ಮೇ 1 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಹಾಗೂ ಸಂಘದ ವಾರ್ಷಿಕ ಮಹಾಸಭೆ ಮೇ 1 ಗುರುವಾರ ಬೆಳಿಗ್ಗೆ 9.30 ಕ್ಕೆ ಬಪ್ಪಳಿಗೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್‍ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭದಲ್ಲಿ ಶೈಕ್ಷಣಿಕವಾಗಿ ಆರು ಮಂದಿ ಸಾಧಕರಿಗೆ ಅಭಿನಂದಿಸಲಾಗುವುದು. ದೆಹಲಿ ಗಣರಾಜ್ಯೋತ್ಸವದಲ್ಲಿ ಪ್ರಧಾನಮಂತ್ರಿ ರ‍್ಯಾಲಿಯಲ್ಲಿ, ದೆಹಲಿ ಕರ್ತವ್ಯಪಥ ರಾಜ್ಯೋತ್ಸವ ಪಥಸಂಚಲನದಲ್ಲಿ, ಗಣರಾಜ್ಯೋತ್ಸವ ಕರ್ತವ್ಯಪಥದಲ್ಲಿ, ಸಾಂಸ್ಕೃತಿಕ […]

ಮೇ 1 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ಸಂಘದ ವಾರ್ಷಿಕ ಮಹಾಸಭೆ Read More »

ಕಾರು-ಆಕ್ಟಿವಾ ಡಿಕ್ಕಿ | ಆಕ್ಟಿವಾ ಸವಾರ ಗಂಭೀರ ಗಾಯ

ಪುತ್ತೂರು : ಕಾರು ಮತ್ತು ಅಕ್ಟಿವಾ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ. ಘಟನೆಯಿಂದಾಗಿ ಆಕ್ಟಿವಾ ಸಂಪೂರ್ಣ ಜಖಂಗೊಂಡಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಅದೇ ರಸ್ತೆಯಾಗಿ ತೆರಳುತ್ತಿದ್ದ ಉದ್ಯಮಿ ಉಜ್ವಲ್ ಪ್ರಭು ತಕ್ಷಣ ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾರು-ಆಕ್ಟಿವಾ ಡಿಕ್ಕಿ | ಆಕ್ಟಿವಾ ಸವಾರ ಗಂಭೀರ ಗಾಯ Read More »

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್‌

ವೀಡಿಯೊ ವೈರಲ್‌ ಆದ ಬಳಿಕ ನಿರ್ವಾಹಕನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮಂಗಳೂರು: ಮುಡಿಪು -ಸ್ಟೇಟ್‌ ಬ್ಯಾಂಕ್‌ ಮಧ್ಯೆ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್‌ ನಿರ್ವಹಕ ಚಲಿಸುತ್ತಿರುವ ಬಸ್ಸಿನಲ್ಲೇ ಯುವತಿಗೆ ಕಿರುಕುಳ ನೀಡಿದ ಘಟನೆ ಸಂಭವಿಸಿದೆ. ನಿದ್ರಿಸುತ್ತಿದ್ದ ಯುವತಿಗೆ ನಿರ್ವಾಹಕ ಕಿರುಕುಳ ನೀಡಿದ್ದು, ಪ್ರಯಾಣಿಕರೊಬ್ಬರು ಇದನ್ನು ವೀಡಿಯೊ ಮಾಡಿದ್ದರು. ಈ ವೀಡಿಯೊ ವೈರಲ್‌ ಆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್‌ (40) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 22ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್‌ Read More »

ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.24 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ ನಿವಾಸಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾರವರ ಪತಿ ವಿನೋದ್ (48) ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು Read More »

ಪಾಕಿಸ್ಥಾನದ ಭೂಸೇನಾ ಮುಖ್ಯಸ್ಥ ಮುನೀರ್‌ನನ್ನು ಉಗ್ರ ಒಸಾಮ ಬಿನ್‌ ಲಾಡೆನ್‌ಗೆ ಹೋಲಿಸಿದ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ

ಪಹಲ್ಗಾಮ್‌ ದಾಳಿಗೆ ಮುನೀರ್‌ ಕಾರಣ ಎಂದು ನೇರ ಆರೋಪ ವಾಷಿಂಗ್ಟನ್‌ : ಪಾಕಿಸ್ತಾನದ ಭೂಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಅಮೆರಿಕ ಅಲ್‌ ಕಾಯಿದಾ ಉಗ್ರ ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಬಲಿ ಪಡೆದ ಭಯಾನಕ ದಾಳಿಯಲ್ಲಿ ಪಾಕಿಸ್ಥಾನದ ಪಾತ್ರವಿದೆ ಎಂದು ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕಲ್ ರೂಬಿನ್ ನೇರವಾಗಿ ಆರೋಪಿಸಿದ್ದಾರೆ. ಜನರಲ್‌ ಮುನೀರ್‌ ಅರಮನೆಯಲ್ಲಿ ವಾಸಿಸುತ್ತಿದ್ದರೆ, ಬಿನ್ ಲಾಡೆನ್ ಗುಹೆಯಲ್ಲಿ ವಾಸಿಸುತ್ತಿದ್ದ. ಇವರಿಬ್ಬರ ನಡುವೆ ಇದೊಂದೇ ವ್ಯತ್ಯಾಸ

ಪಾಕಿಸ್ಥಾನದ ಭೂಸೇನಾ ಮುಖ್ಯಸ್ಥ ಮುನೀರ್‌ನನ್ನು ಉಗ್ರ ಒಸಾಮ ಬಿನ್‌ ಲಾಡೆನ್‌ಗೆ ಹೋಲಿಸಿದ ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ Read More »

