ಎಸ್‍ ಕೆ ಡಿಆರ್ ಡಿಪಿ ಉಪ್ಪಿನಂಗಡಿ ವಲಯ ಕಚೇರಿ, ಸಿಎಸ್‍ ಸಿ ಸೇವಾ ಕೇಂದ್ರ ಉದ್ಘಾಟನೆ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ವಲಯದ ವಲಯ ಕಚೇರಿ ಮತ್ತು ಸಿ ಎಸ್ ಸಿ ಸೇವಾ ಕೇಂದ್ರವನ್ನು ಉಪ್ಪಿನಂಗಡಿ ರಾಮನಗರದ ಅಲಿಮಮ್ಮ ಅವರ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಉಪ್ಪಿನಂಗಡಿ ಕಂಬಳ ಸಮಿತಿ ಗೌರವಾಧ್ಯಕ್ಷ ಉಮೇಶ್ ಶೆಣೈ ಟೇಪ್ ಕಟ್‍ ಮಾಡುವ ಮೂಲಕ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಕ್ಷಿಣ ಕನ್ನಡ 2 ವಿಭಾಗದ ಜಿಲ್ಲಾ ನಿರ್ದೇಶಕ ಪ್ರವೀಣ್ ದೀಪ ಬೆಳಗಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮಮಟ್ಟದಲ್ಲಿ ಮತ್ತು ವಲಯ […]

ಎಸ್‍ ಕೆ ಡಿಆರ್ ಡಿಪಿ ಉಪ್ಪಿನಂಗಡಿ ವಲಯ ಕಚೇರಿ, ಸಿಎಸ್‍ ಸಿ ಸೇವಾ ಕೇಂದ್ರ ಉದ್ಘಾಟನೆ Read More »

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ

ಪಕ್ಷದ ಕಾರ್ಯಕರ್ತರಿಗಾಗಿ ಖಜಾನೆ ಲೂಟಿ ಮಾಡಬೇಡಿ; ಕೆಪಿಸಿಸಿ ಹಣ ಕೊಡಿ ಎಂದು ಆಗ್ರಹ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಿ, ಅವುಗಳಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಪ್ರತಿತಿಂಗಳು ಸಾವಿರಗಟ್ಟಲೆ ಸಂಬಳ ಕೊಡುತ್ತಿರುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್‌ ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಹೋರಾಟ ಶುರು ಮಾಡಿದೆ. ಸದನದ ಹೊರಗೂ ಇಂದು ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕಾಂಗ್ರೆಸ್‌

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯಿಂದ  ನಿರ್ಗತಿಕ  ಕುಟುಂಬಕ್ಕೆ  ಮಾಸಾಸನ ಕೈಪಿಡಿ  ಹಸ್ತಾಂತರ

ವಿಟ್ಲ : ಶ್ರೀ  ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)  ವಿಟ್ಲ  ಬಂಟ್ವಾಳ ತಾಲೂಕು  ಕೆದಿಲ ಗ್ರಾಮದ ಅಂಗರಾಜೆ  ಜಾಕುರವರಿಗೆ  ಮಸಾಸನ  ಕೈಪಿಡಿ  ವಿತರಣೆ ಮಾಡಲಾಯಿತು. ಮನೆಗೆ ಆಧಾರ ಸ್ತಂಭವಾಗಿದ್ದ  ಮಗ  ವೆಲ್ಡಿಂಗ್  ಕೆಲಸ ಮಾಡುತ್ತಿದ್ದಾಗ  ಬಿದ್ದು  ಮೃತಪಟ್ಟಿರುತ್ತಾರೆ. ದೊಡ್ಡ ಮಗಳು  ಹೃದ್ರೋಗ ಸಮಸ್ಯೆಯಿಂದ  ಬಳಲುತಿದ್ದು, ಸಣ್ಣ ಮಗಳು ಬುದ್ಧಿಮಾಂದ್ಯಯಾಗಿದ್ದು. ಶ್ರೀ ಕ್ಷೇತ್ರದಿಂದ  ಮಂಜೂರಾದ  ಮಾಸಾಸನ ಕೈಪಿಡಿಯನ್ನು ಶೌರ್ಯ ವಿಪತ್ತು ನಿರ್ವಹಣಾ  ಕೆದಿಲದ ಸದಸ್ಯರು  ವಿತರಿಸಿದರು. ಈ ಸಂದರ್ಭದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ದೀಪಾ, ಕೆದಿಲ B

