ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ  ಬಾಲ ಕಾರ್ಮಿಕ ವಿರೋಧಿ ದಿನ ಆಚರಿಸಲಾಯಿತು. ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಪಿಎಂಶ್ರೀ ಆಚರಿಸಿ ಜಾಗೃತಿ ಮೂಡಿಸಲಾಯಿತು. ಇಲಾಖೆ ಒದಗಿಸಿದ ಪ್ರಮಾಣ ವಚನ ಬೋಧಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ತಾರಾನಾಥ ಸವಣೂರು, ಶಿಕ್ಷಕರಾದ ಹರಿಣಾಕ್ಷಿ, ಶೋಬಾ, ಶ್ರೀಲತಾ, ಕವಿತಾ, ಹೇಮಾವತಿ, ಶಿಲ್ಪರಾಣಿ, ಸೌಮ್ಯ, ಯೋಗ ಶಿಕ್ಷಕ ಹಿಮತ್ ಉಪಸ್ಥಿತರಿದ್ದರು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆ Read More »

ಮಂಗಳೂರು: ಅಂಗಡಿಯಲ್ಲಿ ಬೆಂಕಿ ಅವಘಡ

ಎರಡು ಅಂಗಡಿ, ಒಂದು ವಾಹನ ನಾಶ ಮಂಗಳೂರು : ಹಂಪನಕಟ್ಟೆಯ ಯೂನಿವರ್ಸಿಟಿ ಕಾಲೇಜ್ ಮುಂಭಾಗ ಗುಜರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ವ್ಯಾಪಿಸಿದೆ. ಎರಡು ಅಂಗಡಿ ಮತ್ತು ಒಂದು ಗೂಡ್ಸ್‌ ವಾಹನ ಬೆಂಕಿಯಿಂದ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಸೊತ್ತುಗಳಿಗೆ ಹಾನಿಯಾಗಿದೆ. ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಡಬೇಕಾಯಿತು.

ಮಂಗಳೂರು: ಅಂಗಡಿಯಲ್ಲಿ ಬೆಂಕಿ ಅವಘಡ Read More »

ಅಹಮದಾಬಾದ್‌ : ವಿಮಾನ ದುರಂತದಲ್ಲಿ ಮಡಿದವರ ಸಂಖ್ಯೆ 274ಕ್ಕೇರಿಕೆ

ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಅಹಮದಾಬಾದ್‌: ಇಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 274ಕ್ಕೇರಿದೆ. ವಿಮಾನದಲ್ಲಿದ್ದ 230 ಪ್ರಯಾಣಿಕರು, 10 ಗಗನಸಖಿಯರು ಮತ್ತು ಇಬ್ಬರು ಪೈಲಟ್‌ಗಳ ಪೈಕಿ ಬದುಕುಳಿದಿರುವುದು ಒಬ್ಬ ಪ್ರಯಾಣಿಕ ಮಾತ್ರ. ವಿಮಾನ ಅಹಮದಾಬಾದ್‌ನ ಮೇಘನಿ ನಗರದಲ್ಲಿರುವ ಬಿ.ಜೆ.ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿದ ಪರಿಣಾಮ ಇನ್ನಷ್ಟು ಸಾವುಗಳು ಸಂಭವಿಸಿವೆ. ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ. ಮೇಘನಿ ನಗರದಲ್ಲಿ

ಅಹಮದಾಬಾದ್‌ : ವಿಮಾನ ದುರಂತದಲ್ಲಿ ಮಡಿದವರ ಸಂಖ್ಯೆ 274ಕ್ಕೇರಿಕೆ Read More »

ರಂಜಿತಾ ಸಾವನ್ನು ಅಣಕಿಸಿದ್ದ ಡೆಪ್ಯುಟಿ ತಹಸೀಲ್ದಾರ್ ಅಮಾನತು

ವಿಮಾನ ದುರಂತದಲ್ಲಿ ಸಾವಿಗೀಡಾದ ರಂಜಿತಾ ಬಗ್ಗೆ ವ್ಯಂಗ್ಯವಾಗಿ ಕಮೆಂಟ್‌ ಕಾಸರಗೋಡು: ಅಹಮದಾಬಾದ್‌ ವಿಮಾನ ದುರಂತದಲ್ಲಿ ಕೇರಳದ ನರ್ಸ್‌ ರಂಜಿತಾ ಅವರ ಸಾವನ್ನು ವ್ಯಂಗ್ಯಮಾಡಿ ಅಣಕಿಸಿದ್ದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಎ.ಪವಿತ್ರನ್ ಅವರನ್ನು ಕೇರಳ ಸರ್ಕಾರ ಅಮಾನತು ಮಾಡಿದೆ. ಕೇರಳ ಸರ್ಕಾರಕ್ಕೆ ರಜೆ ಹಾಕಿ ಹೋಗಿದ್ದಕ್ಕೆ ರಂಜಿತಾಗೆ ಸಾವು ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪವಿತ್ರನ್ ವ್ಯಂಗ್ಯವಾಗಿ ಕಮೆಂಟ್ ಹಾಕಿದ್ದರು. ಇನ್ನೊಂದು ಪೋಸ್ಟ್‌ ಮಾಡಿ ಆಕೆ ಇನ್ನೂ ಎತ್ತರಕ್ಕೇರಲಿ ಎಂದು ಪವಿತ್ರನ್‌ ಕಮೆಂಟ್‌ ಮಾಡಿದ್ದರು. ಪವಿತ್ರನ್‌

