ಹೆಜಮಾಡಿ ಟೋಲ್‌ಗೇಟ್‌ನಲ್ಲಿ ರಸ್ತೆ ಮಧ್ಯೆ ಪಾನಮತ್ತ ವಿದ್ಯಾರ್ಥಿಗಳ ಡಾನ್ಸ್‌

ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದ ಕೇರಳದ ವಿದ್ಯಾರ್ಥಿಗಳು ಮಂಗಳೂರು: ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್‌ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯ ಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಇವರ ಈ ಕಿರಿಕ್ ಮತ್ತು ಪುಂಡಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಪ್ರವಾಸಕ್ಕೆ ಬಂದಿದ್ದ […]

ಹೆಜಮಾಡಿ ಟೋಲ್‌ಗೇಟ್‌ನಲ್ಲಿ ರಸ್ತೆ ಮಧ್ಯೆ ಪಾನಮತ್ತ ವಿದ್ಯಾರ್ಥಿಗಳ ಡಾನ್ಸ್‌ Read More »

ಧರ್ಮಸ್ಥಳ ಪ್ರಕರಣ : ಕುಸುಮಾವತಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವುಗಳ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ಸೌಜನ್ಯ ತಾಯಿ ಕುಸುಮಾವತಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ಫೆ.3ರಂದು ವಿಚಾರಣೆಗೆ ಬಂದಿದ್ದು, ನ್ಯಾಯಾಲಯ ವಿಚಾರಣೆಯನ್ನು ಫೆ 19ಕ್ಕೆ ಮುಂದೂಡಿದೆ. ವಿಚಾರಣೆ ವೇಳೆ ಸರಕಾರದ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ನಾಪತ್ತೆ ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ಆಕ್ಷೇಪವಿಲ್ಲ. ಈ ಬಗ್ಗೆ ಒಂದು ವಾರದಲ್ಲಿ ನ್ಯಾಯಾಲಯಕ್ಕೆ

ಧರ್ಮಸ್ಥಳ ಪ್ರಕರಣ : ಕುಸುಮಾವತಿ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ

ಎರಡೂ ವಿಮಾನಗಳ ರೆಕ್ಕೆಗಳಿಗೆ ಹಾನಿ ಮುಂಬೈ : ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಎರಡು ಪ್ರಯಾಣಿಕ ವಿಮಾನಗಳ ನಡುವೆ ಢಿಕ್ಕಿ ಸಂಭವಿಸಿದೆ. ಇದೊಂದು ಗಂಭೀರವಾದ ನಿರ್ವಹಣಾ ಲೋಪ ಎಂದು ಪರಿಗಣಿಸಲಾಗಿದೆ. ಘಟನೆ ಸಂಭವಿಸುವ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರಿದ್ದರು. ಆದರೆ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಕೊಯಂಬತ್ತೂರಿಗೆ ಹಿಂದಿರುಗಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಹಾಗೂ ಹೈದರಾಬಾದ್‌ನಿಂದ ಆಗಮಿಸಿದ ಬಳಿಕ ನಿಲುಗಡೆ ಸ್ಥಳಕ್ಕೆ ಚಲಿಸುತ್ತಿದ್ದ ಇಂಡಿಗೋ ವಿಮಾನದ ನಡುವೆ ಢಿಕ್ಕಿ

ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ Read More »

ಅಬಕಾರಿ ಇಲಾಖೆಯ ಭಾರಿ ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ ವಿಪಕ್ಷ

ತಮಟೆ ಬಾರಿಸಿ, ಭಜನೆ ಹಾಡಿ ಸರ್ಕಾರದ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ಬೆಂಗಳೂರು: ರಾಜ್ಯ ಅಬಕಾರಿ ಇಲಾಖೆಯಲ್ಲಿ ನಡೆದಿರುವ ಭಾರಿ ಪ್ರಮಾಣದ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ

ಅಬಕಾರಿ ಇಲಾಖೆಯ ಭಾರಿ ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ ವಿಪಕ್ಷ Read More »

ವೃದ್ಧೆಯ ಮೇಲೆ ಅತ್ಯಾಚಾರ, ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಮನೆಕೆಲಸದ ‌ವ್ಯಕ್ತಿ

