ಮಂಗಳೂರು : ರೈಲ್ವೆ ಹಳಿಯಲ್ಲಿ ಯುವಕ ಸಂಶಯಾಸ್ಪದವಾಗಿ ಸಾವು

ಮಂಗಳೂರು : ನಗರದ ಪಚ್ಚನಾಡಿ ಪ್ರದೇಶದ ರೈಲ್ವೆ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣ ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಲಿದೆ. […]

ಮಂಗಳೂರು : ರೈಲ್ವೆ ಹಳಿಯಲ್ಲಿ ಯುವಕ ಸಂಶಯಾಸ್ಪದವಾಗಿ ಸಾವು Read More »

ಅಪಘಾತದಲ್ಲಿ ಮೂವರು ಕಾರ್ಮಿಕ ಮಹಿಳೆಯರು ಸ್ಥಳದಲ್ಲೇ ಸಾವು

ಕ್ರೂಸರ್‌-ಕ್ಯಾಂಟರ್‌ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತ ಗದಗ: ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಗಜೇಂದ್ರಗಢದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತ ಹೊಸಮನಿ (48), ಮರಿಯಂಬೂ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣಕ್ಕೆ ಕಡಲೆ ಕೀಳಲು ಹೊರಟಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ

ಅಪಘಾತದಲ್ಲಿ ಮೂವರು ಕಾರ್ಮಿಕ ಮಹಿಳೆಯರು ಸ್ಥಳದಲ್ಲೇ ಸಾವು Read More »

ಸಾರ್ವಜನಿಕ ರಸ್ತೆಯನ್ನು ಮುಚ್ಚಿದ ಖಾಸಗಿ ವ್ಯಕ್ತಿ: ಸಾರ್ವಜನಿಕರ ಪರದಾಟ

ಪುತ್ತೂರು: ಖಾಸಗಿ ವ್ಯಕ್ತಿಯೆಬ್ಬರು ಸುಮಾರು 25 ವರ್ಷಗಳಿಂದ ಸಾರ್ವಜನಿಕವಾಗಿ ಬಳಕೆ ಮಾಡುತ್ತಿದ್ದ ರಸ್ತೆಯನ್ನೇ ಮುಚ್ಚಿದ್ದು, ಇದರಿಂದಾಗಿ ಎಂಡೋಸಲ್ಫಾನ್ ಪೀಡಿತ ಬಾಲಕನೊಬ್ಬ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗುವುದಕ್ಕೂ ಪರದಾಡಬೇಕಾದ ಸ್ಥಿತಿ ಕೊಡಿಪ್ಪಾಡಿಯ ಬಾಯಂಬೆಯಲ್ಲಿ ನಿರ್ಮಾಣವಾಗಿದೆ. ವ್ಯಕ್ತಿಯೊಬ್ಬರು ತಮ್ಮ ಜಮೀನನ್ನು ತುಂಡು ಭೂಮಿಯಾಗಿ ಪರಿವರ್ತಿಸಿ ಅನೇಕರಿಗೆ ಮಾರಾಟ ಮಾಡಿದ್ದರು. ಈ ಸಂದರ್ಭದಲ್ಲಿ ರಸ್ತೆಯನ್ನು ದಾಖಲೆಗಳಲ್ಲಿ ಸಾರ್ವಜನಿಕ ರಸ್ತೆ ಎಂಬುದಾಗಿ ತೋರಿಸಲಾಗಿತ್ತು. ಸ್ಥಳೀಯರು ಸಹ ಇದೇ ರಸ್ತೆಯನ್ನು ಕಳೆದ 25 ವರ್ಷಗಳಿಂದ ಬಳಕೆ ಮಾಡುತ್ತಿದ್ದರು. ಆದರೆ ಪ್ರಸ್ತುತ ಕಲ್ಲುಗಳನ್ನು ಕಟ್ಟಿ ಈ ರಸ್ತೆಯನ್ನು

ಸಾರ್ವಜನಿಕ ರಸ್ತೆಯನ್ನು ಮುಚ್ಚಿದ ಖಾಸಗಿ ವ್ಯಕ್ತಿ: ಸಾರ್ವಜನಿಕರ ಪರದಾಟ Read More »

