ಎಸ್‍ ಡಿಪಿಐ ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ : ಅರುಣ್‍ ಕುಮಾರ್ ಪುತ್ತಿಲ

ಪುತ್ತೂರು: ಎಸ್‍ ಡಿಪಿಐ ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದು ಅರುಣ್‍ ಕುಮಾರ್‍ ಪುತ್ತಿಲ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತಿಚಿನ ಕೆಲವು ಘಟನೆಗಳು ಸಂಭವಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಕಾರ್ಯಕರ್ತರನ್ನೇ ಗುರಿಯಾಗಿಸಿ ಕೇಸ್ ಜಡಿಯುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆಯುತ್ತಿರುವುದು ಖಂಡನೀಯ ಎಂದು ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಶ್ರದ್ದಾಂಜಲಿ  ಭಾಷಣ ನೆಪದಲ್ಲಿ ಸಂಘ ಪರಿವಾರದ […]

ಎಸ್‍ ಡಿಪಿಐ ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ : ಅರುಣ್‍ ಕುಮಾರ್ ಪುತ್ತಿಲ Read More »

ರಷ್ಯಾ ವಾಯುನೆಲೆ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ : 40 ಯುದ್ಧ ವಿಮಾನಗಳು ನಾಶ

ಟ್ರಕ್‌ಗಳಲ್ಲಿ ಡ್ರೋನ್‌ಗಳನ್ನು ಸಾಗಿಸಿ ವಾಯುನೆಲೆಗಳ ಮೇಲೆ ದಾಳಿ ಮಾಡಿದ ಉಕ್ರೇನ್‌ ಮಾಸ್ಕೊ : ಒಂದೆಡೆ ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಲ್ಲಿಸಲು ಪ್ರಯತ್ನ ನಡೆಯುತ್ತಿದ್ದರೆ ಇನ್ನೊಂದೆಡೆ ಕಾಳಗ ಭೀಕರ ಸ್ವರೂಪ ಪಡೆದುಕೊಂಡಿದೆ. ಉಭಯ ದೇಶಗಳ ನಡುವೆ ಶಾಂತಿ ಮಾತುಕತೆ ಆರಂಭವಾಗುವ ಮೊದಲೇ ಭಾನುವಾರ ಉಕ್ರೇನ್ ರಷ್ಯಾದ ವಾಯುನೆಲೆಗಳ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ನಾಶಮಾಡಿದೆ. ಈ ದಾಳಿ ಉಕ್ರೇನಿನ ಗುಪ್ತಚರ ಸಂಸ್ಥೆಗಳು ದೀರ್ಘಕಾಲದಿಂದ ಯೋಜಿಸಿ ಮಾಡಿದ ಕಾರ್ಯಾಚರಣೆಯಾಗಿತ್ತು. ಉಕ್ರೇನಿಯನ್ ಭದ್ರತಾ

ರಷ್ಯಾ ವಾಯುನೆಲೆ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ : 40 ಯುದ್ಧ ವಿಮಾನಗಳು ನಾಶ Read More »

ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಮಂಗಳೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಯುವಕನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ಯ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕ‌ರ್ ಭಟ್ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸುಮಾರು 300 ಜನರನ್ನು ಉದ್ದೇಶಿಸಿ ಅವರು ಮಾತನಾಡಿ.

ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು Read More »

ಸೌದಿ ಅರೇಬಿಯಾದಲ್ಲಿ ಕಾಸರಗೋಡಿನ ಚಾಲಕನ ಹತ್ಯೆ

ಟ್ಯಾಕ್ಸಿ ಸ್ವಚ್ಛಗೊಳಿಸುತ್ತಿದ್ದಾಗ ಗುಂಡಿಕ್ಕೆ ಕೊಂದ ದುಷ್ಕರ್ಮಿಗಳು ರಿಯಾದ್: ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ಭಾನುವಾರ ನಸುಕಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.ಕೊಲೆಯಾದ ಟ್ಯಾಕ್ಸಿ ಚಾಲಕನನ್ನು ಕಾಸರಗೋಡು ಕುತ್ತಿಕೋಲ್ ಏಣಿಯಾಡಿಯ 42 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಹೋಗಿದ್ದರು ಎನ್ನಲಾಗಿದೆ. ಬಿಶಾ

