ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತ್ಯು

ಹೈದಾರಾಬಾದ್: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಯಲ್ಲಾರೆಡ್ಡಿ ತಾಲೂಕಿನ ವೆಂಕಟಾಪುರ ಬಳಿ ಯುಗಾದಿ ದಿನವಾದ ಇಂದು ನಡೆದಿದೆ. ತಾಯಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಮೀಪದ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಸಿಎ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆಗೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸ್ವಾಯತ್ತತೆಯನ್ನು ಪಡೆದ ಬಳಿಕ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ದ್ವಿತೀಯ ಆಂತರಿಕ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸಲಾಯಿತು. ಪರೀಕ್ಷಾ ಪ್ರಕ್ರಿಯೆಯ ಗೌಪ್ಯತೆ ಹಾಗೂ ಸಮಗ್ರತೆಗಳನ್ನು ಕಾಪಾಡಿಕೊಳ್ಳಲು ಆನ್‌ಲೈನ್‌ ಪರೀಕ್ಷೆಗಳಿಗೆ ಕಾಲೇಜು ಬಳಸುವ ಸಾಫ್ಟ್‌ವೇರ್ ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಯಾವುದೇ ಇತರ ವೆಬ್‌ಸೈಟ್‌ಗಳನ್ನು ಪ್ರವೇಶಿಸುವುದನ್ನು ಅಥವಾ ಯಾವುದೇ ರೀತಿಯ ಅವ್ಯವಹಾರಗಳಲ್ಲಿ   ತೊಡಗಿಸಿಕೊಳ್ಳುವುದನ್ನು ನಿರ್ಬಂಧಿಸುವ ಮೂಲಕ ಸುರಕ್ಷಿತ ಪರೀಕ್ಷಾ ವಾತಾವರಣವನ್ನು ಖಾತ್ರಿಗೊಳಿಸುತ್ತದೆ. ವಿದ್ಯಾರ್ಥಿಳು ಪರೀಕ್ಷೆಯ ಸಂದರ್ಭದಲ್ಲಿ ತಮ್ಮ ಕಂಪ್ಯೂಟರ್‌ನ ವೆಬ್‌ ಕ್ಯಾಮರಾವನ್ನು ಚಾಲ್ತಿಯಲ್ಲಿರಿಬೇಕಾಗಿದ್ದು 

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಂಸಿಎ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆಗೆ ಚಾಲನೆ Read More »

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣ ಅನಾವರಣ, ಜೇನುಪೆಟ್ಟಿಗೆ ನಿರ್ವಹಣಾ ಸೇವೆ ಲೋಕಾರ್ಪಣೆ, ಜೇನು ಕೃಷಿಕರ ಸಮ್ಮಿಲನ

ಪುತ್ತೂರು: ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣದ ಅನಾವರಣ, ಕೃಷಿಕಾರಿಗಾಗಿ ಜೇನು ಪೆಟ್ಟಿಗೆ ನಿರ್ವಹಣಾ ಸೇವೆಯ ಲೋಕಾರ್ಪಣೆ ಮತ್ತು ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮ ಪುತ್ತೂರಿನ ಜಿ. ಎಲ್. ರೋಟರಿ ಸಭಾಭವನದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ ಕುಮಾರ ರೈ ಜೇನು ಕೃಷಿಯ ಸಾಧಕರನ್ನು ಸನ್ಮಾನಿಸಿ ಮಾತನಾಡಿ, ಜೇನಿನ ಬಳಕೆ ವ್ಯಾಪಕವಾಗಿ ಹೆಚ್ಚಾಗುವಂತೆ ಸರಕಾರದ ಮಟ್ಟದಲ್ಲಿ ಹೆಚ್ಚಿನ ವ್ಯವಸ್ಥೆಯನ್ನು ಜಾರಿಗೊಳಿಸಿ, ಜೇನು ಕೃಷಿಕರಿಗೆ ಉತ್ತಮ ಮಾರುಕಟ್ಟೆ ಲಭಿಸುವಂತೆ ರೈತ ಉತ್ಪಾದಕ ಸಂಸ್ಥೆಯ ಮೂಲಕ ಆಗಲಿ ಎಂದು

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಜಾಲತಾಣ ಅನಾವರಣ, ಜೇನುಪೆಟ್ಟಿಗೆ ನಿರ್ವಹಣಾ ಸೇವೆ ಲೋಕಾರ್ಪಣೆ, ಜೇನು ಕೃಷಿಕರ ಸಮ್ಮಿಲನ Read More »

