ಇರಾನ್‌ ಮೇಲೆ 907 ಕೆ.ಜಿ. ಬಂಕರ್‌ ಬಸ್ಟರ್‌ ಬಾಂಬ್‌ ಹಾಕಿದ ಅಮೆರಿಕ

ಬದ್ರ್‌ ಮಿಲಿಟರಿ ವಾಯುನೆಲೆಯ ಮೇಲೆ ದಾಳಿ ಟೆಹ್ರಾನ್‌ : ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೆರಿಕ ಸುಮಾರು 907 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌ಗಳಿಂದ ದಾಳಿ ನಡೆಸಿದೆ. ಈ ಸ್ಫೋಟದ ವೀಡಿಯೊವೊಂದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದಾರೆ. ಮಂಗಳವಾರ ಮುಂಜಾನೆ ಇಸ್ಫಹಾನ್ ನಗರದಲ್ಲಿ ಈ ಸ್ಫೋಟ ಸಂಭವಿಸಿದೆ. ದಾಳಿಯ ತೀವ್ರತೆಯಿಂದ ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಚಿಮ್ಮುವ ದೃಶ್ಯ ವೈರಲ್‌ ಆಗಿದೆ. ಟ್ರಂಪ್ ಈ ವೀಡಿಯೊ ಬಗ್ಗೆ ಯಾವುದೇ ನಿಖರ ಮಾಹಿತಿ ಉಲ್ಲೇಖಿಸಿಲ್ಲ. ಆದರೆ […]

ಇರಾನ್‌ ಮೇಲೆ 907 ಕೆ.ಜಿ. ಬಂಕರ್‌ ಬಸ್ಟರ್‌ ಬಾಂಬ್‌ ಹಾಕಿದ ಅಮೆರಿಕ Read More »

ಯಕ್ಷಗಾನ ಕಲಾರಂಗದ  92ನೇ  ಮನೆ  ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ  ಕುಸುಮಾ ಮತ್ತು ಶ್ರೀ ಕೃಷ್ಣ ಇವರ ಪುತ್ರಿ ಯಜ್ಞ ಇವಳಿಗೆ  ಉದ್ಯಾವರದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಮತ್ತು ನಂದಕುಮಾರ್ ಎಸೋಸಿಯೇಟ್ಸ್ ನ ವರಿಷ್ಠರಾದ  ಎಂ. ಗಂಗಾಧರ ರಾವ್  ಪ್ರಾಯೋಜಕತ್ವದಲ್ಲಿ  ನಿರ್ಮಿಸಿದ ನೂತನ ಮನೆ ‘ನಂದಾದೀಪ’ವನ್ನು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  ಸ್ವಾಮೀಜಿಯವರು ಅನುಗ್ರಹ ಸಂದೇಶದಲ್ಲಿ ಎಂ.ಗಂಗಾಧರ ರಾವ್ ಅವರುತಮ್ಮ ದುಡಿಮೆಯ ಒಂದು ಪಾಲನ್ನು ಸಮಾಜಕ್ಕೆ ಅರ್ಪಿಸಿ ಸಂತೋಷವನ್ನು ಹೊಂದುವ ವಿರಳರಲ್ಲಿ ಒಬ್ಬರು. 

ಯಕ್ಷಗಾನ ಕಲಾರಂಗದ  92ನೇ  ಮನೆ  ಹಸ್ತಾಂತರ Read More »

ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.inಗೆ ಭೇಟಿ ನೀಡಿ, ತಮ್ಮ ರಿಜಿಸ್ಟರ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಪಡೆಯಬಹುದು. ಫಲಿತಾಂಶದ ಜೊತೆಗೆ ಕಾಲೇಜುಗಳಲ್ಲಿಯೂ ಅಂಕಪಟ್ಟಿಗಳನ್ನು ಪ್ರಕಟಿಸಲು ಸೂಚಿಸಲಾಗಿದೆ.

ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ Read More »

ಜೈಶ್‌ ಉಗ್ರ ಮಸೂದ್‌ ಅಜರ್‌ ಸಹೋದರ ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವು

