ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ

ಪುತ್ತೂರು: ಕಾರು – ಆಟೋ ರಿಕ್ಷಾ ನಡುವೆ ಅಪಘಾತವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದ್ದು, ಅವರನ್ನು  ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.

ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ Read More »

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯ ಪ್ರಕರಣದ ಕುರಿತಾಗಿ ಸೋಶಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಬ್ಬಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲಿಸರು ಕಠಿಣಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.  ‘ರಾತ್ರಿ 9.30ಕ್ಕೆ ಭರತ್ ಕುಮೇಲ್ ಕೊಲ್ಲುತ್ತೇವೆ’ ಎಂಬ ಸಂದೇಶ ರವಾಣೆಯಾದ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಪೋಲಿಸರು ಹೈ ಅಲರ್ಟ್‍ ಆಗಿದ್ದಾರೆ.  ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಗಳು, ಫುಟ್ ಪಾತ್

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ Read More »

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕಡಬ: ಮನೆಯ ತೋಟದಲ್ಲಿದ್ದ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ. ಆಯ ತಪ್ಪಿ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.   ಮೃತಪಟ್ಟ ವ್ಯಕ್ತಿಯನ್ನು ದಿ। ಐತಪ್ಪ ಪೂಜಾರಿ ಅವರ ಪುತ್ರ ಉಮೇಶ್ ಪೂಜಾರಿ (46) ಎಂದು ತಿಳಿದುಬಂದಿದೆ. ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಉಮೇಶ್ ಪೂಜಾರಿ

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ

ಪಹಲ್ಗಾಮ್‌ ದಾಳಿ ಕುರಿತು ಕಠಿಣ ಪ್ರಶ್ನೆಗಳನ್ನು ಕೇಳಿ ಛೀಮಾರಿ ಹೊಸದಿಲ್ಲಿ: ಪಹಲ್ಗಾಮ್‌ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಸ್ಥಿತಿಯನ್ನು ವಿಶ್ವಸಂಸ್ಥೆಗೆ ಒಯ್ದು ಬಚವಾಗಲು ಯತ್ನಿಸಿದ್ದ ಕಂತ್ರಿ ಪಾಕಿಸ್ಥಾನಕ್ಕೆ ದೊಡ್ಡಮಟ್ಟದಲ್ಲಿ ಮುಖಭಂಗವಾಗಿದೆ. ಪಾಕಿಸ್ಥಾನದ ಒತ್ತಾಯದ ಮೇರೆಗೆ ಇಂದು ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ರಹಸ್ಯ ಸಮಾಲೋಚನಾ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಂಡಿಲ್ಲ. ಆದರೆ ಇದೇ ವೇಳೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆ ಕಠಿಣ ಪ್ರಶ್ನೆಗಳನ್ನು ಕೇಳಿ ಛೀಮಾರಿ ಹಾಕಿದೆ. ಮೇ ತಿಂಗಳಿನ ವಿಶ್ವಸಂಸ್ಥೆ ಭದ್ರತಾ ಮಂಡಳಿಯ

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ Read More »

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ

ಇರುಮುಡಿ ಹೊತ್ತು ಅಯ್ಯಪ್ಪನ ಸನ್ನಿಧಾನಕ್ಕೆ ಹೋಗಲಿರುವ ರಾಷ್ಟ್ರಪತಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಶಬರಿಮಲೆ ಏರುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಭದ್ರತಾ ಇಲಾಖೆಯು ಅವರು ನೇರವಾಗಿ ಇಳಿಯಲು ಸನ್ನಿಧಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಯೋಜಿಸಿತ್ತು ಆದರೆ ವಿರೋಧದಿಂದಾಗಿ ಆ ಆಲೋಚನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ನಿಲಕ್ಕಲ್‌ನಲ್ಲಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿಯಲಿದ್ದಾರೆ.

