ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ

ಪ್ರಚೋದನಕಾರಿ ಭಾಷಣ ಮಾಡಿ ಜನರನ್ನು ಕೆರಳಿಸಿದ್ದ ಮೌಲ್ವಿ ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ. ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. […]

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ Read More »

ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶ | ಕಾರ್ಮಿಕನೋರ್ವ ಮೃತ್ಯು..!

ಉಪ್ಪಿನಂಗಡಿ : ತೋಟದಲ್ಲಿ ಎಳನೀರನ್ನು ಕೀಳುತ್ತಿರುವಾಗ ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ. ಈ ವೇಳೆ  ತೋಟದ ಕಾರ್ಮಿಕ ದಾವಣಗೆರೆ ಮೂಲದ ವೀರಭದ್ರರವರು ಆಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ಬಜತ್ತೂರು ಗ್ರಾಮದ ಕುವೆಚ್ಚಾರ್ ನಲ್ಲಿ ನಡೆದಿದೆ. ಕುವೆಚ್ಚಾರ್ ತೋಟದಲ್ಲಿ ಕರ್ತವ್ಯ ನಿರ್ವಸುತ್ತಿದ್ದ ವೇಳೆ ತೋಟದಲ್ಲಿದ್ದ ತೆಂಗಿನ ಮರದಿಂದ ಸೀಯಾಳವೊಂದನ್ನು ಕೀಳಲೆಂದು ದೋಟಿ ಬಳಸಲು ಮುಂದಾದಾಗ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ದೋಟಿಗೆ ಸ್ಪರ್ಶವಾಗಿ ವೀರಭದ್ರ ವಿದ್ಯುತ್ ಸ್ಪರ್ಶಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೀರಭದ್ರ

ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶ | ಕಾರ್ಮಿಕನೋರ್ವ ಮೃತ್ಯು..! Read More »

ಪುತ್ತೂರು (ಫೆ. 26):  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜ್ರಂಭನೆಯ ಮಹಾಶಿವರಾತ್ರಿ ಉತ್ಸವ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಫೆ.26ರಂದು ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ಹಾಗೂ ಭಜನಾ ಕಾರ್ಯಕ್ರಮ ನೆರವೇರಲಿದೆ.  ಬಳಿಕ ಸಂಜೆ 7:30ಕ್ಕೆ ಮಹಾಶಿವರಾತ್ರಿ ಉತ್ಸವ ಜರುಗಲಿದೆ. ಭಕ್ತರು ಹೆಚ್ಚಿನ ಸಂಖೆಯಲ್ಲಿ ಉತ್ಸವದಲ್ಲಿ ಭಾಗವಹಿಸಿ ಎಂದು ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್‍ ಪಂಜಿಗುಡ್ಡೆ  ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪುತ್ತೂರು (ಫೆ. 26):  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜ್ರಂಭನೆಯ ಮಹಾಶಿವರಾತ್ರಿ ಉತ್ಸವ Read More »

ಕಾಡಿನಂಚಿನಲ್ಲಿ ಯುವಕ-ಯುವತಿ ನಿಗೂಢ ಸಾವು

ಸಾವಿನ ಸುತ್ತ ಹಲವು ಅನುಮಾನ ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನೊಳಗೆ ಸಾವನ್ನಪ್ಪಿದ್ದಾಳೆ. ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ನೇತಾಡುತ್ತಿತ್ತು. ಇಬ್ಬರ ವಯಸ್ಸು ಅಂದಾಜು 25-30ರ ಒಳಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವಕ ಕಾರು ನಿಂತ ಜಾಗದ ಪಕ್ಕದ ಮರಕ್ಕೆ ವೇಲ್‌ನಿಂದ ನೇಣು ಹಾಕಿಕೊಂಡಿದ್ದಾನೆ. ನೇಣು ಹಾಕಿಕೊಂಡಿರುವ

ಕಾಡಿನಂಚಿನಲ್ಲಿ ಯುವಕ-ಯುವತಿ ನಿಗೂಢ ಸಾವು Read More »

ಮೆಕ್ಸಿಕೋದ ಬೀಚ್‌ನಲ್ಲಿ ಕಂಡುಬಂತು ಜಗತ್ತಿನ ಅಂತ್ಯವನ್ನು ಸೂಚಿಸುವ ಮೀನು!

