ಗುಜರಾತಿಗೆ ಮೋದಿ 82 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳ ಕೊಡುಗೆ

ಎರಡು ದಿನದಲ್ಲಿ ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ತನ್ನ ತವರು ರಾಜ್ಯವಾದ ಗುಜರಾತಿನಲ್ಲಿ ಎರಡು ದಿನಗಳಲ್ಲಿ ಬರೋಬ್ಬರಿ 82,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇಂದಿನಿಂದ ಮೋದಿ ಎರಡು ದಿನಗಳ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಹಲವು ಬೃಹತ್‌ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆಪರೇಷನ್‌ ಸಿಂಧೂರ್‌ ಬಳಿಕ ಮೊದಲು ಬಾರಿ ಮೋದಿ ತವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ದಾಹೋಡ್‌ನಲ್ಲಿ ರೈಲು ಇಂಜಿನ್‌ ಉತ್ಪಾದನೆ […]

ಗುಜರಾತಿಗೆ ಮೋದಿ 82 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳ ಕೊಡುಗೆ Read More »

ಬರ್ತ್‌ಡೇ ನೆಪದಲ್ಲಿ ರೇವ್‌ ಪಾರ್ಟಿ : 31 ಯುವಕ-ಯುವತಿಯರ ಬಂಧನ

ಮಾದಕ ವಸ್ತು, ಮದ್ಯ ಬಳಕೆ ದೃಢ ಬೆಂಗಳೂರು: ದೇವನಹಳ್ಳಿ ತಾಲೂಕಿನ‌ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ಬೆಳಗಿನ ಜಾವ 5 ಗಂಟೆಗೆ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಒಬ್ಬನ ಜನ್ಮದಿನದ ಅಂಗವಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ದೇವನಹಳ್ಳಿ

ಬರ್ತ್‌ಡೇ ನೆಪದಲ್ಲಿ ರೇವ್‌ ಪಾರ್ಟಿ : 31 ಯುವಕ-ಯುವತಿಯರ ಬಂಧನ Read More »

18 ಶಾಸಕರ ಅಮಾನತು ಎರಡೇ ತಿಂಗಳಿಗೆ ಮುಕ್ತಾಯ

ಅಮಾನತು ಆದೇಶ ಹಿಂಪಡೆದಿದ್ದೇನೆ ಎಂದ ಸ್ಪೀಕರ್‌ ಖಾದರ್‌ ಬೆಂಗಳೂರು: ಸದನದೊಳಗೆ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಅಮಾನತಗೊಂಡಿದ್ದ ಬಿಜೆಪಿಯ 18 ಶಾಸಕರ ಅಮಾನತು ಅವಧಿ ಎರಡೇ ತಿಂಗಳಿಗೆ ಮುಕ್ತಾಯವಾಗಿದೆ. ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ 18 ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನಿಸಲಾಯಿತು. ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಯು.ಟಿ ಖಾದರ್ ಸಭೆಯ ಬಳಿಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ

18 ಶಾಸಕರ ಅಮಾನತು ಎರಡೇ ತಿಂಗಳಿಗೆ ಮುಕ್ತಾಯ Read More »

ಸಾಕುನಾಯಿಯನ್ನು ಬೈಕ್‌ಗೆ ಕಟ್ಟಿಕೊಂಡು ಎಳೆದೊಯ್ದ ಮಾಲೀಕ : ಕೇಸ್‌ ದಾಖಲು

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋ ಉಡುಪಿ: ಸಾಕುನಾಯಿಯನ್ನು ಬೈಕಿಗೆ ಸರಪಳಿಯಿಂದ ಕಟ್ಟಿ ಎಳೆದೊಯ್ಯುತ್ತಿದ್ದ ವೀಡಿಯೊವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬಳಿಕ ಆರೋಪಿಯ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯಡ್ತರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು–ಕುಂದಾಪುರ ಏಕಮುಖ ರಸ್ತೆಯ ಸರ್ವೀಸ್‌ ರಸ್ತೆಯಲ್ಲಿ ರಾವುತನಕಟ್ಟೆಯಿಂದ ನಾಕಟ್ಟೆ ಸೇತುವೆಯವರೆಗೆ ಪಡುವರಿ ಗ್ರಾಮದ ನಿವಾಸಿಯೊಬ್ಬ ತನ್ನ ಮನೆಯ ಸಾಕುನಾಯಿಯನ್ನು ಆತನ ಬೈಕಿಗೆ ಸರಪಳಿಯಿಂದ ಕಟ್ಟಿ ಚಲಾಯಿಸಿಕೊಂಡು ಹೋಗುತ್ತಿರುವ ಮಾನವೀಯ ಕೃತ್ಯದ ವಿಡಿಯೋ ಮೇ