ಬೆಂಗಳೂರು: ಕಾಮುಕ ‌ಮನೆಗೆಲಸದ ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಮನೆಯ 65 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ, ಅವರನ್ನು ಕೊಂದು ಆ ಬಳಿಕ ತಾನೂ ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಕೋ ‌ಲೇಔಟ್ ನಡೆದಿದೆ. ಆರೋಪಿ ತಮಿಳುನಾಡು ಹೊಸೂರು ಮೂಲದ ದೇವರಾಜ್ (5೦) ಕಳೆದ ಎಂಟು ವರ್ಷಗಳಿಂದ ವೃದ್ಧೆಯ ಮನೆ ಮತ್ತು ಆ‌ ಕಾಲನಿಯಲ್ಲಿರುವ ಇತರ ಮನೆಗಳಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ. ಅತ್ಯಾಚಾರ ಎಸಗಿದ ಬಳಿಕ ವೃದ್ಧೆಯನ್ನು ಹತ್ಯೆ ಮಾಡಿರುವ ಆರೋಪಿ,

ವೃದ್ಧೆಯ ಮೇಲೆ ಅತ್ಯಾಚಾರ, ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಮನೆಕೆಲಸದ ‌ವ್ಯಕ್ತಿ Read More »

ವಾಟ್ಸಾಪ್ ಮಾತೃ ಸಂಸ್ಥೆ ಮೆಟಾವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್: ಯಾಕೆ ಗೊತ್ತಾ?

ನವದೆಹಲಿ: ಬಳಕೆದಾರರ ಖಾಸಗಿ ಮಾಹಿತಿ ರಕ್ಷಣೆಗೆ ಸಂಬಂಧಿಸಿದ ಹಾಗೆ ಕಠಿಣ ನಿಲುವು ತೆಗೆದುಕೊಂಡಿರುವ ಸುಪ್ರೀಂ ಕೋರ್ಟು ವಾಟ್ಸಾಪ್ ಮಾತೃ ಸಂಸ್ಥೆಯಾದ ಮೆಟಾ‌ಗೆ ಎಚ್ಚರಿಕೆ ನೀಡಿದೆ. ಭಾರತೀಯರ ಡಿಜಿಟಲ್ ಡೆಟಾ‌ದ ಮೇಲೆ ಯಾವುದೇ ಸಂಸ್ಥೆ ಹಿಡಿತ ಸಾಧಿಸಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ವಾಟ್ಸಾಪ್ ಗೌಪ್ಯತಾ‌ ನೀತಿ 2021 ರಲ್ಲಿ ಜಾರಿಗೆ ಬಂದಿದ್ದು, ಈ ಸಂಬಂಧದ ಅರ್ಜಿಯ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಭಾರತೀಯ ಬಳಕೆದಾರರ ಗೌಪ್ಯತೆ ಕಾಪಾಡುವುದು ಅಸಾಧ್ಯ ಎಂದಾದರೆ ಈ ದೇಶದಲ್ಲಿ

ವಾಟ್ಸಾಪ್ ಮಾತೃ ಸಂಸ್ಥೆ ಮೆಟಾವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್: ಯಾಕೆ ಗೊತ್ತಾ? Read More »

ಡಾ. ಹರಿಣಾಕ್ಷಿ ಕೇವಳ ಅವರಿಗೆ Ph.D. ಪದವಿ ಪ್ರಮಾಣಪತ್ರ ಪ್ರದಾನ

ಮುಕ್ತ ಗಂಗೋತ್ರಿ, ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 21ನೆ ಘಟಿಕೋತ್ಸವದಲ್ಲಿ ಡಾ. ಹರಿಣಾಕ್ಷಿ ಎಂ. ಡಿ. ಯವರು ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋಟ್ ಅವರಿಂದ Ph.D. ಪದವಿ ಪ್ರಮಾಣಪತ್ರವನ್ನು (Convocation Certificate) ಸ್ವೀಕರಿಸಿದರು. 2026ನೆ ಜನವರಿ 31ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ನಡೆದ ಸಮಾರಂಭದಲ್ಲಿ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ಅವರು ಸ್ವಾಗತ, ಅತಿಥಿಗಳ ಪರಿಚಯ ಮತ್ತು ವರದಿ ವಾಚನಗಳನ್ನು ನೆರವೇರಿಸಿದರು. ಡಾ. ಹರಿಣಾಕ್ಷಿ

ಡಾ. ಹರಿಣಾಕ್ಷಿ ಕೇವಳ ಅವರಿಗೆ Ph.D. ಪದವಿ ಪ್ರಮಾಣಪತ್ರ ಪ್ರದಾನ Read More »