ರಂಜಿತಾ ಸಾವನ್ನು ಅಣಕಿಸಿದ್ದ ಡೆಪ್ಯುಟಿ ತಹಸೀಲ್ದಾರ್ ಅಮಾನತು Read More »

ಇಂದು (ಜೂ.14): ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನವೀಕೃತ ಕಾರ್ಯಾಲಯ ‘‘ಹಿಂದವಿ’ ಉದ್ಘಾಟನೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನವೀಕೃತಗೊಂಡ ಕಾರ್ಯಕರ್ತರ ಕಾರ್ಯಾಲಯ ‘ಹಿಂದವಿ’ ಇಂದು ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ವಿವಿಧ ವೈದಿಕ ವಿಧಾನಗಳೊಂದಿಗೆ ಉದ್ಘಾನೆಗೊಳ್ಳಲಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಇಂದು (ಜೂ.14): ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನವೀಕೃತ ಕಾರ್ಯಾಲಯ ‘‘ಹಿಂದವಿ’ ಉದ್ಘಾಟನೆ Read More »

ಅಹಮದಾಬಾದ್ ವಿಮಾನ ದುರಂತದಲ್ಲಿ ಮಡಿದವರಿಗೆ ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯಿಂದ ಶ್ರದ್ಧಾಂಜಲಿ

ಪುತ್ತೂರು: ಗುಜರಾತ್ ನ ಅಹಮದಾಬಾದ್ ನಲ್ಲಿ ನಿನ್ನೆ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಮೌನ ಪ್ರಾರ್ಥನೆ ಮೂಲಕ ಸಂತಾಪ ಸೂಚಿಸಲಾಯಿತು. ವಿಮಾನ ದುರಂತದಲ್ಲಿ ಸುಮಾರು 242ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಮೃತ ಪಟ್ಟಿದ್ದು, ಅವರಿಗೆ ಇಂದು ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್, ಮುಖ್ಯ ಶಿಕ್ಷಕ ಪ್ರಸನ್ನ ಕೆ, ಶಿಕ್ಷಕರು -ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಅಹಮದಾಬಾದ್ ವಿಮಾನ ದುರಂತದಲ್ಲಿ ಮಡಿದವರಿಗೆ ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯಿಂದ ಶ್ರದ್ಧಾಂಜಲಿ Read More »

ದೈವ ನರ್ತಕನ ಹತ್ಯೆ : ಆರೋಪಿ ಚಿದಾನಂದ ಬಂಧನ

ಮುಳ್ಳೇರಿಯ: ಅದೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡೂರು ಉರುಡೂರು ಚಂದನಕ್ಕಾಡಿನ ದೈವ ಕಲಾವಿದ ಟಿ. ಸತೀಶನ್ ಯಾನೆ ಬಿಜು (46) ಅವರ ಸಾವು ಕೊಲೆಯೆಂದು ತನಿಖೆಯಲ್ಲಿ ತಿಳಿದುಬಂದಿದ್ದು, ಆರೋಪಿಯಾದ ಸ್ನೇಹಿತ ಚಿದಾನಂದನನ್ನು (32) ಪೊಲೀಸರು ಬಂಧಿಸಿದ್ದಾರೆ. ಚೋಮಣ್ಣ ಎಂಬವರ ಮನೆಯಲ್ಲಿ ಜೂ.9 ರಂದು ಚಿದಾನಂದ ಹಾಗೂ ಸತೀಶನ್‍ ಇಬ್ಬರು ಮದ್ಯ ಸೇವಿಸುತ್ತಿದ್ದರು. ಈ ನಡುವೆ ಇಬ್ಬರ ನಡುವೆ ಜಗಳ ಉಂಟಾಗಿದೆ. ಈ ಸಂದರ್ಭ ಚಿದಾನಂದ ಸತೀಶನ್ ಅವರನ್ನು ಕೆಳಗೆ ತಳ್ಳಿದ್ದಾನೆ. ಸತೀಶನ್‍ ತಲೆಗೆ ಗಾಯವಾಗಿದೆ.  ಸತೀಶನ್‍ ಮನೆಗೆ

ದೈವ ನರ್ತಕನ ಹತ್ಯೆ : ಆರೋಪಿ ಚಿದಾನಂದ ಬಂಧನ Read More »

ಭೀಕರ ವಿಮಾನ ಅವಘಡದಲ್ಲಿ ಏಕೈಕ ಪ್ರಯಾಣಿಕ ಬದುಕಿ ಉಳಿದದ್ದಾದರೂ ಹೇಗೆ?

