ಉಗ್ರರ ಜೊತೆ ನಂಟು: ಬಳ್ಳಾರಿಯ ಅಬ್ದುಲ್ ಸಲಾಮ್‌ನನ್ನು ಬಂಧಿಸಿದ ವಿಜಯವಾಡ ಪೊಲೀಸರು

ಬಳ್ಳಾರಿ: ಆನ್‌ಲೈನಿನಲ್ಲಿ ‌ಮೂಲಭೂತವಾದದ ಬಗ್ಗೆ ಪ್ರಚಾರ, ಉಗ್ರರ ಜೊತೆ ನಂಟು ಹೊಂದಿರುವ ಆರೋಪದಲ್ಲಿ ದೇಶದಲ್ಲಿ 12 ಯುವಕರನ್ನು ಬಂಧಿಸಲಾಗಿದ್ದು, ಇದರಲ್ಲಿ ಓರ್ವ ಬಂಧಿತ ಬಳ್ಳಾರಿಯವ ಎಂದು ತಿಳಿದು ಬಂದಿದೆ. ಶಂಕಿತನನ್ನು ಬಳ್ಳಾರಿಯ ಅಬ್ದುಲ್ ಸಲಾಮ್ (36) ಎಂದು ಗುರುತಿಸಲಾಗಿದೆ. ಕರ್ನಾಟಕ, ಬಿಹಾರ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಜಯವಾಡ ಪೊಲೀಸರು ನಡೆಸಿದ ಕಾರ್ಯಾಚರಣೆಯ ಸಂದರ್ಭದಲ್ಲಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಿಷೇಧಿತ ಉಗ್ರ ಸಂಘಟನೆಗಳ ಜೊತೆ ನಂಟು, ಉಗ್ರವಾದದ ಬಗ್ಗೆ ಪ್ರಚಾರ ಮಾಡುತ್ತಿರುವ ಹಿನ್ನೆಲೆ ಆರೋಪಿ […]

ಉಗ್ರರ ಜೊತೆ ನಂಟು: ಬಳ್ಳಾರಿಯ ಅಬ್ದುಲ್ ಸಲಾಮ್‌ನನ್ನು ಬಂಧಿಸಿದ ವಿಜಯವಾಡ ಪೊಲೀಸರು Read More »

ತರಗತಿಯಲ್ಲೇ ‌ವಿದ್ಯಾರ್ಥಿನಿಗೆ ಲವ್ ಪ್ರೊಪೋಸ್ ಮಾಡಿದ ಪ್ರೊಫೆಸರ್

ಬೆಂಗಳೂರು: ವಿದ್ರಾರ್ಥಿನಿಯೊಬ್ಬಳಿಗೆ ಪ್ರೊಫೆಸರ್ ಒಬ್ಬ ತರಗತಿ ನಡೆಯುತ್ತಿರುವಾಗಲೇ ಲವ್ ಪ್ರೊಪೋಸ್ ಮಾಡಿದ್ದು, ಇದು ವಿವಾದ ಸೃಷ್ಟಿ ಮಾಡಿದೆ. ಪ್ರತಿಷ್ಟಿತ ಮೆಡಿಕಲ್ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಪ್ರೊ. ಅಬ್ದುಲ್ಲಾ ಎಂಬಾತ ಚಾಕೊಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆಯನ್ನು ತರಗತಿಯಲ್ಲೇ ಮಾಡಿದ್ದಾನೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿ ಆಕ್ರೋಶದಿಂದ ಆತನನ್ನು ಪ್ರಶ್ನೆ ಮಾಡಿದ್ದಾಳೆ. ಘಟನೆಯಿಂದ ವಿವಾದ ಉಂಟಾಗಿತ್ತು, ಬೇರೆ ವಿದ್ಯಾರ್ಥಿಗಳು ಸಹ ಪ್ರೊಫೆಸರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆತನನ್ನು ಹಿಂಬಾಲಿಸಿ ಕ್ಯಾಂಪಸ್ ನಲ್ಲೇ ಹೊಡೆದಿರುವ ಘಟನೆ ಸಹ ನಡೆದಿದೆ. ಪರಿಸ್ಥಿತಿ

ತರಗತಿಯಲ್ಲೇ ‌ವಿದ್ಯಾರ್ಥಿನಿಗೆ ಲವ್ ಪ್ರೊಪೋಸ್ ಮಾಡಿದ ಪ್ರೊಫೆಸರ್ Read More »

