ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಶ್ರಫ್ ಬಂಧನ

ಬಂಟ್ವಾಳ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ‌ವಾರಂಟ್ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನನ್ನು ‌ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತ ಅ.ಕ್ರ :117/2019 ಹಾಗೂ ಅ.ಕ್ರ :111/2020 ಪ್ರಕರಣಗಳಿಗೆ ಸಂಬಂಧಿಸಿದಂತೆ, ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಲವು ಬಾರಿ ಹಾಜರಾಗದೇ ತಪ್ಪಿಸಿಕೊಂಡಿದ್ದ. ಈತನ ವಿರುದ್ಧ ಹತ್ತಕ್ಕೂ ಹೆಚ್ಚು ಬಾರಿ ವಾರಂಟ್ ಸಹ ಜಾರಿಯಾಗಿತ್ತು. ಸದ್ಯ ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಹಾಗೂ […]

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಶ್ರಫ್ ಬಂಧನ Read More »

ಉಗ್ರರ ‌ಜೊತೆ ನಂಟು: ಶಂಕಿತ ಆರೋಪಿಗಳನ್ನು ಬಂಧಿಸಿದ ಆಂಧ್ರಪ್ರದೇಶ ಪೊಲೀಸರು

ವಿಜಯವಾಡ: ಉಗ್ರವಾದಿ ಸಿದ್ಧಾಂತಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದ ಮತ್ತು ಉಗ್ರರ ಸಂಘಟನೆಗಳ ಜೊತೆೆಗ ಸಂಪರ್ಕ ಇರಿಸಿಕೊಂಡಿದ್ದ ಆರೋಪದಲ್ಲಿ ಮೂವರು ಶಂಕಿತರನ್ನು ಆಂಧ್ರಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಂಕಿತ ಉಗ್ರರನ್ನು ಮಹಮ್ಮದ್ ರಹಮತುಲ್ಲಾ ಷರೀಫ್, ಮಿರ್ಜಾ ಸೊಹೈಲ್ ಬೇಗ್ ಮತ್ತು ಮಹಮ್ಮದ್ ದಾನಿಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ವಿಜಯವಾಡದ ಟೂ ಟೌನ್ ವ್ಯಾಪ್ತಿಯ ನಿವಾಸಿಗಳಾಗಿದ್ದಾರೆ. ಗುಪ್ತಚರ ಇಲಾಖೆಯ ಸಂಘಟಿತ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆನ್-ಲೈನ್ ಚಟುವಟಿಕೆಗಳ ಮೇಲೆ ನಿಗಾ ಇರಿಸಿದ್ದ ಪೊಲೀಸರಿಗೆ, ಸದ್ಯ ಬಂಧನದಲ್ಲಿರುವ

ಉಗ್ರರ ‌ಜೊತೆ ನಂಟು: ಶಂಕಿತ ಆರೋಪಿಗಳನ್ನು ಬಂಧಿಸಿದ ಆಂಧ್ರಪ್ರದೇಶ ಪೊಲೀಸರು Read More »

ಕಾರು-ಬೈಕ್‌ ಡಿಕ್ಕಿ : ಇಬ್ಬರು ಸವಾರರು ಗಂಭೀರ

ವಿಟ್ಲ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ವೀರಕಂಬ ಮೂಲದವರು ಎನ್ನಲಾದ ಸವಾರ ಮತ್ತು ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕಾರು ವಿಟ್ಲದ ಮೇಗಿನಪೇಟೆಯ ನಿವಾಸಿಯದ್ದು, ಹೊರ

ಕಾರು-ಬೈಕ್‌ ಡಿಕ್ಕಿ : ಇಬ್ಬರು ಸವಾರರು ಗಂಭೀರ Read More »

ಟಿಪ್ಪರ್ – ಸರ್ಕಾರಿ ಬಸ್ಸಿನ ನಡುವೆ ಅಪಘಾತ: ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಟಿಪ್ಪರ್ ಚಾಲಕ

