ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ತಂಡಕ್ಕೆ ಜಯ

ಮಂಗಳೂರು: ಮಂಗಳೂರಿನ ‘ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ’ದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ನೇತೃತ್ವದ ‘ಸಮಗ್ರ ಅಭಿವೃದ್ಧಿ ಸಂಘಟನಾ ಬಳಗ’ ಸ್ಪಷ್ಟ ಬಹುಮತದೊಂದಿಗೆ ಜಯ ಗಳಿಸಿದೆ. ಸುಮಾರು 2083 ಮತದಾರರನ್ನು ಹೊಂದಿದ್ದ ಈ ಚುನಾವಣೆಯಲ್ಲಿ ಲೋಕಯ್ಯ ಗೌಡ ಬಳಗ ಮತ್ತು ಕಿರಣ್ ಬುಡ್ಲೆಗುತ್ತು ಬಳಗದ ನಡುವೆ ತೀವ್ರ ಪೈಪೋಟಿ ಇತ್ತು. ಒಟ್ಟು 21 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ನೇತೃತ್ವದ ತಂಡ 16 ಸ್ಥಾನಗಳನ್ನು ಮುಡಿಗೇರಿಸಿಕೊಂಡು ಅಭೂತಪೂರ್ವ ಜಯ ಸಾಧಿಸಿದರೆ, […]

ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ತಂಡಕ್ಕೆ ಜಯ Read More »

ಬೆಂಗಳೂರಿನಲ್ಲಿ ‘ಝೋಂಬಿ ಡ್ರಗ್ಸ್’ ಮಾರಾಟದ ಸಂದೇಹ: ನಿಂತಲ್ಲೇ ‌ತೂರಾಡಿದ ಯುವಕನ ವಿಡಿಯೋ ವೈರಲ್

ಬೆಂಗಳೂರು: ಝೋಂಬಿ ‌ಡ್ರಗ್ಸ್ ಹೆಸರಿನ ಮಾದಕ ದ್ರವ್ಯ ನಗರದಲ್ಲಿ ಮಾರಾಟವಾಗುತ್ತಿರುವ ಸಂದೇಹ ವ್ಯಕ್ತವಾಗಿದ್ದು, ಕೆಲ ಯುವಕರು ಆ ಡ್ರಗ್ಸ್ ಸೇವಿಸಿ‌ ಅಮಲಿನಲ್ಲಿ ನಿಂತಲ್ಲೇ ‌ತೂರಾಟ‌ ನಡೆಸುತ್ತಿದ್ದಾರಾ? ಎಂಬ ಶಂಕೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಯುವಕನೊಬ್ಬ ಇತ್ತೀಚೆಗೆ ನಿಂತಲ್ಲೇ ಗಂಟೆಗಟ್ಟಲೆ ತೂರಾಡಿದ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸಹ ವೈರಲ್ ಆಗಿದೆ. ಪೊಲೀಸರು ಸಹ ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾಗಿ ತಿಳಿದು ಬಂದಿದೆ. ಈ‌ ಸ್ಥಿತಿಯಲ್ಲಿ ಕಂಡುಬಂದ ಯುವಕನ ಬಗ್ಗೆ ಮಾಹಿತಿ ಕಲೆ ಹಾಕುವ

ಬೆಂಗಳೂರಿನಲ್ಲಿ ‘ಝೋಂಬಿ ಡ್ರಗ್ಸ್’ ಮಾರಾಟದ ಸಂದೇಹ: ನಿಂತಲ್ಲೇ ‌ತೂರಾಡಿದ ಯುವಕನ ವಿಡಿಯೋ ವೈರಲ್ Read More »

