ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸಂಯೋಜಕರಾಗಿ ಕುದ್ಮಾರಿನ ಡಾ. ಮೀರಾಮಣಿ ಎನ್. ಆಯ್ಕೆ

ಪುತ್ತೂರು: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್  ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಡಾ.ಮೀರಾಮಣಿಯವರು ಸಂಯೋಜಕರಾಗಿ “ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್ ಪ್ರೆಷನ್ಸ್: ಎಕ್ಸ್ ಪ್ಲೋರಿಂಗ್ ಸೌತ್ ಏಷಿಯಾಸ್ ಫೋಕ್ ಟ್ರೆಡಿಷನ್ಸ್ ಆಂಡ್ ಕಲ್ಚರಲ್ ಕಂಟಿನ್ಯೂಟಿ” ಗೆ ಆಯ್ಕೆಯಾಗಿದ್ದಾರೆ. ಅವರು ಸಮ್ಮೇಳನದಲ್ಲಿ “ಡಿಜಿಟಲ್ ಪ್ರಿಸರ್ವೇಶನ್ ಆಂಡ್ ಕಲ್ಚರಲ್ ಹೆರಿಟೇಜ್ ಇನ್ ಇಂಡಿಯಾ : ವಿತ್ ಸ್ಪೆಷಲ್ ರೆಫರೆನ್ಸ್ ಟು ಇನ್ಸ್ಟಿಟ್ಯೂಷನಲ್ ರೆಪೊಸಿಟರೀಸ್ ಇನ್ ಕರ್ನಾಟಕ ಸ್ಟೇಟ್” ಕುರಿತು […]

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸಂಯೋಜಕರಾಗಿ ಕುದ್ಮಾರಿನ ಡಾ. ಮೀರಾಮಣಿ ಎನ್. ಆಯ್ಕೆ Read More »

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಬೃಹತ್‌ ಯೋಜನೆ ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣ ಸಮಯವನ್ನು ಗಣನೀಯವಾಗಿ ಕಡಿಮೆಗೊಳಿಸಲಿರುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆಯನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆ ಶುರುವಾಗಿದೆ. ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್ ರಸ್ತೆ ನಿರ್ಮಾಣದ ಕುರಿತಂತೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌ Read More »

ಬಳ್ಳಾರಿಯ ಕಾಂಗ್ರೆಸ್‌ ಸಂಸದ ತುಕರಾಂ ಇ.ಡಿ. ವಶ?

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಳಿ ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್‌ಗೆ ಜಾರಿ ನಿರ್ದೇಶನಾಲಯ ಭಾರಿ ದೊಡ್ಡ ಶಾಕ್‌ ನೀಡಿದೆ. ಕಾಂಗ್ರೆಸ್‌ ಸಂಸದ ತುಕರಾಮ್‌ ಮತ್ತು ಮೂವರು ಶಾಸಕರ ಮನೆ ಮೇಲೆ ಇ.ಡಿ. ದಾಳಿಯಾಗಿದೆ. ತುಕರಾಂ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಬಳ್ಳಾರಿ ಚುನಾವಣೆಗೆ 21 ಕೋಟಿ ರೂ. ಬಳಸಿದ ಆರೋಪ ಸಂಸದ ತುಕಾರಾಂ ಮೇಲಿದೆ. ಇದು ವಾಲ್ಮೀಕಿ ನಿಗಮದ ಹಣ ಎನ್ನಲಾಗಿದೆ.

