ರಕ್ತದ ಪ್ರತಿ ಹನಿಗೂ ಸೇಡು ತೀರಿಸುತ್ತೇವೆ: ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯಿಂದ ಕಂಗೆಟ್ಟುಹೋದ ಪಾಕಿಸ್ಥಾನಕ್ಕೆ ಸೇಡಿನ ತವಕ ಇಸ್ಲಾಮಾಬಾದ್‌: ತನ್ನ ನೆಲದಲ್ಲಿರುವ ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯಿಂದ ಕಂಗೆಟ್ಟು ಹೋಗಿರುವ ಪಾಕಿಸ್ಥಾನ ಈಗ ಸೇಡು ತೀರಿಸಿಕೊಳ್ಳಲು ತವಕಿಸುತ್ತಿದೆ. ಪಾಕಿಸ್ಥಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂದು ತನ್ನ ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್‌, ಹಿಂದುಸ್ಥಾನ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರಿ ಬೆಲೆ ತೆರಬೇಕಾಗುತ್ತದೆ. ಪ್ರತಿ […]

ರಕ್ತದ ಪ್ರತಿ ಹನಿಗೂ ಸೇಡು ತೀರಿಸುತ್ತೇವೆ: ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ Read More »

ಐಇಡಿ ಸ್ಫೋಟದಿಂದ ಪಾಕ್‌ ಸೇನಾ ವಾಹನ ಛಿದ್ರ : 12 ಯೋಧರು ಸಾವು

ಸ್ಫೋಟದ ಬಿರುಸಿಗೆ ಹಲವು ಮೀಟರ್‌ ದೂರ ಹಾರಿದ ಸೈನಿಕರ ದೇಹಗಳು ಇಸ್ಲಾಮಾಬಾದ್‌ : ಭಾರತ ಆಪರೇಷನ್‌ ಸಿಂದೂರ್ ಮೂಲಕ ಪಾಕಿಸ್ಥಾನಕ್ಕೆ ಎಂದೂ ಮರೆಯಲಾಗದ ಏಟು ಕೊಟ್ಟಿದ್ದರೆ ಇನ್ನೊಂದೆಡೆಯಿಂದ ಬಲೂಚಿಸ್ಥಾನ ಸ್ವಾತಂತ್ರ್ಯ ಹೋರಾಟಗಾರರು ಪಾಕಿಸ್ಥಾನವನ್ನು ಇನ್ನಿಲ್ಲದಂತೆ ಕಾಡಲು ತೊಡಗಿದ್ದಾರೆ. ಪಾಕಿಸ್ಥಾನದ ಸೇನಾ ವಾಹನದ ಮೇಲೆ ಬಲೂಚಿಸ್ಥಾನ್ ಲಿಬರೇಷನ್ ಆರ್ಮಿ (ಬಿಎಲ್‌ಎ) ನಡೆಸಿದ ದಾಳಿಯಲ್ಲಿ ಕನಿಷ್ಠ 12 ಮಂದಿ ಪಾಕ್‌ ಯೋಧರು ಮೃತಪಟ್ಟಿದ್ದಾರೆ. ಐಇಡಿ ಮೂಲಕ ಪಾಕ್ ಸೇನಾ ವಾಹನವನ್ನು ಸ್ಫೋಟಿಸಿರುವುದಾಗಿ ಬಲೂಚಿಸ್ಥಾನ ಸೇನೆ ಹೇಳಿಕೊಂಡಿದೆ. ಈ ಘಟನೆ ಬಲೂಚಿಸ್ಥಾನದ

ಐಇಡಿ ಸ್ಫೋಟದಿಂದ ಪಾಕ್‌ ಸೇನಾ ವಾಹನ ಛಿದ್ರ : 12 ಯೋಧರು ಸಾವು Read More »