ಇಲ್ಲಿದೆ ವಿಶ್ವಾಸ್ ಕುಮಾರ್ ರಮೇಶ್‌ಗೆ ಪುನರ್ಜನ್ಮ ಸಿಕ್ಕಿದ ಪೂರ್ಣ ಮಾಹಿತಿ ಅಹಮದಾಬಾದ್ : ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದಲ್ಲಿ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಬದುಕುಳಿದದ್ದಾರೂ ಹೇಗೆ ಎಂಬ ಪ್ರಶ್ನೆ ಎಲ್ಲರನ್ನು ಈಗ ಕಾಡುತ್ತಿದೆ. ಇಡೀ ವಿಮಾನ ಬೆಂಕಿಯುಂಡೆಯಂತಾಗಿ ಕಟ್ಟಡಕ್ಕೆ ಅಪ್ಪಳಿಸಿದ್ದು, 1.25 ಲಕ್ಷ ಲೀಟರ್‌ ಪೆಟ್ರೋಲ್‌ ಸ್ಫೋಟಗೊಂಡಿದೆ. ವಿಮಾನದಲ್ಲಿ ಇದ್ದವರು ಯಾರೂ ಬದುಕುಳಿಯುವ ಸಾಧ್ಯತೆಯಿಲ್ಲ ಎಂದೇ ಭಾವಿಸಿರುವಾಗ ವಿಶ್ವಾಸ್‌ ಕುಮಾರ್‌ ರಮೇಶ್‌ ಪವಾಡ ಎಂಬಂತೆ ಬದುಕುಳಿದಿದ್ದಾರೆ. ಅದೂ ಹೆಚ್ಚೇನೂ ಗಂಭೀರ ಗಾಯಗಳಿಲ್ಲದೆ. ಇದು

ಭೀಕರ ವಿಮಾನ ಅವಘಡದಲ್ಲಿ ಏಕೈಕ ಪ್ರಯಾಣಿಕ ಬದುಕಿ ಉಳಿದದ್ದಾದರೂ ಹೇಗೆ? Read More »

ಇಸ್ರೇಲ್‌ ದಾಳಿಗೆ ಇರಾನ್‌ ಸೇನೆಯ ದಂಡನಾಯಕನೇ ಬಲಿ: ಹಲವು ನ್ಯೂಕ್ಲಿಯರ್‌ ವಿಜ್ಞಾನಿಗಳೂ ಸಾವು

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ; ಭಾರತೀಯರಿಗೆ ಎಚ್ಚರಿಕೆ ಸಂದೇಶ ರವಾನೆ ಟೆಹ್ರಾನ್: ಇರಾನ್‌ನ ಪರಮಾಣು ಶಸ್ತ್ರಾಸ್ತ್ರ ಸ್ಥಾವರಗಳು ಹಾಗೂ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್‌ನ ಡಜನ್‌ಗಟ್ಟಲೆ ಜೆಟ್‌ಗಳು ಶುಕ್ರವಾರ ನಸುಕಿನ ಹೊತ್ತು ನಡೆಸಿದ ಭೀಕರ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ. ಇರಾನ್‌ ಈಗಾಗಲೇ ಪ್ರತಿಕಾರದ ನಡೆಯಿಟ್ಟಿದ್ದು, ಕ್ಷಿಪಣಿಗಳನ್ನು ಇಸ್ರೇಲ್‌ನತ್ತ ಹಾರಿಸಿದೆ. ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಮುಖ್ಯಸ್ಥ ಜನರಲ್ ಹೊಸೈನ್ ಸಲಾಮಿ, ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್‌ ಬಘೇರಿ, ಸಶಸ್ತ್ರ ಪಡೆಗಳ

ಇಸ್ರೇಲ್‌ ದಾಳಿಗೆ ಇರಾನ್‌ ಸೇನೆಯ ದಂಡನಾಯಕನೇ ಬಲಿ: ಹಲವು ನ್ಯೂಕ್ಲಿಯರ್‌ ವಿಜ್ಞಾನಿಗಳೂ ಸಾವು Read More »

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ತುರ್ತು ಭೂ ಸ್ಪರ್ಶ

ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ನವದೆಹಲಿ : ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಇನ್ನೂ ದೇಶ ಮಮ್ಮಲ ಮರುಗುತ್ತಾ ಇರುವಾಗಲೇ ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.ಥಾಯ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದ್ದು, ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಇದೀಗ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ತುರ್ತು ಭೂ ಸ್ಪರ್ಶ Read More »

error: Content is protected !!
Scroll to Top