ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

ಹಾಸನ: ಪದವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ. (21) ಮೃತಪಟ್ಟವರು. ಕವನ ಹಾಸನ ನಗರದಲ್ಲಿ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಕೆ ಕುಸಿದು ಬಿದ್ದಿದ್ದಾಳೆ. ಪೋಷಕರು ತಕ್ಷಣ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಿ ಕವನ […]

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು Read More »

ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು

ಅಧಿಕಾರ ಹಂಚಿಕೆ ಸೂತ್ರ ಪಾಲಿಸಲು ಹೈಕಮಾಂಡ್‌ ಮುಂದೆ ಕೋರಿಕೆ ಇಟ್ಟ ಡಿಕೆಶಿ ಬೆಂಗಳೂರು: ಕೆಲ ಸಮಯದಿಂದ ತಣ್ಣಗಾಗಿದ್ದ ಕಾಂಗ್ರೆಸ್‌ನ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಮತ್ತೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಕ್ಕುಮಂಡಿಸಿದ್ದಾರೆ ಎನ್ನಲಾಗಿದೆ. ಡಿಕೆ.ಶಿವಕುಮಾರ್ ಅವರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್

ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ : ಹೈಕಮಾಂಡ್‌ ಭೇಟಿಯಾದ ನಾಯಕರು Read More »

ಭಾರೀ ಮಳೆ : ಕೊಡಗು ಜಿಲ್ಲಾಧ್ಯಂತ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ

ಕೊಡಗು: ಜಿಲ್ಲಾಧ್ಯಂತ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ., ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಜಾಗ್ರತೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಭಾರೀ ಮಳೆ : ಕೊಡಗು ಜಿಲ್ಲಾಧ್ಯಂತ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ Read More »

ಹಮಾಸ್‌ ಮುಖ್ಯಸ್ಥ ಮುಹಮ್ಮದ್‌ ಸಿನ್ವಾರ್‌ ಇಸ್ರೇಲ್‌ ದಾಳಿಗೆ ಬಲಿ

ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದ ಉಗ್ರನನ್ನು ಹುಡುಕಿ ಕೊಂದ ಇಸ್ರೇಲ್‌ ಪಡೆ ಟೆಲ್‌ ಅವೀವ್‌: ಇಸ್ರೇಲ್ ವಾಯುದಾಳಿಯಲ್ಲಿ ಹಮಾಸ್‌ನ ಉಗ್ರಗಾಮಿ ಪಡೆಯ ಮುಖ್ಯಸ್ಥ ಮುಹಮ್ಮದ್ ಸಿನ್ವಾರ್ ಸತ್ತಿರುವುದನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೃಢಪಡಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ದಕ್ಷಿಣ ಗಾಜಾದಲ್ಲಿ ಇಸ್ರೇಲ್ ಮಿಲಿಟರಿಯಿಂದ ಕೊಲ್ಲಲ್ಪಟ್ಟ ಗಾಜಾದ ಮಾಜಿ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್‌ನ ಕಿರಿಯ ಸಹೋದರ ಮುಹಮ್ಮದ್ ಸಿನ್ವಾರ್. ಈತನನ್ನು ಸಾಯಿಸುವ ಮೂಲಕ ಹಮಾಸ್‌ ವಿರುದ್ಧದ ಯುದ್ಧದಲ್ಲಿ ಇಸ್ರೇಲ್‌ ನಿರ್ಣಾಯಕ ಗೆಲುವು ಪಡೆದುಕೊಂಡಿದೆ. ಗಾಜಾದ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದ

ಹಮಾಸ್‌ ಮುಖ್ಯಸ್ಥ ಮುಹಮ್ಮದ್‌ ಸಿನ್ವಾರ್‌ ಇಸ್ರೇಲ್‌ ದಾಳಿಗೆ ಬಲಿ Read More »

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ

15 ಮಂದಿಯ ತಂಡದಿಂದ ಕೊಲೆ ಎಂದು ಎಫ್‌ಐಆರ್‌ ದಾಖಲು ಬಂಟ್ವಾಳ: ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ ಅಬ್ದುಲ್‌ ರಹಿಮಾನ್‌ ಅವರನ್ನು

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ Read More »

ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ,  ಕಲ್ಲಡ್ಕ ಫೈಓವರ್ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ

ಮಂಗಳೂರು : ನಿರೀಕ್ಷೆಗಿಂತ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಳೆಯಿಂದಾಗಿ ಸಾಕಷ್ಟು ದುರಂತಗಳು ನಡೆದಿದೆ. ಹೀಗಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್ ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಪ್ರೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮುಂಗಾರು ಚುರುಕುಗೊಂಡಿರುವ ಕಾರಣ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ರಸ್ತೆ

ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ,  ಕಲ್ಲಡ್ಕ ಫೈಓವರ್ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ Read More »

ಶಾಂತಿ-ಸೌಹಾರ್ದ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲ | ರಾಜ್ಯ ಸರಕಾರ ರಾಜೀನಾಮೆ ನೀಡಿ ರಾಷ್ಟ್ರಪತಿ ಆಳ್ವಿಕೆ ಬರಲಿ : ಅಶ್ರಫ್‍ ಕಲ್ಲೇಗ ಆಗ್ರಹ

ಪುತ್ತೂರು : ಬಂಟ್ವಾಳದಲ್ಲಿ ನಡೆದ ಕೊಲೆಯನ್ನು ನೋಡಿದರೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ದ.ಕ.ಜಿಲ್ಲೆಯಲ್ಲಿ ಶಾಂತಿ-ಸೌಹಾರ್ದ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲಗೊಂಡಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ಎದ್ದುಕಾಣುತ್ತಿದೆ. ಪೊಲೀಸರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ಸರಕಾರ ರಾಜೀನಾಮೆ ನೀಡಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಎಂದು ದ. ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ಸಂತಾಪ ಸಭೆಗಳಲ್ಲಿ ಪ್ರತೀಕಾರದ ಮಾತನ್ನು ಹಿಂದುತ್ವವಾದಿಗಳು ಹೇಳುತ್ತಿದ್ದರು. ಇಲಾಖೆ ಇಂತವರ ಮೇಲೆ

