ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ

ನವದೆಹಲಿ: ರೈಲಿನ ಶೌಚಾಲಯದೊಳಗೆ ಸೇರಿಕೊಂಡ ಲಾಕ್ ಮಾಡಿ ಜೋಡಿಯೊಂದು ಎರಡು ಗಂಟೆಗೂ ಅಧಿಕ ಕಾಲ ಅದರೊಳಗೆ ಕಳೆದು ಬೇರೆ ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದಾಗ ಯುವತಿ ನೀಡಿದ ಹಾರಿಕೆಯ ಉತ್ತರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೂ ತುತ್ತಾಗಿದೆೆ. ಎರಡು ಗಂಟೆಯ ಬಳಿಕ ಶೌಚಾಲಯದಿಂದ ಹೊರ ಬಂದ ಜೋಡಿಯನ್ನು ಸಹ ಪ್ರಯಾಣಿಕರು ಪ್ರಶ್ನಿಸಿದ್ದು, ಈ ವೇಳೆ ಯುವತಿ ನನ್ನ ಇಷ್ಟ. ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕು ಎನ್ನುವುದು […]

ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ Read More »

ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ ತಂಗಿ: ಜೋಡಿಯನ್ನು ಕೊಂದ ಯುವತಿಯ ಸಹೋದರರು

ಮೊರಾದಾಬಾದ್: ಯುವತಿ ಮತ್ತು ಆಕೆಯ ಮುಸ್ಲಿಂ ಪ್ರಿಯಕರನನ್ನು ಆಕೆಯ ಸಹೋದರರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾಜಲ್ (19) ಮತ್ತು ಅವಳ ಪ್ರೇಮಿ ಅರ್ಮಾನ್ (27) ಎಂಬಾತನನ್ನು ಮರ್ಯಾದಾ ಹತ್ಯೆ ನಡೆಸಿರುವುದಾಗಿದೆ. ಕಾಜಲ್ ಕಾಲೇಜು ವಿದ್ಯಾರ್ಥಿನಿಯಾಗಿದ್ದು ಕೊಲೆಗೀಡಾದ ಇಬ್ಬರೂ ಉಮ್ರಿ ಸಬ್ಜೀಪುರ ನಿವಾಸಿಗಳಾಗಿದ್ದಾರೆ. ಪ್ರೇಮಿಗಳಿಬ್ಬರೂ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡೂ ಕುಟುಂಬಗಳು ಪೊಲೀಸರಿಗೆ ದೂರು ನೀಡಿದ್ದವು. ಅವರಿಬ್ಬರ ಪತ್ತೆಗಾಗಿ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಅವರಿಬ್ಬರ ಶವಗಳು ಹಳ್ಳಿಯಿಂದ ಕೆಲವು ಮೀಟರ್ ದೂರದ

ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ ತಂಗಿ: ಜೋಡಿಯನ್ನು ಕೊಂದ ಯುವತಿಯ ಸಹೋದರರು Read More »

ನ್ಯಾಯಾಧೀಶರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ‌ವ್ಯಕ್ತಿ: ಆಸ್ಪತ್ರೆಗೆ ದಾಖಲು

ಪುತ್ತೂರು: ನ್ಯಾಯಾಧೀಶರ ಎದುರೇ ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಾವು ಮಾಣಿಯಡ್ಕ ನಿವಾಸಿ ರವಿ ಎನ್ನುವವರೇ ವಿಷ ಕುಡಿದ ವ್ಯಕ್ತಿ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ರವಿ ಮತ್ತು ಅವರ ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು. ಎರಡು ದಿನಗಳ ಹಿಂದೆ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡುವ ಪ್ರಯತ್ನ ಸಹ ಮಾಡಿದ್ದರು. ಈ ವಿಷಯವಾಗಿ ಪೊಲೀಸ್ ಕೇಸ್ ಆಗುವ ಸಾಧ್ಯತೆ

ನ್ಯಾಯಾಧೀಶರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ‌ವ್ಯಕ್ತಿ: ಆಸ್ಪತ್ರೆಗೆ ದಾಖಲು Read More »

