ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ನೆಲ್ಯಾಡಿ ಶಾಖೆ 12ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಗಣಹೋಮ, ಲಕ್ಷ್ಮೀಪೂಜೆ
ನೆಲ್ಯಾಡಿ: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪ್ರಾಯೋಜಿತ ಪುತ್ತೂರು ಎಪಿಎಂಸಿ ರಸ್ತೆಯ ಮಣಾಯಿ ಆರ್ಚ್ ಬಿಲ್ಡಿಂಗ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ನೆಲ್ಯಾಡಿ ಶಾಖೆಯು ಜೂ.8ರಂದು ಯಶಸ್ವಿ 12ನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಜೂ.8ರಂದು ಬೆಳಿಗ್ಗೆ ನೆಲ್ಯಾಡಿ ಡೆಂಜ ಕಾಂಪ್ಲೆಕ್ಸ್ ನಲ್ಲಿರುವ ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ ನಡೆಯಿತು. ಹಾರ್ವಳ ಶ್ರೀ ಶಾಸ್ತರೇಶ್ವರ ದೇವಸ್ತಾನದ ಅರ್ಚಕ ಶ್ರೀಧರ ನೂಜಿನ್ನಾಯ ಅವರು ಪೂಜಾ ವಿಧಿವಿಧಾನ ನೆರವೇರಿಸಿದರು. ಬಳಿಕ ನಡೆದ ಸರಳದ ಸಮಾರಂಭದಲ್ಲಿ […]