ಈ ಮೀನು ಕಾಣಿಸಿದರೆ ಬ್ರಹ್ಮಾಂಡದ ಅಂತ್ಯ ಸಮೀಪಿಸುತ್ತಿದೆ ಎಂಬ ನಂಬಿಕೆ ಮೆಕ್ಸಿಕೋ: ಮೆಕ್ಸಿಕೊದ ಬಾಜಾ ಕ್ಯಾಲಿಫೋರ್ನಿಯಾ ಸುರ್‌ ಎಂಬ ಬೀಚ್‌ನಲ್ಲಿ ಇತ್ತೀಚೆಗೆ ಕಂಡು ಬಂದ ಮೀನೊಂದು ಈ ಜಗತ್ತು ಅಂತ್ಯವಾಗುವ ಮುನ್ಸೂಚನೆ ಎಂಬ ಭೀತಿಯನ್ನು ಸೃಷ್ಟಿಸಿದೆ. ಈ ಮೀನನ್ನು ಜನರು ಕರೆಯುವುದೇ ಡೂಮ್ಸ್‌ಡೇ ಮೀನು (ಬ್ರಹ್ಮಾಂಡದ ಅಂತ್ಯವನ್ನು ಸೂಚಿಸುವ ಮೀನು) ಎಂದು. ಇದು ಜನರ ಕಣ್ಣಿಗೆ ಬೀಳುವುದೇ ಇಲ್ಲ, ಎಲ್ಲಾದರೂ ಕಂಡು ಬಂದರೆ ಜಗತ್ತಿನ ಅಂತ್ಯದ ಮುನ್ಸೂಚನೆ ಎಂಬ ನಂಬಿಕೆ ಪಾಶ್ಚಾತ್ಯರಲ್ಲಿದೆ. ಈ ಮೀನು ಇತ್ತೀಚೆಗೆ ಮೆಕ್ಸಿಕೊದ

ಮೆಕ್ಸಿಕೋದ ಬೀಚ್‌ನಲ್ಲಿ ಕಂಡುಬಂತು ಜಗತ್ತಿನ ಅಂತ್ಯವನ್ನು ಸೂಚಿಸುವ ಮೀನು! Read More »

ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್

ಪುತ್ತೂರು : ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಮಾ.11 ರಂದು ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ  ನಡೆಯಲಿದೆ. ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ  ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು, ತಕರಾರುಗಳನ್ನು  ಪರಿಶೀಲಿಸಲಾಗುವುದು.  ಸಾರ್ವಜನಿಕರು ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು   ಪತ್ರಮುಖೇನ, ಅಂಚೆ ಅದಾಲತ್ ತಲೆಬರಹದಡಿ ಮಾ.7 ರೊಳಗೆ ಹಿರಿಯ ಅಂಚೆ  ಅಧೀಕ್ಷಕರು, ಪುತ್ತೂರು ವಿಭಾಗ,

ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ Read More »