ಬಳ್ಳಾರಿಯ ಕಾಂಗ್ರೆಸ್‌ ಸಂಸದ ತುಕರಾಂ ಇ.ಡಿ. ವಶ? Read More »

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ : ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ ಗೆ ಬೆಳ್ಳಿ ಪದಕ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಡಿಸೆಂಬರ್ ತಿಂಗಳಿನಲ್ಲಿ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆ ಬರೆದಿದ್ದ 512 ಮಂದಿ ವಿದ್ಯಾರ್ಥಿಗಳಲ್ಲಿ 5ನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ, 2 ನೇ ತರಗತಿಯ ಚಿರಾಗ್ ಎಸ್ ಪಟ್ಟೆ,  1ನೇ ತರಗತಿಯ ಹರ್ಷಿಲ್ ಬಂಗೇರ ಎನ್ ಇಂಗ್ಲೀಷ್ ವಿಷಯದಲ್ಲಿ ಹಾಗೂ 2 ನೇ ತರಗತಿಯ ಶಾರ್ವಿ ಕೆ.ಎಚ್. ವಿಜ್ಞಾನ ವಿಷಯದಲ್ಲಿ ದ್ವಿತೀಯ ಹಂತದ

ಒಲಿಂಪಿಯಾಡ್ ಪರೀಕ್ಷೆ ಫಲಿತಾಂಶ : ಅಂಬಿಕಾ ಸಿ.ಬಿ.ಎಸ್.ಇ ಸಂಸ್ಥೆಯ ಚಿರಾಗ್‌ ಗೆ ಬೆಳ್ಳಿ ಪದಕ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದಿನಿಂದ ರನ್ಯಾ ರಾವ್‌ಗೆ ಐಟಿ ಡ್ರಿಲ್‌

ಜೈಲಿನಲ್ಲಿರುವ ರನ್ಯಾಳನ್ನು ತೀವ್ರ ವಿಚಾರಣೆಗೊಳಪಡಿಸಲಿರುವ ಐಟಿ ಇಲಾಖೆ ಬೆಂಗಳೂರು : ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ದೇಶಾದ್ಯಂತ ಸಂಚಲನ ಉಂಟು ಮಾಡಿದ್ದಚಿನ್ನ ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಈಗ ಆದಾಯ ಕರ ಇಲಾಖೆಯೂ ಮುಂದಾಗಿದೆ. ಈಗಾಗಲೇ ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಾಟ ಮಾಡುವಾಗ ಸಿಕ್ಕಿಬಿದ್ದಿರುವ ರನ್ಯಾ ರಾವ್‌ ಈಗಲೂ ಜೈಲಿನಲ್ಲಿ ಇದ್ದಾಳೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದಿನಿಂದ ರನ್ಯಾ ರಾವ್‌ಗೆ ಐಟಿ ಡ್ರಿಲ್‌ Read More »

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಸದಾನಂದ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ | ಸದಾನಂದ ಶೆಟ್ಟಿಯವರು ಅಹಂ ಇರದ ಸಜ್ಜನಿಕೆಯ ವ್ಯಕ್ತಿಯಾಗಿದ್ದರು : ಸಂಜೀವ ಮಠಂದೂರು | ಸದಾನಂದ ಶೆಟ್ಟಿಯವರು ಯುವಕರಿಗೆ ಪ್ರೇರಣಾದಾಯಿಯಾದ ಜೀವನ ನಡೆಸಿದವರು : ಸುನಿಲ್ ಕುಮಾರ್ ದಡ್ಡು

