ಸರ್ಕಾರದ ಬೇಜವಾಬ್ದಾರಿಗೆ ಅಮಾಯಕರು ಬಲಿ : ನಳಿನ್‌ಕುಮಾರ್ ಕಟೀಲ್

ಮಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿರುವುದು ಘೋರ ದುರಂತವಾಗಿದ್ದು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಇದಕ್ಕೆ ಕಾರಣವಾಗಿದೆ ಎಂದು ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಸರ್ಕಾರದ ಭದ್ರತಾ ನಿರ್ಲಕ್ಷೃಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಯಾವುದೇ ಪೂರ್ವ ಸಿದ್ದತೆ ಇಲ್ಲದೆ ಕೇವಲ ಪ್ರಚಾರದ ಉದ್ದೇಶದಿಂದ ಕಾರ್ಯಕ್ರಮ ಏರ್ಪಡಿಸಿದ್ದು, ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ. ರಾಜ್ಯದ ಗೃಹ ಸಚಿವರು ಸಹಿತ ಪೂರ್ತಿ ಇಲಾಖೆ ವಿಫಲವಾಗಿದೆ […]

ಸರ್ಕಾರದ ಬೇಜವಾಬ್ದಾರಿಗೆ ಅಮಾಯಕರು ಬಲಿ : ನಳಿನ್‌ಕುಮಾರ್ ಕಟೀಲ್ Read More »

ಐಪಿಎಲ್‍  ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರೀ ಜನಸ್ತೋಮ | ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಹಲವರು ಕಾಲ್ತುಳಿತಕ್ಕೆ ಬಲಿ

ಬೆಂಗಳೂರು: 18ನೇ ಐಪಿಎಲ್‍ ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ ಆಗಿದ್ದು, ಈ ಸಂಬಂಧ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಯುತ್ತಿದ್ದಂತೆ ಭಾರೀ ಜನಸ್ತೋಮ ನೆರೆದಿದ್ದು, ಈ ಸಂದರ್ಭ ಕಾಲ್ತುಳಿತಕ್ಕೆ ಹಲವರು ಬಲಿಯಾಗಿದ್ದಾರೆ. ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ನೂಕುನುಗ್ಗಾಟದಲ್ಲಿ  ಕಾಲ್ತುಳಿತಕ್ಕೆ  15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಮಂದಿ ಅಭಿಮಾನಿಗಳು

ಐಪಿಎಲ್‍  ಫೈನಲ್‍ ನಲ್ಲಿ ಆರ್ ಸಿಬಿ ಚಾಂಪಿಯನ್ | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರೀ ಜನಸ್ತೋಮ | ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಹಲವರು ಕಾಲ್ತುಳಿತಕ್ಕೆ ಬಲಿ Read More »

ಬಹುನಿರೀಕ್ಷಿತ ಕಲ್ಲಡ್ಕ ಫ್ಲೈ ಓವರ್ ಸಂಚಾರಕ್ಕೆ ಮುಕ್ತ

ಬಂಟ್ವಾಳ: ಬಹುನಿರೀಕ್ಷೆಯ ಕಲ್ಲಡ್ಕ ಪ್ರೈ ಓವರ್ ಇಂದಿನಿಂದ ವಾಹನ ಸಂಚಾರಕ್ಕೆ ತೆರೆದುಕೊಂಡಿದ್ದು, ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಆಗಮಿಸುವ ವಾಹನಗಳು ಫೈ ಓವರ್ ಮೂಲಕ ಸಂಚರಿಸುತ್ತಿದೆ. ಇಂದು ಬೆಳಿಗ್ಗೆ 10.30 ಗಂಟೆಗೆ ಪ್ರೈ ಓವರ್ ಆರಂಭಿಕ ಭಾಗವಾದ ಪೂರ್ಲಿ ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಹಿರಿಯ ಮುದಾಳು, ಕಲ್ಲಡ, ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ, ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಫೈಓವರ್ ಸಂಚಾರವನ್ನು ಸ್ವಾಗತಿಸಿದ್ದಾರೆ. ಈ ಸಂದರ್ಭ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ,

ಬಹುನಿರೀಕ್ಷಿತ ಕಲ್ಲಡ್ಕ ಫ್ಲೈ ಓವರ್ ಸಂಚಾರಕ್ಕೆ ಮುಕ್ತ Read More »

