ವಿಟ್ಲ: ಬೈಕ್ – ಲಾರಿ ನಡುವೆ ಡಿಕ್ಕಿ

ವಿಟ್ಲ: ಇಲ್ಲಿನ ಕಾಶಿಮಠ ಪೆಟ್ರೋಲ್ ಪಂಪ್ ಬಳಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಲ್ಲಕಟ್ಟ ನಿವಾಸಿ ರತ್ನಕರ್ ಎಂಬುವವರು ಗಾಯಗೊಂಡಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಗೊಂಡ ರತ್ನಾಕರ್ ರವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಟ್ಲ: ಬೈಕ್ – ಲಾರಿ ನಡುವೆ ಡಿಕ್ಕಿ Read More »

ಕಾರುಗಳ ಮುಖಾಮುಖಿ ಡಿಕ್ಕಿ : ಪಾದಚಾರಿಗೆ ಗಂಭೀರ ಗಾಯ

ಬೆಳ್ಳಾರೆಯಲ್ಲಿ ಕಾರುಗಳ ನಡುವೆ ಅಪಘಾತ ನಡೆದಿದ್ದು, ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರು ಗುದ್ದಿ ಗಂಭೀರ ಗಾಯವಾದ ಘಟನೆ ಬುಧವಾರ ಸಂಜೆ ನಡೆದಿದೆ. ಮಾರುತಿ 800 ಕಾರು ಮತ್ತು ಬ್ರಿಜಾ ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ಪರಿಣಾಮ ಹತ್ತಿರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರು ಗುದ್ದಿದೆ. ಕಾರು ಗುದ್ದಿದ ಪರಿಣಾಮ ಪೆರುವಾಜೆಯ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ಮುಖಾಮುಖಿ ಡಿಕ್ಕಿ : ಪಾದಚಾರಿಗೆ ಗಂಭೀರ ಗಾಯ Read More »

ಸಾಹಿತ್ಯ–ಶಿಕ್ಷಣ–ಸಾಮಾಜಿಕ ಸೇವೆಯ ಸಮನ್ವಯ ಸಾಧಕ ಪುತ್ತೂರು ಉಮೇಶ್ ನಾಯಕ್ ಅವರಿಗೆ ‘ಸುವರ್ಣ ಕನ್ನಡಿಗ’ ಪ್ರಶಸ್ತಿ

ಪುತ್ತೂರು: ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಸೇವೆಯ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ಸಮಾಜದ ವಿವಿಧ ಹಂತಗಳ ಮೇಲೆ ಸ್ಪಷ್ಟ ಹಾಗೂ ಸಕಾರಾತ್ಮಕ ಪ್ರಭಾವ ಬೀರಿರುವ ಬಹುಮುಖ ವ್ಯಕ್ತಿತ್ವದ ಚಿಂತನೆ ಕ್ರಿಯಾಶೀಲತೆ ಮತ್ತು ಮಾನವೀಯತೆಗಳ ಭಾವದ ಮೂಲಕ ಪುತ್ತೂರು ತಾಲೂಕಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತನ್ನದೇ ಆದ ವಿಶಿಷ್ಟ ಗುರುತನ್ನ ನಿರ್ಮಿಸಿರುವ ನಿರ್ಗತಿಕರ ಆಪತ್ಬಾಂಧವ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು, 2026ನೇ ಸಾಲಿನ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ಪ್ರಶಸ್ತಿಗೆ

ಸಾಹಿತ್ಯ–ಶಿಕ್ಷಣ–ಸಾಮಾಜಿಕ ಸೇವೆಯ ಸಮನ್ವಯ ಸಾಧಕ ಪುತ್ತೂರು ಉಮೇಶ್ ನಾಯಕ್ ಅವರಿಗೆ ‘ಸುವರ್ಣ ಕನ್ನಡಿಗ’ ಪ್ರಶಸ್ತಿ Read More »

ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು

ಬೀದರ್: ಆನ್‌ಲೈನ್ ಗೇಮ್ಸ್ ಹುಚ್ಚಿಗೆ ಹಣ ಕಳಕೊಂಡ ನೋವಿನಲ್ಲಿ ‌ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್‌ನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದೆ. ಮೃತನನ್ನು ಅಂತಿಮ ವರ್ಷದ ವೈದ್ಯಕೀಯ ಪದವಿ ಓದುತ್ತಿದ್ದ ಅನಿಷ್ಕಾರ್ ‌ಚೌಹಾಣ್ ಎಂದು ಗುರುತಿಸಲಾಗಿದೆ. ಕಲ್ಬುರ್ಗಿಯ ಚಿಂಚೋಳಿ ತಾಲೂಕಿನ ಸಲಗರ್ ಗ್ರಾಮದ ಯುವಕ ಈತ. ಆನ್‌ಲೈನ್ ಗೇಮ್ಸ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಕಾಲೇಜಿನ ವಸತಿ ಗೃಹದಲ್ಲೇ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ್ದಾನೆ. ಅನಿಷ್ಕಾರ್ ತನ್ನ ಸ್ನೇಹಿತನಿಂದಲೂ ‌ಸುಮಾರು ಎಪ್ಪತ್ತು ಸಾವಿರ ರೂ.

ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು Read More »

ಮಡಿಕೇರಿಯಲ್ಲಿ ‌ಕಾಣಿಸಿಕೊಂಡ ಹುಲಿ: ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ

ಮಡಿಕೇರಿ: ಇಬ್ನಿಳವಾಡಿಯಲ್ಲಿ ಹುಲಿ ಸಂಚಾರ ಕಂಡು ಬಂದಿದ್ದು,‌ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. ಮಡಿಕೇರಿಯ ಹೊರವಲಯದ ಎರಡು ಕಿ. ಮೀ. ದೂರದ ಪ್ರದೇಶದಲ್ಲಿ ಹುಲಿ ಚಲನವಲನ ಕಂಡುಬಂದಿರುವುದಾಗಿದೆ. ಪೊನ್ನಚೆಟ್ಟಿರ ಸಂದೀಪ್ ಎಂಬವರ ತೋಟದಲ್ಲಿ ಹುಲಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಅರಣ್ಯ ಇಲಾಖೆಗೂ ಈ‌ ಕುರಿತು ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರದೇಶದ ಏಳೆಂಟು ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯನ್ನು ಹೋಲುವ ಪ್ರಾಣಿಯ ಓಡಾಟದ ಬಗ್ಗೆ ಮಾಹಿತಿ ಇತ್ತು. ಅದು ಹುಲಿಯೋ, ಪೆರ್ಪಣವೋ ಎಂಬ ಗೊಂದಲವೂ

ಮಡಿಕೇರಿಯಲ್ಲಿ ‌ಕಾಣಿಸಿಕೊಂಡ ಹುಲಿ: ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ Read More »

ಹರ್ಮುಜ್ ದಾಟಿ ಭಾರತದತ್ತ ಬರುತ್ತಿವೆ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು

ನವದೆಹಲಿ: 92,600 ಮೆಟ್ರಿಕ್ ಟನ್ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು ಹರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದ್ದು, ಇನ್ನೆರಡು ದಿನದಲ್ಲಿ ನವಮಂಗಳೂರು ಬಂದರಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಯುನೈಟೆಟ್ ಅರಬ್ ಎಮಿರೇಟ್ಸ್‌ನ (ಯುಎಇ) ರುವೈಸ್‌ನಿಂದ 45 ಸಾವಿರ ಮೆಟ್ರಿಕ್‌ ಎಲ್‌ಪಿಜಿ ಹೊತ್ತ ಫೈನ್‌ಗ್ಯಾಸ್ ಹಡಗು ಇದೇ 27 ರಂದು ನವಮಂಗಳೂರು ಬಂದರಿಗೆ ಆಗಮಿಸಲಿದೆ ಎಂದು ಬಂದರುಗಳು, ಹಡಗು ಸಾಗಾಣೆ ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ ಮಾಹಿತಿ

ಹರ್ಮುಜ್ ದಾಟಿ ಭಾರತದತ್ತ ಬರುತ್ತಿವೆ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು Read More »

ಮಗಳ ಜೊತೆ ಮನೆ ಬಿಟ್ಟು ನಾಪತ್ತೆಯಾದ ಮಹಿಳೆ: ದೂರು ದಾಖಲು

ಶಿರ್ವ: ಗಂಡನ ಜೊತೆಗೆ ಊಟದ ವಿಷಯದಲ್ಲಿ ಜಗಳವಾಗಿದ್ದು, ಹೆಂಡತಿ ತನ್ನ ಅಪ್ರಾಪ್ತ ಪುತ್ರಿಯನ್ನು ಕರೆದುಕೊಂಡು ನಾಪತ್ತೆಯಾಗಿರುವ ಘಟನೆ ಬೆಳಪು ಗ್ರಾಮದ ಪುಂಚಲಕಾಡಿನಲ್ಲಿ ನಡೆದಿದೆ. ರೇಣುಕಾ ಗಂಗಾಧರ್ ಪೂಜೇರ್ (28) ಮತ್ತು ಪ್ರತೀಕ್ಷಾ ಗಂಗಾಧರ್ ಪೂಜೇರ್(11) ಎಂಬವರೇ ನಾಪತ್ತೆಯಾದವರು. ಗಂಡ ಮತ್ತು ಹೆಂಡತಿಯ ನಡುವೆ ಮಾ. 20 ರಂದು ಊಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಬಳಿಕ ಕೆಲಸದ ಕಾರಣಕ್ಕೆ ಅಂಗಡಿಗೆ ಹೋಗುವುದಾಗಿ ಹೇಳಿ ಗಂಡ ಮನೆಯಿಂದ ತೆರಳಿದ್ದಾರೆ. ಕೆಲಸ ಮುಗಿಸಿ ಗಂಡ ರಾತ್ರಿ ವೇಳೆ ಮನೆಗೆ ಬಂದಿದ್ದು, ಆಗ