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಸದಾನಂದ ಶೆಟ್ಟಿಯವರು ಇತ್ತೀಚಿಗೆ ನಿಧನರಾಗಿದ್ದು, ಅವರಿಗೆ ಶ್ರದ್ಧಾಂಜಲಿ ಸಭೆ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಸಂಗಮ ಕೃಪಾ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು ಮಾತನಾಡಿ, ಸದಾನಂದ ಶೆಟ್ಟಿಯವರು ಯುವಕರಿಗೆ ಪ್ರೇರಣಾದಾಯಿಯಾದ ಜೀವನ ನಡೆಸಿದವರು, ಕಳೆದ ಅಲ್ಪ ಸಮಯದಲ್ಲಿ ಅವರ ಒಡನಾಟ ಇತ್ತು. ನಿಷ್ಠೆ, ಪ್ರಾಮಾಣಿಕತೆ ಹಾಗು ಬದ್ಧತೆ ಅವರಲ್ಲಿ ಸದಾ ಎದ್ದು ಕಾಣುತ್ತಿತ್ತು. ನಿವೃತ್ತಿ ಹೊಂದಿದ BSNL ಸಿಬ್ಬಂದಿಯಾಗಿದ್ದರು, ಎಲ್ಲಾ ವಯೋಮಾನದವರ ಜೊತೆ ಹಾಗೂ ಎಲ್ಲರಲ್ಲಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಸದಾನಂದ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ | ಸದಾನಂದ ಶೆಟ್ಟಿಯವರು ಅಹಂ ಇರದ ಸಜ್ಜನಿಕೆಯ ವ್ಯಕ್ತಿಯಾಗಿದ್ದರು : ಸಂಜೀವ ಮಠಂದೂರು | ಸದಾನಂದ ಶೆಟ್ಟಿಯವರು ಯುವಕರಿಗೆ ಪ್ರೇರಣಾದಾಯಿಯಾದ ಜೀವನ ನಡೆಸಿದವರು : ಸುನಿಲ್ ಕುಮಾರ್ ದಡ್ಡು Read More »

ಅಕ್ರಮ ಕೋಳಿ ಅಂಕ ಅಡ್ಡೆಗೆ ದಾಳಿ : ಮೂವರ ಬಂಧನ, ಸೊತ್ತುಗಳು ವಶಕ್ಕೆ

ಕಡಬ: ಅಕ್ರಮ ಕೋಳೀ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿ ನಡೆದಿದೆ. ಕಡಬ ನಿವಾಸಿಗಳಾದ ರಾಧಾಕೃಷ್ಣ (52) ಮೋಹನ್ ದಾಸ್ (48) ವೆಂಕಟರಮಣ (30) ಬಂಧಿತರು. ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ, ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ಮತ್ತು ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿದ್ದಾರೆ.

ಅಕ್ರಮ ಕೋಳಿ ಅಂಕ ಅಡ್ಡೆಗೆ ದಾಳಿ : ಮೂವರ ಬಂಧನ, ಸೊತ್ತುಗಳು ವಶಕ್ಕೆ Read More »

ಶುಭಾಂಶು ಶುಕ್ಲ ಗಗನಯಾತ್ರೆ ಮತ್ತೊಮ್ಮೆ ಮುಂದೂಡಿಕೆ

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಮುಂದೂಡಿಕೆ ಹೊಸದಿಲ್ಲಿ: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರ ಗಗನಯಾತ್ರೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಈ ಸಲ ಅವರು ಪ್ರಯಾಣಿಸಬೇಕಿದ್ದ ರಾಕೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಮುಂದೂಡಿಕೆಗೆ ಕಾರಣವಾಗಿದೆ. ಮಂಗಳವಾರಕ್ಕೆ ನಿಗದಿಯಾಗಿದ್ದ ಗಗನಯಾತ್ರೆ ಪ್ರತಿಕೂಲ ವಾತಾವರಣದ ಕಾರಣ ಬುಧವಾರಕ್ಕೆ ಮುಂದೂಡಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿ ಎರಡನೇ ಸಲ ಮುದೂಡಿಕೆಯಾಗಿದೆ. ಶುಭಾಂಶು ಶುಕ್ಲ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತೊಯ್ಯಬೇಕಿದ್ದ ಆ್ಯಕ್ಸಿಯಮ್-4 ಮಿಷನ್ ಉಡಾವಣೆಯನ್ನು ರಾಕೆಟ್‍ನಲ್ಲಿ ಕಂಡುಬಂದ ತಾಂತ್ರಿಕ ದೋಷದ

ಶುಭಾಂಶು ಶುಕ್ಲ ಗಗನಯಾತ್ರೆ ಮತ್ತೊಮ್ಮೆ ಮುಂದೂಡಿಕೆ Read More »

