ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ

ಬೆಂಗಳೂರಿನ ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಬೆಂಗಳೂರು : ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟೆಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿ ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್​ ಚಂದ್ರ ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ. ಈತ ಪಾಕಿಸ್ಥಾನದ ಗೂಢಚಾರ ಸಂಸ್ಥೆ ಐಎಸ್‌ಐ ಪರವಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಹ್ಯಾಕಾಶ ಮತ್ತು ಸೇನೆಗಾಗಿ ಆಧುನಿಕ ರಕ್ಷಣಾ ಉಪಕರಣಗಳನ್ನು ತಯಾರಿಸುವ ಕೇಂದ್ರ ಸರಕಾರ ಸ್ವಾಮ್ಯದ ಬಿಇಎಲ್​ನ ಪ್ರಾಡಕ್ಟ್​​​ […]

ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ Read More »

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 38 ಕೋ. ರೂ. ಮೌಲ್ಯದ ಕೊಕೇನ್‌ ವಶ

75 ಕೋ. ರೂ. ಮಾದಕ ವಸ್ತು ವಶವಾದ ಬೆನ್ನಲ್ಲೇ ಇನ್ನೊಂದು ಪ್ರಕರಣ ಬೆಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ರಾಜ್ಯದಲ್ಲೇ ಅತಿದೊಡ್ಡ ಪ್ರಕರಣವಾದ 75 ಕೋ.ಟಿ ರೂ. ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡ ಬೆನ್ನಲ್ಲೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 38 ಕೋ.ರೂ. ಮೌಲ್ಯದ ಕೊಕೇನ್‌ ವಶವಾಗಿದೆ.ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಘಾನಾ ದೇಶದ ಮಹಿಳೆಯೊಬ್ಬಳನ್ನು ಬಂಧಿಸಿ 38.4 ಕೋಟಿ ರೂ. ಮೌಲ್ಯವಿರುವ 3.186 ಕೆಜಿ ಕೊಕೇನ್‌ ಮಾದಕ ವಸ್ತು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 38 ಕೋ. ರೂ. ಮೌಲ್ಯದ ಕೊಕೇನ್‌ ವಶ Read More »

ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ : ಸಿದ್ದರಾಮಯ್ಯ ದಿಗ್ಭ್ರಮೆ

ದೇಶಾದ್ಯಂತ ಸುದ್ದಿಯಾದ ಮಲ್ಪೆ ಬಂದರಿನಲ್ಲಿ ನಡೆದ ಘಟನೆ ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೊ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೆ ಇರಲಿ ಒಬ್ಬ ಮಹಿಳೆಗೆ ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ

ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ : ಸಿದ್ದರಾಮಯ್ಯ ದಿಗ್ಭ್ರಮೆ Read More »

ಅಬ್ಬಬ್ಬಾ ಈ ಶ್ವಾನದ ಬೆಲೆ 49 ಕೋ.ರೂ.!

ಜಗತ್ತಿನ ದುಬಾರಿ ನಾಯಿಯನ್ನು ಖರೀದಿಸಿದ ಬೆಂಗಳೂರಿನ ಶ್ವಾನಪ್ರೇಮಿ ಬೆಂಗಳೂರು: ಬೆಂಗಳೂರಿನ ಶ್ವಾನಪ್ರೇಮಿ ಎಸ್. ಸತೀಶ್ ಎಂಬುವರು ಜಗತ್ತಿನ ಅತಿ ದುಬಾರಿ ನಾಯೊಂದನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಈ ನಾಯಿಯ ಬೆಲೆ ಕೇಳಿದರೆ ಬೆಚ್ಚಿಬೀಳುವುದು ಖಂಡಿತ. ಇದು ಬರೋಬ್ಬರಿ 49 ಕೋಟಿ ರೂ. (4.4 ಮಿಲಿಯನ್ ಪೌಂಡ್‌ಗಳು) ಬೆಲೆಬಾಳುವ ಅತ್ಯಂತ ಅಪರೂಪದ ನಾಯಿ. ವೂಲ್ಫ್ ಡಾಗ್ ಎಂಬ ವಿಶೇಷ ತಳಿಯ ಶ್ವಾನವನ್ನು ಅವರು ಇಷ್ಟು ದುಬಾರಿ ಬೆಲೆಕೊಟ್ಟು ಖರೀದಿಸಿ ಬೆಂಗಳೂರಿಗೆ ತಂದಿದ್ದಾರೆ. ಕ್ಯಾಡಬಾಮ್ ಒಕಾಮಿ ಎಂದು ಕರೆಯಲ್ಪಡುವ ಈ

