ನಿರ್ಣಾಯಕ ಶಾಂತಿಯನ್ನು ಪಡೆಯುತ್ತದೆ ಎಂದು ಪುತ್ತೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗ ಶಿಕ್ಷಕಿ ಶರಾವತೀ ರವಿನಾರಾಯಣ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯಲ್ಲಿ ಅವರು ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು. ವೇದಿಕೆಯಲ್ಲಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಎನ್‌.ಸಿ.ಸಿ. ಆರ್ಮಿ ಮತ್ತು ನೇವಿ ಘಟಕಗಳು, ಎನ್‌.ಎಸ್‌.ಎಸ್‌. ಘಟಕಗಳು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್‌.ಸಿ.ಸಿ. ಘಟಕಗಳು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್‌.ಸಿ.ಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಧ್ಯೇಯವಾಕ್ಯದೊಂದಿಗೆಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಭಾಭವನದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಆಚರಿಸಲಾಯಿತು. ಮಾಯ್‌ ದೆ ದೇವುಸ್‌ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅ.ವಂ. ಲಾರೆನ್ಸ್ ಮಸ್ಕರೇನ್ಹಸ್ ಉದ್ಘಾಟಿಸಿ ಮಾತನಾಡಿ,

ಸಂತ ಫಿಲೋಮಿನಾ ಕಾಲೇಜಿನಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕುದ್ಮಾರು ಹಿ.ಪ್ರಾ.ಶಾಲೆಯಲ್ಲಿ ವಿದಾಯ ಕೂಟ, ಸನ್ಮಾನ ಮತ್ತು ಧ್ವಜ ಕಟ್ಟೆಯ ಲೋಕಾರ್ಪಣೆ

ಕುದ್ಮಾರು: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕುದ್ಮಾರು ಇಲ್ಲಿನ ಮುಖ್ಯ ಶಿಕ್ಷಕ ಕುಶಾಲಪ್ಪ ಬರೆಮೇಲು ಅವರು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಸನ್ಮಾನ ಮತ್ತು ವಿದಾಯ ಕೂಟವನ್ನು ಜೂ.21 ಶನಿವಾರ ಏರ್ಪಡಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾಮ ಪಂಚಾಯತ್’ನ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ಇವರು ವಹಿಸಿದ್ದರು. ಉದ್ಘಾಟಕರಾಗಿ ಕುಶಾಲಪ್ಪ ಬಿ. ಇವರ ಗುರುಗಳಾದ ರಾಮಚಂದ್ರ ಗೌಡ ಪೆರಿಂಜೆ ಇವರು ಆಗಮಿಸಿದ್ದರು. ಅಭಿನಂದನೆ ಸಲ್ಲಿಕೆಗಾಗಿ ಉದ್ದನೆಯ ಸಾಲು, ಹಾರ-ಶಾಲುಗಳ ರಾಶಿಗಳು ಅಭಿನಂದನಾ ಭಾಷಣಗೈದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್, ಪುತ್ತೂರು ಇದರ ಆಡಳಿತಾಧಿಕಾರಿ

ಕುದ್ಮಾರು ಹಿ.ಪ್ರಾ.ಶಾಲೆಯಲ್ಲಿ ವಿದಾಯ ಕೂಟ, ಸನ್ಮಾನ ಮತ್ತು ಧ್ವಜ ಕಟ್ಟೆಯ ಲೋಕಾರ್ಪಣೆ Read More »

ಸೌಜನ್ಯ ಹೆಸರಿನಲ್ಲಿ ಫೇಸ್ ಬುಕ್‍ ಖಾತೆ | ಲಕ್ಷಾಂತರ ವಂಚನೆ

ಮಂಗಳೂರು: ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಸ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ತ್‌ ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ

ಸೌಜನ್ಯ ಹೆಸರಿನಲ್ಲಿ ಫೇಸ್ ಬುಕ್‍ ಖಾತೆ | ಲಕ್ಷಾಂತರ ವಂಚನೆ Read More »

ನಾಳೆ (ಜೂ.22) : ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಕಡಬ: ತಾಲೂಕಿನ ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾ ಶತಮಾನೋತ್ಸವ ಸಮಿತಿ ನೇತೃತ್ವದಲ್ಲಿ ಸುಳ್ಯ ಕೆವಿಜಿ ದಂತ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದಲ್ಲಿ, ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್‍, ಸವಣೂರು ಸೇವಾ ಭಾರತಿ ಸಹಕಾರದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಜೂ.22 (ನಾಳೆ) ಭಾನುವಾರ ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಶಿಬಿರದಲ್ಲಿ ದಂತ

ನಾಳೆ (ಜೂ.22) : ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ Read More »

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಶನಿವಾರ ಆಚರಿಸಲಾಯಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯದ  ಅಂತರಾಷ್ಟ್ರೀಯ ಯೋಗ ದಿನವನ್ನು ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಆಯೋಜಿಸಲಾಗಿದ್ದು, ಗೇರುಕಟ್ಟೆ ಕ್ಷೀರಸಂಗಮ ಸಭಾಭವನ ಕಳಿಯ ಶಾಖಾ ಯೋಗ ಶಿಕ್ಷಕಿ ಪ್ರೇಮಲತಾ, ಸಹಶಿಕ್ಷಕ ಸುಕೇಶ್‍, ಸಂಚಾಲಕ ಕೇಶವ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯೋಗ ಬಂಧುಗಳಾದ ಅರುಣ, ಶುಭಮಂಗಳ, ಹರೀಶ ಮಾವಿನಕಟ್ಟೆ,

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಉಪಾಧ್ಯಕ್ಷೆ ನವ್ಯ, ಸದಸ್ಯರಾದ ಸುರೇಶ್ ಗಂಡಿ, ವಿನುತ ಅರ್ಚನಾ, ಚಂದ್ರಾವತಿ ಹರೀಶ್, ರಝಾಕ್, ಸಲೀಂ, ಫಾರೂಕ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ತಾರಾನಾಥ ಸವಣೂರು ಸ್ವಾಗತಿಸಿದರು. ಶಿಕ್ಷಕರಾದ ಹರಿಣಾಕ್ಷಿ ಎಂ., ಶೋಭಾ, ಶ್ರೀಲತಾ, ಕವಿತಾ, ಶಿಲ್ಪರಾಣಿ, ಸೌಮ್ಯ, ಸವಿತಾ, ಸಂಚನಾ, ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More »

error: Content is protected !!
Scroll to Top