ಜಾತಿ ಗಣತಿ ಮರು ಸರ್ವೇ : ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಮಟ್ಟದಲ್ಲಾದ ಭಾರಿ ಹಿನ್ನಡೆ

ಪ್ರಬಲ ಜಾತಿಗಳ ವಿರೋಧಕ್ಕೆ ಮಣಿದು ಮರು ಜಾತಿ ಗಣತಿಗೆ ಸೂಚಿಸಿದ ಹೈಕಮಾಂಡ್‌ ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಜಾತಿ ಗಣತಿಗಾಗಿ ಮರಳಿ ಸರ್ವೇ ಮಾಡಲು ಸೂಚಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಾಗಿರುವ ಹಿನ್ನಡೆಯೆಂದೇ ಭಾವಿಸಲಾಗುತ್ತಿದೆ. ಸಿದ್ದರಾಮಯ್ಯನವರು ಹಳೆಯ ಜಾತಿಗಣತಿ ವರದಿಯನ್ನೇ ಯಥಾವತ್ತಾಗಿ ಜಾರಿಗೊಳಿಸಲು ಶತಾಯಗತಾಯ ಮುಂದಾಗಿದ್ದರು. ಡಿ.ಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು, ಒಕ್ಕಲಿಗ, ವೀರಶೈವ ಲಿಂಗಾಯತ ಸಮುದಾಯಗಳ ವಿರೋಧದ ನಡುವೆಯೂ ಸಿದ್ದರಾಮಯ್ಯನವರು 10 ವರ್ಷಗಳ ಹಿಂದಿನ ಜಾತಿಗಣತಿ ವರದಿಯನ್ನೇ ಜಾರಿಗೆ ತರಲು ಕಸರತ್ತು ನಡೆಸಿದ್ದರು. ಅದನ್ನು

ಜಾತಿ ಗಣತಿ ಮರು ಸರ್ವೇ : ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಮಟ್ಟದಲ್ಲಾದ ಭಾರಿ ಹಿನ್ನಡೆ Read More »

ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 8ರ ವಲಯ 2 ರ ಅಧ್ಯಕ್ಷರಾಗಿ ಚಂದ್ರಶೇಖರ ರೈ ನಂಜೆ ನಿಯುಕ್ತಿ

ಪುತ್ತೂರು: ಲಯನ್ಸ್ ಜಿಲ್ಲೆ 317.ಡಿ ಪ್ರಾಂತ್ಯ 8ರ ವಲಯ 2ರ ಅಧ್ಯಕ್ಷರಾಗಿ ಚಂದ್ರಶೇಖರ ರೈ ನಂಜೆ ಅವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಕುಡುಪಿ ಅರವಿಂದ ಶೆಣೈ ಅವರು ನಿಯುಕ್ತಿಗೊಳಿಸಿದ್ದಾರೆ. ಸುಳ್ಯ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರು, ಸುಳ್ಯ ಪಯಸ್ಸಿನಿ ಸೀನಿಯರ್ ಛೇಂಬರ್‌ನ ನಿಕಟ ಪೂರ್ವ ಅಧ್ಯಕ್ಷರು, ಸುಳ್ಯ ಪಯಸ್ಸಿನಿ ಜೇಸಿಸ್ ನ ಪೂರ್ವಾಧ್ಯಕ್ಷರು ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಸುಳ್ಯ ಡಿಜಿ ಪ್ಲಸ್‌ ಮಾಲಕರು. ಲಯನ್ಸ್ ಕ್ಲಬ್ ಸುಳ್ಯ, ಲಯನ್ಸ್ ಕ್ಲಬ್

ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 8ರ ವಲಯ 2 ರ ಅಧ್ಯಕ್ಷರಾಗಿ ಚಂದ್ರಶೇಖರ ರೈ ನಂಜೆ ನಿಯುಕ್ತಿ Read More »

error: Content is protected !!
Scroll to Top