ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ

ಶಾಶ್ವತ ದೀಪಾಲಂಕಾರಕ್ಕೆ ಚಾಲನೆ-ವಾರದಲ್ಲಿ ಎರಡು ದಿನ ವೀಕ್ಷಣೆಗೆ ಲಭ್ಯ ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧವಿನ್ನು ದೀಪಾಲಂಕಾರದಿಂದ ಜಗಮಗಿಸಲಿದೆ. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಸ್ಪೀಕರ್‌ ಯು.ಟಿ.ಖಾದರ್‌ ಮುತುವರ್ಜಿಯಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಇನ್ನು ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಕಂಗೊಳಿಸಲಿದೆ. ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾತ್ರಿ ಚಾಲನೆ ನೀಡಿದ್ದಾರೆ. ಯುಟಿ ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, […]

ವಿಧಾನಸೌಧವಿನ್ನು ವಿದ್ಯುತ್‌ ದೀಪಾಲಂಕಾರದಿಂದ ಜಗಮಗ Read More »

ತುಳು ರಂಗಭೂಮಿ ಕಲಾವಿದ ಸುರೇಶ್‍ ವಿಟ್ಲ ನಿಧನ

ವಿಟ್ಲ: ತುಳು ರಂಗ ಭೂಮಿ ಕಲಾವಿದ, ಮಂಜೇಶ್ವರ ಶಾರದಾ ಆರ್ಟ್ಸ್ನ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ತುಳು ರಂಗಭೂಮಿ ಕಲಾವಿದ ಸುರೇಶ್‍ ವಿಟ್ಲ ನಿಧನ Read More »

ತಾಯಿ-ಮಗ ಆತ್ಮಹತ್ಯೆಗೆ ಯತ್ನ | ಮಗ ಮೃತ್ಯು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಸುಬ್ರಹ್ಮಣ್ಯ: ತಾಯಿ-ಮಗ ಇಬ್ಬರೂ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಮಗ ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ಇಂದು ನಡೆದಿದೆ. ಸುಲೋಚನಾ ಹಾಗೂ ಮಗ ನಿತಿನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದು, ಮಗ ನಿತಿನ್‍ (35) ಮೃತಪಟ್ಟಿದ್ದಾರೆ. ತಾಯಿ ಸುಲೋಚನಾ ಅವರನ್ನು ಸುಳ್ಯ  ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ

ತಾಯಿ-ಮಗ ಆತ್ಮಹತ್ಯೆಗೆ ಯತ್ನ | ಮಗ ಮೃತ್ಯು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು Read More »

ಭಾವ ತೀರ ಯಾನ ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ | ನಾಳೆ (ಏ.7) ರಂದು ಸಂಜೆ 4-30 ಕ್ಕೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ ಬರುತ್ತಿದ್ದು, ಯಶಸ್ವಿಯಾಗಿ ಪ್ರದರ್ಶನಗೊಳ್ಳುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.7 ಸೋಮವಾರ ಸಂಜೆ 4.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಭಾವ ತೀರ ಯಾನ ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ | ನಾಳೆ (ಏ.7) ರಂದು ಸಂಜೆ 4-30 ಕ್ಕೆ ಶೋ Read More »

ಸಮರ್ಪಣ್‍ ವಿಟ್ಲ ಸಂಘಟನೆಯ ಸೇವಾ ಕಲ್ಪದಲ್ಲಿ ನಿರ್ಮಿಸಿದ ಮನೆ ಗೃಹಪ್ರವೇಶ

ವಿಟ್ಲ: ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ  ಮನೆಯ ಗೃಹಪ್ರವೇಶ ಇಂದು  (ಭಾನುವಾರ) ಬೆಳಿಗ್ಗೆ 7.30 ಕ್ಕೆ  ರಾಜೇಶ್ ಭಟ್ ಅವರ ಪೌರೋಹಿತ್ಯ ದೊಂದಿಗೆ ಗಣಪತಿ ಹವನ ಹಾಗೂ ಹಾಲುಕ್ಕಿಸುವುದರೊಂದಿಗೆ  ನಡೆಯಿತು. ಈ ಸಂದರ್ಭ ಮನೆ ನಿರ್ಮಾಣದಲ್ಲಿ ಸಹಕರಿಸಿದ ಮಹನೀಯರಾದ ಧನಂಜಯ ನೆಕ್ಕರೆ ಕಾಡು,  ರವಿ ಅಂಚನ್ , ಕೀರ್ತನ್ ಸಣ್ಣಗುತ್ತು,  ತೀರ್ಥೆಶ್, ಮಹೇಶ್ , ಮೊದಲಾದವರನ್ನು ಸಮರ್ಪಣ್ ವಿಟ್ಲ ಇದರ ಅಧ್ಯಕ್ಷ ಯಶವಂತ್