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯಿಂದ  ನಿರ್ಗತಿಕ  ಕುಟುಂಬಕ್ಕೆ  ಮಾಸಾಸನ ಕೈಪಿಡಿ  ಹಸ್ತಾಂತರ Read More »

ಭಾವ ತೀರ ಯಾನ ಸಿನಿಮಾ ಇಂದು ಮತ್ತು ನಾಳೆ ಸಂಜೆ  7.15 ಕ್ಕೆ ಚಿತ್ರಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮಾಡಿಬಂದ “ಭಾವ ತೀರ ಯಾನ” ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾನ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. 21ನೇ ದಿನಕ್ಕೆ ಕಾಲಿರಿಸಿದೆ. ಮಾ. 12 ಮತ್ತು 13 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್‍ ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಭಾವ ತೀರ ಯಾನ ಸಿನಿಮಾ ಇಂದು ಮತ್ತು ನಾಳೆ ಸಂಜೆ  7.15 ಕ್ಕೆ ಚಿತ್ರಪ್ರದರ್ಶನ Read More »

ಪಾಕಿಸ್ಥಾನ ರೈಲು ಹೈಜಾಕ್‌ : 155 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ

27 ಬಂಡುಕೋರರ ಹತ್ಯೆ, 200ಕ್ಕೂ ಅಧಿಕ ಪ್ರಯಾಣಿಕರು ಒತ್ತೆಸೆರೆಯಲ್ಲಿ ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ಬಲೂಚಿಸ್ಥಾನದ ಪ್ರತ್ಯೇಕವಾದಿಗಳು ಒಂದಿಡೀ ರೈಲನ್ನು ಅಪಹರಿಸಿ ನೂರಾರು ಪ್ರಯಾಣಿಕರನ್ನು ಒತ್ತೆಸೆರೆಯಲ್ಲಿಟ್ಟುಕೊಂಡಿದ್ದು, ಪ್ರಯಾಣಿಕರನ್ನು ರಕ್ಷಿಸಲು ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆ ನಡೆಸುತ್ತಿವೆ. ಮಂಗಳವಾರ ಕ್ವೆಟ್ಟಾದಿಂದ ಪೇಷಾವರಕ್ಕೆ ಬರುತ್ತಿದ್ದ ಜಾಫರ್‌ ಎಕ್ಸ್‌ಪ್ರೆಸ್‌ ಪ್ಯಾಸೆಂಜರ್‌ ರೈಲನ್ನು ʼದ ಬಲೂಚಿಸ್ಥಾನ್‌ ಲಿಬರೇಶನ್‌ ಆರ್ಮಿʼಯ ಬಂಡುಕೋರರು ಪ್ರಯಾಣಿಕರು ಮತ್ತು ಭದ್ರತಾ ಸಿಬ್ಬಂದಿ ಸಮೇತ ಅಪಹರಿಸಿಕೊಂಡು ಹೋಗಿದ್ದಾರೆ.ರಾತ್ರಿಗಾಗುವಾಗ ಮಹಿಳೆಯರು ಮತ್ತು ಮಕ್ಕಳು ಸೇರಿ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ, ಹಾಗೂ ಈ ಕಾರ್ಯಾಚರಣೆಯಲ್ಲಿ

ಪಾಕಿಸ್ಥಾನ ರೈಲು ಹೈಜಾಕ್‌ : 155 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ Read More »

ದಾರಿ ಕೇಳುವ ನೆಪದಲ್ಲಿ ಚಿನ್ನ ಕದ್ದು ಪರಾರಿ

ಪುತ್ತೂರು : ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರವನ್ನು  ಎಳೆದು ಕದ್ದೊಯ್ದು ಪರಾರಿಯಾಗಿರುವ ಘಟನೆ ಪುತ್ತೂರಿನ ರಾಗಿಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬೈಕ್ ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ದಾರಿ ಕೇಳಿದ್ದಾನೆ. ಈ ಸಂದರ್ಭ ದಾರಿ ಹೇಳಲು ಬಂದ ವ್ಯಕ್ತಿಯ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ದಾರಿ ಕೇಳುವ ನೆಪದಲ್ಲಿ ಚಿನ್ನ ಕದ್ದು ಪರಾರಿ Read More »

