ಬೈಕ್‌ಗಳು ಮುಖಾಮುಖಿ ಡಿಕ್ಕಿ : ಓರ್ವ ಮೃತ್ಯು, ಇಬ್ಬರಿಗೆ ಗಾಯ

ಸುಳ್ಯ: ಎರಡು ಬೈಕ್‍ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸವಾರ ಮೃತಪಟ್ಟು, ಇನ್ನಿಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ಪೆರಾಜೆಯಲ್ಲಿ ಭಾನುವಾರ ನಡೆದಿದೆ. ಕೇರಳದ ಪಯ್ಯನೂರಿನ ಕಾಂಟ್ರಾಕ್ಟರ್ ಮುಂದಾಥನ್ ಪ್ರದೀಪನ್ (52) ಬೈಕ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಸುಳ್ಯದಿಂದ ಸಂಪಾಜೆ ಕಡೆಗೆ ಹೋಗುತ್ತಿದ್ದ ಪ್ರದೀಪನ್ ಅವರ ಬೈಕ್ ಮತ್ತು ಕಲ್ಲುಗುಂಡಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸುಮಂತ್ ಮತ್ತು ರವಿಕುಮಾರ್ ಬರುತ್ತಿದ್ದ ಬೈಕ್‍ಗಳ ಮಧ್ಯೆ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. ಇನ್ನೊಂದು ಬೈಕಿನಲ್ಲಿದ್ದ ಕಲ್ಲುಗುಂಡಿಯ ಸುಮಂತ್ ಮತ್ತು […]

ಬೈಕ್‌ಗಳು ಮುಖಾಮುಖಿ ಡಿಕ್ಕಿ : ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಭಟ್ಕಳದಲ್ಲಿ ಮುರಿನ ಕಟ್ಟೆ ವಿವಾದ : ಮುಸ್ಲಿಮರಿಂದ ಪೊಲೀಸರ ಮೇಲೆ ಹಲ್ಲೆ ಆರೋಪ

ಹೆದ್ದಾರಿ ವಿಸ್ತರಣೆಗಾಗಿ ತೆರವುಗೊಂಡಿದ್ದ ಧಾರ್ಮಿಕ ಮಹತ್ವದ ಮುರಿನ ಕಟ್ಟೆ ನಿರ್ಮಾಣ ವಿವಾದ ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಧಾರ್ಮಿಕ ಮಹತ್ವ ಇರುವ ಮುರಿನ ಕಟ್ಟೆ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರಿವಿವಾದ ಸೃಷ್ಟಿಯಾಗಿ ಕೋಮುಸೂಕ್ಷ್ಮ ಪರಿಸ್ಥಿತಿ ನೆಲೆಸಿದೆ. ಮುಸ್ಲಿಂ ಸಂಘಟನೆಯೊಂದರ ಪ್ರಮುಖರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಉದ್ವಿಗ್ನ ಘಟನೆ ಭಾನುವಾರ ರಾತ್ರಿ ನಡೆದಿದೆ. ಭಟ್ಕಳದ ಜಾಗಟೆ ಕಟ್ಟೆ ಎಂಬಲ್ಲಿದ್ದ ಐತಿಹಾಸಿಕ ಮುರಿನ ಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಇತ್ತೀಚೆಗೆ ಹಿಂದೂ

ಭಟ್ಕಳದಲ್ಲಿ ಮುರಿನ ಕಟ್ಟೆ ವಿವಾದ : ಮುಸ್ಲಿಮರಿಂದ ಪೊಲೀಸರ ಮೇಲೆ ಹಲ್ಲೆ ಆರೋಪ Read More »

ವೃದ್ಧೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಬರೋಬ್ಬರಿ 24 ಕೋ. ರೂ. ಲೂಟಿ