ಎರಡು ಮನೆಗಳಿಗೆ ನುಗ್ಗಿದ ಕಳ್ಳ |  ಬೆಲೆಬಾಳುವ ನಗ- ನಗದು ಕಳವು

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ ಒಟ್ಟು 12 ಗ್ರಾಂ ತೂಕವಿರುವ 3 ಉಂಗುರ, ಹಾಗೂ 6 ಗ್ರಾಂ ತೂಕವಿರುವ 4 ಉಂಗುರ ಮತ್ತು 3 ಸಾವಿರ ನಗದು ಹಣ ಕದ್ದೊಯ್ದಿದ್ದಾನೆ. ಇದೇ ಗ್ರಾಮದ ಕೋಡಿ

ಎರಡು ಮನೆಗಳಿಗೆ ನುಗ್ಗಿದ ಕಳ್ಳ |  ಬೆಲೆಬಾಳುವ ನಗ- ನಗದು ಕಳವು Read More »

ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ

ಐಸಿಸ್‌ ಕಾಶ್ಮೀರ ಖಾತೆಯಿಂದ ಐ ಕಿಲ್‌ ಯೂ ಎಂದು ಧಮ್ಕಿ ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಐಸಿಸ್ ಕಾಶ್ಮೀರ ಎಂಬ ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ.ಗೌತಮ್ ಗಂಭೀರ್ ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ, ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ತಮ್ಮ ಕುಟುಂಬದ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ ಎಂದು ರಾಜೇಂದ್ರ

ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ Read More »

ಉಗ್ರರಿಂದ ಹತ್ಯೆಯಾದವರ ಪಾರ್ಥಿವ ದೇಹಗಳು ಹುಟ್ಟೂರಿಗೆ

ಅಂತಿಮ ದರ್ಶನ ಪಡೆದು ಕಣ್ಣೀರಾದ ಸಿದ್ದರಾಮಯ್ಯ, ಸೋಮಣ್ಣ, ತೇಜಸ್ವಿ ಸೂರ್ಯ ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ರಾಜ್ಯಕ್ಕೆ ಆಗಮಿಸಿದೆ. ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ಮುಂಜಾನೆ 3.30ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಪಾರ್ಥಿವ ಶರೀರ ಆಗಮಿಸಿದಾಗ ಸಂಬಂಧಿಕರ ದುಃಖದ ಕಟ್ಟೆಯೊಡೆಯಿತು. ಈ ವಿಮಾನಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು‌ ಮೃತರ ಕುಟುಂಬಸ್ಥರು ಆಗಮಿಸಿದ್ದರು. ಕೇಂದ್ರ ಸಚಿವ ಸೋಮಣ್ಣ ಮೃತದೇಹವನ್ನು

ಉಗ್ರರಿಂದ ಹತ್ಯೆಯಾದವರ ಪಾರ್ಥಿವ ದೇಹಗಳು ಹುಟ್ಟೂರಿಗೆ Read More »

ರಾಜತಾಂತ್ರಿಕ ಸಂಬಂಧ ಕಟ್‌ : ಸಚಿವೆ ನೀಡಿದ ಎಚ್ಚರಿಕೆ ಏನು?

ಉತ್ತರ ನೀಡಲು ಪಾಕಿಸ್ಥಾನ ಮಾಡುತ್ತಿದೆ ಭಾರಿ ಸಿದ್ಧತೆ ಇಸ್ಲಾಮಾಬಾದ್ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕೈಗೊಂಡ ದಿಟ್ಟ ದೊಡ್ಡ ಕ್ರಮಗಳಿಗೆ ತಾನು ಉತ್ತರ ನೀಡಲಿದ್ದೇನೆ ಎಂದು ಒಪಾಕಿಸ್ಥಾನ ಹೇಳಿದೆ. ಒಂದೆಡೆ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಮೂಲಕ ಪಾಕಿಸ್ಥಾನಕ್ಕೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಿದೆ, ಮತ್ತೊಂದೆಡೆ, ಪಾಕಿಸ್ಥಾನದ ರಾಯಭಾರ ಕಚೇರಿಯನ್ನು ಮುಚ್ಚುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಾಕಿಸ್ಥಾನಿಗಳು 48 ಗಂಟೆಗಳ ಒಳಗೆ

ರಾಜತಾಂತ್ರಿಕ ಸಂಬಂಧ ಕಟ್‌ : ಸಚಿವೆ ನೀಡಿದ ಎಚ್ಚರಿಕೆ ಏನು? Read More »

ಕೊನೆಗೂ ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿಗೆ ದುರಸ್ತಿ ಭಾಗ್ಯ

28.58 ಕೋ. ರೂ. ವೆಚ್ಚದ ದುರಸ್ತಿ ಕಾಮಗಾರಿಗೆ ಇಂದು ಸಂಸದರಿಂದ ಚಾಲನೆ ಮಂಗಳೂರು : ನವಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌-ಬಿ.ಸಿ.ರೋಡ್‌ವರೆಗಿನ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಕೊನೆಗೂ ಕಾಲಕೂಡಿ ಬಂದಿದೆ. ಸುಮಾರು 28 ಕೋ. ರೂ. ವೆಚ್ಚದಲ್ಲಿ ಹೆದ್ದಾರಿಯ ಮರುಡಾಂಬರೀಕರಣ ಮತ್ತು ದುರಸ್ತಿ ನಡೆಯಲಿದ್ದು, ಸಂಸದ ಕ್ಯಾ.ಬ್ರಿಜೇಶ್‌ ಚೌಟ ಇಂದು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸುರತ್ಕಲ್‌ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ.

ಕೊನೆಗೂ ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿಗೆ ದುರಸ್ತಿ ಭಾಗ್ಯ Read More »

error: Content is protected !!
Scroll to Top