ಬಸ್ – ಟಿಪ್ಪರ್ ‌ಅಪಘಾತ: ಹೊತ್ತಿಕೊಂಡ ಬೆಂಕಿಯಲ್ಲಿ ಹತ್ತು ಮಂದಿ ಸಜೀವ ದಹನ

ಹೈದರಾಬಾದ್: ಬಸ್‌ ಮತ್ತು ಟಿಪ್ಪರ್ ಢಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಸುಮಾರು 10 ಮಂದಿ ಸಜೀವ ದಹನವಾದ ಘಟನೆ ಮಾರ್ಕಪುರಂ ಬಳಿಯ ರಾಯವರಂ ಎಂಬಲ್ಲಿ ನಡೆದಿದೆ. ಹರಿಕೃಷ್ಣ ಟ್ರಾವೆಲ್ಸ್‌ಗೆ ‌ಸೇರಿದ ಬಸ್ಸು ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದಿದೆ. ಈ ದುರಂತದಲ್ಲಿ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಬಸ್ಸು ಸಂಪೂರ್ಣವಾಗಿ ಬೆಂಕಿಗೆ ಸುಟ್ಟು ಹೋಗಿದೆ. ಘಟನೆಯಲ್ಲಿ 10 ಮಂದಿ ಸಜೀವವಾಗಿ ಸುಟ್ಟು ಹೋಗಿದ್ದಾಗಿ ತಿಳಿದು ಬಂದಿದೆ. ಬೆಳಗ್ಗೆ ಸುಮಾರು 6 ರಿಂದ

ಬಸ್ – ಟಿಪ್ಪರ್ ‌ಅಪಘಾತ: ಹೊತ್ತಿಕೊಂಡ ಬೆಂಕಿಯಲ್ಲಿ ಹತ್ತು ಮಂದಿ ಸಜೀವ ದಹನ Read More »

ಕೆಲಸಕ್ಕೆಂದ್ದು ಹೊರಟು ಹೋದ ಯುವತಿ ನಾಪತ್ತೆ

ಬಂಟ್ವಾಳ: ಕೆಲಸಕ್ಕೆಂದು ತೆರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಅರಳ ಗ್ರಾಮದ ಮುಲಾರಪಟ್ಟದಲ್ಲಿ ನಡೆದಿದೆ. ಮುಲ್ಲಾರಪಟ್ಟ ಆಝಾದ್ ನಗರದನಿವಾಸಿ ಅಬ್ದುಲ್ ರಶೀದ್‌ರವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿ. ಪಿಯುಸಿ ಮುಗಿಸಿ ಕಂಪ್ಯೂಟರ್ ತರಬೇತಿ ಪಡೆದಿದ್ದು, ಬಿ.ಸಿ.ರೋಡ್ ನ ಸೈಬರ್ ಸೆಂಟರ್ ನಲ್ಲಿ ಕೆಲಸ ಮಾಡಿತ್ತಿದ್ದರು. ಎಂದಿನಂತೆ ಮಾ.24ರಂದು ಕೆಲಸಕ್ಕೆಂದು ತೆರಳಿದ ಫಾತಿವiತ್ ಇಪ್ರಾ ಸಂಜೆಯಾದರು ಮನೆಗೆ ಬಾರದಿರುವುದನ್ನು ಕಂಡು ಗಾಬರಿಗೊಂಡ ಪೋಷಕರು ಆಕೆ ಕೆಲಸ ಮಾಡುವ ಸೈಬರ್ ಸೆಂಟರ್ ನ ಮಾಲೀಕ ಮನ್ನೂರ್ ಅವರ

ಕೆಲಸಕ್ಕೆಂದ್ದು ಹೊರಟು ಹೋದ ಯುವತಿ ನಾಪತ್ತೆ Read More »

