ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು

ಬೆಳ್ತಂಗಡಿ: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17ರಂದು ಪ್ರಯಾಣಿಸಿದ್ದರು. ಅದೇ ದಿನ ರಾತ್ರಿ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೇರಳದ ತ್ರಿಶೂರ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದರು. ಭಾನುವಾರ ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ.

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು Read More »

ಶುರುವಾಗುವ ಮೊದಲೇ ಮುರಿದು ಬಿದ್ದ ಎರಡನೇ ಸುತ್ತಿನ ಸಂಧಾನ

ಅಮೆರಿಕೆ ಜೊತೆಗೆ ಮಾತುಕತೆಗೆ ಬರುವುದಿಲ್ಲ ಎಂದು ದೃಢಪಡಿಸಿದ ಇರಾನ್‌ ಟೆಹ್ರಾನ್‌: ಅಮೆರಿಕ ಮತ್ತು ಇರಾನ್‌ ನಡುವಿನ ಎರಡನೇ ಸುತ್ತಿನ ಶಾಂತಿ ಒಪ್ಪಂದ ಮಾತುಕತೆ ಶುರುವಾಗುವುದಕ್ಕೂ ಮೊದಲೇ ಮುರಿದು ಬಿದ್ದಿದೆ. ಅಮೆರಿಕದೊಂದಿಗೆ ಏಪ್ರಿಲ್ 20ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಶಾಂತಿ ಮಾತುಕತೆಯನ್ನು ನಡೆಸಲು ಇರಾನ್ ಅಧಿಕೃತವಾಗಿ ನಿರಾಕರಿಸಿದೆ. ಅಮೆರಿಕ ಅತಿಯಾದ ಬೇಡಿಕೆಗಳು, ಅಪ್ರಾಯೋಗಿಕ ನಿರೀಕ್ಷೆಗಳು ಮತ್ತು ಪದೇಪದೆ ಬದಲಾಗುತ್ತಿರುವ ನಿಲುವುಗಳಿಂದಾಗಿ ಮಾತುಕತೆಯಿಂದ ಹಿಂದೆ ಸರಿಯುತ್ತಿರುವುದಾಗಿ ಇರಾನ್ ತಿಳಿಸಿದೆ. ಭಾನುವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಇರಾನ್‌ನ

ಶುರುವಾಗುವ ಮೊದಲೇ ಮುರಿದು ಬಿದ್ದ ಎರಡನೇ ಸುತ್ತಿನ ಸಂಧಾನ Read More »

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಸಾವಿನ ಸಂಖ್ಯೆ 23ಕ್ಕೇರಿಕೆ

ಸ್ಫೋಟದ ಬಿರುಸಿಗೆ ನಾಲ್ಕು ಮಹಡಿಯ ಕಟ್ಟಡ ಧರಾಶಾಯಿ ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೇರಿದೆ. ಭಾನುವಾರ ಮಧ್ಯಾಹ್ನ ವಿರುಧುನಗರ ಜಿಲ್ಲೆಯ ಕಟ್ಟನಾರ್‌ಪಟ್ಟಿ ಗ್ರಾಮದ ಬಳಿಯಿರುವ ವನಜ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡವು ಸಂಪೂರ್ಣವಾಗಿ ನೆಲಸಮವಾಗಿದೆ. ಗಾಯಾಳುಗಳನ್ನು ವಿರುಧುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು,

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಸಾವಿನ ಸಂಖ್ಯೆ 23ಕ್ಕೇರಿಕೆ Read More »

ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ: ಗ್ರಾಹಕರಿಂದ ಉತ್ತಮ ಸ್ಪಂದನೆ

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/-ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000/- ರವರೆಗೆ

ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ: ಗ್ರಾಹಕರಿಂದ ಉತ್ತಮ ಸ್ಪಂದನೆ Read More »

