ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಮಂಚಿ ಶಾಲೆಗೆ ಅನುದಾನ ಹಸ್ತಾಂತರ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ ಅವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ 75000 ರೂಪಾಯಿ ಅನುದಾನವನ್ನು ಮಂಚಿ ಸರಕಾರಿ ಪ್ರೌಢಶಾಲೆಗೆ ಹಸ್ತಾಂತರಿಸಿದರು. ಮಂಚಿ ಗ್ರಾಮದ ಸಭಾಭವನ ನಿರ್ಮಾಣಕ್ಕೆ ಈ ಅನುದಾನ ನೀಡಲಾಗಿದೆ. ಮುಂಚಿ ಒಕ್ಕೂಟ ಅಧ್ಯಕ್ಷ ದಿವಾಕರ್ ನಾಯಕ್, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಶಾಲಾ ಮುಖ್ಯಶಿಕ್ಷಕರು ಹಾಗೂ ಆಡಳಿತ ಮಂಡಳಿ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಮಂಚಿ ಶಾಲೆಗೆ ಅನುದಾನ ಹಸ್ತಾಂತರ Read More »

ಮಂಗಳೂರು-ಬೆಂಗಳೂರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ | ಸವಣೂರಿನಲ್ಲಿ ಪತ್ತೆ

ಪುತ್ತೂರು: ಯುವಕನೋರ್ವ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು, 15 ಗಂಟೆ ಬಳಿಕ ಸವಣೂರಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು ನೆಟ್ಟಣ ತಲುಪಿದ ವೇಳೆ ರೈಲ್ವೆ ಮಾಸ್ಟ‌ರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು

ಮಂಗಳೂರು-ಬೆಂಗಳೂರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ | ಸವಣೂರಿನಲ್ಲಿ ಪತ್ತೆ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇನ್ನೋರ್ವ ಆರೋಪಿ ಸೆರೆ

ರಾಜ್ಯದ ಇತರೆಡೆಗಳಿಗೂ ಹರಡಿದೆ ಚಿನ್ನ ಕಳ್ಳ ಸಾಗಾಟ ಜಾಲ ಬೆಂಗಳೂರು: ಕನ್ನಡದ ನಟಿ ರನ್ಯಾ ರಾವ್‌ ಮುಖ್ಯ ಆರೋಪಿಯಾಗಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧಪಟ್ಟು ಮೂರನೇ ಆರೋಪಿಯನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಸೆರೆಯಾಗಿರುವ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಮೇಲೆ ತನಿಖಾಧಿಕಾರಿಗಳು ಕಣ್ಣಿಟ್ಟಿದ್ದರು. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಮಳಿಗೆ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇನ್ನೋರ್ವ ಆರೋಪಿ ಸೆರೆ Read More »

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ

ಸಹೋದರಿಯ ಮೇಲಿನ ಪ್ರೀತಿಯನ್ನು ಸಂಸತ್ತಿನೊಳಗೆ ತೋರಿಸಿ ಎಡವಟ್ಟು ನವದೆಹಲಿ : ಸಂಸತ್ತಿನ ಒಳಗೂ ಏನಾದರೊಂದು ಎಡವಟ್ಟು ಮಾಡಿಕೊಂಡು ಟೀಕೆಗಳಿಗೆ ಗುರಿಯಾಗುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈಗ ಸದನದ ಒಳಗೆ ಸಹೋದರಿ ಪ್ರಿಯಾಂಕ ವಾಡ್ರಾ ಗಾಂಧಿಯ ಕೆನ್ನೆ ಸವರಿ ಕಾಂಗ್ರೆಸ್‌ಗೆ ತಿವ್ರ ಮುಜುಗರವುಂಟುಮಾಡಿದ್ದಾರೆ.ಎರಡು ವರ್ಷದ ಹಿಂದೆ ಹಮ್ಮಿಕೊಂಡ ಭಾರತ್‌ ಜೋಡೊ ಯಾತ್ರೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದಾಗ ಯಾತ್ರೆಯನ್ನು ಸೇರಿಕೊಂಡ ಪ್ರಿಯಾಂಕ ಗಾಂಧಿಯನ್ನು ರಾಹುಲ್‌ ಗಾಂಧಿ ಸಾರ್ವಜನಿಕರ ಎದುರೇ ಬರಸೆಳೆದು ಅಪ್ಪಿ ಹಿಡಿದು ಕೆನ್ನೆಗೆ ಮುತ್ತಿಕ್ಕಿದ ವೀಡಿಯೊ