ಮ್ಯಾನ್ಮಾರ್‌ ಭೂಕಂಪ : ನಿರಂತರವಾಗಿ ಏರುತ್ತಿರುವ ಸಾವಿನ ಸಂಖ್ಯೆ

1,600ಕ್ಕೂ ಹೆಚ್ಚು ಮಂದಿ ಬಲಿ, 3,400 ಮಂದಿಗೆ ಗಾಯ ನೇಪಿಟಾವ್: ಮ್ಯಾನ್ಮಾರ್‌ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಶುಕ್ರವಾರ ಸಂಭವಿಸಿದ ಭೂಕಂಪದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಎರಡು ದಿನ ಕಳೆದರೂ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಲವು ಮಂದಿ ಅವಶೇಷಗಳ ಅಡಿಯಿಂದ ಪವಾಡಸದೃಶವಾಗಿ ಬದುಕುಳಿದು ಹೊರಬಂದಿದ್ದಾರೆ. ಶುಕ್ರವಾರ ಬೆಳಗ್ಗೆ 11.50ರ ವೇಳೆಗೆ ಸಂಭವಿಸಿದ ಭೂಕಂಪ ಶನಿವಾರದ ಹೊತ್ತಿಗೆ ಸುಮಾರು 1600ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. 3,400 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಶುಕ್ರವಾರ ಮ್ಯಾನ್ಮಾರ್‌ನಲ್ಲಿ

ಮ್ಯಾನ್ಮಾರ್‌ ಭೂಕಂಪ : ನಿರಂತರವಾಗಿ ಏರುತ್ತಿರುವ ಸಾವಿನ ಸಂಖ್ಯೆ Read More »

ನಮ್ಮ ಯುಗಾದಿ ಹಬ್ಬ

ಹಬ್ಬಗಳಲ್ಲಿ ಮೊದಲ ಹಬ್ಬ ಯುಗಾದಿ. ನಮ್ಮ ಹಿಂದೂ ಧರ್ಮದ ಪ್ರಕಾರ ವರುಷದ ಪ್ರಥಮ ದಿನವನ್ನು “ಯುಗಾದಿ” ಎಂದು ಕರೆಯಲಾಗುತ್ತದೆ. ಸೂರ್ಯನ ಸುಡು ಬಿಸಿಲಿಗೆ ಬೆಂದು ಒಣಗಿ ತನ್ನೆಲ್ಲಾ ಪತ್ರೆಗಳನ್ನು ಕಳಕೊಂಡ ವೃಕ್ಷ ಮತ್ತೆ  ಚಿಗುರೆಲೆಯ ಸೃಷ್ಟಿಸಿ ಮೃಗ-ಖಗಗಳಿಗೆ ಅಸನ-ವಸನ, ಹಸಿರು ಋಣ ನೀಡಿ ಸುಂದರ, ಸಂಭ್ರಮದ ಬದುಕಿಗೆ ಮುನ್ನುಡಿ ಬರೆಯಲು ಸ್ವಾಗತಿಸುವ ಸುಮುಹೂರ್ತವೇ  “ಯುಗಾದಿ”. ವರುಷಕ್ಕೊಮ್ಮೆ ವಸಂತ ಋತುವಿನ ಆಗಮನ ಚರಾಚರಗಳಲ್ಲಿನ ಎಳೆತನವನ್ನು ದಾಟಿಸಿ  ಯವ್ವನಕ್ಕೆ ಪಲ್ಲವಿ ಬರೆದು ಶೃಂಗಾರದ ಚಿತ್ತಾರ ಬಿಡಿಸುವ ರಮಣೀಯ ಸಮಯವೇ “ಯುಗಾದಿ”.

ನಮ್ಮ ಯುಗಾದಿ ಹಬ್ಬ Read More »

ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದಿಂದ ಸನ್ಮಾನ

ಪುತ್ತೂರು: ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾ ಅವರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನ ನಡೆಯಿತು. ಪುತ್ತೂರು ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಕಲ್ಪನಾ ಅವರನ್ನು ಶಾಲು ಹೊದಿಸಿ, ಹಾರ ಹಾಕಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ., ಕಾರ್ಯಾಧ್ಯಕ್ಷ ಹರಿ ಪ್ರಕಾಶ್ ಬೈಲಾಡಿ, ಉಪಾಧ್ಯಕ್ಷ ರವಿಚಂದ್ರ, ನಾಗೇಶ್, ಚಂದ್ರಶೇಖರ ನಾಯ್ಕ, ಪ್ರಮೋದ್ ಕುಮಾರ್, ಕವಿತಾ, ಸುಲೋಚನಾ, ಆಶಾ ಹಾಗೂ ನೌಕರರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ

ಉಪಖಜಾನೆಯ ಸಹಾಯಕ ನಿರ್ದೇಶಕಿ ಕಲ್ಪನಾರಿಗೆ ಪುತ್ತೂರು ಸರ್ಕಾರಿ ನೌಕರರ ಸಂಘದಿಂದ ಸನ್ಮಾನ Read More »

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ (ಮಾ.30) ಸಂಜೆ 4.45 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾ 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.30 ಭಾನುವಾರ ಸಂಜೆ 4.45ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ (ಮಾ.30) ಸಂಜೆ 4.45 ಕ್ಕೆ ಚಿತ್ರ ಪ್ರದರ್ಶನ Read More »