ಉಗ್ರ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಅನ್ವರ್‌ ಸಾವನ್ನು ಒಪ್ಪಿಕೊಂಡ ಜೈಶ್‌ ನವದೆಹಲಿ: ಸಂಸತ್‌ ಮೇಲಿನ ಉಗ್ರ ದಾಳಿಯ ರೂವಾರಿ ಜೈಶ್‌ ಇ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಮಸೂದ್‌ ಅಜರ್‌ನ ಸಹೋದರ ಮೊಹಮ್ಮದ್‌ ತಾಹಿರ್‌ ಅನ್ವರ್‌ ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾನೆ. ಮಸೂದ್‌ ಅಜರ್‌ನ ಬಳಿಕ ಜೈಶ್‌ ಇ ಮೊಹಮ್ಮದ್‌ ಸಂಘಟನೆಯ ಪ್ರಮುಖ ನಾಯಕನಾಗಿದ್ದ ಅನ್ವರ್‌ನ ಸಾವನ್ನು ಜೈಶ್‌ ಅಧಿಕೃತವಾಗಿ ದೃಢಪಡಿಸಿದೆ. ಬಹವಾಲ್ಪುರದ ಜಾಮಿಯಾ ಮಸ್ಜಿದ್‌ ಉಸ್ಮಾನ ವಾಲಿಯಲ್ಲಿ ಸೋಮವಾರ ತಡರಾತ್ರಿ ಅನ್ವರ್‌ನ ಅಂತ್ಯಕ್ರಿಯೆ ನೇರವೇರಿದೆ ಎಂದು ತನ್ನ ಅಧಿಕೃತ

ಜೈಶ್‌ ಉಗ್ರ ಮಸೂದ್‌ ಅಜರ್‌ ಸಹೋದರ ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವು Read More »

ಕ್ರಿಕೆಟ್‌ ಆಟದ ವಿವಾದ : ಯುವಕನ ಮೇಲೆ ಕತ್ತಿಯಿಂದ ಹಲ್ಲೆ

ಬೆಳ್ತಂಗಡಿ : ಕ್ರಿಕೆಟ್ ಆಡುವ ಸಂದರ್ಭದಲ್ಲಿ ನಡೆದ ವಾಗ್ವಾದವನ್ನು ನೆಪವಾಗಿಸಿ ಯುವಕನ ತಲೆಗೆ ಕತ್ತಿಯಿಂದ ಕಡಿದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ ಘಟನೆ ಮಾ.29ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಆಸಿಫ್ (36) ಗಾಯಗೊಂಡವರಾಗಿದ್ದು ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ವಿದೇಶದಲ್ಲಿ ಉದ್ಯೋಗದಲ್ಲಿರುವ ಲಾಯಿಲ ಗ್ರಾಮದ ಕಕ್ಕೇನ ನಿವಾಸಿ ಆರೀಫ್ (25) ಎಂಬಾತ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದಾನೆ‌. ಆರೋಪಿಯನ್ನು

ಕ್ರಿಕೆಟ್‌ ಆಟದ ವಿವಾದ : ಯುವಕನ ಮೇಲೆ ಕತ್ತಿಯಿಂದ ಹಲ್ಲೆ Read More »

ದೆಹಲಿಗೆ ಬರುತ್ತಿದ್ದ ವಿಮಾನದ ಮೇಲೆ ಅಮೆರಿಕ ದಾಳಿ

ಪರಿಹಾರ ಸಾಮಗ್ರಿ ಒಯ್ಯಲು ಬರುತ್ತಿದ್ದ ವಿಮಾನ ಟೆಹ್ರಾನ್ : ಅಮೆರಿಕ ನಡೆಸಿದ ದಾಳಿಯಲ್ಲಿ ದೆಹಲಿಗೆ ಬರುತ್ತಿದ್ದ ಇರಾನಿನ ವಿಮಾನಕ್ಕೆ ಹಾನಿಯಾಗಿದೆ. ಇರಾನ್‌ನ ಮಶಾದ್ ವಿಮಾನ ನಿಲ್ದಾಣದಲ್ಲಿ ಮಹಾನ್ ಏರ್ ವಿಮಾನವು ಅಮೆರಿಕದ ವೈಮಾನಿಕ ದಾಳಿಯಲ್ಲಿ ಹಾನಿಗೊಳಗಾಗಿದೆ. ವರದಿಗಳ ಪ್ರಕಾರ, ವಿಮಾನವು ಪರಿಹಾರ ಸಾಮಗ್ರಿಗಳನ್ನು ಪಡೆಯಲು ನವದೆಹಲಿಗೆ ತೆರಳುತ್ತಿತ್ತು. ಏಪ್ರಿಲ್ 1ರಂದು ಬೆಳಗ್ಗೆ 4 ಗಂಟೆಗೆ ವಿಮಾನ ಆಗಮಿಸಬೇಕಿತ್ತು ಎಂದು ವರದಿಯಾಗಿದೆ. ಈ ಘಟನೆಯು ದೇಶದಲ್ಲಿ ನಾಗರಿಕ ವಿಮಾನ ಯಾನ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಮಹಾನ್ ಏರ್

ದೆಹಲಿಗೆ ಬರುತ್ತಿದ್ದ ವಿಮಾನದ ಮೇಲೆ ಅಮೆರಿಕ ದಾಳಿ Read More »

