ಏ.24 : ಪುತ್ತೂರು ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಪುತ್ತೂರು: ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಏ.24 ರಂದು ಪುತ್ತೂರು ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಏ.24 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಅಲ್ಲದೆ […]

ಏ.24 : ಪುತ್ತೂರು ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ Read More »

ಮರದ ಗೆಲ್ಲು ಬಿದ್ದು ಗಾಯ

ಪುತ್ತೂರು: ಚಲಿಸುತ್ತಿರುವಾಗ ಬೈಕ್ ಮೇಲೆ ಮರದ ಗೆಲ್ಲು ಬಿದ್ದು ಸವಾರನಿಗೆ ಗಾಯಗಳಾಗಿರುವ ಘಟನೆ ಸಾಲ್ಮರ ಜಂಕ್ಷನ್ ಬಳಿ ನಡೆದಿದೆ. ಮಾವಿನ ಮರದ ಗೆಲ್ಲು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ತನ್ನೀರ್ ತಾರಿಗುಡ್ಡೆ ಎಂಬವರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಮರದ ಗೆಲ್ಲು ಬಿದ್ದು ಗಾಯ Read More »

ಕೆ ಎಸ್ ಎಸ್ ಕಾಲೇಜಿನ  ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಕೈಗಾರಿಕಾ  ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ  ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ನಿಪುನ್ ಪರೀಕ್ಷೆಗೆ ಅಗತ್ಯವಾಗಿ ಏಪ್ರಿಲ್ 8 ರಂದು ಪಂಜದಲ್ಲಿರುವ ತೊಂಡಚ್ಚನ್ ಇಂಡಸ್ಟ್ರೀಸ್ ಫ್ಯಾಕ್ಟರಿಗೆ ಭೇಟಿ ಮಾಡಲಾಯಿತು.  ತೊಂಡಚ್ಚನ್ ಇಂಡಸ್ಟ್ರೀಸ್ ಫ್ಯಾಕ್ಟರಿ  ಮಾಲೀಕರಾದ ಮಧು ಎಂಬವರು ಫ್ಯಾಕ್ಟರಿಯಲ್ಲಿ ತಯಾರಾಗುವ ಸಿಮೆಂಟ್ ಹಂಚುಗಳು, ಕಬ್ಬಿಣದ ವಿವಿಧ ಬಗೆಯ ಉಪಕರಣಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಒಟ್ಟು 11 ವಿದ್ಯಾರ್ಥಿಗಳು ಕೈಗಾರಿಕಾ ಭೇಟಿಯಲ್ಲಿ ಭಾಗಿಯಾಗಿದ್ದು ರೇಂಜರ್ ಲೀಡರ್ ಅಶ್ವಿನಿ ಎಸ್ ಎನ್ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕೆ ಎಸ್ ಎಸ್ ಕಾಲೇಜಿನ  ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಕೈಗಾರಿಕಾ  ಭೇಟಿ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಕಳೆದ ಎಂಟು ದಿನಗಳಿಂದ ವೈಭವದಿಂದ ನಡೆಯುತ್ತಿದ್ದು, ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು, ಬಳಿಕ ಶ್ರೀ ದೇವರು ರಥಬೀದಿಗೆ ಬರುವರು. ಆನಂತರ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾಗುವರು. ಈ ಹೊತ್ತಿನಲ್ಲಿ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ಸಾವಿರಾರು ಭಕ್ತಾದಿಗಳ ಕೈಗಳ ಜಯಘೋಷಗಳೊಂದಿಗೆ ಬ್ರಹ್ಮರಥವನ್ನು ಎಳೆಯುತ್ತಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ Read More »

”ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಕುರಿತು ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜ್ ( ಸ್ವಾಯತ್ತ) ವತಿಯಿಂದ “ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಎಂಬ ವಿಷಯದ ಮೇಲೆ ಮಾಹಿತಿ ಕಾರ್ಯಾಗಾರ ಬುಧವಾರ ಏರ್ಪಡಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ವಸ್ತು ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಮಂಜುನಾಥ ಪಟ್ಟಾಭಿ ಮುಖ್ಯ ಉಪನ್ಯಾಸ ನೀಡಿ, ಥಿನ್ ಫಿಲ್ಮ್ ತಂತ್ರಜ್ಞಾನಗಳ ಮಹತ್ವ, ಅಭಿವೃದ್ಧಿಗಳು ಹಾಗೂ ಇಂದಿನ ವಿಜ್ಞಾನ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಇದರ ಅನ್ವಯಿತೆಯ ಬಗ್ಗೆ ಬೆಳಕು ಚೆಲ್ಲಿದರು. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯರ್ ಸಮಾರಂಭದ ಅಧ್ಯಕ್ಷತೆ