ಕೌಟುಂಬಿಕ ಕಲಹದಿಂದ ‌ಮಹಿಳೆ ಆತ್ಮಹತ್ಯೆ: ಪತಿ ಮನೆಯವರ ವಿರುದ್ದ ದೂರು ದಾಖಲು

ಧಾರವಾಡ: ಜಯ ನಗರದ 4 ನೇ ಕ್ರಾಸ್‌ನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕೆ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯೆ ಸರೋಜಾ ಪಾಟೀಲ ಎಂಬವರ ಪುತ್ರಿ‌ ಸವಿತಾ ಹೊಂಗಲಮಠ ಎಂಬವರೇ ‌ಮೃತ ದುರ್ದೈವಿ. ಸವಿತಾ ಅವರು ಪತಿಯ ಮನೆಯಲ್ಲೇ ನೇಣಿಗೆ ಶರಣಾಗಿರುವುದಾಗಿದೆ. ಆದರೆ ಸವಿತಾ ಮನೆಯವರು ಇದು ಕೊಲೆ, ಆತ್ಮಹತ್ಯೆ ಅಲ್ಲ ಎಂಬುದಾಗಿ ಆರೋಪಿಸಿದ್ದಾರೆ. ಸವಿತಾ ಅವರಿಗೆ ಪತಿ ಮನೆಯಲ್ಲಿ ಸಾಕಷ್ಟು ಕಿರುಕುಳ ನೀಡಲಾಗುತ್ತಿತ್ತು. ಆಕೆಯ ಪತಿಯೇ ಕೊಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.

ಕೌಟುಂಬಿಕ ಕಲಹದಿಂದ ‌ಮಹಿಳೆ ಆತ್ಮಹತ್ಯೆ: ಪತಿ ಮನೆಯವರ ವಿರುದ್ದ ದೂರು ದಾಖಲು Read More »

ಭಾರತ ಪಾಕಿಸ್ತಾನದಂತೆ ದಲ್ಲಾಳಿಯಲ್ಲ: ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರದ ತಿರುಗೇಟು

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟು ಶಮನಕ್ಕೆ ಭಾರತ ಪ್ರಯತ್ನ ನಡೆಸಬೇಕಿತ್ತು ಎಂಬ ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರ ತಕ್ಕ ತಿರುಗೇಟು ನೀಡಿದೆ. ಕೇಂದ್ರ ಸರ್ಕಾರದ ಸರ್ವಪಕ್ಷ ಸಭೆಯಲ್ಲಿ ಈ ಬಗ್ಗೆ ಮಾತನಾಡಿರುವ‌ ವಿದೇಶಾಂಗ ಸಚಿವ ಎಸ್. ಜೈಶಂಕರ್, ಯುದ್ಧ ನಿಲ್ಲಿಸುವಂತೆ ಮಾತುಕತೆ ನಡೆಸಲು ಭಾರತ‌ವು ಪಾಕಿಸ್ತಾನದ ಹಾಗೆ ದಲ್ಲಾಳಿಯಲ್ಲ. ಈ ಸಂಘರ್ಷದಿಂದ ಎಲ್ಲರಿಗೂ ತೊಂದರೆಯಾಗುತ್ತಿದ್ದು, ತಕ್ಷಣ ಇದನ್ನು ನಿಲ್ಲಿಸಬೇಕು ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಮೋದಿ ಹೇಳಿದ್ದಾರೆ. ಪಾಕಿಸ್ಥಾನವು ಮಧ್ಯಸ್ಥಿಕೆ ವಹಿಸುತ್ತಿರುವುದು ಹೊಸ ವಿಚಾರವೇನಲ್ಲ. 1981ರಿಂ ದಲೂ ಅಮೆರಿಕವು

ಭಾರತ ಪಾಕಿಸ್ತಾನದಂತೆ ದಲ್ಲಾಳಿಯಲ್ಲ: ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರದ ತಿರುಗೇಟು Read More »

ವಿಟ್ಲ: ಬೈಕ್ – ಲಾರಿ ನಡುವೆ ಡಿಕ್ಕಿ

ವಿಟ್ಲ: ಇಲ್ಲಿನ ಕಾಶಿಮಠ ಪೆಟ್ರೋಲ್ ಪಂಪ್ ಬಳಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಲ್ಲಕಟ್ಟ ನಿವಾಸಿ ರತ್ನಕರ್ ಎಂಬುವವರು ಗಾಯಗೊಂಡಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಗೊಂಡ ರತ್ನಾಕರ್ ರವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಟ್ಲ: ಬೈಕ್ – ಲಾರಿ ನಡುವೆ ಡಿಕ್ಕಿ Read More »

