ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಮನೆಯ ಬಳಿ ನೀರಿನ ಪಂಪ್ ಆನ್ ಮಾಡುವ ವೇಳೆ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರಿಪಳ್ಳ ಬಳಿಯ ಕಡಿಯಾರು ಗ್ರಾಮದ ‌ಬಳಿ ನಡೆದಿದೆ. ಶಿವಪ್ರಸಾದ್ ಆದಪ್ಪ (48) ಎಂಬವರೇ ‌ಮೃತ ದುರ್ದೈವಿ. ಅವರು ಪ್ರತಿನಿತ್ಯದ ಕೆಲಸ ಮುಗಿಸಿ ಬೆಳಗ್ಗೆ ತಮ್ಮ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಧಿಸಿದ ಪರಿಣಾಮ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟೇಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷಾ ಹಿನ್ನೆಲೆ […]

ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು Read More »

ಬದರೀನಾಥ, ಕೇದಾರನಾಥ ದೇಗುಲಗಳಿಗಿಲ್ಲ ಅನ್ಯಮತೀಯರಿಗೆ ಪ್ರವೇಶ?

ಡೆಹ್ರಾಡೂನ್: ಬದರೀನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಇನ್ನು ಮುಂದಿನ ದಿನಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಚಾರ್‌ಧಾಮ್ ಯಾತ್ರಾ ಸ್ಥಳಗಳ ವ್ಯಾಪ್ತಿಯ ದೇಗುಲಗಳಿಗೆ ಅನ್ಯ ಧರ್ಮದವರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುವುದಾಗಿ ದೇವಾಲಯ ಮಂಡಳಿ ಘೋಷಣೆ ಮಾಡಿದೆ. ಈ ಬಗ್ಗೆ ಬಿ.ಕೆ.ಟಿ.ಸಿ. ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಅಧಿಕೃತ ಮಾಹಿತಿ ನೀಡಿದ್ದು, ಮಂಡಳಿಯ ನಿಯಂತ್ರಣದಲ್ಲಿರುವ ಎಲ್ಲಾ ಮಂದಿರಗಳಲ್ಲಿ ಅನ್ಯಧರ್ಮೀಯರ ಪ್ರವೇಶವನ್ನು ನಿಷೇಧಿಸಲಾಗುವುದು. ಮುಂಬರುವ ಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ಈ

ಬದರೀನಾಥ, ಕೇದಾರನಾಥ ದೇಗುಲಗಳಿಗಿಲ್ಲ ಅನ್ಯಮತೀಯರಿಗೆ ಪ್ರವೇಶ? Read More »

ಪ್ರವಾಸಿ ಗಾಡಿ ಗುದ್ದಿ ಮಹಿಳೆ ಸಾವು

ಚಿಕ್ಕಮಗಳೂರು: ಪ್ರವಾಸಿ ವಾಹನವೊಂದು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಆಲ್ದೂರಿನಲ್ಲಿ ನಡೆದಿದೆ. ನವಮಿ (30) ಮೃತ ದುರ್ದೈವಿ. ಅಪಘಾತ ನಡೆದ ಬಳಿಕ ಗಾಡಿಯನ್ನು ‌ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ನವಮಿ ಅವರು ಆಲ್ದೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿದ್ದರು. ಡಿಕ್ಕಿ ಹೊಡೆದ ಗಾಡಿ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

ಪ್ರವಾಸಿ ಗಾಡಿ ಗುದ್ದಿ ಮಹಿಳೆ ಸಾವು Read More »

ಬೇರೆಯವರ ತಪ್ಪನ್ನು ಹುಡುಕುವುದು ಬೇಡ: ಡಿ. ಕೆ. ಶಿವಕುಮಾರ್

ಬೆಂಗಳೂರು: ಭಾರತದ ಆರ್ಥಿಕತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಗೊತ್ತಿಲ್ಲ. ಇನ್ಯಾವುದೋ ದೇಶದಲ್ಲಿ ನಿಂತು ನಾವು ನಮ್ಮ ದೇಶವನ್ನು ಬಳಸಿಕೊಳ್ಳಲು ಆಗುವುದೇ? ದೇಶದ ಧ್ವಜ ಹಾಕಿಕೊಂಡು ಹೋಗಿ ದೇಶವನ್ನು ತೆಗಳಲಾಗುತ್ತದೆಯೇ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರದ ನೀತಿಯಿಂದ ಭಾರತದ ಆರ್ಥಿಕತೆ ನಾಶವಾಗಿದೆ. ಹೀಗಾಗಿ ದೇಶಕ್ಕೆ ಹೂಡಿಕೆಗ‌ಳು ಬರುತ್ತಿಲ್ಲ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಹೃದಯ ಶ್ರೀಮಂತಿಕೆಯಿಂದ