ಆಪರೇಷನ್‌ ಸಿಂದೂರ್‌ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ

ಆಳ ಸಮುದ್ರ ಮೀನುಗಾರಿಕೆಗೆ ನಿರ್ಬಂಧ; ಬೋಟ್‌ಗಳ ತೀವ್ರ ತಪಾಸಣೆ ಮಂಗಳೂರು : ಪಾಕಿಸ್ಥಾನದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂದೂರ್‌ ಕಾರ್ಯಾಚರಣೆ ನಡೆಸಿದ ಬಳಿಕ ರಾಜ್ಯದ ಕರಾವಳಿ ಭಾಗದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ

ಆಪರೇಷನ್‌ ಸಿಂದೂರ್‌ ಬಳಿಕ ಕರಾವಳಿಯಲ್ಲಿ ಕಟ್ಟೆಚ್ಚರ Read More »

ಪಾಕ್‌ ಶೆಲ್‌ ದಾಳಿಯಲ್ಲಿ ಯೋಧ ಹುತಾತ್ಮ

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ದಾಳಿ ಮಾಡುತ್ತಿರುವ ಪಾಕ್‌ ಸೇನೆ ನವದೆಹಲಿ: ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯ ಬಳಿಕ ಹತಾಶಗೊಂಡಿರುವ ಪಾಕಿಸ್ಥಾನ ಗಡಿಯುದ್ದಕ್ಕೂ ನಿರಂತರ ದಾಳಿ ನಡೆಸುತ್ತಿದ್ದು, ನಿನ್ನೆ ರಾತ್ರಿ ನಡೆಸಿದ ಭಾರಿ ಶೆಲ್ ದಾಳಿಯಲ್ಲಿ 5 ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಶರ್ಮಾ ಹುತಾತ್ಮರಾಗಿದ್ದಾರೆ. 32 ವರ್ಷದ ಜವಾನ್ ದಿನೇಶ್ ಕುಮಾರ್ ಶರ್ಮಾ, ಹರಿಯಾಣದ ಪಲ್ವಾಲ್‌ನ ಮೊಹಮ್ಮದ್‌ಪುರ ಗ್ರಾಮದವರು. ಅವರು ಪಾಕಿಸ್ತಾನದ ಆಕ್ರಮಣಕ್ಕೆ ಆಗಾಗ್ಗೆ ಸಿಲುಕುತ್ತಿರುವ ಹೈಟೆನ್ಶನ್ ಪ್ರದೇಶವಾದ ಎಲ್‌ಒಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲದಿನಗಳಿಂದ

ಪಾಕ್‌ ಶೆಲ್‌ ದಾಳಿಯಲ್ಲಿ ಯೋಧ ಹುತಾತ್ಮ Read More »

ರೋಹಿತ್‌ ಶರ್ಮಾ ಟೆಸ್ಟ್‌ನಿಂದ hurt and retired?

ದಿಢೀರ್‌ ವಿದಾಯ ಹೇಳಿದ ಹಿಂದೆ ನಾನಾ ಅನುಮಾನ ನವದೆಹಲಿ: ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ನಿನ್ನೆ ರಾತ್ರಿ ದಿಢೀರ್‌ ಎಂದು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಅಚ್ಚರಿಯುಂಟು ಮಾಡಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡೆರಡು ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಹಂಚಿಕೊಳ್ಳುವ ಮೂಲಕ ದೀರ್ಘ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ಇದು ರೋಹಿತ್‌ ಶರ್ಮಾ ಇಷ್ಟಪಟ್ಟು ಹೇಳಿದ ಗುಡ್‌ಬೈ ಅಲ್ಲ, ಅವರು hurt

ರೋಹಿತ್‌ ಶರ್ಮಾ ಟೆಸ್ಟ್‌ನಿಂದ hurt and retired? Read More »

ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ

ಪುತ್ತೂರು: ಅಶೋಕ್‌ ಕುಮಾರ್‌ ಸೊರಕೆ (73)  ಇಂದು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಯ ಹಿರಿಯ ಪುತ್ರನಾಗಿರುವ ಅಶೋಕ್‌ ಕುಮಾರ್‌ ಸೊರಕೆ, ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಮತ್ತು ಮುಂಡೂರು ಸಿ ಎ ಬ್ಯಾಂಕ್ ಅಧ್ಯಕ್ಷರಾಗಿರುವ ಸುರೇಶ್‌ ಕುಮಾರ್‌ ಸೊರಕೆ, ಶರತ್‌ ಮತ್ತು ಶಶಿಕಲಾ ಅವರ ಸಹೋದರರಾಗಿದ್ದಾರೆ. ಹಲವು ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಅಶೋಕ್‌ ಕುಮಾರ್‌ ಸೊರಕೆ ನಿವೃತ್ತಿ ಬಳಿಕ ಸೊರಕೆಯಲ್ಲಿ ನೆಲೆಸಿದ್ದರು ಮೃತರು ಪತ್ನಿ,

ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ Read More »

ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ

ಪುತ್ತೂರು: :ಮುಳಿಯ  ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20 ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಅದರ ಭಾಗವಾಗಿ ಮಂಗಳವಾರ ಪುತ್ತೂರು ಮುಳಿಯದಲ್ಲಿ  ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಕುಂಕುಮಾರ್ಚನೆಯ ಪುಣ್ಯ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಉದಯ ಭಟ್ ಅವರ ವೇದಪಾರಂಗತದೊಂದಿಗೆ ನೆರವೇರಿತು.  ಸತತವಾಗಿ  3 ವರ್ಷಗಳಿಂದ  ಮಾತಾಭಗಿನಿಯರಿಗೆ ಲಲಿತಾ ಸಹಸ್ರನಾಮ  ಹೇಳಿಕೊಟ್ಟ  ನೆಲೆಯಲ್ಲಿ 

ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ Read More »

ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ

ಪುತ್ತೂರು: ಏಳ್ಮುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56)ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ. 07 ರಂದು ನಿಧನರಾದರು. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಮಗಳು, ಅಳಿಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ Read More »

ಮರ ಬಿದ್ದು ತಂತಿಗೆ  ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರು

ಪುತ್ತೂರು: ಮರ ಬಿದ್ದು ವಿದ್ಯುತ್ ತಂತಿಗೆ ಗೆ ಹಾನಿಯಾದ ಘಟನೆ ಪುತ್ತೂರಿನ ಕಲ್ಲರ್ಪೆ ಬಳಿ ನಡೆದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ವಾಹನವೊಂದು ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.

ಮರ ಬಿದ್ದು ತಂತಿಗೆ  ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರು Read More »

ಸರಕಾರಿ ಗೋಮಾಳ ಜಾಗವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಹಸ್ತಾಂತರ ಮಾಡುವಂತೆ ಮನವಿ

ಪುತ್ತೂರು: ಮುಂಡೂರು ಗ್ರಾಮದ ಬದಿಯಡ್ಕ ದಲ್ಲಿರುವ ಸರಕಾರಿ ಗೋಮಾಳ ಜಾಗವನ್ನು ಗೋಶಾಲೆ ಮಾಡಲು ಪುತ್ತೂರಿನ ಪ್ರತಿಷ್ಠಿತ ಸಮಾಜ ಸೇವಾ ಟ್ರಸ್ಟ್ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಹಸ್ತಾಂತರ ಮಾಡಬೇಕೆಂದು ಪುತ್ತಿಲ ಪರಿವಾರ ಟ್ರಸ್ಟ್ ಸಹಾಯಕ ಆಯುಕ್ತರಿಗೆ ಬುಧವಾರ ಮನವಿ ನೀಡಿತು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮನವಿ ನೀಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ

ಸರಕಾರಿ ಗೋಮಾಳ ಜಾಗವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಹಸ್ತಾಂತರ ಮಾಡುವಂತೆ ಮನವಿ Read More »

error: Content is protected !!
Scroll to Top