ಅಬ್ಬಬ್ಬಾ ಈ ಶ್ವಾನದ ಬೆಲೆ 49 ಕೋ.ರೂ.! Read More »

ಮಾ. 22: ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಕಾಲೇಜಿನ ಸ್ವಾಯತ್ತ ಸ್ಥಾನಮಾನದ’ ಉದ್ಘಾಟನೆ

ಪುತ್ತೂರು: ಕ್ಯಾಥೊಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ  ಫಿಲೋಮಿನಾ ಕಾಲೇಜು, ಕರ್ನಾಟಕ ಸರಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿದ್ದು, ಕಾಲೇಜಿಗೆ ದೊರೆತ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಸಮಾರಂಭ ಮಾ. 22 ರಂದು ಕಾಲೇಜಿನ ಸಭಾಂಗಣದಲ್ಲಿ ಎಂದು ಮಾಯಿದೇ ದೇವುಸ್ ಚರ್ಚ್‍ ಪ್ರಧಾನ ಧರ್ಮಗುರು, ಕಾಲೇಜಿನ ಸಂಚಾಲಕ ಫಾ.ಲಾರೆನ್ಸ್‍ ಮಸ್ಕರೇನಸ್ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ

ಮಾ. 22: ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಕಾಲೇಜಿನ ಸ್ವಾಯತ್ತ ಸ್ಥಾನಮಾನದ’ ಉದ್ಘಾಟನೆ Read More »

ಪ್ರತಿನಿತ್ಯ ಸುಳ್ಯ ಶಾಸಕರು ಓಡಾಡುವ ರಸ್ತೆ ಅಭಿವೃದ್ಧಿಗೆ ಮೀನಮೇಷ | ಹೊಂಡ ಗುಂಡಿಗಳಿಂದ ಕೂಡಿದ ನಿಂತಿಕಲ್ಲು-ಬೆಳ್ಳಾರೆ-ಐವರ್ನಾಡು ಮುಖ್ಯರಸ್ತೆ

ಸುಳ್ಯ: ನಿಂತಿಕಲ್ಲು-ಬೆಳ್ಳಾರೆ-ಐವರ್ನಾಡು ಮುಖ್ಯರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಸುಳ್ಯ ಶಾಸಕರೇ ಪ್ರತಿನಿತ್ಯ ಬಂದು ಹೋಗುವ ರಸ್ತೆಯಾಗಿದೆ. ಆದರೆ ಅಭಿವೃದ್ಧಿ ಕಡೆ ಈ ವರೆಗೂ ಗಮನ ನೀಡದಿರುವುದು ದುರಾದೃಷ್ಟ. ಈ ರಸ್ತೆಯ ದುರಸ್ತಿಗಾಗಿ ಕಳೆದ ಮಳೆಗಾಲದಲ್ಲೇ ಅನುದಾನ ಮಂಜೂರಾಗಿದ್ದರೂ ಇದೀಗ ಮತ್ತೊಂದು ಮಳೆಗಾಲ ಹತ್ತಿರ ಬರುತ್ತಿದ್ದರೂ ದುರಸ್ತಿ ಕಾರ್ಯ ಮಾತ್ರ ಮುಗಿದಿಲ್ಲ. ಶಾಸಕರು ಇದೇ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದರೂ ಇದಕ್ಕೆ ಸಮಸ್ಯೆ ಕಂಡುಕೊಳ್ಳಲು ಸಾಧ್ಯವಾಗದಿದ್ದರೆ ಇತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೇ ಎಂದು ಜನಸಾಮಾನ್ಯರು ಪ್ರಶ್ನಿಸುವಂತಾಗಿದೆ. ಇದಕ್ಕೆ