ಪತಿ, ಅತ್ತೆ ನಾದಿನಿಯಿಂದ ದೈಹಿಕ, ಮಾನಸಿಕ ಹಿಂಸೆ | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಬೆಳ್ತಂಗಡಿ : ಪತ್ನಿಗೆ ಪತಿ ಹಾಗೂ ಅತ್ತೆ, ನಾದಿನಿಯ ನಿರಂತರ ಮಾನಸಿಕ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಎರ್ಮಾಳಪಳಿಕೆ ಎಂಬಲ್ಲಿ ನಡೆದಿದೆ. ಮಿತ್ತಬಾಗಿಲು ಜಿ.ನಗರ ನಿವಾಸಿ ಕೂಲಿ ಕಾರ್ಮಿಕ ಹಮೀದ್ ಎಂಬವರ ಪುತ್ರಿಯನ್ನು ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಎರ್ಮಾಳ್‌ಪಲ್ಕೆ ನಿವಾಸಿ ಫಾರೂಕ್ ಎಂಬಾತನಿಗೆ ಎರಡು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಹಲವಾರು ಕನಸುಗಳನ್ನು ಹೊತ್ತು ಪತಿ ಮನೆ ಸೇರಿದ ಆಕೆಗೆ ಅಲ್ಲಿ ಪತಿಯ ನಿರಂತರ ಮಾನಸಿಕ ದೈಹಿಕ ಕಿರುಕುಳ, ಅತ್ತೆ

ಪತಿ, ಅತ್ತೆ ನಾದಿನಿಯಿಂದ ದೈಹಿಕ, ಮಾನಸಿಕ ಹಿಂಸೆ | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ Read More »

ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ

90 ಸಾವಿರ ಕೈದಿಗಳಿಗಾಗಿ ಜೈಲಿಗೆ ಹರಿಯಲಿದೆ ತ್ರಿವೇಣಿ ಸಂಗಮದ ಜಲ ಪ್ರಯಾಗ್‌ರಾಜ್‌: ಉತ್ತರ ಪ್ರದೇಶ ಸರ್ಕಾರ ರಾಜ್ಯದ ವಿವಿಧ ಜೈಲುಗಳಲ್ಲಿ ಸೆರೆವಾಸದಲ್ಲಿರುವ ಕೈದಿಗಳಿಗೂ ಪವಿತ್ರ ಸ್ನಾನ ಮಾಡುವ ಅವಕಾಶ ಕಲ್ಪಿಸುವ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಕೈದಿಗಳಿಗೂ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಅವಕಾಶ ನೀಡಲಿದೆ. ಉತ್ತರ ಪ್ರದೇಶದ ಜೈಲು ಆಡಳಿತ ರಾಜ್ಯದಲ್ಲಿರುವ 75 ಜೈಲುಗಳಿಗೆ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ತರಲು ವ್ಯವಸ್ಥೆ ಮಾಡುತ್ತಿದೆ. ಉತ್ತರ ಪ್ರದೇಶದ ಸಚಿವ ದಾರಾ ಸಿಂಗ್ ಚೌಹಾಣ್ ಅವರ

ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ Read More »

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ

ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆ ಎಂದು ಕಿಡಿಕಾರಿದ ಬಿಜೆಪಿ ನಾಯಕರು ಬೆಂಗಳೂರು: ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದ್ದು, ಈ ತನಿಖೆಯಲ್ಲಿ ಪಕ್ಷಪಾತ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆ ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ

ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಐತಿಹಾಸಿಕ ದುರಂತ : ಬಿಜೆಪಿ ಟೀಕೆ Read More »

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ

ಮೊದಲ ಸಲ ಶಾಸಕಿಯಾದ ಮಹಿಳೆಗೆ ಒಲಿದ ಅದೃಷ್ಟ ಹೊಸದಿಲ್ಲಿ: ದಿಲ್ಲಿಯ ಮುಖಯಮಂತ್ರಿಯ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ ಸಣ್ಣದೊಂದು ಅಚ್ಚರಿಯನ್ನು ನೀಡಿದೆ. ರೇಖಾ ಗುಪ್ತ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾಗಿದ್ದು, ಇಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಸಂಸದೀಯ ಸದಸ್ಯರು ಬನಿಯಾ ಸಮುದಾಯದವರನ್ನು ಸಿಎಂ ಆಗಿ ಆಯ್ಕೆ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅದರಂತೆ ಬನಿಯಾ ಸಮುದಾಯದ ರೇಖಾ ಗುಪ್ತ ದಿಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಮೊದಲು

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ Read More »

error: Content is protected !!
Scroll to Top