ಸಿಂಧೂ ಜಲ ವಿವಾದ: ಪಾಕ್‌ಗೆ ಮತ್ತೆ ಹಿನ್ನಡೆ

ನವದೆಹಲಿ: ಉಗ್ರವಾದಕ್ಕೆ ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನಕ್ಕೆ ಯಾವುದೇ ಕಾರಣಕ್ಕೂ ಸಿಂಧೂ ನದಿಯ ನೀರನ್ನು ಬಿಡಲಾಗದು ಎಂದು ಭಾರತ ಗಟ್ಟಿ ಧ್ವನಿಯಲ್ಲಿ ಹೇಳಿದ್ದು, ಅಂತರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದೆ. ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಾಲಯವು ಸಿಂಧೂ ನದಿ‌ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲೆಗಳ ಸಲ್ಲಿಕೆಗೆ ಆದೇಶ ನೀಡಿತ್ತು. ಆದರೆ ಈ ಮಧ್ಯಸ್ಥಿಕೆ ನ್ಯಾಯಾಲಯವು ಕಾನೂನು ಬಾಹಿರ ರಚನೆಯಾಗಿದ್ದು, ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಭಾರತ ನಿರಾಕರಣೆ ತೋರಿಸಿದೆ. ಹಾಗೆಯೇ ಈ ಸಂಬಂಧ ಹೇ‌ಗ್‌ನಲ್ಲಿರುವ ಪೀಸ್ ಪ್ಯಾಲೇಸ್‌ನಲ್ಲಿ

ಸಿಂಧೂ ಜಲ ವಿವಾದ: ಪಾಕ್‌ಗೆ ಮತ್ತೆ ಹಿನ್ನಡೆ Read More »

ವಿದೇಶದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನೆಲೆಸಿದ ಮಹಿಳೆಯರು ಭಾರತಕ್ಕೆ ಸುಂಕವಿಲ್ಲದೆ ತರಬಹುದು 40 ಗ್ರಾಂ ಚಿನ್ನ

ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಬ್ಯಾಗೇಜ್ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಚಿನ್ನಾಭರಣವನ್ನು ಒಳಗೊಂಡಂತೆ ಸುಂಕ ಇಲ್ಲದೆ ಹಲವಾರು ವಸ್ತುಗಳನ್ನು ದೇಶದೊಳಕ್ಕೆ ತರಲು ಇದ್ದ ಮಿತಿಯನ್ನು ಮತ್ತಷ್ಟು ವಿಸ್ತರಣೆ ಮಾಡಲಾಗಿದೆ. ಫೆ. 2 ರಿಂದಲೇ ಅನ್ವಯಿಸುವಂತೆ 2026 ರ ಬ್ಯಾಗೇಜ್ ನಿಯಮಗಳನ್ವಯ ಈ ಹಿಂದಿನ ಐವತ್ತು ಸಾವಿರ ರೂ. ವಸ್ತುಗಳ ಮಿತಿಯನ್ನು ಎಪ್ಪತೈದು ಸಾವಿರ ರೂ. ಗಳಿಗೆ ಏರಿಕೆ ಮಾಡಲಾಗಿದ್ದು, ಅಷ್ಟು ಮೌಲ್ಯದ ವಸ್ತುಗಳನ್ನು ಯಾವುದೇ ಸುಂಕ ಇಲ್ಲದೆ ಭಾರತಕ್ಕೆ ತರಲು ಅವಕಾಶ ನೀಡಲಾಗಿದೆ. ಹಾಗೆಯೇ ಒಂದು ವರ್ಷಕ್ಕಿಂತ

ವಿದೇಶದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನೆಲೆಸಿದ ಮಹಿಳೆಯರು ಭಾರತಕ್ಕೆ ಸುಂಕವಿಲ್ಲದೆ ತರಬಹುದು 40 ಗ್ರಾಂ ಚಿನ್ನ Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

ಪುತ್ತೂರು: ಕಳೆದ ಎರಡು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರ್ಮ ನಿವಾಸಿ, ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲೀಕ ಗಣೇಶ್ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲೈಟಿಂಗ್ಸ್ ‌ಸಂಬಂಧಿಸಿದ ಕೆಲಸಕ್ಕೆ ಡಿ. 6 ರಂದು ಬದಿಯಡ್ಕಕ್ಕೆ ತೆರಳಿದ್ದ ಅವರು ಸ್ಕೂಟರ್ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೃತರು ಪತ್ನಿ, ಇಬ್ಬರು

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು Read More »

error: Content is protected !!
Scroll to Top