ಸೌದಿ ಅರೇಬಿಯಾದಲ್ಲಿ ಕಾಸರಗೋಡಿನ ಚಾಲಕನ ಹತ್ಯೆ Read More »

ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್‌ ಗುಂಡೂರಾವ್‌

ಉಸ್ತುವಾರಿ ಹೊರೆಯಲ್ಲ, ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ಬೆಂಗಳೂರು: ನನಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡವೆಂದು ಹೇಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ದಿನೇಶ್‌ ಗುಂಡೂರಾವ್‌ಗೆ ದಕ್ಷಿಣ ಕನ್ನಡದ ಉಸ್ತುವಾರಿ ಜವಾಬ್ದಾರಿ ಹೊರೆಯಾಗಿದೆ, ಹೀಗಾಗಿ ಅವರು ಉಸ್ತುವಾರಿ ಬದಲಾಯಿಸಲು ಮುಖ್ಯಮಂತ್ರಿಯನ್ನು ಕೋರಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ಅವರು, ನನ್ನ ವಿರುದ್ಧ ಸ್ಥಳೀಯ ಲಾಬಿ ಇಲ್ಲ. ಕೆಲವರು ಏನೋ ಹೇಳಬಹುದು, ಮೃತನ ಮನೆಗೆ ಹೋಗಿದ್ದೆ, ಅವನು

ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್‌ ಗುಂಡೂರಾವ್‌ Read More »

ಈ ಸಲ ಕಪ್‌ ನಮ್ದೇ : ಆರ್‌ಸಿಬಿ ಚಾಂಪಿಯನ್‌ ಆಗಲು ಇನ್ನೊಂದೆ ಹೆಜ್ಜೆ ಬಾಕಿ

ನಾಳೆ ಅಹಮಬಾದಾದ್‌ನಲ್ಲಿ ಆರ್‌ಸಿಬಿ-ಪಂಜಾಬ್‌ ನಡುವೆ ಫೈನಲ್‌ ಪಂದ್ಯ ಅಹಮದಾಬಾದ್‌ : ಐಪಿಎಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್‌ ಆಗಲು ಉಳಿದಿರುವುದು ಇನ್ನು ಒಂದೇ ಪಂದ್ಯ. ಮಂಗಳವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯುವ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದ್ದು, ಆರ್‌ಸಿಬಿ ಕಪ್‌ ಎತ್ತಬೇಕೆಂಬ ಆರು ಕೋಟಿ ಕನ್ನಡಿಗರ ಹಾರೈಕೆ ಮುಗಿಲುಬಿಟ್ಟಿದೆ. ಈ ಸಲ ಯಾರೇ ಗೆದ್ದರೂ ಹೊಸ ಚಾಂಪಿಯನ್‌ ಮೂಡಿಬರುವುದು ಖಚಿತ. 2014ರ ನಂತರ ಮೊದಲ ಬಾರಿಗೆ ಪಂಜಾಬ್ ಕಿಂಗ್ಸ್ ಫೈನಲ್ ಪ್ರವೇಶಿಸಿದೆ. ಜೂನ್

ಈ ಸಲ ಕಪ್‌ ನಮ್ದೇ : ಆರ್‌ಸಿಬಿ ಚಾಂಪಿಯನ್‌ ಆಗಲು ಇನ್ನೊಂದೆ ಹೆಜ್ಜೆ ಬಾಕಿ Read More »

ಕೃಷಿಕ ಮಹಾಬಲ ಶೆಟ್ಟಿ ಪಡ್ಡಾಯಿ ನಿಧನ

ಪುತ್ತೂರು: ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ ಮಹಾಬಲ ಶೆಟ್ಟಿ ಪಡ್ಡಾಯಿ ಇಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂರು ಗಂಡು ಹಾಗೂ ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕೃಷಿಕ ಮಹಾಬಲ ಶೆಟ್ಟಿ ಪಡ್ಡಾಯಿ ನಿಧನ Read More »

ಕರ್ನಾಟಕ ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ, ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. –