ಭಾಷಣ ಮಾಡದೆ ತೆರಳಿದ ರಾಜ್ಯಪಾಲರು : ವಿಧಾನ ಸಭೆಯಲ್ಲಿ ಹೈಡ್ರಾಮಾ

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ರಾಜ್ಯಪಾಲರ ಭಾಷಣವಿಲ್ಲದೆ ಕಲಾಪ ಬೆಂಗಳೂರು: ನಿರೀಕ್ಷೆಯಂತೆಯೇ ವಿಧಾನ ಮಂಡಲದಲ್ಲಿಂದು ಹೈಡ್ರಾಮಾ ನಡೆದಿದೆ. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಧಿವೇಶನಕ್ಕೆ ಜಂಟಿ ಭಾಷಣ ಮಾಡುವ ಉದ್ದೇಶದಿಂದ ಬಂದರೂ ಆರಂಭದ ಕೆಲವು ಸಾಲನ್ನು ಹೇಳಿ ಸದನದಿಂದ ಹೊರ ನಡೆದಿದ್ದಾರೆ. ರಾಜ್ಯಪಾಲರು ಹೊರನಡೆಯುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಭಾರೀ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಲು ಆರಂಭಿಸಿದರು. ಆಡಳಿತ ಸದಸ್ಯರ ವಿರೋಧದ ನಡುವೆಯೂ ರಾಜ್ಯಪಾಲರು ವಿಧಾನಸೌಧದಿಂದ ಹೊರನಡೆದರು. ಇದೇ ಮೊದಲ ಬಾರಿಗೆ ರಾಜ್ಯದ ಅಧಿವೇಶನ ಇತಿಹಾಸದಲ್ಲಿ ರಾಜ್ಯಪಾಲರು ಭಾಷಣ

ಭಾಷಣ ಮಾಡದೆ ತೆರಳಿದ ರಾಜ್ಯಪಾಲರು : ವಿಧಾನ ಸಭೆಯಲ್ಲಿ ಹೈಡ್ರಾಮಾ Read More »

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾಕಬೇಡಿ ಎಂದ ರಮಾನಾಥ ರೈ ಹೇಳಿಕೆಗೆ ಭಾರಿ ವಿರೋಧ

ಎಸ್‌ಡಿಪಿಐ ಓಲೈಸಲು ಹಿಂದೂ ವಿರೋಧಿ ಹೇಳಿಕೆ ಎಂದು ಟೀಕೆ ಮಂಗಳೂರು : ದೇವಸ್ಥಾನಗಳು ಎಲ್ಲರೂ ಹೋಗುವ ಜಾಗ ಅಲ್ಲಿ ಕೇಸರಿ ಧ್ವಜ ಸೇರಿದಂತೆ ಯಾವುದೇ ಧ್ವಜ ಹಾರಿಸಬಾರದು ಎಂದಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕ ರಮಾನಾಥ ರೈಯವರ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.ಅವರು ನೀಡಿದ ಹೇಳಿಕೆ ಹಿಂದೂ ನಾಯಕರನ್ನು ಕೇರಳಿಸಿದೆ. ಬುಧವಾರ ಮಂಗಳೂರಿನಲ್ಲಿ ಕಾಂಗ್ರೆಸ್‌ ವತಿಯಿಂದ ಮನರೇಗ ಯೋಜನೆಯ ಹೆಸರು ಬದಲಾವಣೆ ವಿರುದ್ಧ ನಡೆದ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ರಮಾನಾಥ ರೈ

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾಕಬೇಡಿ ಎಂದ ರಮಾನಾಥ ರೈ ಹೇಳಿಕೆಗೆ ಭಾರಿ ವಿರೋಧ Read More »

ಮಾಲ್‌ನಲ್ಲಿ ಅಗ್ನಿ ಅವಘಡ : ಒಂದೇ ಮಳಿಗೆಯೊಳಗೆ 30 ಮೃತದೇಹ ಪತ್ತೆ

ಭೀಕರ ಬೆಂಕಿ ದುರಂತದಲ್ಲಿ 100ಕ್ಕೂ ಅಧಿಕ ಜನರು ಸಾವಿಗೀಡಾಗಿರುವ ಶಂಕೆ ಇಸ್ಲಾಮಾಬಾದ್‌: ಕರಾಚಿಯ ಭೂಗತ ಜಗತ್ತಿನ ಪಾತಕಿ ದಾವೂದ್‌ ಇಬ್ರಾಹಿಂ ಒಡೆತನದ ಗುಲ್ ಪ್ಲಾಜಾ ಶಾಪಿಂಗ್‌ ಮಾಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಪರಿಶೀಲನೆ ವೇಳೆ ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆಯಾಗಿದ್ದು, ಒಟ್ಟು ಸಾವು 100 ಮೀರಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪಾಕಿಸ್ತಾನದ ʻಮನಿ ಕ್ಯಾಪಿಟಲ್‌ʼ ಅಂತಲೇ ಫೇಮಸ್‌ ಆಗಿರುವ ಕರಾಚಿ ಸದರ್‌ ಪ್ರದೇಶದಲ್ಲಿರುವ ಗುಲ್‌ ಶಾಪಿಂಗ್‌ ಮಾಲ್‌ನ ನೆಲಮಾಳಿಗೆಯಲ್ಲಿ ಜ.17