ವಿಟ್ಲ: ಮುಚ್ಚಿರಪದವಿನಲ್ಲಿ ಸರ್ಕಾರಿ ಬಸ್ಸು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಬಸ್ಸು ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿತ್ತು. ಟಿಪ್ಪರ್ ‌ಪೆರುವಾಯಿ ಕಡೆಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಇವೆರಡೂ ವಾಹನಗಳು ಮುಖಾಮುಖಿ ಗುದ್ದಿಕೊಂಡಿವೆ. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಆದರೆ ಅಪಘಾತದ ಬಳಿಕ ಎರಡೂ ವಾಹನಗಲ‌ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದೆ. ಟಿಪ್ಪರ್ ‌ಚಾಲಕ ಬಿಲಾಲ್ ‌ಎಂಬಾತ‌ ಕರ್ತವ್ಯದಲ್ಲಿದ್ದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಕಂಡಕ್ಟರ್ ವಿಟ್ಲ

ಟಿಪ್ಪರ್ – ಸರ್ಕಾರಿ ಬಸ್ಸಿನ ನಡುವೆ ಅಪಘಾತ: ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಟಿಪ್ಪರ್ ಚಾಲಕ Read More »

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಂದರ್

ಬೆಳ್ತಂಗಡಿ: ಸುಮಾರು ಐದು‌‌ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ‌ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯೊಬ್ಬನನ್ನು ಕೊನೆಗೂ ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಣಿಕಂಠ ಎಂದು ಗುರುತಿಸಲಾಗಿದೆ. ಈತ ಉಡುಪಿ ಜಿಲ್ಲೆಯ ಕಾಪು ಪ್ರದೇಶದವನು ಎಂದು ತಿಳಿದು ಬಂದಿದೆ. ಆರೋಪಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದ್ದು, ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಂದರ್ Read More »

ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಗಾಳಿ ಮಳೆಗೆ ಕೇಬಲ್ ಒಂದು ತುಂಡಾಗಿ ಮೈಮೇಲೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಚ ಘಟನೆ ನಗರದ ಗೋಕುಲ ರಸ್ತೆಯ ಅರ್ಬನ್ ಓಯಸಿಸ್ ಮಾಲ್‌ನ ಸಮೀಪ ನಡೆದಿದೆ. ಮೃತರನ್ನು ತಾಜ್‌ ನಗರ ನಿವಾಸಿ ಮೀಜಾಮುಲ್ಲಾ ಮುಲ್ಲಾ ಮತ್ತು ಫಯಾಜ್ ಭಾಗವಾನ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಬೈಕ್ ಮೂಲಕ ಗೋಕುಲ್ ರಸ್ತೆ ವಿಮಾನ ನಿಲ್ದಾಣದಿಂದ ಹೊಸೂರು ಕಡೆ ಬರುತ್ತಿದ್ದರು. ಈ ವೇಳೆ ಗಾಳಿ ಮಳೆಗೆ ಕೇಬಲ್‌ ತುಂಡಾಗಿ ಇವರ ಮೇಲೆ ಬಿದ್ದಿದೆ. ಅದನ್ನು ತಪ್ಪಿಸುವ ಪ್ರಯತ್ನದಲ್ಲಿದ್ದಾಗ

ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು Read More »

ಅಮೆರಿಕ ಮಿಲಿಟರಿ ವಿಮಾನ ಪತನ : ಮೃತರ ಸಂಖ್ಯೆ 66ಕ್ಕೇರಿಕೆ

ಟೇಕಾಫ್‌ ಆದ ಮರುಕ್ಷಣ ಪತನಗೊಂಡ ವಿಮಾನ ವಾಷಿಂಗ್ಟನ್‌ : ದಕ್ಷಿಣ ಕೊಲಂಬಿಯಾದಲ್ಲಿ 121 ಮಂದಿ ಪ್ರಯಾಣಿಸುತ್ತಿದ್ದ ಅಮೆರಿಕದ ಸೇನಾ ವಿಮಾನ ಟೇಕ್‌ಆಫ್ ಆದ ತಕ್ಷಣ ಪತನಗೊಂಡ ಪರಿಣಾಮ ಮೃತಪಟ್ಟವರ ಸಂಖ್ಯೆ 66ಕ್ಕೇರಿದೆ. ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಸಚಿವ ಪೆಡ್ರೋ ಸಾಂಚೆಝ್ ಎಕ್ಸ್ ಖಾತೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಈ ಅಪಘಾತ ಅಮೆಜಾನ್ ಪ್ರದೇಶದಲ್ಲಿರುವ ಪುಟುಮಾಯೋ ಪ್ರಾಂತ್ಯದ ದೂರದ ಪಟ್ಟಣವಾದ ಪ್ಯೂರ್ಟೋ ಲೆಗುಇಜಾಮೋದಲ್ಲಿ ಸಂಭವಿಸಿದೆ. ಈ ಪ್ರದೇಶ ಪೆರು ಮತ್ತು ಇಕ್ವಡಾರ್ ದೇಶಗಳ ಗಡಿಗೆ