ಆರಿಫ್ ಕೊಲೆ ಪ್ರಕರಣದ ಮಹತ್ವದ ಸುಳಿವುಗಳು ಪೊಲೀಸರಿಗೆ ಲಭ್ಯ: 7 ಮಂದಿ ಸೆರೆ

ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಆರಿಫ್ ಕೊಲೆ ಪ್ರಕರಣವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದು, ಕೃತ್ಯಕ್ಕೆ ‌ಸಂಬಂಧಿಸಿದ ಹಾಗೆ ಪ್ರಮುಖ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾ. 27 ರಂದು ಆರಿಫ್ ಕೊಲೆ ನಡೆದಿದ್ದು ಆರೋಪಿಗಳಾದ ರಿಫತ್, ಜುಟ್ಟು ಅಶ್ಪಾಕ್, ಖಲೀಲ್, ಶಾಖಿರ್, ಇರ್ಫಾನ್, ರಿಜ್ವಾನ್‌ನನ್ನು ಬಂಧಿಸಲಾಗಿದೆ. ಇವರುಗಳು ಆರಿಫ್ ಬೈಕ್ ಅನ್ನು ಇನ್ನೋವಾ ಕಾರಿನಲ್ಲಿ ಹಿಂಬಾಲಿಸಿ ಬಳಿಕ ಢಿಕ್ಕಿ ಹೊಡೆದು ಕೆಳಕ್ಕೆ ಉರುಳಿಸಿದ್ದಾರೆ. ಆ ಬಳಿಕ ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಯಾವುದೇ

ಆರಿಫ್ ಕೊಲೆ ಪ್ರಕರಣದ ಮಹತ್ವದ ಸುಳಿವುಗಳು ಪೊಲೀಸರಿಗೆ ಲಭ್ಯ: 7 ಮಂದಿ ಸೆರೆ Read More »

ಕದನ ವಿರಾಮದಲ್ಲಿ ಪಾಕಿಸ್ತಾನ ಬರೀ ಸಂದೇಶ ವಾಹಕ?

ಪಾಕಿಸ್ತಾನದ ವಿಶ್ವಾಸಾರ್ಹತೆಯ ಬಗ್ಗೆ ಇದೆ ಹಲವು ಅನುಮಾನ ವಾಷಿಂಗ್ಟನ್ : ಅಮೆರಿಕ-ಇಸ್ರೇಲ್‌-ಇರಾನ್‌ ಕದನ ವಿರಾಮಕ್ಕೆ ನಾನು ಕಾರಣ ಎಂದು ಪಾಕಿಸ್ತಾನ ಹೇಳಿಕೊಳ್ಳುತ್ತಿದ್ದರೂ ಅದರ ಪಾತ್ರದ ಬಗ್ಗೆ ನಾನಾ ರೀತಿಯ ಗುಮಾನಿಗಳು ಎದ್ದಿವೆ. ಆರಂಭದಲ್ಲೇ ಪಾಕಿಸ್ತಾನ ಟ್ವೀಟ್‌ ಮಾಡಿ ಎಡವಟ್ಟು ಮಾಡಿಕೊಂಡಿತ್ತು. ಇದು ಅಮೆರಿಕ ರಚಿಸಿಕೊಟ್ಟ ಟ್ವೀಟ್‌ ಸಂದೇಶ ಎಂಬುದಕ್ಕೆ ಸ್ವತಹ ಪಾಕಿಸ್ತಾನವೇ ಸಾಕ್ಷಿ ಒದಗಿಸಿತ್ತು. ಇದೀಗ ಅಮೆರಿಕವೇ ಕದನ ವಿರಾಮದಲ್ಲಿ ಪಾಕಿಸ್ತಾನ ಸಂಧಾನಕಾರನ ಪಾತ್ರ ನಿಭಾಯಿಸಿಲ್ಲ, ಬದಲಾಗಿ ಬರೀ ಸಂದೇಶ ವಾಹಕನಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳುತ್ತಿದೆ. ಜಾಗತಿಕ

ಕದನ ವಿರಾಮದಲ್ಲಿ ಪಾಕಿಸ್ತಾನ ಬರೀ ಸಂದೇಶ ವಾಹಕ? Read More »