ಮಾಲ್‌ನಲ್ಲಿ ಅಗ್ನಿ ಅವಘಡ : ಒಂದೇ ಮಳಿಗೆಯೊಳಗೆ 30 ಮೃತದೇಹ ಪತ್ತೆ Read More »

ಖ್ಯಾತ ಸ್ವಾಮೀಜಿಯನ್ನು ಬ್ಲ್ಯಾಕ್‌ಮೇಲ್‌ ಮಾಡಿ 1 ಕೋ.ರೂ.ಗೆ ಬೇಡಿಕೆ : ಮಹಿಳೆ ಸೆರೆ

ಫೋನಿನಲ್ಲಿ ಪರಿಚಯಮಾಡಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಫೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿದ್ದ ಮಹಿಳೆ ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಫೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು.

ಖ್ಯಾತ ಸ್ವಾಮೀಜಿಯನ್ನು ಬ್ಲ್ಯಾಕ್‌ಮೇಲ್‌ ಮಾಡಿ 1 ಕೋ.ರೂ.ಗೆ ಬೇಡಿಕೆ : ಮಹಿಳೆ ಸೆರೆ Read More »

ಬೆಂಕಿ ಅವಘಡ : 13 ಇಲೆಕ್ಟ್ರಿಕ್‌ ಸ್ಕೂಟರ್‌ ಸುಟ್ಟು ಕರಕಲು

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಇಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ಬುಧವಾರ ರಾತ್ರಿ 9:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆಯೇ ಶೋರೂಂ ಸಿಬ್ಬಂದಿ ಓಡಿ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಶೋರೂಂನಲ್ಲಿದ್ದ 13 ಇಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ

ಬೆಂಕಿ ಅವಘಡ : 13 ಇಲೆಕ್ಟ್ರಿಕ್‌ ಸ್ಕೂಟರ್‌ ಸುಟ್ಟು ಕರಕಲು Read More »

ಕಾಂಗ್ರೆಸ್‌ ಹಿಂದೂ ದ್ವೇಷದ ಅತಿರೇಕ : ಕ್ಯಾ.ಬ್ರಿಜೇಶ್‌ ಚೌಟ ಆಕ್ರೋಶ

ಪರ್ಯಾಯದಲ್ಲಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಾರಿಸಿದ್ದಕ್ಕೆ ಕಾಂಗ್ರೆಸ್‌ ವಿರೋಧ ಮಂಗಳೂರು: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಜಿಲ್ಲಾಧಿಕಾರಿಯವರು ಸಂಪ್ರದಾಯಿಕವಾಗಿ ಭಗವಾಧ್ವಜ ಹಾರಿಸಿರುವುದನ್ನು ವಿರೋಧಿಸುತ್ತಿರುವ ನಿಲುವು ಕಾಂಗ್ರೆಸ್‌ನವರ ಹಿಂದೂ ವಿರೋಧಿ ಮಾನಸಿಕತೆ ಹಾಗೂ ತುಷ್ಟೀಕರಣ ರಾಜಕಾರಣ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಮತೀಯ ಹಾಗೂ ಮೂಲಭೂತವಾದಿಗಳನ್ನು ಓಲೈಸುವುದಕ್ಕಾಗಿ ಹಿಂದೂ ಸಮಾಜವನ್ನು ಪದೇಪದೆ ಟಾರ್ಗೆಟ್‌ ಮಾಡುತ್ತಿದೆ. ವಿಧಾನಸೌಧದಲ್ಲೇ ಪಾಕಿಸ್ತಾನದ ಪರ

ಕಾಂಗ್ರೆಸ್‌ ಹಿಂದೂ ದ್ವೇಷದ ಅತಿರೇಕ : ಕ್ಯಾ.ಬ್ರಿಜೇಶ್‌ ಚೌಟ ಆಕ್ರೋಶ Read More »

ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲು

ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಪುತ್ತೂರು : ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಿವಾಸಿ ರಾಮಚಂದ್ರ ಕೆ. ಎಂಬವರು ನೀಡಿದ ದೂರಿನ ಪ್ರಕಾರ 12.01.2026ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತೆ, ಕೋಮುಧ್ವೇಷ ಹಾಗೂ

ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲು Read More »

error: Content is protected !!
Scroll to Top