ಕರ್ನಾಟಕ ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ Read More »

ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘದ ಪ್ರಥಮ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ

ಪುತ್ತೂರು: ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ.ಜಿಲ್ಲೆ ಇದರ ಸರ್ವ ಸದಸ್ಯರುಗಳ ಪ್ರಥಮ ಮಹಾ ಅಧಿವೇಶನ ಹಾಗೂ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಭಾನುವಾರ ನಡೆಯಿತು. ಸಮಾರಂಭ ಉದ್ಘಾಟಿಸಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ,. ಮಾತೃ ಸಂಘದ ಸಮಾವೇಶ ಪ್ರಥಮವಾಗಿದೆ. ಕುರುಂಜಿ ವೆಂಕಟ್ರಮಣ ಗೌಡ ವೇದಿಕೆಯಲ್ಲಿ ಆರಂಭಗೊಂಡಿರುವುದು ಸಂತೋಷ ತಂದಿದೆ. ಬೆಂಗಳೂರನ್ನು ಕಟ್ಟಿದ ಕೆಂಪೇಗೌಡ ಕುರಿತು ಒಕ್ಕಲಿಗ ಸಂಘದ ಪ್ರತಿಯೊಬ್ಬರಿಗೂ ತಿಳಿಯಬೇಕು.

ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘದ ಪ್ರಥಮ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ Read More »

ಧರ್ಮಾಭ್ಯುದಯ – ಧರ್ಮ ಶಿಕ್ಷಣ ಶಿಕ್ಷಕರಿಗೆ ಹಾಗೂ ಕಾರ್ಯಕರ್ತರಿಗೆ ಕಾರ್ಯಾಗಾರ | ಧಾರ್ಮಿಕ ಶಿಕ್ಷಣ ಸಮ್ಮೇಳನವಾಗಬೇಕು : ಕೇಶವ ಪ್ರಸಾದ್ ಮುಳಿಯ

ಪುತ್ತೂರು: ಹಿಂದೂ ಧರ್ಮ ಶಿಕ್ಷಣ ಎಂಬುದು ಪ್ರತೀ ಹಿಂದೂ ಮನೆಯ ಪ್ರತಿಯೊಂದು ಮಗುವಿಗೂ ದೊರಕುವಂತಾಗಬೇಕು. ಈ ಹಿನ್ನೆಲೆಯಲ್ಲಿ ಧರ್ಮ ಶಿಕ್ಷಣಕ್ಕಾಗಿ ಇಡಿಯ ಹಿಂದೂ ಸಮಾಜ ಒಂದಾಗಬೇಕು. ವಿಶೇಷವಾಗಿ ಎಲ್ಲಾ ಮಠಾಧೀಶರೂ ಈ ವಿಚಾರವನ್ನು ಕೈಗೆತ್ತಿಕೊಳ್ಳಬೇಕು ಎಂದು ದೇವಾಲಯ ಸಂವರ್ಧನಾ ಸಮಿತಿಯ ವಿಭಾಗ ಪ್ರಮುಖ್ ಮುಳಿಯ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು  ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಮಾರ್ಗದರ್ಶನದಲ್ಲಿ ಭಾನುವಾರ ನಗರದ ಕಲ್ಲಾರೆಯಲ್ಲಿನ ಶಿವಕೃಪಾ ಸಭಾಭವನದಲ್ಲಿ ಧರ್ಮಾಭ್ಯುದಯ – ಹಿಂದೂ ಧರ್ಮ ಶಿಕ್ಷಣ ಸಂಘಟನೆಯ ಕಾರ್ಯಕರ್ತರು

ಧರ್ಮಾಭ್ಯುದಯ – ಧರ್ಮ ಶಿಕ್ಷಣ ಶಿಕ್ಷಕರಿಗೆ ಹಾಗೂ ಕಾರ್ಯಕರ್ತರಿಗೆ ಕಾರ್ಯಾಗಾರ | ಧಾರ್ಮಿಕ ಶಿಕ್ಷಣ ಸಮ್ಮೇಳನವಾಗಬೇಕು : ಕೇಶವ ಪ್ರಸಾದ್ ಮುಳಿಯ Read More »

error: Content is protected !!
Scroll to Top