ಸೊಸೆ ಮೇಲೆ ಮಾವನಿಂದ ಅನುಚಿತ ವರ್ತನೆ, ಹಲ್ಲೆ, ಬೆದರಿಕೆ: ದೂರು ದಾಖಲು

ಬಂಟ್ವಾಳ: ಅಕ್ರಮವಾಗಿ ಮನೆ ಪ್ರವೇಶಿಸಿ ಮಾವನೇ (ಗಂಡನ ತಂದೆ) ‌ಸೊಸೆಯೊಂದಿಗೆ ಅನುಚಿತವಾಗಿ ‌ವರ್ತಿಸಿ, ಹಲ್ಲೆ ನಡೆಸಿರುವ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ವೇಳೆ ಮಹಿಳೆ ಮಾವನಿಂದ ತಪ್ಪಿಸಿಕೊಂಡು ಹೊರಕ್ಕೆ ಓಡಿ ಬಂದಿದ್ದು, ಈ ವೇಳೆ ಪತಿಯೂ ಸಹ ಮಾವನ ಪರವಾಗಿಯೇ ಇದ್ದು, ಹಲ್ಲೆಗೊಳಗಾದ ಪತ್ನಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾನೆ. ಆ ಬಳಿಕ ಮಹಿಳೆಯ ಹೆತ್ತವರು ಆಕೆಗೆ ಸಂಪಾಜೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ

ಸೊಸೆ ಮೇಲೆ ಮಾವನಿಂದ ಅನುಚಿತ ವರ್ತನೆ, ಹಲ್ಲೆ, ಬೆದರಿಕೆ: ದೂರು ದಾಖಲು Read More »

ಯುವತಿ ನಾಪತ್ತೆ: ದೂರು ದಾಖಲು

ಉಪ್ಪಿನಂಗಡಿ: ಯುವತಿಯೊಬ್ಬಳು ಮಂಗಳವಾರ ಬೆಳಗ್ಗಿನ ಜಾವದಿಂದ ‌ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ಉರುವಾಲು ಗ್ರಾಮದ ಮಜಿಕುಡೇಲುವಿನಿಂದ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಸುಪ್ರಿತಾ(20) ಎಂದು ಗುರುತಿಸಲಾಗಿದೆ. ಸೋ‌ಮವಾರ ರಾತ್ರಿ ಎಂದಿನಂತೆ ಮಲಗಿದ್ದು, ಮಂಗಳವಾರ ಮುಂಜಾನೆ ಮನೆಯಲ್ಲಿರಲಿಲ್ಲ. ಮೊಬೈಲ್‌ಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಆ ಬಳಿಕ ಮೊಬೈಲ್ ಸ್ವಿಚ್‌ಆಫ್ ಆಗಿದೆ ಎಂದು ಅವರ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ‌ತಿಳಿಸಿದ್ದಾರೆ. ಕನ್ನಡ ಮತ್ತು ತುಳು ಭಾಷೆ ಬಲ್ಲವರಾಗಿದ್ದು, 10 ನೇ ತರಗತಿ ವರೆಗೆ ಶಿಕ್ಷಣ ಪಡೆದಿದ್ದಾರೆ. 4 ಅಡಿ 6

ಯುವತಿ ನಾಪತ್ತೆ: ದೂರು ದಾಖಲು Read More »

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

ಕಡಬ: ನಾಯಿ ಅಡ್ಡ ಬಂದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಪಂಜ ರಸ್ತೆಯ ಕೊಡಿಂಬಾಳ ಮಧುರ ಚೆಡವು ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ ಠಾಣಾ ಎ.ಎಸ್. ಐ. ಸೀತಾರಾಮ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಕಾರಿಗೆ ನಾಯಿ ಅಡ್ಡ ಬಂದಿದ್ದು, ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ‌ಸೀತಾರಾಮ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾಗಿ ತಿಳಿದು ಬಂದಿದೆ.