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ Read More »

ಅಂಡಿಂಜೆ ಬಳಿ ಲೈನ್‍ ಮ್ಯಾನ್‍ ಸುಧಾಕರ ಅವರ ಮೃತದೇಹ ಪತ್ತೆ

ವೇಣೂರು: ಲೈನ್‍ ಮ್ಯಾನ್‍ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಅಂಡಿಂಜೆ ಟಿಸಿ ಬಳಿ ನಡೆದಿದೆ. ನಾರಾವಿ ತುಂಬೆ ಗುಡ್ಡೆ ನಿವಾಸಿ ಕಿಟ್ಟ ಯಾನೆ ಸುಧಾಕರ (45) ಎಂಬವರದ್ದೇ ಮೃತದೇಹ ಪತ್ತೆಯಾಗಿರುವುದು. ಕಳೆದ ಹಲವಾರು ವರ್ಷಗಳಿಂದ ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಧಾಕರ ಅವರು, ಮಾ. 26ರಂದು ಸಂಜೆ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಕೈಯಲ್ಲಿ ಒಂದು ಗಾಯದ ಗುರುತು ಪತ್ತೆಯಾಗಿದೆ. ಇವರ ಸಾವಿಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ವೇಣೂರು

ಅಂಡಿಂಜೆ ಬಳಿ ಲೈನ್‍ ಮ್ಯಾನ್‍ ಸುಧಾಕರ ಅವರ ಮೃತದೇಹ ಪತ್ತೆ Read More »

ಕಾರು ಓವರ್ ಟೇಕ್‍ ಮಾಡುವ ಸಂದರ್ಭ ರಸ್ತೆಗೆ ಬಿದ್ದ ಬೈಕ್‍ : ಸವಾರ ಮೃತ್ಯು

ಬೆಳ್ತಂಗಡಿ: ಕಾರು ಓವರ್‍ ಟೇಕ್‍ ಮಾಡುವ ಸಂದರ್ಭ ಬೈಕೊಂದು ರಸ್ತೆಗೆ ಬಿದ್ದ ಪರಿಣಾಮ ಬೈಕ್‍ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿ ಚರ್ಚ್‍ ರಸ್ತೆಯ ಕಲ್ಕಣಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ (42) ಅಪಘಾತದಿಂದ ಮೃತಪಟ್ಟವರು. ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವ‌ರ್ ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಾರು ಓವರ್ ಟೇಕ್‍ ಮಾಡುವ ಸಂದರ್ಭ ರಸ್ತೆಗೆ ಬಿದ್ದ ಬೈಕ್‍ : ಸವಾರ ಮೃತ್ಯು Read More »

ಯತ್ನಾಳ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು?

ಸೋಷಿಯಲ್‌ ಮೀಡಿಯಾದಲ್ಲಿ ನಡೆಯುತ್ತಿದೆ ಪರ-ವಿರೋಧ ಚರ್ಚೆ ಬೆಂಗಳೂರು : ಫಯರ್‌ಬ್ರಾಂಡ್‌ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಬಿಜೆಪಿ ಹೈಕಮಾಂಡ್‌ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಹೊರಿಸಿ ಆರು ವರ್ಷದ ಮಟ್ಟಿಗೆ ಉಚ್ಚಾಟಿಸಿದ ಸಾಧಕ ಬಾಧಕಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ.ಉರಿ ನಾಲಗೆಯ ಯತ್ನಾಳ ಹಿಂದುತ್ವದ ಕಟ್ಟಾ ಪ್ರತಿಪಾದಕರಾಗಿದ್ದರು. ಎದುರಾಳಿಗಳನ್ನು ಮುಲಾಜಿಲ್ಲದೆ ಕಟುಶಬ್ದಗಳಲ್ಲಿ ಟೀಕಿಸುತ್ತಿದ್ದರು. ಇಂಥ ಟೀಕೆಗಳಿಂದ ಅವರು ಲೆಕ್ಕವಿಲ್ಲದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರೂ ಇದಕ್ಕೆಲ್ಲ ಎದೆಗುಂದುವ ವ್ಯಕ್ತಿತ್ವ ಅವರದ್ದಲ್ಲ. ಅವರ