”ಥಿನ್ ಫಿಲ್ಮ್ಸ್: ಇಂದಿನ ತಂತ್ರಜ್ಞಾನದ ಚಲನೆ” ಕುರಿತು ಉಪನ್ಯಾಸ Read More »

ಏ.24ರಂದು ಕು.ವಿದುಷಿ ಸಿಂಚನಲಕ್ಷ್ಮೀ ಕೊಡಂದೂರ್ ರಿಂದ  ಭರತನಾಟ್ಯ ರಂಗ ಪ್ರವೇಶವು

ಪೆರ್ನಾಜೆ: ಸುಮ್ಮನೆ ಕುಳಿತವರು ಹೆಜ್ಜೆ ಗುರುತನ್ನು ಮೂಡಿಸಲಾರರು ಹೆಜ್ಜೆ ಗುರುತು  ಮೂಡಿಸಬೇಕೆಂದರೆ ಎದ್ದು ನಡೆಯಲೇಬೇಕು ಕಲಾತ್ಮಕ ಅರ್ಥಪೂರ್ಣವಾದ ಹೆಜ್ಜೆ ಗೆಜ್ಜೆಯ ಸದ್ದಿಗೆ ಅದ್ಭುತ ಭರತನಾಟ್ಯದ ರಂಗಪ್ರವೇಶವು ಏ 24ರಂದು ನಾಟ್ಯ ಸಿಂಚನ ಲಕ್ಷ್ಮಿ ಕೊಡಂದೂರ್ ರವರು ವಿಟ್ಲ ಗಾರ್ಡನ್ ಆಡಿಟೋರಿಯಂ ನಲ್ಲಿ  ಸಂಜೆ 5 ಗಂಟೆಗೆ ಗಣ್ಯರ ಸಮ್ಮುಖದಲ್ಲಿ ಪ್ರದರ್ಶಿಸಲಿದ್ದಾರೆ.  ಕಿರು ಪರಿಚಯ:- ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾನಿಲಯ ಮೈಸೂರ್ ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ

ಏ.24ರಂದು ಕು.ವಿದುಷಿ ಸಿಂಚನಲಕ್ಷ್ಮೀ ಕೊಡಂದೂರ್ ರಿಂದ  ಭರತನಾಟ್ಯ ರಂಗ ಪ್ರವೇಶವು Read More »

ಖಾಸಗಿ ಶಾಲೆಗಳ ಬೇಕಾಬಿಟ್ಟಿ ಶುಲ್ಕ ವಸೂಲಿಗೆ ತಡೆ

ಶಾಲೆ ದಾಖಲಾತಿಗಾಗಿ ಹೊಸ ನಿಯಮ ರಚಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಈಗ ಶಾಲೆ ಕಾಲೇಜುಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕಾಗಿ ಪ್ರವೇಶಾತಿ ಭರದಿಂದ ನಡೆಯುತ್ತಿದೆ. ಈ ಸಂದರ್ಭದಲ್ಲೇ ಖಾಸಗಿ ಶಾಲೆಗಳ ದಾಖಲಾತಿಗಾಗಿ ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ಬಿಡುಗಡೆ ಮಾಡಿ ಮೊದಲಿದ್ದ ಕೆಲವು ನಿಯಮಗಳಿಗೆ ಬ್ರೇಕ್ ಹಾಕಿದೆ. ದಾಖಲಾತಿ ಹೆಸರಲ್ಲಿ ಮಕ್ಕಳು, ಪೋಷಕರಿಗೆ ಕಿರುಕುಳ ಕೊಡುವುದು, ಮಕ್ಕಳ ದಾಖಲಾತಿಗೆ ಪೋಷಕರಿಗೆ ಪರೀಕ್ಷೆ ಇಡುವುದು ಹಾಗೂ ದುಬಾರಿ ಶುಲ್ಕ ವಸೂಲು ಮಾಡುವುದು ಇತ್ಯಾದಿಗಳಿಗೆ ಕಡಿವಾಣ ಹಾಕಲಾಗಿದೆ. ಶಾಲೆಗಳಿಗೆ ಮಕ್ಕಳನ್ನು ಸೇರಿಸುವಾಗ