ಅಮೆರಿಕ ಮಿಲಿಟರಿ ವಿಮಾನ ಪತನ : ಮೃತರ ಸಂಖ್ಯೆ 66ಕ್ಕೇರಿಕೆ Read More »

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆ?

ಸಿಬಿಐಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್‌ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸುಪ್ರೀಂಕೋರ್ಟ್ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ.ಸೌಜನ್ಯ ತಾಯಿ ಕುಸುಮಾತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿರುವುದರಿಂದ ಈ ಪ್ರಕರಣ ಮರಳಿ ತನಿಖೆಯಾಗುವ ನಿರೀಕ್ಷೆ ಮೂಡಿದೆ. 2012ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆ? Read More »

ಪ್ರಚೋದನಕಾರಿ ವಿಡಿಯೋ ಹಂಚಿದ ಆರೋಪಿ ಸೆರೆ

ಫೇಸ್‌ಬುಕ್‌ ನಕಲಿ ಖಾತೆ ಮೂಲಕ ವಿಡಿಯೋ ಹಂಚುತ್ತಿದ್ದ ಪಾತಕಿ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೂಲಕ ತಿರುಚಿದ ವಿಡಿಯೋಗಳನ್ನು ಸೃಷ್ಟಿಸಿ ಹಂಚಿಕೊಂಡು ಸಮಾಜದಲ್ಲಿ ಕೋಮು ದ್ವೇಷದ ಕಿಚ್ಚು ಹಚ್ಚಲು ಯತ್ನಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ನಿವಾಸಿ ಮಹಮ್ಮದ್ ರಫೀಕ್ (38) ಬಂಧಿತ ಆರೋಪಿ, ಈತ ನಝೀರ ಮಂಗಳೂರು ಫೇಸ್‌ಬುಕ್ ಖಾತೆಯ ಮೂಲಕ ವಿಡಿಯೋಗಳನ್ನು ಹರಿಬಿಡುತ್ತಿದ್ದ. ಕಳೆದ ಅಕ್ಟೋಬಋನಲ್ಲಿ ಈತ ತನ್ನ ಫೇಸ್‌ಬುಕ್ ಖಾತೆಯ ಮೂಲಕ ಎಐ ತಂತ್ರಜ್ಞಾನ

ಪ್ರಚೋದನಕಾರಿ ವಿಡಿಯೋ ಹಂಚಿದ ಆರೋಪಿ ಸೆರೆ Read More »

ಮಸೀದಿ ವಿಚಾರದಲ್ಲಿ ಮಾರಾಮಾರಿ : ಮೂರು ಪ್ರಕರಣ ದಾಖಲು

ಗುಂಪು ಕಟ್ಟಿಕೊಂಡು ಹೊಡೆದಾಟ; ಹಲವರಿಗೆ ಗಾಯ ಬಂಟ್ವಾಳ : ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಮಾರಾಮಾರಿ ನಡೆದಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಹೊಡೆದಾಟದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಮೊದಲ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರು ನೀಡಿದ ದೂರಿನಂತೆ ಮಾರ್ಚ್ 22ರಂದು ಬೆಳಗ್ಗೆ ಇವರು ಮತ್ತು ಅವರ

ಮಸೀದಿ ವಿಚಾರದಲ್ಲಿ ಮಾರಾಮಾರಿ : ಮೂರು ಪ್ರಕರಣ ದಾಖಲು Read More »

error: Content is protected !!
Scroll to Top