ಸಮರ್ಪಣ್‍ ವಿಟ್ಲ ಸಂಘಟನೆಯ ಸೇವಾ ಕಲ್ಪದಲ್ಲಿ ನಿರ್ಮಿಸಿದ ಮನೆ ಗೃಹಪ್ರವೇಶ Read More »

ಕಾರು-ಟೆಂಪೋ ಡಿಕ್ಕಿ : ಅಂಗಡಿಗೆ ನುಗ್ಗಿದ ಟೆಂಪೋ

ಪುತ್ತೂರು: ಕಾರು ಮತ್ತು ಟೆಂಪೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಟೆಂಪೋ ಅಂಗಡಿಗೆ ನುಗ್ಗಿದ ಘಟನೆ ಪುತ್ತೂರು ಖಾಸಗಿ ಬಸ್‍ ನಿಲ್ದಾಣದ ಬಳಿ ಇಂದು ನಡೆದಿದೆ. ಕಾರು ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿದ್ದು ಪರಿಣಾಮ ಟೆಂಪೋ ಪಕ್ಕದಲ್ಲಿದ್ದ ಅಂಗಡಿಯೊಂದಕ್ಕೆ ನುಗ್ಗಿದೆ. ಘಟನೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರು-ಟೆಂಪೋ ಡಿಕ್ಕಿ : ಅಂಗಡಿಗೆ ನುಗ್ಗಿದ ಟೆಂಪೋ Read More »

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌

ರಾಜಕೀಯದಲ್ಲಿ ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ ಎಂದು ಅಚ್ಚರಿಯ ಹೇಳಿಕೆ ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್‌ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್‌ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌ Read More »

ಕರ್ನಾಟಕ ಜಾನಪದ ಅಕಾಡೆಮಿಯ ಡಾ.ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿ ಪ್ರದಾನ

ಪುತ್ತೂರು: ಕರ್ನಾಟಕ ಜಾನಪದ ಅಕಾಡೆಮಿಯ 2023 ನೆಯ ಸಾಲಿನ ಡಾ.ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ. ಚಿನ್ನಪ್ಪ ಗೌಡರಿಗೆ ಪ್ರದಾನ ಮಾಡಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆಯವರು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮತ್ತು ಇತರ ಗಣ್ಯರ ಸಮಕ್ಷಮದಲ್ಲಿ ಅಕಾಡೆಮಿಯ ಕಾರ್ಯಾಲಯದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಜಾನಪದ ಅಕಾಡೆಮಿಯ ಡಾ.ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿ ಪ್ರದಾನ Read More »

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ

ಬೆಂಗಳೂರು: ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಚಿತ್ರಹಿಂಸೆ ನೀಡಿರುವ ವೀಡಿಯೊ ವೈರಲ್ ಆಗಿದೆ. ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿಪಿಕ್ಕಿ

ಕಳ್ಳತನ ಮಾಡಿದ ಬಾಲಕರನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ Read More »

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ

ಗೂಡ್ಸ್ ವಾಹನಗಳು, ಟ್ಯಾಕ್ಸಿ ಸೇರಿ 6 ಲಕ್ಷಕ್ಕೂ ವಾಹನಗಳ ಸಂಚಾರ ಸ್ಥಗಿತ ಬೆಂಗಳೂರು: ರಾಜ್ಯದಲ್ಲಿ ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಏ.14ರಿಂದ ಮುಷ್ಕರ ಹೂಡಲು ಲಾರಿ ಮಾಲೀಕರು ತೀರ್ಮಾನಿಸಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಮತ್ತು ಟೋಲ್ ದರ ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್​ 14ರ ಮಧ್ಯರಾತ್ರಿಯಿಂದ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ಡೀಸೆಲ್‌ ಬೆಲೆ ಏರಿಕೆಗೆ ಪ್ರತಿಭಟನೆ : ಏ.14ರಿಂದ ಲಾರಿ ಮುಷ್ಕರ Read More »

error: Content is protected !!
Scroll to Top