ನಾಯಿ ಅಡ್ಡ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು Read More »

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಜೊತೆ ಆಡುವುದಿಲ್ಲ : ಪಾಕಿಸ್ತಾನ ಅಧಿಕೃತ ಘೋಷಣೆ

ಬಾಂಗ್ಲಾದೇಶವನ್ನು ಬೆಂಬಲಿಸುವ ಸಲುವಾಗಿ ಭಾರತದ ಜೊತೆ ಆಡದಿರಲು ನಿರ್ಧಾರ ಇಸ್ಲಾಮಾಬಾದ್‌ : ಮುಂಬರುವ ಶನಿವಾರದಿಂದ ಪ್ರಾರಂಭವಾಗಲಿರುವ 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಫೆಬ್ರವರಿ 15ರಂದು ಭಾರತ–ಪಾಕ್ ನಡುವಿನ ಕ್ರಿಕೆಟ್ ಪಂದ್ಯ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ. ಪಾಕಿಸ್ತಾನದ ಸಂಸತ್ತಿನ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಝ್ ಷರೀಫ್, ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣಗಳನ್ನು ಸ್ಪಷ್ಟಪಡಿಸಿದ್ದಾರೆ.ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಜೊತೆ ಆಡುವುದಿಲ್ಲ : ಪಾಕಿಸ್ತಾನ ಅಧಿಕೃತ ಘೋಷಣೆ Read More »

ಸುಮಂತ್‌ ನಿಗೂಢ ಸಾವಿನ ಪ್ರಕರಣ : ವದಂತಿ ಹರಡಿದರೆ ಕಠಿಣ ಕ್ರಮ

ಆರೋಪಿಗಳ ಕುರಿತು ಊಹಾಪೋಹ ಹರಡದಂತೆ ಎಚ್ಚರಿಕೆ ನೀಡಿದ ಎಸ್‌ಪಿ ಬೆಳ್ತಂಗಡಿ: ಇಲ್ಲಿನ ಕಳಿಯದಲ್ಲಿ ನಡೆದ ಶಾಲಾ ಬಾಲಕ ಸುಮಂತ್ ಕೊಲೆ ಪ್ರಕರಣದ ಬಗ್ಗೆ ನಡೆದ ತನಿಖೆಯಲ್ಲಿ ಈವರೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ ವರದಿ ಬಂದಿಲ್ಲ, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು ಹರಡುವ ಕಾರ್ಯವನ್ನು ಮಾಡುತ್ತಿದ್ದಾರೆ ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು ಹಾಗೂ ವದಂತಿಗಳನ್ನು ಹರಡುವವರ ವಿರುದ್ಧ ಸೂಕ್ತ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜ.14ರಂದು ಬೆಳ್ತಂಗಡಿ ಪೊಲೀಸ್

ಸುಮಂತ್‌ ನಿಗೂಢ ಸಾವಿನ ಪ್ರಕರಣ : ವದಂತಿ ಹರಡಿದರೆ ಕಠಿಣ ಕ್ರಮ Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 8 ವರ್ಷ ಜೈಲು

ಕಳೆದ ವರ್ಷ ಬೆಳ್ತಂಗಡಿಯಲ್ಲಿ ಸಂಭವಿಸಿದ ಪ್ರಕರಣ ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿಯ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಲಯ 8 ವರ್ಷದ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಶಂಕರ ಗೌಡ ತನಗೆ ಪರಿಚಯವಿದ್ದ ಬಾಲಕಿಯ ಮನೆಗೆ ತೆರಳಿ ಅಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 8 ವರ್ಷ ಜೈಲು Read More »

ಸ್ಕೂಟಿಗೆ ಬಸ್‌ ಡಿಕ್ಕಿ : ಸಹಸವಾರೆ ಸ್ಥಳದಲ್ಲೇ ಸಾವು

ಯುವತಿಯ ಮೇಲೆ ಹರಿದು ಹೋದ ಬಸ್ಸಿನ ಚಕ್ರ ಮಂಗಳೂರು : ನಗರದ ನಂತೂರಿನಲ್ಲಿಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟಿ ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ

ಸ್ಕೂಟಿಗೆ ಬಸ್‌ ಡಿಕ್ಕಿ : ಸಹಸವಾರೆ ಸ್ಥಳದಲ್ಲೇ ಸಾವು Read More »

error: Content is protected !!
Scroll to Top