ಆಸ್ತಿ ಮಾರಿದ ಹಣ ಇರುವುದು ತಿಳಿದು ವೃದ್ಧೆಯನ್ನು ಬೆದರಿಸಿದ ಸೈಬರ್‌ ವಂಚಕರು ಬೆಂಗಳೂರು: ಮನಿ ಲಾಂಡರಿಂಗ್ ಬೆದರಿಕೆಯೊಡ್ಡಿ ವೃದ್ಧೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿದ ಸೈಬರ್ ವಂಚಕರು ಬರೋಬ್ಬರಿ 24 ಕೋಟಿ ರೂ. ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರ ನಿವಾಸಿ ಲಕ್ಷ್ಮೀ ರಾಮಮೂರ್ತಿ ಎಂಬವರನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ. ಆಸ್ತಿ ಮಾರಿದ್ದರಿಂದ ವೃದ್ಧೆಗೆ ಕೋಟ್ಯಂತರ ರೂ. ಹಣ ಬಂದಿತ್ತು. ಇವರ ಬ್ಯಾಂಕ್ ಟ್ರಾನ್ಸಾಕ್ಷನ್ ಬಗ್ಗೆ ಮಾಹಿತಿ ತಿಳಿದ ಸೈಬರ್ ವಂಚಕರು ಕಳೆದ ಜನವರಿಯಿಂದ ಮೇ ತಿಂಗಳವರೆಗೆ ಮನಿ

ವೃದ್ಧೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಬರೋಬ್ಬರಿ 24 ಕೋ. ರೂ. ಲೂಟಿ Read More »

ಕಾರ್ಮಿಕರ ವೇತನ ಶೇ.60 ಹೆಚ್ಚಳ!

ಅಸಂಘಟಿತ ವಲಯದ ಕಾರ್ಮಿಕರ ವೇತನ ಪರಿಷ್ಕರಿಸಿದ ಸರ್ಕಾರ ಬೆಂಗಳೂರು : ರಾಜ್ಯದ ಲಕ್ಷಾಂತರ ಕಾರ್ಮಿಕರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿರುವ ಕರ್ನಾಟಕ ಸರ್ಕಾರ ವಿವಿಧ 81 ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಶೇ.60ರಷ್ಟು ಭಾರಿ ಪ್ರಮಾಣದಲ್ಲಿ ಪರಿಷ್ಕರಿಸಿ ಹೆಚ್ಚಳ ಮಾಡಿದೆ. ಕಾರ್ಮಿಕ ಇಲಾಖೆ ಶುಕ್ರವಾರ ಈ ಪರಿಷ್ಕೃತ ಅಧಿಕೃತ ಆದೇಶ ಹೊರಡಿಸಿದ್ದು, ಅಸಂಘಟಿತ ಮತ್ತು ನಿರ್ದಿಷ್ಟ ವಲಯಗಳ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಇದೇ ಮೊದಲ ಬಾರಿಗೆ, ಈ

ಕಾರ್ಮಿಕರ ವೇತನ ಶೇ.60 ಹೆಚ್ಚಳ! Read More »

ಇಂದು ಬಿಜೆಪಿ ನಾಯಕರ ಮಹತ್ವದ ಸಭೆ

ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಆಗಮನ ಬೆಂಗಳೂರು: ಅಧ್ಯಕ್ಷರೂ ಆಯ್ಕೆಯೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸುವ ಸಲುವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಬೆಂಗಳೂರಿಗೆ ಆಗಮಿಸಿದ್ದಾರೆ. ನಿತಿನ್ ನಬಿನ್ ಶನಿವಾರ ತಡರಾತ್ರಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಬೆಂಗಳೂರಿಗೆ ಚೊಚ್ಚಲ ಭೇಟಿ ನೀಡಿದ್ದು, ವಿಮಾನ ನಿಲ್ದಾಣದಲ್ಲಿ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹಿರಿಯ ನಾಯಕ

ಇಂದು ಬಿಜೆಪಿ ನಾಯಕರ ಮಹತ್ವದ ಸಭೆ Read More »

ಶಾಲೆಗೆ ಕೇಸರಿ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ : ಮಧು ಬಂಗಾರಪ್ಪ ಎಚ್ಚರಿಕೆ

ನಾವು ಅನುಮತಿ ಕೊಟ್ಟಿರುವುದು ಹಿಜಾಬ್‌ಗೆ ಮಾತ್ರ ಎಂದ ಶಿಕ್ಷಣ ಸಚಿವ ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಜೂನ್ 1ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್

ಶಾಲೆಗೆ ಕೇಸರಿ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ : ಮಧು ಬಂಗಾರಪ್ಪ ಎಚ್ಚರಿಕೆ Read More »

7 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಪ್ಪಿನಂಗಡಿ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಠಾಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರಂ ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ

7 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ವೈಟ್‌ ಹೌಸ್‌ ಬಳಿ ಗುಂಡಿನ ದಾಳಿ : ಟ್ರಂಪ್‌ ಸೇಫ್‌