ಸಾಕುನಾಯಿಯನ್ನು ಬೈಕ್‌ಗೆ ಕಟ್ಟಿಕೊಂಡು ಎಳೆದೊಯ್ದ ಮಾಲೀಕ : ಕೇಸ್‌ ದಾಖಲು Read More »

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ | ನಾಲ್ವರಿಗೆ ಗಾಯ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬೃಹತ್ ಮರ ಮುರಿದು ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯವರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಕಾರ್ಯಾಚರಣೆ ನಡೆಸಿದ ಸ್ಥಳೀಯರು ಕಾರಿನಲ್ಲಿದ್ದವರು ಹೊರ ತೆಗೆದು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮರ | ನಾಲ್ವರಿಗೆ ಗಾಯ Read More »

ಪರ್ಲಡ್ಕ ವೃತ್ತದ ಬಳಿ ರಸ್ತೆಗೆ ಗುಡ್ಡ ಕುಸಿತ

ಪುತ್ತೂರು: ಮಂಜಲ್ಪಡ್ಪು-ದರ್ಬೆ ನಡುವಿನ ಬೈಪಾಸ್ ರಸ್ತೆಯ ಪರ್ಲಡ್ಕದಲ್ಲಿ ಭಾನುವಾರ ಸುರಿದ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿ, ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯಾಯಿತು. ಪರ್ಲಡ್ಕ ವೃತ್ತದ ಬಳಿಯ ಕಾವೇರಿ ಹಾರ್ಡ್’ವೇ ಅಂಗಡಿ  ಪಕ್ಕದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ  ಎರಡು ಕಡೆಯ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಎರಡು ಜೆಸಿಬಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು.

ಪರ್ಲಡ್ಕ ವೃತ್ತದ ಬಳಿ ರಸ್ತೆಗೆ ಗುಡ್ಡ ಕುಸಿತ Read More »

ಉಪ್ಪಿನಂಗಡಿ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ

ಶ್ರೀ ಆದಿ ಧೂಮವತಿ ಶ್ರೀ ದೇವಿ ಬೈದ್ಯೇತಿ  ಕೃಪಾಪೋಷಿತ ಯಕ್ಷಗಾನ ಮಂಡಳಿ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ ತಿರುಗಾಟದ ಕೊನೆಯ ಪ್ರದರ್ಶನವು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವಠಾರದಲ್ಲಿ ಪತ್ತನಾಜೆಯಂದು ಜರಗಿತು. ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ಮೇಳದ ಪ್ರದರ್ಶನವನ್ನು ಗೆಜ್ಜೆಗಿರಿ ಭಕ್ತವೃಂದ ಉಪ್ಪಿನಂಗಡಿ ಆಯೋಜಿಸಿತ್ತು. ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರಾದ ಹರೀಶ ಉಪಾಧ್ಯಾಯರು ಪ್ರಾರ್ಥನೆ ಸಲ್ಲಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರು ಮತ್ತು ಕಾರ್ಯಕ್ರಮದ ಸಂಘಟಕರು ಉಪಸ್ಥಿತರಿದ್ದರು. ಬಳಿಕ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮೂರು

ಉಪ್ಪಿನಂಗಡಿ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ Read More »