ಪಾಕ್‌ ಪರ ಬೇಹುಗಾರಿಕೆ : ಇನ್ನೋರ್ವ ಯೂಟ್ಯೂಬರ್‌ ಅರೆಸ್ಟ್‌

ಸೆರೆಯಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಳ ಸ್ನೇಹಿತ ನವದೆಹಲಿ: ಪಾಕಿಸ್ತಾನ ಪರ ಗೂಢಚಾರಿಕೆ ಮಾಡಿ ಸೆರೆಯಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಳ ಸ್ನೇಹಿತನನ್ನು ಕೂಡ ಪೊಲೀಸರು ಇಂದು ಇದೇ ಆರೋಪದಲ್ಲಿ ಬಂಧಿಸಿದ್ದಾರೆ. ಈತನೂ ಯೂಟ್ಯೂಬರ್‌ ಆಗಿದ್ದಾನೆ ಮತ್ತು ಜ್ಯೋತಿ ಮಲ್ಹೋತ್ರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 11 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಜಾನ್‌ ಮಹಲ್‌ ಎಂಬ ಯೂ ಟ್ಯೂಬ್‌ ಚಾನೆಲ್‌ ನಡೆಸುತ್ತಿರುವ ಜಸ್ಬೀರ್‌ ಸಿಂಗ್‌ ಸೆರೆಯಾಗಿರುವ ಯೂಟ್ಯೂಬರ್‌. ಗೂಢಚಾರಿಕೆಗೆ ಸಂಬಂಧಿಸಿ ಸೆರೆಯಾಗಿರುವ ಎರಡನೇ ಯೂಟ್ಯೂಬರ್‌ ಈತ. ಗೂಢಚಾರಿಕೆಗೆ

ಪಾಕ್‌ ಪರ ಬೇಹುಗಾರಿಕೆ : ಇನ್ನೋರ್ವ ಯೂಟ್ಯೂಬರ್‌ ಅರೆಸ್ಟ್‌ Read More »

ಪುತ್ತೂರು ತಾಲೂಕಿನ ಆರು ಗ್ರಾಮಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಹಲವಾರು ಮನೆಗಳಿಗೆ ಹಾನಿ | ಮನೆಗಳಿಗೆ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ | ಮಾಧ್ಯಮದ ಮುಂದೆ ಕೇವಲ ಫೋಸ್‍ ನೀಡುತ್ತಿರುವ ಕ್ಷೇತ್ರದ ಶಾಸಕರು : ಪತ್ರಿಕಾಗೋಷ್ಠಿಯಲ್ಲಿ ಸುರೇಶ್‍ ಅತ್ರಮಜಲು ಆರೋಪ

ಪುತ್ತೂರು: ಕಳೆದ ವಾರ ಸುರಿದ ಭಾರೀ ಮಳೆಗೆ ಪುತ್ತೂರು ತಾಲೂಕಿನ ಕೋಡಿಂಬಾಡಿ, ಬೆಳ್ಳಿಪ್ಪಾಡಿ, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು ಗ್ರಾಮದಲ್ಲಿ ತೀವ್ರ ತರದ ಭೂಕುಸಿತ ಉಂಟಾಗಿದ್ದು, ಬೆಳ್ಳಿಪ್ಪಾಡಿ ಗ್ರಾಮದಲ್ಲಿ 5 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನಷ್ಟಕ್ಕೊಳಗಾದ ಮನೆಗಳಿಗೆ ಪರಿಹಾರ ಕೊಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ನಿಷ್ಟ್ರೀಯವಾಗಿದ್ದು, ಕ್ಷೇತ್ರದ ಶಾಸಕರು ಬೆಳ್ಳಿಪ್ಪಾಡಿಗೆ ಬಂದು ಮಾಧ್ಯಮದ ಮುಂದೆ ಪೋಸ್‍ ಕೊಡುವ ಕೆಲಸ ಮಾಡಿದ್ದಾರೆ ಹೊರತು ಪರಿಹಾರ ಕೊಡಿಸುವ ಕೆಲಸ ಈ ವರೆಗೆ ಮಾಡಿಲ್ಲ ಎಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯ

ಪುತ್ತೂರು ತಾಲೂಕಿನ ಆರು ಗ್ರಾಮಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಹಲವಾರು ಮನೆಗಳಿಗೆ ಹಾನಿ | ಮನೆಗಳಿಗೆ ಪರಿಹಾರ ನೀಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲ | ಮಾಧ್ಯಮದ ಮುಂದೆ ಕೇವಲ ಫೋಸ್‍ ನೀಡುತ್ತಿರುವ ಕ್ಷೇತ್ರದ ಶಾಸಕರು : ಪತ್ರಿಕಾಗೋಷ್ಠಿಯಲ್ಲಿ ಸುರೇಶ್‍ ಅತ್ರಮಜಲು ಆರೋಪ Read More »

ವ್ಯಾನಿನ ಮೇಲೆ ಉರುಳಿ ಬಿದ್ದ ಟ್ರಕ್‌ : 9 ಮಂದಿ ಸ್ಥಳದಲ್ಲೇ ಸಾವು

ಭೋಪಾಲ: ಸಿಮೆಂಟ್ ತುಂಬಿದ್ದ ಟ್ರಕ್ ವ್ಯಾನ್​ ಮೇಲೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಝಬುವಾ ಎಂಬಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ. ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಝಬುವಾ ಜಿಲ್ಲೆಯ ಮೇಘನಗರ ತಹಸಿಲ್​ನ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ಬೆಳಗಿನ ಜಾವ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ತಾತ್ಕಾಲಿಕ ರಸ್ತೆ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ಸಮತೋಲನ