ಬಂದೂಕುಧಾರಿಯನ್ನು ಹೊಡೆದುರುಳಿದ ಭದ್ರತಾ ಸಿಬ್ಬಂದಿ ವಾಷಿಂಗ್‌ಟನ್ : ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸವಾದ ಶ್ವೇತಭವನದ ಬಳಿ ಗುಂಡಿನ ದಾಳಿ ನಡೆದಿದ್ದು, ಪೆನ್ಸಿಲ್ವೇನಿಯಾ ಅವೆನ್ಯೂ NW ಬಳಿ ಫೈರಿಂಗ್​ ನಡೆದಿದೆ. ಗುಂಡಿನ ದಾಳಿ ನಡೆದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲೇ ಇದ್ದರು. ​ಶ್ವೇತಭವನದ ಹೊರಗೆ ಶಂಕಿತ 20 ಸುತ್ತು ಗುಂಡು ಹಾರಿಸಿದ್ದು. ಅಮೆರಿಕದ ಭದ್ರತಾ ಪಡೆಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ. ಅಮೆರಿಕದ ಸೀಕ್ರೆಟ್ ಸರ್ವಿಸ್ ಶನಿವಾರ ತಡರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಸಂಜೆ ಸುಮಾರು 6

ವೈಟ್‌ ಹೌಸ್‌ ಬಳಿ ಗುಂಡಿನ ದಾಳಿ : ಟ್ರಂಪ್‌ ಸೇಫ್‌ Read More »

ದುಬಾರೆ ಪ್ರಕರಣ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ಮಡಿಕೇರಿ: ದುಬಾರೆಯ ಆನೆ ಕ್ಯಾಂಪಿನಲ್ಲಿ ಮಹಿಳೆ ಮತ್ತು ಸಾಕಾನೆಯೊಂದು ಮೃತಪಟ್ಟ ಪ್ರಕರಣದಲ್ಲಿ ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಉಪಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಸೋಮವಾರಪೇಟೆಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ., ಕುಶಾಲನಗರ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರಕ್ಷಿತ್ ಅವರ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಪ್ರಕರಣ ದಾಖಲು ಮಾಡಿರುವುದಾಗಿದೆ. ಕೆಲ ದಿನಗಳ ಹಿಂದೆ ದುಬಾರೆಯಲ್ಲಿ ಎರಡು ಆನೆಗಳ ನಡುವೆ ಭೀಕರ ಕಾದಾಟ ನಡೆದಿದ್ದು, ಇದರಲ್ಲಿ ತಮಿಳುನಾಡಿನ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.

ದುಬಾರೆ ಪ್ರಕರಣ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್ Read More »

ಡಾಕ್ಟರ್ ಮನೆಯಲ್ಲಿ ನಗದು ಕದ್ದ ‌ಕಳ್ಳ ಪೊಲೀಸರ ಬಲೆಗೆ

ಪುತ್ತೂರು: ಡಾಕ್ಟರ್ ಒಬ್ಬರ ಮನೆಯಿಂದ ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಬಪ್ಪಳಿಗೆಯ ಸಿಂಗಾಣಿ ನಿವಾಸಿ ಸುರೇಶ್(47) ಎಂದು ಗುರುತಿಸಲಾಗಿದೆ. ಸುರೇಶ್ ಉರ್ಲಾಂಡಿಯ ಸುಶ್ರುತ ಆಸ್ಪತ್ರೆಯ ಸಮೀಪದ ಡಾ. ವೆಂಕಟ್ರಮಣ ಭಟ್ ಅವರ ಮನೆಯ ಹೆಂಚು ಜಾರಿಸಿ, ಮನೆಯೊಳಗೆ ನುಗ್ಗಿ ನಗದು ಕಳ್ಳತನ ಮಾಡಿದ್ದ. ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆತನನ್ನು ಬಂಧಿಸಿರುವುದಾಗಿದೆ. ಸಿಸಿ ಕೆಮರಾ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯ ಸುಳಿವು ಪತ್ತೆ ಮಾಡಿ, ಆತನನ್ನು ಬಂಧಿಸಿರುವುದಾಗಿದೆ.

ಡಾಕ್ಟರ್ ಮನೆಯಲ್ಲಿ ನಗದು ಕದ್ದ ‌ಕಳ್ಳ ಪೊಲೀಸರ ಬಲೆಗೆ Read More »

error: Content is protected !!
Scroll to Top