ನಗರಸಭೆ ಕಾಂಪೌಂಡ್ ಗೋಡೆ ಕುಸಿತ | ರಿಕ್ಷಾಕ್ಕೆ ಹಾನಿ

ಪುತ್ತೂರು: ಇಂದು ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ನಡೆದಿದೆ. ಗ್ರಾಮ ಚಾವಡಿಯ ಹಿಂಭಾಗದ ಕೋರ್ಟ್ ರಸ್ತೆಯ ಕಾಂಪೌಂಡ್ ಗೋಡೆ ಇದಾಗಿದ್ದು, ಈ ವೇಳೆ 3 ರಿಕ್ಷಾಗಳಿಗೆ ಹಾನಿಯಾಗಿದೆ. ಇದರಲ್ಲಿ 2 ರಿಕ್ಷಾ ತೀರಾ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಯಾರೂ ಇರದೇ ಇರುವುದರಿಂದ ಜೀವಕ್ಕೆ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಪಕ್ಕದಲ್ಲಿ ನಗರಸಭೆಯ ಟ್ರಾನ್ಸ್ ‘ಫಾರ್ಮರ್ ಇದ್ದು, ಕಾಂಪೌಂಡ್ ಬಿದ್ದಾಗ ರಸ್ತೆಗೆ ವಾಲಿಕೊಂಡು ಬಿಟ್ಟಿತ್ತು. ತಕ್ಷಣ ಮೆಸ್ಕಾಮ್ ಮಾಹಿತಿ ನೀಡಿ,

ನಗರಸಭೆ ಕಾಂಪೌಂಡ್ ಗೋಡೆ ಕುಸಿತ | ರಿಕ್ಷಾಕ್ಕೆ ಹಾನಿ Read More »

ಭಾರತ ಸರ್ಕಾರದ ಸಿಸಿಆರ್‌ಟಿ ಸ್ಕಾಲರ್‌ಶಿಪ್‌ಗೆ ಪುತ್ತೂರು ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್‌ ಆಯ್ಕೆ – ಕರ್ನಾಟಕ ಕರಾವಳಿಯಿಂದ ಭರತನಾಟ್ಯ ವಿಭಾಗದಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ

ಪುತ್ತೂರು: ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳ ಯುವ ಕಲಾವಿದರಿಗೆ ನೀಡುವ ಸಿಸಿಆರ್‌ಟಿ (ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ) 2022-23ನೇ ಸಾಲಿನ ಸ್ಕಾಲರ್‌ಶಿಪ್‌ಗೆ ಭರತನಾಟ್ಯ ವಿಭಾಗದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಇದರ ವಿದ್ಯಾರ್ಥಿ ತೇಜಸ್ವಿರಾಜ್‌ ಆಯ್ಕೆಯಾಗಿದ್ದಾರೆ. ಕರ್ನಾಟಕ ಕರಾವಳಿಯಲ್ಲಿ ಭರತನಾಟ್ಯ ವಿಭಾಗದಲ್ಲಿ ಸಿಸಿಆರ್‌ಟಿ   ಸ್ಕಾಲರ್‌ಶಿಪ್‌ಗೆ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಇವರಾಗಿದ್ದಾರೆ. ಕಳೆದ 10 ವರ್ಷಗಳಿಂದ ಭರತನಾಟ್ಯ ಶಾಸ್ತ್ರೀಯ ನೃತ್ಯ ಅಭ್ಯಾಸ ಮಾಡುತ್ತಿರುವ ತೇಜಸ್ವಿರಾಜ್‌, 2018ರಲ್ಲಿ ಜೂನಿಯರ್‌, 2021ರಲ್ಲಿ ಸೀನಿಯರ್‌ ಪರೀಕ್ಷೆಯಲ್ಲಿ ವಿಶೇಷ

ಭಾರತ ಸರ್ಕಾರದ ಸಿಸಿಆರ್‌ಟಿ ಸ್ಕಾಲರ್‌ಶಿಪ್‌ಗೆ ಪುತ್ತೂರು ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್‌ ಆಯ್ಕೆ – ಕರ್ನಾಟಕ ಕರಾವಳಿಯಿಂದ ಭರತನಾಟ್ಯ ವಿಭಾಗದಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ Read More »

ನೇಣು ಬಿಗಿದು ಯುವಕ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ ನಾಯ್ಕ (32) ಎನ್ನಲಾಗಿದ್ದು, ಈತ ಕೂಲಿ ಕೆಲಸ ನಿರ್ವಹಿಸುತ್ತಿದ್ದ. ಮೃತರು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು ಆಗಲಿದ್ದಾರೆ.ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ನೇಣು ಬಿಗಿದು ಯುವಕ ಆತ್ಮಹತ್ಯೆ Read More »

error: Content is protected !!
Scroll to Top