ಶಾಂತಿ-ಸೌಹಾರ್ದ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲ | ರಾಜ್ಯ ಸರಕಾರ ರಾಜೀನಾಮೆ ನೀಡಿ ರಾಷ್ಟ್ರಪತಿ ಆಳ್ವಿಕೆ ಬರಲಿ : ಅಶ್ರಫ್‍ ಕಲ್ಲೇಗ ಆಗ್ರಹ Read More »

ಯುವಕನ ಮೇಲೆ  ಬಿಯರ್‌ ಬಾಟಲ್‌ನಿಂದ ಹಲ್ಲೆ | ದೂರು ದಾಖಲು

ಪುತ್ತೂರು:  ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ನಿನ್ನೆ ಪಾಣಾಜೆ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಅರ್ಲಪದವು ನಿವಾಸಿ ಪ್ರಕಾಶ್ (28) ಎನ್ನಲಾಗಿದೆ. ಹಲ್ಲೆ ಮಾಡಿದ ಆರೋಪಿಗಳು ಧನಂಜಯ ಮತ್ತು ಪುನೀತ್  ಎಂದು ತಿಳಿದು ಬಂದಿದೆ. ಪಾಣಾಜೆ ಗ್ರಾಮದ ವೈನ್‌ ಶಾಪ್‌ ನಿಂದ ಬಿಯರ್‌ ಬಾಟಲಿಯನ್ನು ಖರೀದಿ ಮಾಡಿ, ವೈನ್‌ ಶಾಪ್‌ ನಲ್ಲಿ ಇರುವ ಶೆಡ್‌ ನಲ್ಲಿದ್ದ ಚಯರ್‌ನಲ್ಲಿ ಕುಳಿತು ಬಿಯರ್ ಕುಡಿಯುತ್ತಿದ್ದ ವೇಳೆ ಪರಿಚಯದವರಾದ ಧನಂಜಯ ಮತ್ತು ಪುನೀತ್‌ ಎಂಬುವವರು ಬಂದಿದ್ದರು. ಬಂದ

ಯುವಕನ ಮೇಲೆ  ಬಿಯರ್‌ ಬಾಟಲ್‌ನಿಂದ ಹಲ್ಲೆ | ದೂರು ದಾಖಲು Read More »

ಜೂ.1 ರಿಂದ 7 : ಪುತ್ತೂರಿನಲ್ಲಿ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ

ಪುತ್ತೂರು : ಬಹುವಚನಂ ಪುತ್ತೂರು, ದಿ.ಜಿ.ಎಲ್.ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸ್ವಾಮಿ ಕಲಾಮಂದಿರದ ಆಶ್ರಯದಲ್ಲಿ ಏಳು ದಿನಗಳ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಜೂ.1 ರಿಂದ 7ರ ತನಕ ಪುತ್ತೂರು ತೆಂಕಿಲ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಜಿ.ಎಲ್‍.ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಮದ್ಭಾಗವತ, ಗರುಡಪುರಾಣಗಳ ಕುರಿತು  ಭಾರತೀಯ ಆಧ್ಯಾತ್ಮದ ಕುರಿತು ಮುಂದಿನ ತಲೆಮಾರುಗಳಿಗೆ ತಿಳಿಯಪಡಿಸುವುದೇ ಸಪ್ತಾಹದ ಉದ್ದೇಶವಾಗಿದೆ. ಸನಾತನ

ಜೂ.1 ರಿಂದ 7 : ಪುತ್ತೂರಿನಲ್ಲಿ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ Read More »

ಅಬ್ದುಲ್‌ ರಹಿಮಾನ್‌ ಹತ್ಯೆ : ಅಘೋಷಿತ ಬಂದ್‌ ಆಚರಣೆ

ಮಂಗಳೂರಿನಿಂದ ಬಂಟ್ವಾಳ ತನಕ ಅಂಗಡಿಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಮುಚ್ಚಿದ ಮಾಲೀಕರು ಮಂಗಳೂರು: ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಿಂಂದ ಬಂಟ್ವಾಳದವರೆಗಿನ ನೂರಾರು ಅಂಗಡಿಮುಂಗಟ್ಟುಗಳು ಬಂದ್‌ ಆಗಿವೆ. ಮಾಲೀಕರು ಸ್ವಯಂಪ್ರೇರಿತವಾಗಿ ಅಘೋಷಿತ ಬಂದ್‌ ಆಚರಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಬ್ದುಲ್ ರಹಿಮಾನ್‌ ಮೃತದೇಹವನ್ನು ಕೊಳತ್ತಮಜಲಿಗೆ ಬೆಳಗ್ಗೆ ಸಾಗಿಸುವಾಗ ಅಂಗಡಿಗಳೆಲ್ಲ ಮುಚ್ಚಿದ್ದವು. ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು. ಈ ವೇಳೆ ನೂರಾರು ಜನ ಸೇರಿದ್ದರು. ಹತ್ಯೆ ಖಂಡಿಸಿ ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳ ಮುಂಗಟ್ಟುಗಳು ಬಂದ್‌ ಮಾಡಿ

ಅಬ್ದುಲ್‌ ರಹಿಮಾನ್‌ ಹತ್ಯೆ : ಅಘೋಷಿತ ಬಂದ್‌ ಆಚರಣೆ Read More »

error: Content is protected !!
Scroll to Top