ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ

ಹಣಕಾಸಿನ ನೆರವು ಒದಗಿಸುವುದಿಲ್ಲ ಎಂದು ಉತ್ತರಿಸಿದ ಸರಕಾರ ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ. ಇದಕ್ಕೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌, ವಿಸ್ತರಣೆ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಉತ್ತರ ನೀಡಿದರು. ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ […]

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ Read More »

ವಿದ್ಯುತ್‍ ಸೋರಿಕೆಯಿಂದ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಗುಡ್ಡಕ್ಕೆ ತಗುಲಿದ ಬೆಂಕಿ

ನರಿಮೊಗರು: ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಿನ್ನೆ ಗುಡ್ಡಕ್ಕೆ ಬೆಂಕಿ ಬಿದ್ದಿದ ಘಟನೆ ನಡೆದಿದೆ. ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಹಿನ್ನಲೆ ಬೆಂಕಿ ಹೊತ್ತಿಕೊಂಡಿದೆ ಎಂದು ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿಕೊಂಡಿದೆ. ವಿಷಯ ತಿಳಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್‌ ಆಚಾರ್ಯ ಸ್ಥಳೀಯರ ಸಹಕಾರದೊಂದಿಗೆ ಅಗ್ನಿ ಶಾಮಕ ದಳದ ಸಿಬಂದಿ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯುತ್‍ ಸೋರಿಕೆಯಿಂದ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಗುಡ್ಡಕ್ಕೆ ತಗುಲಿದ ಬೆಂಕಿ Read More »

ಮುಂಡೂರಿನಲ್ಲಿ ಸೆನ್ಸಾರ್ ಆರ್‌ಟಿಒ ಟ್ರಾಕ್ : 8 ಕೋಟಿ ಅನುದಾನ ಬಿಡುಗಡೆ

ಪುತ್ತೂರು: ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್ ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ 8 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮುಂಡೂರು ಗ್ರಾಮದಲ್ಲಿ ಸುಮಾರು 5.40  ಎಕ್ರೆ ಜಾಗದಲ್ಲಿ ಈ ಬೃಹತ್ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ಚಾಲನ ತರಬೇತಿ ಕೇಂದ್ರ ಇಲ್ಲಿ ನಿರ್ಮಾಣವಾಗಲಿದೆ. ಪುತ್ತೂರು ಶಾಸಕರ ಕನಸಿನ ಕೂಸಾದ ಈ ಯೋಜನೆಯನ್ನು ಶಾಸಕರೇ ಸ್ವಯಂ ಮುತುವರ್ಜಿವಹಿಸಿ ಪುತ್ತೂರಿಗೆ ತರುವಲ್ಲಿ ಯಸಶ್ವಿಯಾಗಿದ್ದರು. ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಅಲೆವೂರು

ಮುಂಡೂರಿನಲ್ಲಿ ಸೆನ್ಸಾರ್ ಆರ್‌ಟಿಒ ಟ್ರಾಕ್ : 8 ಕೋಟಿ ಅನುದಾನ ಬಿಡುಗಡೆ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು

ತಿಂಗಳಿಗೆ 4.5 ಲ.ರೂ. ಬಾಡಿಗೆಯ ಐಷರಾಮಿ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ರನ್ಯಾ ರಾವ್‌ ಬೆಂಗಳೂರು: ದುಬೈಯಿಂದ ಸುಮಾರು 15 ಕೆಜಿ ಚಿನ್ನ ಅಕ್ರಮವಾಗಿ ತಂದು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಕನ್ನಡದ ನಟಿ ರನ್ಯಾ ರಾವ್‌ ಫ್ಲ್ಯಾಟ್‌ನಲ್ಲೂ ಕೋಟಿಗಟ್ಟಲೆ ಮೌಲ್ಯದ ಚಿನ್ನ ಮತ್ತು ನಗದು ಸಿಕ್ಕಿದೆ. ನಟಿ ರನ್ಯಾ ರಾವ್‌ ಬಹಳ ಕಾಲದಿಂದ ಚಿನ್ನ ಸ್ಮಗ್ಲಿಂಗ್‌ಗನ್ನಲಿ ಭಾಗಿಯಾಗಿದ್ದಾಳೆ ಎನ್ನುವ ಅನುಮಾನ ಮೂಡಿದೆ. ನಿನ್ನೆ ರಾತ್ರಿ ಡಿಆರ್‌ಐ ಅಧಿಕಾರಿಗಳು ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿರುವ ನಟಿಯ ಫ್ಲ್ಯಾಟ್‌ಗೆ ದಾಳಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು Read More »

ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ

ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಮಣಿಪಾಲ ಪೊಲೀಸರು ಉಡುಪಿ: ಮಣಿಪಾಲದಲ್ಲಿ ಸಿನಿಮೀಯ ಶೈಲಿಯಲ್ಲಿ ಕುಖ್ಯಾತ ಕ್ರಿಮಿನಲ್‌ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಹಲವು ವಾಹನಗಳಿಗೆ ಹಾನಿ ಸಂಭವಿಸಿದೆ. ಬೆಂಗಳೂರಿನ ಕುಖ್ಯಾತ ಪಾತಕಿ ಇಸಾಕ್‌ ಎಂಬಾತನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ. ಬೆಂಬಿಡದೆ ಪೊಲೀಸರು ಚೇಸ್‌ ಮಾಡಿದ್ದಾರೆ. ತಕ್ಷಣ ಮಣಿಪಾಲ

ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ Read More »

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌

ಸ್ಪೀಕರ್‌ ಖಾದರ್‌ ಬೆಂಬಲ; ಸರಕಾರದಿಂದ ನಿಯಮ ಸರಳ ಮಾಡುವ ಭರವಸೆ ಬೆಂಗಳೂರು: ಕಾರ್ಕಳದ ಮುಂಡ್ಲಿಯಲ್ಲಿ ಕಳೆದ ಜ.14ರಂದು ಪೊಲೀಸರು ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿ ಅರ್ಧಕ್ಕೆ ಮೊಟಕುಗೊಳಿಸಿ ಆಯೋಜಕರ ಮೇಲೆ ಕೇಸ್‌ ದಾಖಲಿಸಿದ ಪ್ರಕರಣವನ್ನು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕಿರುವ ನಿಯಮಗಳನ್ನು ಸರಳಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಗಮನ ಸೆಳೆಯುವ ಸೂಚನೆ ವೇಳೆ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನಗಳನ್ನು ನಿಲ್ಲಿಸಿ ಎಫ್‌ಐಆರ್ ದಾಖಲು‌

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ Read More »

ಪುಡಾ ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅಧಿಕಾರ ಸ್ವೀಕಾರ

ಪುತ್ತೂರು: ಖಾಲಿಯಾಗಿದ್ದ ಪುತ್ತೂರು ನಗರ ಅಭಿವೃದ್ದಿ ಪ್ರಾಧಿಕಾರದ ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ನಗರಪಾಲಿಕಾ ಕಚೇರಿಯಲ್ಲಿ ಎ.ಡಿ. ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರನ್ನು ಪುಡಾಗೆ ನಿಯುಕ್ತಿಗೊಳಿಸಲಾಗಿದೆ. ವಾರದ ಪ್ರತೀ ಬುಧವಾರ ಇವರು ಕಚೇರಿಯಲ್ಲಿ ಲಭ್ಯರಿರುತ್ತಾರೆ. ಕಡತ ವಿಲೇವಾರಿಗೆ ಸೂಚನೆ: ನೂತನ ಕಾರ್ಯದರ್ಶಿಯವರನ್ನು ಪುಡಾ ಸದಸ್ಯರಾದ ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಹಾಗೂ ನಿಹಾಲ್ ಪಿ ಶೆಟ್ಟಿ ಕಲ್ಲಾರೆಯವರು ಸ್ವಾಗತಿಸಿದರು. ಬಳಿಕ ಅಧಿಕಾರಿ ಜೊತೆ ಕಡತ ವಿಲೇವಾರಿ ಕುರಿತು ಮಾತುಕತೆ ನಡೆಸಿದರು. ಕಳೆದ ಒಂದೂವರೆ ತಿಂಗಳಿಂದ

ಪುಡಾ ನೂತನ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅಧಿಕಾರ ಸ್ವೀಕಾರ Read More »

ಅಮೃತ್ ಮಿತ್ರ 2.0 ಯೋಜನೆಯಡಿ ಉದ್ಯಾನವನ ನಿರ್ವಹಣೆ, ಉಸ್ತುವಾರಿ ಕುರಿತು ತರಬೇತಿ ಕಾರ್ಯಾಗಾರ

ಪುತ್ತೂರು: ಕೇಂದ್ರ ಪುರಸ್ಕೃತ “ಅಮೃತ್ ಮಿತ್ರ 2.0 ಯೋಜನೆ”ಯಡಿ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರುಗಳಿಗೆ ಉದ್ಯಾನವನಗಳ ನಿರ್ವಹಣೆ ಮತ್ತು ಉಸ್ತುವಾರಿ ಕುರಿತಾದ ಒಂದು ದಿನದ ತರಬೇತಿ ಕಾರ್ಯಕ್ರಮ ಪುತ್ತೂರು ನಗರಸಭೆ ಕಾರ್ಯಲಯದಲ್ಲಿ ಮಂಗಳವಾರ ನಡೆಯಿತು. ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸಸಿಗೆ ನೀರುಣಿಸುವ ಮೂಲಕ ವಿದ್ಯುಕ್ತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರಸಭಾ ಉಪಾಧ್ಯಕ್ಷ ಕೆ. ಬಾಲಚಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಪ್ರಭಾರ ಪೌರಾಯುಕ್ತ ಶಬರಿನಾಥ್ ರೈ, ಸಹಾಯಕ ಕಾರ್ಯ ಪಾಲಕ ಅಭಿಯಂತರ