ಕಾರುಗಳ ಮುಖಾಮುಖಿ ಡಿಕ್ಕಿ : ಪಾದಚಾರಿಗೆ ಗಂಭೀರ ಗಾಯ

ಬೆಳ್ಳಾರೆಯಲ್ಲಿ ಕಾರುಗಳ ನಡುವೆ ಅಪಘಾತ ನಡೆದಿದ್ದು, ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರು ಗುದ್ದಿ ಗಂಭೀರ ಗಾಯವಾದ ಘಟನೆ ಬುಧವಾರ ಸಂಜೆ ನಡೆದಿದೆ. ಮಾರುತಿ 800 ಕಾರು ಮತ್ತು ಬ್ರಿಜಾ ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ಪರಿಣಾಮ ಹತ್ತಿರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಗುದ್ದಿದೆ. ಕಾರು ಗುದ್ದಿದ ಪರಿಣಾಮ ಪೆರುವಾಜೆಯ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ಮುಖಾಮುಖಿ ಡಿಕ್ಕಿ : ಪಾದಚಾರಿಗೆ ಗಂಭೀರ ಗಾಯ Read More »

ಸಾಹಿತ್ಯ–ಶಿಕ್ಷಣ–ಸಾಮಾಜಿಕ ಸೇವೆಯ ಸಮನ್ವಯ ಸಾಧಕ ಪುತ್ತೂರು ಉಮೇಶ್ ನಾಯಕ್ ಅವರಿಗೆ ‘ಸುವರ್ಣ ಕನ್ನಡಿಗ’ ಪ್ರಶಸ್ತಿ

ಪುತ್ತೂರು: ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಸೇವೆಯ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ಸಮಾಜದ ವಿವಿಧ ಹಂತಗಳ ಮೇಲೆ ಸ್ಪಷ್ಟ ಹಾಗೂ ಸಕಾರಾತ್ಮಕ ಪ್ರಭಾವ ಬೀರಿರುವ ಬಹುಮುಖ ವ್ಯಕ್ತಿತ್ವದ ಚಿಂತನೆ ಕ್ರಿಯಾಶೀಲತೆ ಮತ್ತು ಮಾನವೀಯತೆಗಳ ಭಾವದ ಮೂಲಕ ಪುತ್ತೂರು ತಾಲೂಕಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತನ್ನದೇ ಆದ ವಿಶಿಷ್ಟ ಗುರುತನ್ನ ನಿರ್ಮಿಸಿರುವ ನಿರ್ಗತಿಕರ ಆಪತ್ಬಾಂಧವ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು, 2026ನೇ ಸಾಲಿನ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ಪ್ರಶಸ್ತಿಗೆ

ಸಾಹಿತ್ಯ–ಶಿಕ್ಷಣ–ಸಾಮಾಜಿಕ ಸೇವೆಯ ಸಮನ್ವಯ ಸಾಧಕ ಪುತ್ತೂರು ಉಮೇಶ್ ನಾಯಕ್ ಅವರಿಗೆ ‘ಸುವರ್ಣ ಕನ್ನಡಿಗ’ ಪ್ರಶಸ್ತಿ Read More »

ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು

ಬೀದರ್: ಆನ್‌ಲೈನ್ ಗೇಮ್ಸ್ ಹುಚ್ಚಿಗೆ ಹಣ ಕಳಕೊಂಡ ನೋವಿನಲ್ಲಿ ‌ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್‌ನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದೆ. ಮೃತನನ್ನು ಅಂತಿಮ ವರ್ಷದ ವೈದ್ಯಕೀಯ ಪದವಿ ಓದುತ್ತಿದ್ದ ಅನಿಷ್ಕಾರ್ ‌ಚೌಹಾಣ್ ಎಂದು ಗುರುತಿಸಲಾಗಿದೆ. ಕಲ್ಬುರ್ಗಿಯ ಚಿಂಚೋಳಿ ತಾಲೂಕಿನ ಸಲಗರ್ ಗ್ರಾಮದ ಯುವಕ ಈತ. ಆನ್‌ಲೈನ್ ಗೇಮ್ಸ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಕಾಲೇಜಿನ ವಸತಿ ಗೃಹದಲ್ಲೇ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ್ದಾನೆ. ಅನಿಷ್ಕಾರ್ ತನ್ನ ಸ್ನೇಹಿತನಿಂದಲೂ ‌ಸುಮಾರು ಎಪ್ಪತ್ತು ಸಾವಿರ ರೂ.

ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು Read More »

error: Content is protected !!
Scroll to Top