ಖಾಸಗಿ ಶಾಲೆಗಳ ಬೇಕಾಬಿಟ್ಟಿ ಶುಲ್ಕ ವಸೂಲಿಗೆ ತಡೆ Read More »

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ

ಪುತ್ತೂರು: ಅಕ್ಷಯ    ಕಾಲೇಜಿನಲ್ಲಿ   ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು  ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ ಸಮಾರಂಭದ  ಉದ್ಘಾಟನೆ ಯನ್ನು  ಶ್ರೀ  ಅರುಣ್ ನಾಗೇ ಗೌಡ  ಡಿ.ವೈ.ಎಸ್. ಪಿ  ಪುತ್ತೂರು  ವಿಭಾಗ  ಇವರು  ನಿರ್ವಹಿಸಿ  ವಿದ್ಯಾರ್ಥಿ ಜೀವನದ ಕರ್ತವ್ಯ ವನ್ನು ಸಮರ್ಪಕವಾಗಿ  ನಿಭಾಯಿಸಿ ತಮ್ಮ  ಪೋಷಕರಿಗೆ, ತಮಗೆ  ಶಿಕ್ಷಣ ನೀಡಿದ ಸಂಸ್ಥೆಗೆ ಕೀರ್ತಿಯನ್ನು ತರಬೇಕು. ಕಲಿಕೆ ಮತ್ತು ಕ್ರಮ ಬದ್ಧವಾದ  ಜೀವನ ಉತ್ತಮ ಸಂಸ್ಕಾರವನ್ನು ಕಲಿಸುತ್ತದೆ  ಮಾತ್ರವಲ್ಲ  ಸಮಾಜದಲ್ಲಿ

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ Read More »

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ

ಹಿಂದಿನ ವರ್ಷಕ್ಕಿಂತ 9.94 ಕೋ.ರೂ. ಹೆಚ್ಚಳ ಸುಬ್ರಹ್ಮಣ್ಯ: ರಾಜ್ಯದಲ್ಲೇ ಅತಿಹೆಚ್ಚು ಆದಾಯವಿರುವ ಪುಣ್ಯಕ್ಷೇತ್ರವಾಗಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಕಳೆದ ಹಣಕಾಸು ಸಾಲಿನಲ್ಲೂ ಭಾರಿ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ.ಗೆ ಏರಿಕೆ ಆಗಿದೆ. ಹಿಂದಿನ ವರ್ಷದ ಆದಾಯ 146.01 ಕೋಟಿ ರೂ. ಆಗಿತ್ತು. ಹಿಂದಿನ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ

ಕುಕ್ಕೆ ಕ್ಷೇತ್ರದ ವಾರ್ಷಿಕ ಆದಾಯ 155.95 ಕೋ.ರೂ. ಏರಿಕೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಪುನೀತರಾದ ಲಕ್ಷಾಂತರ ಭಕ್ತರು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅತ್ಯಂತ ವೈಭವದಿಂದ ನಡೆಯುತ್ತಿದ್ದು, ಜಾತ್ರೋತ್ಸವದ ಅಂಗವಾಗಿ ಬುಧವಾರ ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಕಿರುವಾಳು ಭಂಡಾರ ಆಗಮನವಾಯಿತು. ಲಕ್ಷಾಂತರ ಭಕ್ತಾದಿಗಳು ಈ ಸಂದರ್ಭವನ್ನು ಕಣ್ತುಂಬಿಕೊಂಡರು. ಸಂಜೆ 6 ಗಂಟೆಗೆ ಸೂಟೆ ಬೆಳಕಿನೊಂದಿಗೆ ಹೊರಟ ಕಿರುವಾಳು ಬರುವ ದಾರಿಯುದ್ದಕ್ಕೂ ಅಲ್ಲಲ್ಲಿ ಸ್ಥಳೀಯರು ಪಾನೀಯ ವ್ಯವಸ್ಥೆಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಮಲ್ಲಿಗೆ ಅರ್ಪಿಸಿದರು. ರಾತ್ರಿ ಸುಮಾರು 10.30 ಗಂಟೆ ಹೊತ್ತಿಗೆ ಕಿರುವಾಳು ಶ್ರೀ ದೇವಸ್ಥಾನವನ್ನು ತಲುಪಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ | ಪುನೀತರಾದ ಲಕ್ಷಾಂತರ ಭಕ್ತರು Read More »

error: Content is protected !!
Scroll to Top