ಪ್ರತಿನಿತ್ಯ ಸುಳ್ಯ ಶಾಸಕರು ಓಡಾಡುವ ರಸ್ತೆ ಅಭಿವೃದ್ಧಿಗೆ ಮೀನಮೇಷ | ಹೊಂಡ ಗುಂಡಿಗಳಿಂದ ಕೂಡಿದ ನಿಂತಿಕಲ್ಲು-ಬೆಳ್ಳಾರೆ-ಐವರ್ನಾಡು ಮುಖ್ಯರಸ್ತೆ Read More »

ತೆಂಕುತಿಟ್ಟಿನ ಹಿರಿಯ ಮದ್ಲೆಗಾರ ಬಿ.ಗೋಪಾಲಕೃಷ್ಣ ಕುರುಪ್ ನಿಧನ

ಯಕ್ಷಗಾನ ಕ್ಷೇತ್ರದಲ್ಲಿ ಭಾಗವತರಾಗಿ, ಮದ್ದಳೆಗಾರರಾಗಿ  ಮತ್ತು ಯಕ್ಷಗಾನದ ಪರಂಪರೆಯ ಬಗ್ಗೆ ಅಪೂರ್ವ ಜ್ಞಾನವನ್ನು ಹೊಂದಿದ್ದ  ರಾಜ್ಯ ಪ್ರಶಸ್ತಿ ಪುರಸ್ಕೃತ  ಬಿ.ಗೋಪಾಲಕೃಷ್ಣ ಕುರುಪ್ (90ವರ್ಷ) ಮಾರ್ಚ್ 19 ರಂದು ನಿಧನರಾದರು. ಚೆಂಡೆ-ಮದ್ದಲೆ ನುಡಿತಗಳಲ್ಲಿ ಅಪೂರ್ವಜ್ಞಾನವನ್ನು ಪಡೆದುಕೊಂಡಿದ್ದ ಕುರುಪರು ಅದನ್ನು ಪಠ್ಯರೂಪದಲ್ಲಿ ದಾಖಲಿಸಿದ ಮೊದಲಿಗರಾಗಿದ್ದರು. 1952 ರಲ್ಲಿ ಕೂಡ್ಲು ಮೇಳದಲ್ಲಿ ಪೂರ್ವರಂಗಕ್ಕೆ ಹಾಡುವ ಅವಕಾಶದೊಂದಿಗೆ ಮದ್ಲೆಗಾರ ಕುದ್ರೆಕೂಡ್ಲು ರಾಮಭಟ್ ಇವರ ಮಾರ್ಗದರ್ಶನದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಮುಂದುವರಿದರು.  ಹಿರಿಯ ಬಲಿಪ ನಾರಾಯಣ ಭಾಗವತ,  ಅಗರಿ ಶ್ರೀನಿವಾಸ ಭಾಗವತ,  ಕುದ್ರೆಕೂಡ್ಲು ರಾಮ ಭಟ್ಟ,

ತೆಂಕುತಿಟ್ಟಿನ ಹಿರಿಯ ಮದ್ಲೆಗಾರ ಬಿ.ಗೋಪಾಲಕೃಷ್ಣ ಕುರುಪ್ ನಿಧನ Read More »

ಸರಕಾರಿ ಪ್ರಥಮ ದರ್ಜೆ ಕಾಲೇಜು ಮೆಲಂತಬೆಟ್ಟುವಿನಲ್ಲಿ  ನಡೆದ ಅಂತರ್ ಕಾಲೇಜು ಮಟ್ಟದ  ಫೆಸ್ಟ್ “AVINYA 2025 | ಕರಕುಶಲ ವಸ್ತು ತಯಾರಿ ಸ್ಪರ್ಧೆಯಲ್ಲಿ  ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ವಿದ್ಯಾರ್ಥಿಗಳಾದ ರಂಜನ್ ಮತ್ತು ರಶ್ಮಿ ಪ್ರಥಮ