ಮೆಸ್ಕಾಂ ಕಚೇರಿಯಲ್ಲಿ ಮಾರಾಮಾರಿ : ಎಇ, ಗ್ರಾಹಕರಿಂದ ಪರಸ್ಪರರ ವಿರುದ್ಧ ದೂರು

ಸುಳ್ಯದಲ್ಲಿ ವಿದ್ಯುತ್‌ ಇಲ್ಲದ ವಿಚಾರವಾಗಿ ಗಲಾಟೆ ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಗ್ರಾಹಕರು ಮತ್ತು ಮೆಸ್ಕಾಂ ಎಇ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿರುವ ಬಗ್ಗೆ ಇತ್ತಂಡಗಳಿಂದ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮೆಸ್ಕಾಂ ಎಇ ಸುಪ್ರೀತ್ ಹಲ್ಲೆ ಮಾಡಿದ್ದಾರೆ ಎಂದು ಗ್ರಾಹಕ ಅಂಬಟಡ್ಕ ನಿವಾಸಿ ಕುಲ್‍ದೀಪ್ ನೀಡಿರುವ ದೂರಿನಲ್ಲಿ ಮಾ.28ರಂದು ಸಂಜೆಯಿಂದ ರವಿವಾರದವರೆಗೆ ಅಂಬೇಟಡ್ಕ ಪ್ರದೇಶದಲ್ಲಿ ವಿದ್ಯುತ್ ಇಲ್ಲದೆ ಇದ್ದುದರಿಂದ ನೆರೆಮನೆಯ ಸಂದೀಪ್ ಅವರ ಜತೆ ಸುಳ್ಯದ ಕೇರ್ಪಳದಲ್ಲಿರುವ ಮೆಸ್ಕಾಂ

ಮೆಸ್ಕಾಂ ಕಚೇರಿಯಲ್ಲಿ ಮಾರಾಮಾರಿ : ಎಇ, ಗ್ರಾಹಕರಿಂದ ಪರಸ್ಪರರ ವಿರುದ್ಧ ದೂರು Read More »

ಕಬಕ ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ 2.91 ಕೋಟಿ ರೂ. : ಕ್ಯಾ.ಬ್ರಿಜೇಶ್‌ ಚೌಟ

ಬೃಹತ್ ಶೆಲ್ಟರ್ ನಿರ್ಮಾಣ; 2 ಲಿಫ್ಟ್‌ ಅಳವಡಿಕೆ ಮಂಗಳೂರು: ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ ಪುತ್ತೂರು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ.1ರಲ್ಲಿ 2.91ಕೋಟಿ ರೂ. ವೆಚ್ಚದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಪ್ರಸ್ತುತ ಈ ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಕೇವಲ 531 ಚ. ಮೀಟರ್

ಕಬಕ ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ 2.91 ಕೋಟಿ ರೂ. : ಕ್ಯಾ.ಬ್ರಿಜೇಶ್‌ ಚೌಟ Read More »

12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಗೆಳತಿ ವಾಸವಿದ್ದ ಅಪಾರ್ಟ್‌ಮೆಂಟ್‌ನಿಂದ ಜಿಗಿದ ಯುವಕ ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಎಂದು ಗುರುತಿಸಲಾಗಿದೆ. ಗೆಳತಿಯೊಬ್ಬಳು ವಾಸವಾಗಿದ್ದ ಅಪಾರ್ಟ್‌ಮೆಂಟ್‌ಗೆ ಬಂದಿದ್ದ ಯುವಕ, 12ನೇ ಮಹಡಿ ತೆರಳಿ ಅಲ್ಲಿಂದ ಜಿಗಿದಿದ್ದಾನೆ. ಈತ ಅತ್ತಾವರದ ಪಿಜಿಯೊಂದರಲ್ಲಿ ವಾಸವಾಗಿದ್ದ. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 4ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಈತ ಸೋಮವಾರ ಮಧ್ಯಾಹ್ನದ ವೇಳೆಗೆ ಆತ್ಮಹತ್ಯೆ

12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ Read More »

ದಾಸವಾಳ ಹೂವು ನುಂಗಿ ಮಗು ಸಾವು

ಮೈಸೂರು: ಒಣಗಿದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹೊಸಿಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಆರೂವರೆ ತಿಂಗಳ ಮಗು ನುಂಗಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದೆ. ದೊಡ್ಡಹೆಜ್ಜೂರಿನ ಸುದರ್ಶನ್-ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿ ಗೌಡ ಸಾವನ್ನಪ್ಪಿದ ಮಗು. ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ ಚಿನ್ಮಿಯಿ ಗೌಡ ಮನೆಯ ಹೊಸಲಿಗೆ ಪೂಜೆಗೆ ಇಟ್ಟಿದ್ದ ದಾಸವಾಳದ ಹೂವಿನ ತುಂಡನ್ನು ಬಾಯಿಗೆ

ದಾಸವಾಳ ಹೂವು ನುಂಗಿ ಮಗು ಸಾವು Read More »

error: Content is protected !!
Scroll to Top