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ

ನಟಿ ಸತ್ತು 21 ವರ್ಷಗಳ ಬಳಿಕ ದಾಖಲಾಯಿತು ದೂರು ಬೆಂಗಳೂರು: ಕನ್ನಡದ ಮೋಹಕ ನಟಿ ಸೌಂದರ್ಯಾ ಹೆಲಿಕಾಪ್ಟರ್‌ ಅಪಘಾತದಲ್ಲಿ ತೀರಿಕೊಂಡು 20 ವರ್ಷಗಳೇ ಕಳೆದಿವೆ. ಈಗ ಅವರ ಸಾವಿನ ಬಗ್ಗೆ ಪ್ರಕಣವೊಂದು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ತೆಲುಗಿನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ಕೈವಾಡ ಇದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಈ ವಿಚಾರ ಸಾಕಷ್ಟು ಈಗ ಸಂಚಲನ ಸೃಷ್ಟಿ ಮಾಡಿದೆ. ಸೌಂದರ್ಯಾ 2004ರ ಏಪ್ರಿಲ್ 17ರಂದು ನಿಧನ ಹೊಂದಿದ್ದಾರೆ. ಅವರಿದ್ದ ಖಾಸಗಿ ಹೆಲಿಕಾಪ್ಟರ್‌

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ Read More »

ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ | ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮೂಡುಬಿದಿರೆ : ಅಪ್ರಾಪ್ತ ವಯಸ್ಸಿನ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕ  ಮತ್ತು ಮಧ್ಯ ವಯಸ್ಸಿನ ವ್ಯಕ್ತಿ ಸಹಿತ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಪೊಕ್ಸೋ ಪ್ರಕರಣ ದಾಖಲಿಸಿದ್ದಾರೆ. ಪ್ರಾಂತ್ಯ ಗ್ರಾಮದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (57) ಹಾಗೂ ಆಲಂಗಾರು ಉಮಿಯದ ಪವನ್ (19) ಎಂಬವರು ಬಂಧಿತ ಆರೋಪಿಗಳು. ಪ್ರಾಂತ್ಯ ಅಜಂಕಲ್ಲುವಿನ ಪ್ರಕಾಶ್ ಎಂಬಾತ ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು

ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ | ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಸಂಚಲನ ಹುಟ್ಟಿಸಿದ ಸುನಿಲ್‌ ಕುಮಾರ್‌ ಪ್ರಶ್ನೆ

ಚಿನ್ನ ಸದಾಶಿವ ನಗರಕ್ಕೆ ಹೋಗಿದೆಯಾ? ಚಾಮರಾಜ ನಗರಕ್ಕೆ ಹೋಗಿದೆಯಾ ಹೇಳಿಕೆಯಿಂದ ಸಚಿವರಿಗೆ ಕಸಿವಿಸಿ ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಶಾಮೀಲಾಗಿರುವ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಶಾಸಕ ಸುನಿಲ್‌ ಕುಮಾರ್‌ ನೀಡಿದ ಹೇಳಿಕೆ ಸಂಚಲನ ಹುಟ್ಟಿಸಿದೆ. ಈ ಹೇಳಿಕೆಗೆ ಹಲವು ಸಚಿವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಜೊತೆಗೆ ಮಾತನಾಡುವಾಗ ಸುನಿಲ್‌ ಕುಮಾರ್‌ ನಟಿ ರನ್ಯಾ ರಾವ್‌ ತಂದ ಚಿನ್ನ ಎಲ್ಲಿಗೆ ಹೋಗಿದೆ ಸದಾಶಿವ ನಗರಕ್ಕೆ ಹೋಗಿದೆಯಾ ಅಥವಾ ಚಾಮರಾಜ ನಗರಕ್ಕೆ ಹೋಗಿದೆಯಾ ಎಂಬುದರ ಬಗ್ಗೆ ತನಿಖೆಯಾಗಲಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಸಂಚಲನ ಹುಟ್ಟಿಸಿದ ಸುನಿಲ್‌ ಕುಮಾರ್‌ ಪ್ರಶ್ನೆ Read More »

ಮತ್ತೆ ಮದ್ಯದ ಬೆಲೆ ಏರಿಕೆ?

ಬಜೆಟ್‌ನಲ್ಲಿ ನೀಡಿದ ಗುರಿ ತಲುಪಲು ಬೆಲೆ ಹೆಚ್ಚಿಸುವುದು ಅನಿವಾರ್ಯ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮದ್ಯದ ದರ ಹೆಚ್ಚಿಸಲು ಚಿಂತನೆ ನಡೆದಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ದರ ಹೆಚ್ಚಳ ಮಾಡುವ ಬಗ್ಗೆ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 40 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನೀಡಲಾಗಿದೆ. ಹೆಚ್ಚುವರಿ ಗುರಿಯನ್ನು

ಮತ್ತೆ ಮದ್ಯದ ಬೆಲೆ ಏರಿಕೆ? Read More »

error: Content is protected !!
Scroll to Top