ಸೇವಾ ಮನೋಭಾವ ಹೊಂದಿರುವವರೇ ನಿಜವಾದ ಶ್ರೀಮಂತರು: ಸುಮಂತ್ ಕುಮಾರ್ ಜೈನ್

ಗೇರುಕಟ್ಟೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊರಂಜ ಎಸ್. ಡಿ. ಎಂ. ಸಿ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ದಾನಿಗಳ ಸಹಕಾರದಿಂದ ನಿರ್ಮಿಸಲಾದ ನೂತನ ತರಗತಿ ಕೊಠಡಿಯನ್ನು ಕಳಿಯ ಸಿ.ಎ. ಬ್ಯಾಂಕಿನ ಅಧ್ಯಕ್ಷ ವಸಂತ ಮಜಲು ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಖ್ಯ ಅತಿಥಿ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ್ ಜೈನ್ ಮಾತನಾಡಿ, ಹಣ, ಆಸ್ತಿ ಇದ್ದವರು ಶ್ರೀಮಂತರು ಎಂದು ಭಾವಿಸುವ ಕಾಲವೊಂದಿತ್ತು. ಆದರೆ ಸವಾಲುಗಳನ್ನು ಎದುರಿಸಿ

ಸೇವಾ ಮನೋಭಾವ ಹೊಂದಿರುವವರೇ ನಿಜವಾದ ಶ್ರೀಮಂತರು: ಸುಮಂತ್ ಕುಮಾರ್ ಜೈನ್ Read More »

ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ

ಮೇ 10ರಂದು ವಿವಾಹವಾಗಲಿದ್ದ ಓರ್ವ ಆರೋಪಿ ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ಬಂಧಿತ ಆರೋಪಿಗಳು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ 15 ವರ್ಷದ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಏ.16ರಂದು ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಅತ್ಯಾಚಾರ ಮಾಡಿರುವ ಬಗ್ಗೆ ಸಂತ್ರಸ್ತೆ ಮನೆಯವರಿಗೆ ತಿಳಿಸಿದ್ದಾಳೆ. ಈ

ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ Read More »

ಇರಾನ್‌-ಭಾರತ ನಡುವೆ 5 ಸಾವಿರ ವರ್ಷಗಳ ಸಂಬಂಧ : ಉದ್ವಿಗ್ನತೆ ನಡುವೆ ಪ್ರತಿನಿಧಿಯ ಹೇಳಿಕೆ

ಭಾರತದ ಹಡಗುಗಳನ್ನು ತಡೆದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ ಇರಾನ್‌ ಪ್ರತಿನಿಧಿ ಟೆಹ್ರಾನ್‌: ಹಾರ್ಮೂಜ್ ಜಲಸಂಧಿಯಲ್ಲಿ ಭಾರತೀಯ ಧ್ವಜದ ಹಡಗುಗಳನ್ನು ಇರಾನ್‌ ಗುಂಡು ಹಾರಿಸಿ ತಡೆದ ಬಳಿಕ ಭಾರತದಲ್ಲಿ ಮತ್ತೆ ತೈಲ ಸಂಕಷ್ಟ ತಲೆದೋರುವ ಭೀತಿ ಆವರಿಸುತ್ತಿರುವಾಗಲೇ ಇರಾನ್‌ ಆಶಾದಾಯ್‌ ಹೇಳಿಕೆಯೊಂದನ್ನು ನೀಡಿದೆ. ಇರಾನ್ ಮತ್ತು ಭಾರತದ ನಡುವಿನ ಸಂಬಂಧಗಳ ಬಗ್ಗೆ ಚರ್ಚೆಗಳು ಆರಂಭವಾಗಿದ್ದು, ಇದರ ಬೆನ್ನಲ್ಲೇ ಭಾರತ–ಇರಾನ್ ಸಂಬಂಧಗಳು ಅತ್ಯಂತ ಬಲಿಷ್ಠವಾಗಿವೆ ಎಂದು ಸ್ಪಷ್ಟಪಡಿಸಿದೆ. ಇರಾನ್‌ ರಾಷ್ಟ್ರದ ಪರಮೋಚ್ಛ ನಾಯಕನ ಭಾರತದ ಪ್ರತಿನಿಧಿ ಡಾ.ಅಬ್ದುಲ್ ಮಜೀದ್ ಹಕೀಮ್