ಬೆಳಂದೂರು : ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಲಂತಬೆಟ್ಟುವಿನಲ್ಲಿ  ಅಂತರ್‍ ಕಾಲೇಜು ಮಟ್ಟದ  “AVINYA 2025” ಕಾರ್ಯಕ್ರಮ ನಡೆಯಿತು. ಇದರಲ್ಲಿ ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು  ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ಭಾಗವಹಿಸಿದ್ದು, ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆ ಯಲ್ಲಿ  ರಂಜನ್ ಮತ್ತು ರಶ್ಮಿ ಪ್ರಥಮ ಬಹುಮಾನ ಪಡೆದಿದ್ದಾರೆ. ವಿಜೇತರಾದ ರಂಜನ್ ಮತ್ತು ರಶ್ಮಿಯವರಿಗೆ ಶಾಲಾ ಪ್ರಾಂಶುಪಾಲರು, ಶಿಕ್ಷಕವೃಂದದವರು ಅಭಿನಂದಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಮೆಲಂತಬೆಟ್ಟುವಿನಲ್ಲಿ  ನಡೆದ ಅಂತರ್ ಕಾಲೇಜು ಮಟ್ಟದ  ಫೆಸ್ಟ್ “AVINYA 2025 | ಕರಕುಶಲ ವಸ್ತು ತಯಾರಿ ಸ್ಪರ್ಧೆಯಲ್ಲಿ  ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ವಿದ್ಯಾರ್ಥಿಗಳಾದ ರಂಜನ್ ಮತ್ತು ರಶ್ಮಿ ಪ್ರಥಮ Read More »

ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಹಾಗೂ ಮಂಗಳೂರು ಮೆಡಿಕಲ್ ಮತ್ತು ಎಜುಕೇಶನ್ ಹಬ್ ಆಗಿದ್ದರೂ, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದ ವ್ಯಾಪಾರ ಹಾಗೂ ಸಾರಿಗೆ ವ್ಯವಸ್ಥೆ ತೀವ್ರ ಅಡಚಣೆಯಾಗುತ್ತಿದೆ ಎಂದು ಎಂ.ಎಲ್‍.ಸಿ ಕಿಶೋರ್ ಕುಮಾರ್ ಪುತ್ತೂರು ಇಂದು ವಿಧಾನ ಪರಿಷತ್ತಿನಲ್ಲಿ ಚರ್ಚಿಸಿದ್ದಾರೆ. ಈ ಹಿಂದೆ ಮಾನ್ಯ ಉಪಮುಖ್ಯಮಂತ್ರಿಗಳು “ಮಂಗಳೂರು ಸಂಜೆ 8 ಗಂಟೆಗೆ ಬಂದ್ ಆಗುತ್ತದೆ” ಎಂದು ಹೇಳಿದ ಕಾರಣಕ್ಕೂ ಸಮರ್ಪಕ ರಸ್ತೆ ಸಂಪರ್ಕದ ಅಭಾವವೇ ಕಾರಣ ಎಂಬುದಾಗಿ ಶಾಸಕರು ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ನಡುವಿನ

ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು Read More »

ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ

ಗಡ್ಕರಿ ಎದುರು 6.5 ಲಕ್ಷ ಮತಗಳಿಂದ ಸೋತವನೇ ಗಲಭೆಯ ಸೂತ್ರಧಾರ ಮುಂಬಯಿ: ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್‌ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿರುವ ಕೋಮು ಹಿಂಸಾಚಾರದ ರೂವಾರಿಯ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಫಾಹಿಮ್‌ ಶಮೀಮ್‌ ಖಾನ್‌ ಎಂಬಾತನ ಪ್ರಚೋದನಕಾರಿ ಭಾಷಣದಿಂದ ಹಿಂಸಾಚಾರ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಫಾಹಿಮ್‌ ಖಾನ್‌ ನಾಗಪುರದ ಯಶೋಧರ ನಗರದ ಸಂಜಯ್‌ ಭಾಗ್‌ ಕಾಲನಿಯ ನಿವಾಸಿಯಾಗಿದ್ದು, ಗಲಭೆಯ ಬಳಿಕ ತಲೆಮರೆಸಿಕೊಂಡಿದ್ದಾನೆ. ನಾಗಪುರ ನಗರದಲ್ಲಿ ರಾಜಕೀಯ ಮುಖಂಡನಾಗಿ ಗುರುತಿಸಿಕೊಂಡಿದ್ದ 38ರ

ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ Read More »

error: Content is protected !!
Scroll to Top