ಮಗಳ ಜೊತೆ ಮನೆ ಬಿಟ್ಟು ನಾಪತ್ತೆಯಾದ ಮಹಿಳೆ: ದೂರು ದಾಖಲು Read More »

ಲಸಿಕೆ ಭಯ: ರೇಬಿಸ್‌ಗೆ ಬಲಿಯಾಯ್ತ ಮುಗ್ಧ ಮಗುವಿನ ಜೀವ

ಮುಂಬೈ: ಚುಚ್ಚುಮದ್ದಿನ ಭಯಕ್ಕೆ ರೇಬಿಸ್ ಲಸಿಕೆಯನ್ನು ಪಡೆಯದೇ 9 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಹಾರಾಷ್ಟ್ರದ ಮುಂಬೈ‌ನಲ್ಲಿ ನಡೆದಿದೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಕಶಿಷ್ ಸಹಾನಿ ಎಂಬ ಬಾಲಕಿಯೇ ‌ಮೃತ ದುರ್ದೈವಿ. ಕಶಿಷ್ ಸುಮಾರು ಆರು ತಿಂಗಳ ಹಿಂದೆ ತನ್ನ ತಾತನ ಜೊತೆ ರಸ್ತೆಯಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಬೀದಿ ನಾಯಿಯೊಂದು ಆಕೆಯನ್ನು ಪರಚಿತ್ತು. ತಕ್ಷಣವೇ ಮನೆಯವರು ಅವಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಇಂಜೆಕ್ಷನ್ ಭಯ ಹೊಂದಿದ್ದ ಅವಳು ಲಸಿಕೆ ಪಡೆಯದಿರಲು ಹಠ ಮಾಡಿದ್ದಳು. ಗಾಯ ಚಿಕ್ಕದಾಗಿದ್ದು,

ಲಸಿಕೆ ಭಯ: ರೇಬಿಸ್‌ಗೆ ಬಲಿಯಾಯ್ತ ಮುಗ್ಧ ಮಗುವಿನ ಜೀವ Read More »

ಬೈಕ್ ವಿದ್ಯುತ್ ಕಂಬಕ್ಕೆ ಬಡಿದು ಯುವಕ ಸಾವು

ಸುಳ್ಯ: ನಿಯಂತ್ರಣ ತಪ್ಪಿ ಬೈಕೊಂದು ‌ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಸವಾರ ಮೃತಪಟ್ಟ ಘಟನೆ ನಿಂತಿಕಲ್ಲಿನ ಕೆನರಾ ಬ್ಯಾಂಕ್ ಹತ್ತಿರ ನಡೆದಿದೆ. ಮೆಸ್ಕಾಂ ಗುತ್ತಿಗೆ ನೌಕರ ಲೋಕನಾಥ್ ಎಂಬವರೇ ‌ಮೃತ ದುರ್ದೈವಿ. ಸುಳ್ಯದಿಂದ ತಮ್ಮ ಮನೆಯತ್ತ ಮರಳುತ್ತಿದ್ದ ‌ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾದರೂ, ಗಾಯದ ತೀವ್ರತೆ ಹೆಚ್ಚಾಗಿದ್ದ ಕಾರಣ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಬೈಕ್ ವಿದ್ಯುತ್ ಕಂಬಕ್ಕೆ ಬಡಿದು ಯುವಕ ಸಾವು Read More »

ಯುವತಿಯ ಖಾಸಗಿ ವಿಡಿಯೋ ವಾಟ್ಸಾಪ್‌ನಲ್ಲಿ ಹಂಚಿದ ಆರೋಪಿಗಳ ವಿರುದ್ಧ ದೂರು ದಾಖಲು

ಉಪ್ಪಿನಂಗಡಿ: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ‌ನಂಬಿಸಿ, ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ವಾಟ್ಸಾಪ್ ಮೂಲಕ ಹಂಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಉಪ್ಪಿನಂಗಡಿ ‌ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 20 ವರ್ಷದ ಯುವತಿ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿಯಾಗಿದ್ದು, ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಆರೋಪಿತ ಸುಶಾಂತ್ ಪೂಜಾರಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಸ್ನೇಹ ಪ್ರೀತಿಗೆ ತಿರುಗಿ, ಮದುವೆಯಾಗುವುದಾಗಿ ನಿರ್ಧರಿಸಿದ್ದಾಗಿ

ಯುವತಿಯ ಖಾಸಗಿ ವಿಡಿಯೋ ವಾಟ್ಸಾಪ್‌ನಲ್ಲಿ ಹಂಚಿದ ಆರೋಪಿಗಳ ವಿರುದ್ಧ ದೂರು ದಾಖಲು Read More »

error: Content is protected !!
Scroll to Top