ಬೇರೆಯವರ ತಪ್ಪನ್ನು ಹುಡುಕುವುದು ಬೇಡ: ಡಿ. ಕೆ. ಶಿವಕುಮಾರ್ Read More »

ಶಿಲ್ಪ ವಿಜಯ ತಾಳಮದ್ದಳೆ

ಮೂಡಬಿದಿರೆ: ಆಲಂಂಗಾರು ಜಗದ್ಗುರು ಶ್ರೀ ಅಯ್ಯ ಸ್ವಾಮಿ ಮಠದಲ್ಲಿ ಶ್ರೀ ಗುರು ಆರಾಧನೆಯ ಪ್ರಯುಕ್ತ ಜ. 23 ರಂದು ಶ್ರೀ ವಿಶ್ವಕರ್ಮ ಸಂಸ್ಕೃತಿ ಪ್ರಸಾರ ಪ್ರತಿಷ್ಠಾನ ತಂಡದಿಂದ ಕವಿ ಗಣೇಶ್ ಆಚಾರ್ಯ ಕುಂಜೂರು ವಿರಚಿತ ಶಿಲ್ಪ ವಿಜಯ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕೆ. ಆಚಾರ್ಯ ಅಲಂಕಾರು ಹಿಮ್ಮೇಳದಲ್ಲಿ ಕು. ಶ್ರಾವ್ಯ ತಲಕಳ, ಕು. ಶಮ ತಲಕಳ, ಕು. ಪೂಜಾ ಆಚಾರ್ಯ, ಅರ್ಥಧಾರಿಗಳಾಗಿ ಜಬ್ಬಾರ್ ಸಮೊ, ದಿವಾಕರ ಆಚಾರ್ಯ ಗೇರುಕಟ್ಟೆ, ಮಾಣಿ ಸತೀಶ ಆಚಾರ್ಯ, ಹರೀಶ ಆಚಾರ್ಯ

ಶಿಲ್ಪ ವಿಜಯ ತಾಳಮದ್ದಳೆ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ಸವಣೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಚರಿಸಲಾದ 77ನೆಯ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಸಂಸ್ಥೆಯ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಕೆ. ಧ್ವಜಾರೋಹಣಗೈದರು. ಬಳಿಕ ಮಾತನಾಡಿದ ಅವರು, ಗಣರಾಜ್ಯೋತ್ಸವ ದಿನದ ಮಹತ್ವವನ್ನು ಮುಂದಿನ ಪರಂಪರೆಗೂ ಮಕ್ಕಳು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಮಕ್ಕಳು ತಮ್ಮ ಹೆತ್ತವರು ಮತ್ತು ಸಹಪಾಠಿಗಳನ್ನು ಪ್ರೀತಿಸುವಂತೆ ನಮ್ಮ ದೇಶದ ಸಂವಿಧಾನ ಮತ್ತು ಕಾನೂನನ್ನು ಪ್ರೀತಿಸಿ ಗೌರವಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್.

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ Read More »