ಯತ್ನಾಳ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು? Read More »

ಎಸ್ ಎಸ್ ಎಲ್ ಸಿ ಯ 100% ಫಲಿತಾಂಶದ ಗೀಳು | ಪದ್ಮುಂಜ ಸರಕಾರಿ ಶಾಲೆಯಲ್ಲಿ ಎರಡು ಹೆಣ್ಣು ಮಕ್ಕಳಿಗೆ ಅನ್ಯಾಯ

ಬೆಳ್ತಂಗಡಿ: ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಸಹಜವಾಗಿ ಬರುತ್ತಾ ಇದ್ದು, ಸರಕಾರಿ ಶಾಲೆಯು ಎಲ್ಲಾ ತರಹದ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆದು ಬರುತ್ತಿರುವ ಕಡೆ, ಈ ಶೈಕ್ಷಣಿಕ

ಎಸ್ ಎಸ್ ಎಲ್ ಸಿ ಯ 100% ಫಲಿತಾಂಶದ ಗೀಳು | ಪದ್ಮುಂಜ ಸರಕಾರಿ ಶಾಲೆಯಲ್ಲಿ ಎರಡು ಹೆಣ್ಣು ಮಕ್ಕಳಿಗೆ ಅನ್ಯಾಯ Read More »

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ

ಕುಮಾರಸ್ವಾಮಿ, ದೇವೇಗೌಡ ಭೇಟಿಯ ಹಿಂದಿನ ಮರ್ಮವೇನು? ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಬಯಲಾದ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳು ಕುತೂಹಲ ಹುಟ್ಟಿಸಿವೆ. ಅದರಲ್ಲೂ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಹುಕಾರ್‌ ಎಂದೇ ಅರಿಯಲ್ಪಡುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ದಿಲ್ಲಿಗೆ ಹೋದ ಬಳಿಕ ನಡೆದಿರುವ ವಿದ್ಯಮಾನಗಳು ಸಾವಿರ ಕುತೂಹಲ ಹುಟ್ಟಿಸಿವೆ. ಹನಿಟ್ರ್ಯಾಪ್‌ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಬಹಳ ಹಗುರವಾಗಿ ಪರಿಗಣಿಸಿರುವುದರಿಂದ ಕೆರಳಿರುವ ಸತೀಶ್‌ ಜಾರಕಿಹೊಳಿ ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ Read More »

ರಾಜ್ಯದಲ್ಲಿನ್ನು ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ

ಹೊಸ, ತಾತ್ಕಾಲಿಕ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಸಬೇಕು ಬೆಂಗಳೂರು: ರಾಜ್ಯದಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಸ್ಮಾರ್ಟ್ ಮೀಟ‌ರ್ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಕೇಂದ್ರ ಇಂಧನ ಸಚಿವಾಲಯ ಫೆ.22ರಂದು ಹೊರಡಿಸಿದ್ದ ಅಧಿಸೂಚನೆ ಅನ್ವಯ ಕರ್ನಾಟಕ ಮತ್ತು ತೆಲಂಗಾಣ ಬಿಟ್ಟು ಬೇರೆ ಎಲ್ಲ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಜಾರಿಗೆ ತರಲಾಗಿದೆ. ಇತ್ತೀಚೆಗೆ ಕೇಂದ್ರ ಇಂಧನ ಸಚಿವರನ್ನು ಭೇಟಿ ಮಾಡಿದಾಗಲೂ ಸ್ಮಾರ್ಟ್ ಮೀಟರ್ ಅಳವಡಿಸಲು ಸೂಚಿಸಿದ್ದಾರೆ ಎಂದು ತಿಳಿಸಿದರು. ಸ್ಮಾರ್ಟ್‌ ಮೀಟರ್‌

ರಾಜ್ಯದಲ್ಲಿನ್ನು ವಿದ್ಯುತ್‌ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಕಡ್ಡಾಯ Read More »

error: Content is protected !!
Scroll to Top