ಇರಾನ್‌-ಭಾರತ ನಡುವೆ 5 ಸಾವಿರ ವರ್ಷಗಳ ಸಂಬಂಧ : ಉದ್ವಿಗ್ನತೆ ನಡುವೆ ಪ್ರತಿನಿಧಿಯ ಹೇಳಿಕೆ Read More »

50ಕ್ಕೂ ಅಧಿಕ ಮಹಿಳಾ ಅಧಿಕಾರಿಗಳ ಬ್ಲ್ಯಾಕ್‌ಮೇಲ್‌ : ಆರೋಪಿ ಸೆರೆ

ಉದ್ಯಮಿಯ ಸೋಗುಹಾಕಿ ಪರಿಚಯ ಮಾಡಿಕೊಂಡು ವಂಚಿಸುತ್ತಿದ್ದ ಯುವಕ ಬೆಂಗಳೂರು: ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿ ಕೃಪಲಾನಿ (36) ಎಂಬಾತ ಪ್ರೀತಿ, ಮದುವೆ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿ ಇನ್ನೂ 50 ಮಂದಿಗೆ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೃಪಲಾನಿ ಮೇಲಿದೆ. ಆರೋಪಿ ಕೃಪಲಾನಿ ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಸುಮಾರು ಆರೇಳು ವರ್ಷಗಳಿಂದ ಅಕೆಯ ಮೇಲೆ

50ಕ್ಕೂ ಅಧಿಕ ಮಹಿಳಾ ಅಧಿಕಾರಿಗಳ ಬ್ಲ್ಯಾಕ್‌ಮೇಲ್‌ : ಆರೋಪಿ ಸೆರೆ Read More »

ಭಾರತಕ್ಕೆ ಬರುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

ಗುಂಡು ಹಾರಿಸಿ ಹಡಗುಗಳನ್ನು ತಡೆದ ಇರಾನ್‌ ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನೌಕಾಪಡೆ 14 ಭಾರತೀಯ ಹಡಗುಗಳನ್ನು ಮೇಲೆ ಗುಂಡು ಹಾರಿಸಿ ತಡೆದಿದೆ. ಈ ಪೈಕಿ ಒಂದು ಹಡಗಿಗೆ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಹೋಗುತ್ತಿದ್ದ ಹಡಗುಗಳ ಮೇಲೆ ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಗುಂಡು ಹಾರಿಸುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಯಿತು. ಇದು ತೈಲ ಮತ್ತು ಅನಿಲ ಸರಬರಾಜನ್ನು ಅಡ್ಡಿಪಡಿಸಿತು ಮತ್ತು ಕಡಲ ಭದ್ರತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಕಚ್ಚಾತೈಲ ಮತ್ತು ಅನಿಲವನ್ನು

ಭಾರತಕ್ಕೆ ಬರುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ Read More »

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು

ಬರ್ತ್‌ಡೇ ಪಾರ್ಟಿಯಲ್ಲಿ ಸಂಭವಿಸಿದ ದುರಂತ ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪದ ಚೆನ್ನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಗ್ರಾಮಸ್ಥರೊಬ್ಬರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಗ್ರಾಮದ ಹೊರವಲಯದ ನಿರ್ಮಾಣ ಹಂತದ ಮನೆಯೊಂದರ ಬಳಿ ನಾನ್‌ವೆಜ್​ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಚಿನ್ ಊಟ ಮುಗಿಸಿಕೊಂಡು ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದ್ದ ನಿರ್ಮಾಣ ಹಂತದ ಮನೆಯೊಳಗೆ ತೆರಳಿದ್ದನು. ಊಟದ ಬಳಿಕ ಉಳಿದವರೆಲ್ಲರೂ ತಮ್ಮ

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು Read More »

error: Content is protected !!
Scroll to Top