ಅಮೃತ್ ಮಿತ್ರ 2.0 ಯೋಜನೆಯಡಿ ಉದ್ಯಾನವನ ನಿರ್ವಹಣೆ, ಉಸ್ತುವಾರಿ ಕುರಿತು ತರಬೇತಿ ಕಾರ್ಯಾಗಾರ Read More »

ಎಲೆಚುಕ್ಕಿ, ಹಳದಿ ರೋಗದಿಂದ ಸುಳ್ಯ ಪುತ್ತೂರು ಭಾಗದ ರೈತರು ಹೈರಾಣ | ಸಮಸ್ಯೆ ಬಗೆಹರಿಸುವಂತೆ ವಿಧಾನ ಪರಿಷತ್ ಕಲಾಪದಲ್ಲಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಹಳದಿ ರೋಗ, ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಹೈರಾಣಗಿದ್ದು, ರೋಗಕ್ಕೆ ಸಮರ್ಪಕವಾಗಿ ಔಷಧಿಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ, ಅಗತ್ಯ ಪೋಷಕಾಂಶಗಳನ್ನು ನೀಡುತ್ತಿಲ್ಲ. ಒಟ್ಟಾರೆ ಔಷಧಿಗಳ ಕೊರತೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸದನದ ಗಮನಕ್ಕೆ ತಂದಿದ್ದಾರೆ. ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಕೇಂದ್ರದಿಂದ ಅನುದಾನ ಬಂದರು ರೈತರ ಕೈಗೆ ಸೇರಿಲ್ಲ. ರಾಜ್ಯದಿಂದಲೂ ಅನುದಾನ ಶೀಘ್ರವಾಗಿ ಒದಗಿಸಬೇಕು. ಈ ಸಮಸ್ಯೆಯನ್ನು ಬಗೆಹರಿಸಬೇಕು

ಎಲೆಚುಕ್ಕಿ, ಹಳದಿ ರೋಗದಿಂದ ಸುಳ್ಯ ಪುತ್ತೂರು ಭಾಗದ ರೈತರು ಹೈರಾಣ | ಸಮಸ್ಯೆ ಬಗೆಹರಿಸುವಂತೆ ವಿಧಾನ ಪರಿಷತ್ ಕಲಾಪದಲ್ಲಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ಮಾಡತ್ತಡ್ಕದಲ್ಲಿರುವ  ಕಲ್ಲಿನ ಕೋರೆಯಲ್ಲಿ ಸ್ಪೋಟ | ಮನೆಗಳಿಗೆ ಹಾನಿ

ವಿಟ್ಲ: ಕಲ್ಲಿನ ಕೋರೆಯಲ್ಲಿ ಬಾರಿ ಪ್ರಮಾಣದ ಸ್ಫೋಟ ಸಂಭವಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸ್ಫೋಟಗೊಂಡ ಶಬ್ದಕ್ಕೆ ವಿಟ್ಲದ ಜನತೆ ಬೆಚ್ಚಿ ಬಿದ್ದಿದ್ದಾರೆ. ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆಯ ಸುತ್ತಮುತ್ತಲಿನಲ್ಲಿ ಜೋರಾಗಿ  ಶಬ್ದ ಕೇಳಿದೆ. ಈ ಶಬ್ದಕ್ಕೆ  ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು. ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಪರಿಣಾಮ ಹಲವು ಮನೆಗಳಿಗೆ ಹಾನಿಯುಂಟಾಗಿದ್ದು ಸ್ಥಳಕ್ಕೆ ವಿಟ್ಲ ಪೊಲೀಸರು, ಎಸ್ಪಿ ಹಾಗೂ ಇತರ ಹಲವು ಅಧಿಕಾರಿಗಳು

ಮಾಡತ್ತಡ್ಕದಲ್ಲಿರುವ  ಕಲ್ಲಿನ ಕೋರೆಯಲ್ಲಿ ಸ್ಪೋಟ | ಮನೆಗಳಿಗೆ ಹಾನಿ Read More »

error: Content is protected !!
Scroll to Top