ವ್ಯಾನಿನ ಮೇಲೆ ಉರುಳಿ ಬಿದ್ದ ಟ್ರಕ್‌ : 9 ಮಂದಿ ಸ್ಥಳದಲ್ಲೇ ಸಾವು Read More »

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಭುವನ್ ರೈಗೆ 1514 ನೇ ರ‍್ಯಾಂಕ್

ಪುತ್ತೂರು : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ. ಅಲ್ಲದೆ 11835 ನೇ ರ‍್ಯಾಂಕ್  (CRL) ಪಡೆದುಕೊಂಡಿದ್ದಾರೆ. ಅವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಭುವನ್ ರೈಗೆ 1514 ನೇ ರ‍್ಯಾಂಕ್ Read More »

ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು

ನೆರಳಿನಂತೆ ಬಂದು ಕಚ್ಚಿ ಕಣ್ಮರೆಯಾಗುತ್ತಿದೆ ಪ್ರಾಣಿ ಭೋಪಾಲ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕಚ್ಚಿ ಸಾಯಿಸಿದೆ. ಪ್ರಾಣಿಯಿಂದ ದಾಳಿಗೊಳಗಾದ ಎಲ್ಲರಿಗೂ ರೇಬಿಸ್ ಚುಚ್ಚುಮದ್ದನ್ನು ನೀಡಲಾಗಿತ್ತು. ಮೇ 5ರಂದು ಬೆಳಗಿನ ಜಾವ 1 ರಿಂದ 5 ಗಂಟೆ ನಡುವೆ ಈ ಘಟನೆ ನಡೆದಿದೆ. ಗ್ರಾಮದ 17 ಮಂದಿ ಒಂದೆಡೆ ಮಲಗಿದ್ದಾಗ ನಿಗೂಢ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ

ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು Read More »

ಪಾಕಿಸ್ತಾನದ ಇನ್ನೋರ್ವ ಉಗ್ರ ಮುಖಂಡ ಫಿನಿಷ್‌

ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದ ಉಗ್ರನ ನಿಗೂಢ ಸಾವು ಇಸ್ಲಾಮಾಬಾದ್ : ಭಾರತದ ವಿರುದ್ಧ ಸದಾ ವಿಷ ಕಾರುತ್ತಿದ್ದ ಜೈಶ್‌ ಎ ಮೊಹಮ್ಮದ್‌ ಉvಗ್ರ ಸಂಘಟನೆಯ ಕಮಾಂಡರ್‌ ಒಬ್ಬ ಪಾಕಿಸ್ತಾನದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿರುವ ಉಗ್ರ. ಈ ನಿಗೂಢ ಸಾವು ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದೆ. ಮೌಲಾನಾ ಅಬ್ದುಲ್ ಅಜೀಜ್ ಕಳೆದ ತಿಂಗಳು ಪಾಕಿಸ್ತಾನದಲ್ಲಿ ನಡೆದ ಜೈಶ್ ಸಭೆಯಲ್ಲಿ ಭಾರತದ ವಿರುದ್ಧ ವಿಷ ಕಾರಿ, ಭಾರತಕ್ಕೂ ಯುಎಸ್ಎಸ್ಆರ್ ಗತಿಯಾಗಲಿದೆ

ಪಾಕಿಸ್ತಾನದ ಇನ್ನೋರ್ವ ಉಗ್ರ ಮುಖಂಡ ಫಿನಿಷ್‌ Read More »

ಮಳೆಯ ಜತೆಗೆ ಬಿಸಿಲಿನ ವಾತಾವರಣ | ದಕ್ಷಿಣ ಕನ್ನಡದ ಗ್ರಾಮೀಣ ಭಾಗದಲ್ಲಿ ಶಂಕಿತ ಡೆಂಗ್ಯೂ ಪ್ರಕರಣದಲ್ಲಿ ಏರಿಕೆ

ಮಂಗಳೂರು: ಮಳೆಯ ಅಬ್ಬರ ನಿಲ್ಲುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣ ಏರಿಕೆಯಾಗಿದೆ. ಕೆಲ ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣ ಕಂಡು ಬರುತ್ತಿರುವುದೇ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣ ಏರಿಕೆಗೆ ಕಾರಣವಾಗಿದೆ. ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೂ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮ ಗಳನ್ನು ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದ್ದಾರೆ.ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಮಂಗಳವಾರ

ಮಳೆಯ ಜತೆಗೆ ಬಿಸಿಲಿನ ವಾತಾವರಣ | ದಕ್ಷಿಣ ಕನ್ನಡದ ಗ್ರಾಮೀಣ ಭಾಗದಲ್ಲಿ ಶಂಕಿತ ಡೆಂಗ್ಯೂ ಪ್ರಕರಣದಲ್ಲಿ ಏರಿಕೆ Read More »

error: Content is protected !!
Scroll to Top