ಪುತ್ತೂರು: ಬೆಲೆ ಏರಿಕೆಯ ಬಿಸಿಯ ನಡುವೆ ಬೀಡಿ ಕಾರ್ಮಿಕರ ವೇತನ ಇಳಿಕೆ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ನಡೆ ಖಂಡನೀಯ — ಸಿಐಟಿಯು

ಪುತ್ತೂರು: ಬೀಡಿಕಾರ್ಮಿಕರ ಕನಿಷ್ಟ ವೇತನವನ್ನು ಹಿಮ್ಮುಖವಾಗಿ 315 ರಿಂದ 270  ಕ್ಕೆ ಇಳಿಸಿ ಹೊಸ ಆದೇಶ ಮಾಡಿದ ರಾಜ್ಯ ಸರಕಾರದ ನಡೆಯನ್ನು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ (ಸಿಐಟಿಯು) ಅಧ್ಯಕ್ಷ, ನ್ಯಾಯವಾದಿ ಪಿ.ಕೆ.ಸತೀಶನ್ ಮತ್ತು ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್‌ ತೀವ್ರವಾಗಿ ಖಂಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿರುವ ಸುಮಾರು 7 ಲಕ್ಷ ಬೀಡಿ ಕಾರ್ಮಿಕರಿಗೆ ರಾಜ್ಯ ಸರಕಾರ ಅನ್ಯಾಯ ಮಾಡುತ್ತಿದೆ. ಈ ಹಿಂದೆ ಬೀಡಿ ಉದ್ಯಮದಲ್ಲಿನ ಕಾರ್ಮಿಕರಿಗೆ ಕನಿಷ್ಟ ವೇತನವನ್ನು ಕನಿಷ್ಟ ವೇತನ

ಪುತ್ತೂರು: ಬೆಲೆ ಏರಿಕೆಯ ಬಿಸಿಯ ನಡುವೆ ಬೀಡಿ ಕಾರ್ಮಿಕರ ವೇತನ ಇಳಿಕೆ ಮಾಡಿ ಆದೇಶ ಮಾಡಿದ ರಾಜ್ಯ ಸರಕಾರದ ನಡೆ ಖಂಡನೀಯ — ಸಿಐಟಿಯು Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ

ಪುತ್ತೂರು : ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ  ಸಭೆಯು ಸ್ವಾಗತ ಹೋಟೆಲ್ ನಲ್ಲಿ ಜರಗಿತು.  ಶಂಕರ ನಾಯ್ಕ್ ಪುಣಚ ಅವರನ್ನು ನೂತನ ಸದಸ್ಯರಾಗಿ ಸೇರ್ಪಡೆ ಗೊಳಿಸಲಾಯಿತು. ಚಂಚಲಾಕ್ಷಿ ಮತ್ತು ಪದ್ಮನಾಭ ಅವರು ಮಾಡುತ್ತಿರುವ ಸಮಾಜ ಸೇವೆಯ ಬಗ್ಗೆ ಅಭಿನಂದನೆ ಸಲ್ಲಿಸಲಾಯಿತು. ಕೇಂದ್ರ‌ ಸಮಿತಿಯ ಕಾರ್ಯಯೋಜನೆಯ ಮಾಹಿತಿಯನ್ನು ಭಾಸ್ಕರ ಬಾರ್ಯ ನೀಡಿದರು.  ಜಿಲ್ಲಾ ಸಮಿತಿಯ ಸಂಚಾಲಕ ಭಾಸ್ಕರ ಬಾರ್ಯ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಸಂಚಾಲಕ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದ ಸಭೆ Read More »

ಬೆಳ್ಳಿಪ್ಪಾಡಿಯಲ್ಲಿ ಯೌವನಾಶ್ವ ಕಾಳಗ ತಾಳ ಮದ್ದಳೆ

ಪುತ್ತೂರು : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ   ಕಂಬಳದಡ್ಡ – ಬೆಳ್ಳಿಪ್ಪಾಡಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯೌವ್ವನಾಶ್ವ ಕಾಳಗ ತಾಳಮದ್ದಳೆ ಜರಗಿತು.  ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್. ಬಿ, ನಿತೇಶ್ ಕುಮಾರ್.ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ, ಅರ್ಥಧಾರಿಗಳಾಗಿ ರವೀಂದ್ರ ದರ್ಬೆ(ಧರ್ಮರಾಯ), ದಿವಾಕರ ಆಚಾರ್ಯ ಗೇರುಕಟ್ಟೆ, ಪ್ರದೀಪ ಹೆಬ್ಬಾರ್ ಚಾರ (ವ್ಯಾಸ ಮಹರ್ಷಿ,) ಶ್ರೀಧರ ಎಸ್ಪಿ ಸುರತ್ಕಲ್ 

ಬೆಳ್ಳಿಪ್ಪಾಡಿಯಲ್ಲಿ ಯೌವನಾಶ್ವ ಕಾಳಗ ತಾಳ ಮದ್ದಳೆ Read More »

error: Content is protected !!
Scroll to Top