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ Read More »

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಆರೋಪಿಯೊಬ್ಬನ ಸಂಬಂಧಿಕ ಮಹಿಳೆಯರು ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡುವಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಕಾರಿನ ಸಮೀಪ ಬಂದಿದ್ದರು. ಈ ಪೈಕಿ ಓರ್ವ ಮಹಿಳೆ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಆರೋಪಿಯೊಬ್ಬನ ಸಮೀಪ ಸಾಗಿ ಬಂದಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆಯಲ್ಲಿ ಇವರ ಪಾತ್ರವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ Read More »

ಇಸ್ರೇಲ್‌ ಪ್ರತೀಕಾರದ ದಾಳಿ : ಯೆಮೆನ್‌ ಬಂದರು ಧ್ವಂಸ

30 ಯುದ್ಧ ವಿಮಾನಗಳಿಂದ ಬಾಂಬ್‌ಗಳ ಸುರಿಮಳೆ ಟೆಲ್‌ ಅವೀವ್‌: ತನ್ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹೌತಿ ಉಗ್ರರು ದಾಳಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಸೋಮವಾರ ರಾತ್ರಿ ಯೆಮೆನ್‌ನ ಹೊಡೈದಾ ಬಂದರು ಮೇಲೆ ಭಯಾನಕ ಬಾಂಬ್‌ ದಾಳಿ ನಡೆಸಿದೆ. ಈ ಸಾವಿನಿಂದಾದ ನಾಶನಷ್ಟ ಮತ್ತು ಸಾವುನೋವಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಆದರೆ ಇಡೀ ಬಂದರು ಮತ್ತು ಅದರ ಸಮೀಪವಿದ್ದ ಸಿಮೆಂಟ್‌ ಫ್ಯಾಕ್ಟರಿ ಸರ್ವನಾಶವಾಗಿದೆ ಎಂದು ವರದಿಗಳು ತಿಳಿಸಿವೆ. ಇಸ್ರೇಲ್‌ನ 30 ಯುದ್ಧ ವಿಮಾನಗಳು ಯೆಮೆನ್‌ನ ಹೊಡೈದಾ

ಇಸ್ರೇಲ್‌ ಪ್ರತೀಕಾರದ ದಾಳಿ : ಯೆಮೆನ್‌ ಬಂದರು ಧ್ವಂಸ Read More »

ಶಸ್ತ್ರಾಸ್ತ್ರ ಸಹಿತ ಇಬ್ಬರು ಉಗ್ರರು ಸೆರೆ

ಶ್ರೀನಗರ: ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಹಿತ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಬಂಧಿಸಿದೆ. ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು 10ಕ್ಕೂ ಹೆಚ್ಚು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ. ಕಾಡಿನಲ್ಲಿ ಅಡಗಸಿಟ್ಟಿದ್ದ ಅಪಾರ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಕೊಳ್ಳಲಾಗಿದೆ.

ಶಸ್ತ್ರಾಸ್ತ್ರ ಸಹಿತ ಇಬ್ಬರು ಉಗ್ರರು ಸೆರೆ Read More »

ಲಾರಿ-ಕಾರು ಮುಖಾಮುಖಿ ಡಿಕ್ಕಿ : ಐವರು ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಮತ್ತು ಕಾರು ಮುಖಾಮುಖಿ ದಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಈಂದು ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಲಾರಿ-ಕಾರು ಮುಖಾಮುಖಿ ಡಿಕ್ಕಿ : ಐವರು ಸ್ಥಳದಲ್ಲೇ ಸಾವು Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ

ಆಯುಧ ಇಟ್ಟುಕೊಳ್ಳದಂತೆ ಮಾಡಿ ಹಂತಕರಿಗೆ ಓಡಾಟದ ಸುಳಿವು ನೀಡಿದ್ದಾರೆಂದು ಗುಮಾನಿ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಒಬ್ಬರ ಕೈವಾಡ ಇದೆ ಎಂಬ ಗಂಭೀರವಾದ ಆರೋಪ ಕೇಳಿ ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ ಹುಟ್ಟುತ್ತಲೇ ಇದೆ. ಮೊದಲಿಗೆ ಸೇಡು ತೀರಿಸಲು ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಹೇಳಲಾಗಿತ್ತು. ಬಳಿಕ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿತ್ತು.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ Read More »

error: Content is protected !!
Scroll to Top