ಗಣರಾಜ್ಯೋತ್ಸವದಲ್ಲಿ ರಾಜಕೀಯ ಭಾಷಣ: ಎಚ್.ಕೆ. ಪಾಟೀಲ – ಎಸ್. ವಿ. ಸಂಕನೂರು ‌ನಡುವೆ ವಾಗ್ವಾದ

ಗದಗ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಭಾಷಣದ ವಿಚಾರವಾಗಿ ಸಚಿವ ಎಚ್. ಕೆ. ಪಾಟೀಲ ಮತ್ತು ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು ಅವರ ನಡುವೆ ವಾಗ್ವಾದ ನಡೆದಿದ್ದು, ಗೊಂದಲ ಸೃಷ್ಟಿಯಾಯಿತು. ಎಚ್. ಕೆ. ಪಾಟೀಲ ಅವರು ತಮ್ಮ ಭಾಷಣದಲ್ಲಿ, ರಾಜ್ಯಪಾಲರಿಂದ ಹಕ್ಕು ಕಸಿತವಾಗಿದೆ. ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಕಾನೂನನ್ನು ನಿರಸನಗೊಳಿಸಿದೆ ಎಂದಿದ್ದಾರೆ. ಪಾಟೀಲರ ಹೇಳಿಕೆಯನ್ನು ಆಕ್ಷೇಪಿಸಿದ ಸಂಕನೂರು ಅವರು ನೇರವಾಗಿ ಡಯಾಸ್ ಬಳಿ ತೆರಳಿ, ಇದು ರಾಜಕೀಯ ವೇದಿಕೆ ಅಲ್ಲ

ಗಣರಾಜ್ಯೋತ್ಸವದಲ್ಲಿ ರಾಜಕೀಯ ಭಾಷಣ: ಎಚ್.ಕೆ. ಪಾಟೀಲ – ಎಸ್. ವಿ. ಸಂಕನೂರು ‌ನಡುವೆ ವಾಗ್ವಾದ Read More »

ಕಾರು – ರಿಕ್ಷಾ ನಡುವೆ ಅಪಘಾತ

ಪುತ್ತೂರು: ಕಾರು ಮತ್ತು ರಿಕ್ಷಾ‌ ನಡುವೆ ಅಪಘಾತ ಸಂಭವಿಸಿದ ಘಟನೆ ಬಪ್ಪಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾರು – ರಿಕ್ಷಾ ನಡುವೆ ಅಪಘಾತ Read More »

ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ವಂಚನೆ, ಬೆದರಿಕೆ : ಐವರ ಬಂಧನ

ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್‌ಗೆ ಪ್ರಚೋದನೆ ನೀಡುತ್ತಿದ್ದ ಆರೋಪಿಗಳು ಉಡುಪಿ: ಆನ್‌ಲೈನ್ ಬೆಟ್ಟಿಂಗ್‌ಗೆ ಪ್ರಚೋದಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಉಡುಪಿ ನಿಲ್ಲೆಯ ಕೋಟ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ ನಿವಾಸಿಗಳಾದ ರೂಪೇಶ್ (23), ಮನೋಜ್ (25), ಕೊಳ್ಕೆಬೈಲು ನಿವಾಸಿ ಸೃಜನ್ ಶೆಟ್ಟಿ (28), ಪಡುಮುಂಡು ನಿವಾಸಿ ರಾಘವೇಂದ್ರ (37), ಶಿರಿಯಾರ ಪೋಸ್ಟ್ ಆಫೀಸ್ ಹತ್ತಿರದ ನಿವಾಸಿ ಕುಶಲ (38) ಬಂಧಿತ ಆರೋಪಿಗಳು. ದೂರುದಾರ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸುಮಾರು

ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ವಂಚನೆ, ಬೆದರಿಕೆ : ಐವರ ಬಂಧನ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವ

ಆಲುಂಬುಡ, ಪುತ್ತೂರು: ಎವಿಜಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್’ನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಪೂರ್ವ ಶಾಸಕರಾದ ಸಂಜೀವ ಮಟಂದೂರು ಅವರು ಧ್ವಜಾರೋಹಣಗೈದು, ದೀಪ ಪ್ರಜ್ವಲಿಸಿ ಮಾತನಾಡಿ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾ ಯಾವುದು ಸರಿ ಯಾವುದು ತಪ್ಪು ಎಂದು ತಿಳಿಸಿಕೊಡುವುದೇ ಸಂವಿಧಾನ. ರಾಜ ಪರಂಪರೆಯಿಂದ ಬೆಳೆದ ಭಾರತ ಇಂದು ಸ್ವಯಂ ಆಡಳಿತದ ಸರ್ವತಂತ್ರ ಗಣತಂತ್ರ ಪರಂಪರೆಗೆ ಬಂದು ನಿಂತಿದೆ ಎಂದು ವಿಶ್ಲೇಷಿಸಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನದ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವ Read More »

error: Content is protected !!
Scroll to Top