ಖಾಸಗಿ ಬಸ್ – ಲಾರಿ ನಡುವೆ ಅಪಘಾತ: ಚಾಲಕರಿಬ್ಬರಿಗೂ ಗಂಭೀರ ಗಾಯ

ಗುರುಪುರ: ಖಾಸಗಿ ಬಸ್ಸು ಮತ್ತು ಲಾರಿಯೊಂದರ ನಡುವೆ ನಡೆದ ಅಪಘಾತದಲ್ಲಿ ಚಾಲಕರಿಬ್ಬರೂ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಘಟನೆ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಸಮೀಪ ಬುಧವಾರ ನಡೆದಿದೆ. ಬಸ್ಸು ಕಾರ್ಕಳದತ್ತ ಹೋಗುತ್ತಿದ್ದರು, ಲಾರಿ ಮಂಗಳೂರಿನ ಕಡೆಗೆ ಸಾಗುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ಭೀಕರತೆಗೆ ಬಸ್ಸು ಮತ್ತು ಲಾರಿಗಳೆರಡರ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗ್ಯಾಸ್ ಕಟ್ಟರ್ ಮಷಿನ್ ಬಳಸಿ ಸ್ಥಳೀಯರು ಚಾಲಕರಿಬ್ಬರನ್ನೂ ವಾಹನದಿಂದ ಹೊರಕ್ಕೆ ತೆಗೆದಿರುವುದಾಗಿದೆ. ಅವರಿಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ

ಖಾಸಗಿ ಬಸ್ – ಲಾರಿ ನಡುವೆ ಅಪಘಾತ: ಚಾಲಕರಿಬ್ಬರಿಗೂ ಗಂಭೀರ ಗಾಯ Read More »

ಸುಳ್ಯ: ರಸ್ತೆ ಬದಿ ತ್ಯಾಜ್ಯ ಎಸೆದವರ ವಿರುದ್ಧ ಕೇಸ್‌

ಬೆಂಗಮಲೆಯಲ್ಲಿ ರಸ್ತೆಯುದ್ಧಕ್ಕೂ ತ್ಯಾಜ್ಯ ರಾಶಿ ಮಂಗಳೂರು : ಸುಳ್ಯ ತಾಲೂಕಿನ ಐವರ್ನಾಡು ಗ್ರಾಪಂ ವ್ಯಾಪ್ತಿಯ ಬೆಳ್ಳಾರೆ-ಸುಳ್ಯ ರಸ್ತೆಯ ಬೆಂಗಮಲೆ ಎಂಬಲ್ಲಿ ರಸ್ತೆಯ ಬದಿ ತ್ಯಾಜ್ಯ ಎಸೆದಿರುವ ಅಂಗಡಿ ಮಾಲಕರ ಮೇಲೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೇಂಗಮಲೆಯ 3 ಕಡೆಗಳಲ್ಲಿ ತ್ಯಾಜ್ಯದ ಚೀಲಗಳನ್ನು ಎಸೆದಿರುವುದು ಕಂಡು ಬಂದಿದೆ. ತೆರೆದು ಪರಿಶೀಲಿಸಿದಾಗ ಎಲ್ಲ ಮೂರೂ ತ್ಯಾಜ್ಯದ ಚೀಲಗಳಲ್ಲಿ ಸುಳ್ಯ ಗಾಂಧಿನಗರದ ಅಯೋಧ್ಯಾ ಮೆನ್ಸ್‌ಡ್ರೆಸ್ ಸ್ಪೋರ್ಟ್ಸ್‌ ಜೆರ್ಸಿ ಶಾಪ್ ಎಂಬ ವಸ್ತ್ರ ಮಳಿಗೆಗೆ ಸೇರಿದ ತ್ಯಾಜ್ಯಗಳಿರುವುದು ಕಂಡುಬಂದಿದೆ. ಚೀಲಗಳಲ್ಲಿ

ಸುಳ್ಯ: ರಸ್ತೆ ಬದಿ ತ್ಯಾಜ್ಯ ಎಸೆದವರ ವಿರುದ್ಧ ಕೇಸ್‌ Read More »

ಲೆಬನಾನ್‌ ಮೇಲೆ ಇಸ್ರೇಲ್‌ ಭೀಕರ ದಾಳಿ : 250ಕ್ಕೂ ಹೆಚ್ಚು ಮಂದಿ ಸಾವು

10 ನಿಮಿಷದಲ್ಲಿ 100ಕ್ಕೂ ಹೆಚ್ಚು ಕ್ಷಿಪಣಿ ಅಟ್ಯಾಕ್‌ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್‌ ಟೆಲ್‌ ಅವಿವ್‌: ಕದನ ವಿರಾಮ ಘೋಷಣೆಯಾಗಿದ್ದರೂ ಇದನ್ನು ಕ್ಯಾರೇ ಮಾಡದ ಇಸ್ರೇಲ್‌ ವಾಯುಪಡೆ ಲೆಬನಾನ್‌ ಮೇಲೆ ಕೇವಲ 10 ನಿಮಿಷಗಳಲ್ಲಿ 100 ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಈ ಯುದ್ಧದ ಅತ್ಯಂತ ದೊಡ್ಡ ಸಂಘಟಿತ ದಾಳಿ ಎಂದು ಇಸ್ರೇಲ್ ಬಣ್ಣಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಇರಾನ್‌ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಚ್ಚಿದೆ. ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ

ಲೆಬನಾನ್‌ ಮೇಲೆ ಇಸ್ರೇಲ್‌ ಭೀಕರ ದಾಳಿ : 250ಕ್ಕೂ ಹೆಚ್ಚು ಮಂದಿ ಸಾವು Read More »

ವಿದ್ಯಾರ್ಥಿಗಳ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : ಐವರು ಸೆರೆ

ಬಾಡಿಗೆ ರೂಮ್‌ನಲ್ಲಿದ್ದುಕೊಂಡು ಡ್ರಗ್ಸ್‌ ದಂಧೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮಂಗಳೂರು: ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಮಾದಕ ವಸ್ತು ಜಾಲದ ವಿರುದ್ಧ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಇವರಿಂದ ಹಲವು ಮಾಹಿತಿಗಳು ಲಭ್ಯವಾಗಿವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರೊಬ್ಬರು ತನ್ನ ಮಗನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ಸಿಕ್ಕಿದೆ ಎಂದು ಮಾಹಿತಿ ಪೊಲೀಸರಿಗೆ ಕೊಟ್ಟಿದ್ದರು. ಇವರಿಗೆ

ವಿದ್ಯಾರ್ಥಿಗಳ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : ಐವರು ಸೆರೆ Read More »

ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : 7 ಆರೋಪಿಗಳ ಬಂಧನ

ಮಾ.27ರಂದು ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಕೊಲೆಯಾಗಿದ್ದ ಆರಿಫ್‌ ಮಂಗಳೂರು: ಕಿನ್ಯ ಅಜ್ಜಿನಡ್ಕ ನಿವಾಸಿ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣದ ಏಳು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಲ್ಲೆಯಲ್ಲಿ ನೇರವಾಗಿ ಭಾಗಿಯಾಗಿದ್ದ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್ ಮತ್ತು ರಿಜ್ವಾನ್ ಕೊಲೆಕೃತ್ಯಕ್ಕೆ ಸಹಕರಿಸಿದ ಇರ್ಷಾದ್ ಎಂದು ಗುರುತಿಸಲಾಗಿದೆ. ಮಾರ್ಚ್ 27ರ ನಸುಕಿನ ಹೊತ್ತು ಆರಿಫ್ ತನ್ನ ಬೈಕ್‌ನಲ್ಲಿ ಬಂದರ್ ಮೀನು ಮಾರುಕಟ್ಟೆಯ ಕಡೆಗೆ ಪ್ರಯಾಣಿಸುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ತಲುಪುತ್ತಿದ್ದಂತೆ ಹಿಂಬಾಲಿಸಿಕೊಂಡು ಬಂದ ಇನ್ನೊವಾ

ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : 7 ಆರೋಪಿಗಳ ಬಂಧನ Read More »

ಜಿಯೋ ಮಾರ್ಟ್‌ ಗೋಡೌನ್‌ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ

ಬೆಂಗಳೂರು: ನೆಲಮಂಗಲದಲ್ಲಿರುವ ಜಿಯೋ ಮಾರ್ಟ್‌ ಗೋಡೌನ್‌ಗೆ ಬೆಂಕಿ ಬಿದ್ದು ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಿಂದ ನೆಲಮಂಗಲ ಹೆದ್ದಾರಿಯಲ್ಲಿ ಭಾರಿ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಗೋಡೌನ್‌ ಒಳಗೆ ತೆರಳಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದರು. ಬಳಿಕ ಜೆಸಿಬಿ ಮೂಲಕ ಗೋಡೆ ಒಡೆದು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು 10 ಅಗ್ನಿಶಾಮಕ ವಾಹನ ಬಳಸಿ ರಾತ್ರಿ ಪೂರ್ತಿ

ಜಿಯೋ ಮಾರ್ಟ್‌ ಗೋಡೌನ್‌ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ Read More »

error: Content is protected !!
Scroll to Top